ಭದ್ರಾವತಿ : ವಾರಸುದಾರರಿಲ್ಲದ ವ್ಯಕ್ತಿಯೊಬ್ಬರು ಅತಿಯಾದ ಮದ್ಯ ಸೇವನೆಯಿಂದ ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thursday, October 5, 2023
ಅತಿಯಾದ ಮದ್ಯ ಸೇವನೆ : ವಾರಸುದಾರರಿಲ್ಲದ ವ್ಯಕ್ತಿ ಮೃತ
Wednesday, October 4, 2023
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರ ಮುಷ್ಕರ
ಆಲ್ ಇಂಡಿಯಾ ಗ್ರಾಮೀಣ್ ಡಿಎಕೆ ಸೇವಕ್ ಯೂನಿಯನ್(ಎಐಜಿಡಿಎಸ್ ಯು) ಕರ್ನಾಟಕ ಸರ್ಕಲ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಅಂಚೆ ಕಛೇರಿ ಮುಂಭಾಗ ಸಾಂಕೇತಿಕವಾಗಿ ಮುಷ್ಕರ ನಡೆಸಲಾಯಿತು.
ಭದ್ರಾವತಿ: ಆಲ್ ಇಂಡಿಯಾ ಗ್ರಾಮೀಣ್ ಡಿಎಕೆ ಸೇವಕ್ ಯೂನಿಯನ್(ಎಐಜಿಡಿಎಸ್ ಯು) ಕರ್ನಾಟಕ ಸರ್ಕಲ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬುಧವಾರ ನಗರದ ಅಂಚೆ ಕಛೇರಿ ಮುಂಭಾಗ ಸಾಂಕೇತಿಕವಾಗಿ ಮುಷ್ಕರ ನಡೆಸಲಾಯಿತು.
ಮಣಿಪಾಲ ಆರೋಗಕಾರ್ಡ್ 2023ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಸೇರಿದಂತೆ ಇನ್ನಿತರರು ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಅವರಿಗೆ ಸಾಂಕೇತಿಕವಾಗಿ ಮಣಿಪಾಲ್ ಆರೋಗ್ಯ ಕಾರ್ಡ್ ವಿತರಿಸಿದರು.
ಭದ್ರಾವತಿ: ಮಣಿಪಾಲ್ ಆರೋಗ ಕಾರ್ಡ್ 2023ರ ನೋಂದಣಿ ಪ್ರಾರಂಭವಾಗಿದ್ದು, ಮಣಿಪಾಲ್ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶ ಹೊಂದಿದೆ ಎಂದು ಆಸ್ಪತ್ರೆ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ, ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು, ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿ ರೂಪದಲ್ಲಿ ಹಿಂಪಡೆಯಬಹುದು, "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ" ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ನ ಧ್ಯೇಯ ವಾಕ್ಯವಾಗಿದೆ ಎಂದರು.
ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆಯಾಗಿದೆ. ಅಲ್ಲದೇ ಕೇರಳ,ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆಯಾಗಿದ್ದು, ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಎಂದರು.
ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ. ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವ ಒಬ್ಬರಿಗೆ ರು. 300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರು. 600 ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರು. 750 ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರು. 500, ಕುಟುಂಬಕ್ಕೆ ರು. 800 ಮತ್ತು ಕೌಟಂಬಿಕ ಪ್ಲಸ್ ಯೋಜನೆ ರು. 950 ಆಗಿರುತ್ತದೆ ಎಂದರು.
ಕಾರ್ಡ್ ಹೊಂದಿರುವವರು ಹಲವಾರು ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು, ಹೊರರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇ.50ರಷ್ಟು, ಪ್ರಯೋಗಾಲಯ ಪರೀಕ್ಷೆ ಯಲ್ಲಿ ಶೇ.30, ಸಿ ಟಿ, ಎಂಆರ್ ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇ.20, ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ಮತ್ತು ಔಷಧಾಲಯಗಳಲ್ಲಿ ಶೇ. 12ರವರೆಗೆ ರಿಯಾಯಿತಿ ಪಡೆಯಬಹುದಾಗಿದೆ ಎಂದರು.
ಒಳರೋಗಿ ವಿಭಾಗದಲ್ಲಿ ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ. 25 ಮತ್ತು ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇಕಡಾ 10 ರಿಯಾಯಿತಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಪ್ರವೀಣ್, ನಗರದ ಕಸ್ತೂರಬಾ ಆಸ್ಪತ್ರೆ ಮಾಹಿತಿ ಕೇಂದ್ರದ ರಾಜೇಶ್ ಮತ್ತು ಮಮತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Tuesday, October 3, 2023
ಜ್ಞಾನದೀಪಿಕಾ ಶಾಲೆ ವಿದ್ಯಾರ್ಥಿಗಳು 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆ
ಭದ್ರಾವತಿ ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ : ತಾಲೂಕಿನ ಯರೇಹಳ್ಳಿ ಜ್ಞಾನದೀಪಿಕಾ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ 2ನೇ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಂಬೂಸ್ವಾಮಿಗೆ ಪ್ರಥಮ ಬಹುಮಾನ
ಜಂಬೂಸ್ವಾಮಿ
ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾನಪದ ಗೀತೆ ಸ್ಪರ್ಧೆಯಲ್ಲಿ ಜಂಬೂಸ್ವಾಮಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಅ.4ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ : ಮೆಸ್ಕಾಂ ತಾಲೂಕಿನ ಕೂಡ್ಲಿಗೆರೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Monday, October 2, 2023
ವಿದ್ಯಾಮಂದಿರ ಬಳಿ ಫ್ಲೆಕ್ಸ್ ತೆರವು : ಪ್ರತಿಭಟನೆ
ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಭದ್ರಾವತಿ ವಿದ್ಯಾಮಂದಿರ ಬಳಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.
ಭದ್ರಾವತಿ: ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾಮಂದಿರ ಬಳಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ.