Monday, October 9, 2023

ಭದ್ರಾವತಿ ನಗರಸಭೆ : ೩ ದಿನಗಳ ಕಾಲ ಸರಳವಾಗಿ ನಾಡಹಬ್ಬ ದಸರಾ ಆಚರಣೆ

ಭದ್ರಾವತಿ ನಗರಸಭೆ ವತಿಯಿಂದ ೩ ದಿನಗಳ ಕಾಲ ಸರಳವಾಗಿ ನಾಡಹಬ್ಬ ದಸರಾ ಆಚರಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೋಮವಾರ ಅಧ್ಯಕ್ಷೆ ಶೃತಿ ವಸಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಭದ್ರಾವತಿ : ಈ ಬಾರಿ ೩ ದಿನಗಳ ಕಾಲ ಸರಳವಾಗಿ ನಾಡಹಬ್ಬ ದಸರಾ ಆಚರಿಸಲು ತೀರ್ಮಾನಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಹೇಳಿದರು.
    ಅವರು ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಸಮಾಜ ಸೇವಕರಾದ ವೆಂಕಟರಮಣ ಶೇಟ್‌ರವರು ನಗರಸಭೆ ಆವರಣದಲ್ಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಎಂದರು.
    ಪೌರಾಯುಕ್ತ ಎಚ್.ಎಂ ಮನುಕುಮಾರ್ ಮಾಹಿತಿ ನೀಡಿ, ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಮಾರ್ಗದರ್ಶನದಲ್ಲಿ ೩ ದಿನಗಳ ಕಾಲ ಸರಳವಾಗಿ ದಸರಾ ಆಚರಣೆ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಈ ಸಂಬಂಧ ನಗರದ ವಿವಿಧ ಸಂಘ-ಸಂಸ್ಥೆಗಳ ಹಾಗು ದೇವಸ್ಥಾನ ಸಮಿತಿಗಳ ಸಲಹೆ-ಸಹಕಾರ ಪಡೆಯಾಗಿದೆ.  ದಸರಾ ಆಚರಣೆಗಾಗಿ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ನೇತೃತ್ವದಲ್ಲಿ ೧೧ ಜನ ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿ, ಸದಸ್ಯ ಬಷೀರ್ ಅಹಮದ್ ನೇತೃತ್ವದಲ್ಲಿ ೧೩ ಸದಸ್ಯರನ್ನೊಳಗೊಂಡ ಸ್ವಾಗತ ಸಮಿತಿ, ಸದಸ್ಯ ಆರ್. ಮೋಹನ್ ಕುಮಾರ್ ನೇತೃತ್ವದಲ್ಲಿ ೧೩ ಸದಸ್ಯರನ್ನೊಳಗೊಂಡ ಸಾಂಸ್ಕೃತಿಕ ಮತ್ತು ಮೆರವಣಿಗೆ ಸಮಿತಿ, ಹಿರಿಯ ಸದಸ್ಯ ವಿ. ಕದಿರೇಶ್ ನೇತೃತ್ವದಲ್ಲಿ ೧೩ ಸದಸ್ಯರನ್ನೊಳಗೊಂಡ ಪ್ರಚಾರ ಮತ್ತು ಅಲಂಕಾರ ಸಮಿತಿ, ಸದಸ್ಯ ಬಸವರಾಜ ಬಿ. ಅನೇಕೊಪ್ಪ ನೇತೃತ್ವದಲ್ಲಿ ೧೪ ಸದಸ್ಯರನ್ನೊಳಗೊಂಡ ಮನರಂಜನಾ ಸಮಿತಿ, ಮಾಜಿ ಉಪಾಧ್ಯಕ್ಷ ಚನ್ನಪ್ಪ ನೇತೃತ್ವದಲ್ಲಿ ೧೫ ಸದಸ್ಯರನ್ನೊಳಗೊಂಡ ಕ್ರೀಡಾ ಸಮಿತಿ, ಸದಸ್ಯ ಮಣಿ ಎಎನ್‌ಎಸ್ ನೇತೃತ್ವದಲ್ಲಿ ೧೨ ಸದಸ್ಯರನ್ನೊಳಗೊಂಡ ದೇವರುಗಳ ಉತ್ಸವ ಸಮಿತಿ ಹಾಗು ಮಾಜಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ನೇತೃತ್ವದಲ್ಲಿ ೧೯ ಸದಸ್ಯರನ್ನೊಳಗೊಂಡ ಆಯುಧ ಪೂಜೆ ಉಸ್ತುವಾರಿ ಸಮಿತಿ ರಚಿಸಲಾಗಿದೆ ಎಂದರು.
    ಕನಕಮಂಟಪ ಮೈದಾನದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಕುಸ್ತಿ ಪಂದ್ಯಾವಳಿ ವಿಜೇತರಾದವರಿಗೆ `ಭದ್ರಾವತಿ ಕೇಸರಿ' ಪ್ರಶಸ್ತಿ ನೀಡಲಾಗುವುದು. ಪ್ರತಿ ವರ್ಷದಂತೆ ಈ ಬಾರಿ ಸಹ ಮಹಿಳಾ ದಸರಾ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬೆಂಗಳೂರಿನ ಕಲಾವಿದರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್‌ದು, ಸ್ಥಳೀಯ ಕಲಾವಿದರಿಂದ ನಗರಸಭೆ ಮುಂಭಾಗ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು.  
    ಪ್ರತಿವರ್ಷದಂತೆ ಈ ಬಾರಿ ಸಹ ಸಂಪ್ರದಾಯದಂತೆ ದೇವಾನುದೇವತೆಗಳ ಉತ್ಸವ ಮೆರವಣಿಗೆ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.
    ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ವಿವಿಧ ಸಮಿತಿಗಳ ಅಧ್ಯಕ್ಷರಾದ ಬಷೀರ್ ಅಹಮದ್, ಬಸವರಾಜ ಬಿ. ಆನೇಕೊಪ್ಪ, ಚನ್ನಪ್ಪ, ಆರ್. ಮೋಹನ್‌ಕುಮಾರ್, ವಿ. ಕದಿರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, October 8, 2023

ಛಾಯಾಗ್ರಾಹಕ ಜಾನ್ಸನ್ ನಿಧನ


ಜಾನ್ಸನ್

    ಭದ್ರಾವತಿ: ತಾಲೂಕು ಛಾಯಾಗ್ರಾಹಕರ ಸಂಘದ ನಿರ್ದೇಶಕ, ಕವಲಗುಂದಿ ನಿವಾಸಿ ಜಾನ್ಸನ್(ಕಿಚ್ಚ)(31) ನಿಧನ ಹೊಂದಿದರು.

    ತಾಯಿ, ಸಹೋದರ, ಸಹೋದರಿ ಇದ್ದರು. ಭಾನುವಾರ ಸಂಜೆ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತರ ಸಮಾದಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು.

    ತಾಲೂಕು ಛಾಯಾ ಗ್ರಾಹಕರ ಸಂಘ, ಛಾಯ ಗ್ರಾಹಕರ ಪತ್ತಿನ ಸಹಕಾರ ಸಂಘ ಸೇರಿದಂತೆ ಇನ್ನಿತರ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶ್ರೀ ರಾಮ ಹಿಂದೂ ಸೇವಾ ಸಮಿತಿ ಗಣಪತಿ ವಿಸರ್ಜನೆ

ಭದ್ರಾವತಿ ಕೂಲಿಬ್ಲಾಕ್ ಶೆಡ್ ಶ್ರೀರಾಮ ದೇವಾಲಯ ಸಮೀಪ ಶ್ರೀ ರಾಮ ಹಿಂದೂ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಿತು.
    ಭದ್ರಾವತಿ: ನಗರದ ಕೂಲಿಬ್ಲಾಕ್ ಶೆಡ್ ಶ್ರೀರಾಮ ದೇವಾಲಯ ಸಮೀಪ ಶ್ರೀ ರಾಮ ಹಿಂದೂ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಿತು.
      ಪ್ರತಿವರ್ಷದಂತೆ ಈ ಬಾರಿ ಸಹ ಹೋಮ-ಹವನ, ವಿಶೇಷ ಪೂಜೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಸಂಜೆ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಕುಣಿತ ಸೇರಿದಂತೆ ಕಲಾತಂಡಗಳೊಂದಿಗೆ ನಡೆಯಿತು.

ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆ ಉದ್ಘಾಟನೆ


ಭದ್ರಾವತಿ ನಗರದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆಯನ್ನು ಆನಂದಪುರ ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
    ಭದ್ರಾವತಿ: ನಗರದಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ಲಿ. ಯಕ್ಸಂಬಾ(ಮಲ್ಪಿ-ಸ್ಟೇಟ್) ೧೬೪ನೇ ಶಾಖೆಯನ್ನು ಆನಂದಪುರ ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು.
    ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ಸಂಸ್ಥಾಪಕ ಹಾಗು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಸಹ ಸಂಸ್ಥಾಪಕರಾಗಿರುವ ಶ್ರೀ ಬೀರೇಶ್ವರ ಕೋ ಆಪ್ ಕ್ರೆಡಿಟ್ ಸೊಸೈಟಿ ವಿಸ್ತರಣೆಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನ ಜುಲೈ ಅಂತ್ಯಕ್ಕೆ ಸುಮಾರು ೩.೫ ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಸುಮಾರು ೩೫ ಕೋ. ರು. ಲಾಭದಲ್ಲಿ ಮುನ್ನಡೆಯುತ್ತಿದೆ. ಇದೀಗ ನಗರದಲ್ಲಿ ನೂತನ ಶಾಖೆ ಆರಂಭಗೊಂಡಿದ್ದು, ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಶುಭ ಕೋರಿದರು.
    ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಸೊಸೈಟಿ ವ್ಯವಸ್ಥಾಪಕ ಸುರೇಶ್, ಎಸ್. ರಾಜಶೇಖರ್ ಉಪ್ಪಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನ.೨, ೩ ಪುಟ್ಟಪರ್ತಿ ಯಾತ್ರೆ-ಪ್ರಶಾಂತಿ ನಿಲಯಕ್ಕೆ

ಪುಟ್ಟಪರ್ತಿ
    ಭದ್ರಾವತಿ: ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ವತಿಯಿಂದ ಪ್ರೇಮ ಮತ್ತು ಸೇವೆಯ ಸಮರ್ಪಣೆ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ನ.೨ ಮತ್ತು ೩ ರಂದು 'ಪುಟ್ಟಪರ್ತಿ ಯಾತ್ರೆ-ಪ್ರಶಾಂತಿ ನಿಲಯಕ್ಕೆ' ಹಮ್ಮಿಕೊಳ್ಳಲಾಗಿದೆ.
    ಪುಟ್ಟಪರ್ತಿ, ಸಾಯಿ ಕುಲ್ವಂತ್ ಹಾಲ್, ಪ್ರಶಾಂತಿ ನಿಲಯದಲ್ಲಿ ಸುರ್ವಣ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ. ಯಾತ್ರೆಯಲ್ಲಿ ಶಿಕ್ಷಕರು, ಸಿಬ್ಬಂದಿ ವರ್ಗ, ಪೋಷಕರು, ಸಾಯಿ ಭಕ್ತರು ಹಾಗು ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ೩೦ ಬಸ್‌ಗಳನ್ನು ನಿಯೋಜಿಸಲಾಗಿದೆ.
    ಯಾತ್ರೆ ವೇಳಾಪಟ್ಟಿ: ನ.೧ರಂದು ರಾತ್ರಿ ೮ ಗಂಟೆಗೆ ಹೊರಡುವುದು. ಬೆಳಗಿನ ಜಾವ ೩ ಗಂಟೆಗೆ ಪುಟ್ಟಪರ್ತಿ ತಲುಪುವುದು. ನ.೩ರಂದು ಮಧ್ಯಾಹ್ನ ೧.೩೦ಕ್ಕೆ ಪುಟ್ಟಪರ್ತಿಯಿಂದ ಹೊರಟು ಸಂಜೆ ೭ ಗಂಟೆಗೆ ಭದ್ರಾವತಿ ತಲುಪುವುದು. ಒಬ್ಬರಿಗೆ ೧,೧೦೦ ರು. ವೆಚ್ಚವಾಗಲಿದೆ. ಆಸಕ್ತರು ವ್ಯವಸ್ಥಾಪಕರು, ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ, ಮೊ: ೯೧೪೧೬೪೨೪೩೨ ಅಥವಾ ೭೩೫೩೨೯೨೩೩೯ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Saturday, October 7, 2023

ಅ.೮ರಂದು ಓಂ ಹಿಂದೂ ಕೋಟೆ, ಮೀನುಗಾರರ ಬೀದಿ ಗಣಪತಿ ವಿಸರ್ಜನೆ

ಭದ್ರಾವತಿ ಹೊಸಮನೆ ಬಜರಂಗದಳ ಓಂ ಹಿಂದೂ ಕೋಟೆ ವತಿಯಿಂದ ೯ನೇ ವರ್ಷದ ವಿನಾಯಕ ಮೂರ್ತಿ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಶಿರಡಿ ಸಾಯಿ ಬಾಬಾ ವೇಷಧಾರಿಯಾಗಿ ಮೂರ್ತಿ.
    ಭದ್ರಾವತಿ: ನಗರದ ಪ್ರಮುಖ ವಿನಾಯಕ ಸೇವಾ ಸಮಿತಿಗಳಲ್ಲಿ ಒಂದಾಗಿರುವ ಹೊಸಮನೆ ಬಜರಂಗದಳ ಓಂ ಹಿಂದೂ ಕೋಟೆ ವತಿಯಿಂದ ೯ನೇ ವರ್ಷದ ವಿನಾಯಕ ಮೂರ್ತಿ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿ ವಿಸರ್ಜನೆ ಅ.೮ರಂದು ನಡೆಯಲಿದೆ.
    ಪ್ರತಿ ವರ್ಷ ವಿಶೇಷವಾದ ಹಾಗು ಆಕರ್ಷಕವಾದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಶಿರಡಿ ಸಾಯಿ ಬಾಬಾ ವೇಷಧಾರಿಯಾಗಿ ಮೂರ್ತಿ ಕಂಗೊಳಿಸುತ್ತಿದ್ದು, ಈ ಮೂರ್ತಿಯನ್ನು ನಗರದ ಹಿರಿಯ ಶಿಲ್ಪಿ ಜಯರಾಮ್ ತಯಾರಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ವಿಶೇಷ ದಾನಿಗಳಾಗಿದ್ದು, ತುಮಕೂರು ಸಿದ್ದಗಂಗಾಮಠದ ಡಾ. ಶಿವಕುಮಾರ ಸ್ವಾಮೀಜಿ ಹಾಗು ನಗರದ ಅನ್ನದಾತ ಸರ್.ಎಂ ವಿಶ್ವೇಶ್ವರಾಯ ಅವರ ಸವಿನೆನಪಿನಲ್ಲಿ ಮಹೋತ್ಸವ ನಡೆಯುತ್ತಿದ್ದು, ವಿವಿಧ ಧಾರ್ಮಿಕ ಆಚರಣೆಗಳು ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೀಗ ಮೂರ್ತಿ ವಿಸರ್ಜನೆಗೆ ಬರದ ಸಿದ್ದತೆಗಳು ನಡೆದಿವೆ. ಇದಕ್ಕೂ ಮೊದಲು ಬೆಳಿಗ್ಗೆ ಪ್ರಮುಖ ರಸ್ತೆಗಳಲ್ಲಿ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ಮೆರವಣಿಗೆ ನಡೆಯಲಿದೆ.
    ಮೀನುಗಾರರ ಬೀದಿ ಗಣಪತಿ:
    ನಗರದ ಬಿ.ಎಚ್ ರಸ್ತೆ, ದುರ್ಗಾ ನರ್ಸಿಂಗ್ ಹೋಂ ಬಳಿ ಮೀನುಗಾರರ ಬೀದಿಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಆಕರ್ಷಕವಾದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅ.೮ರಂದು ಮೂರ್ತಿ ವಿಸರ್ಜನೆ ನಡೆಯಲಿದೆ.
    ವಿನಾಯಕ ಗರುಡನ ಮೇಲೆ ಕುಳಿತು ಬಿಲ್ಲು ಬಾಣ ಹಿಡಿದು ರಾಕ್ಷಸ ಸಂಹಾರದಲ್ಲಿ ತೊಡಗಿರುವುದು ಭಕ್ತರ ಗಮನ ಸೆಳೆಯುತ್ತಿದೆ. ಶನಿವಾರ ಹೋಮ-ಹವನ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.


ಭದ್ರಾವತಿ ಬಿ.ಎಚ್ ರಸ್ತೆ, ದುರ್ಗಾ ನರ್ಸಿಂಗ್ ಹೋಂ ಬಳಿ ಮೀನುಗಾರರ ಬೀದಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಗರುಡನ ಮೇಲೆ ಕುಳಿತು ಬಿಲ್ಲು ಬಾಣ ಹಿಡಿದು ರಾಕ್ಷಸ ಸಂಹಾರದಲ್ಲಿ ತೊಡಗಿರುವುದು ಭಕ್ತರ ಗಮನ ಸೆಳೆಯುತ್ತಿದೆ.
         ಅಂಬೇಡ್ಕರ್ ನಗರ ಗಣಪತಿ:
    ನಗರದ ಬಿ.ಎಚ್ ರಸ್ತೆ ಅಂಡರ್ ಬಿಡ್ಜ್ ಅಂಬೇಡ್ಕರ್ ವೃತ್ತದ ಬಳಿ ಅಂಬೇಡ್ಕರ್ ನಗರದ ವಿನಾಯಕ ಸೇವಾ ಸಮಿತಿ ವತಿಯಿಂದ ಮೂರ್ತಿ ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದ್ದು, ಅ.೮ರಂದು ಮೂರ್ತಿ ವಿಸರ್ಜನೆ ನಡೆಯಲಿದೆ.
    ಶನಿವಾರ ವಿಶೇಷ ಪೂಜೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.

೩೫೦ಕ್ಕೂ ಹೆಚ್ಚು ಮಂದಿಗೆ ನರರೋಗ, ಕೀಲು ಮೂಳೆ ಉಚಿತ ತಪಾಸಣೆ

ಭದ್ರಾವತಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಾದ ಡಾ. ಜಯಚಂದ್ರ ಮತ್ತು ಡಾ. ಗಿರೀಶ್ ಉದ್ಘಾಟಿಸಿದರು.
    ಭದ್ರಾವತಿ : ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಾದ ಡಾ. ಜಯಚಂದ್ರ ಮತ್ತು ಡಾ. ಗಿರೀಶ್ ಉದ್ಘಾಟಿಸಿದರು. ಟ್ರಸ್ಟ್ ಪದಾಧಿಕಾರಿಗಳಾದ ಅಧ್ಯಕ್ಷ ಹೇಮಂತ್ ಕುಮಾರ್, ಕಾರ್ಯದರ್ಶಿ ಚರಣ್‌ರಾಜ್, ಗೌರವಾಧ್ಯಕ್ಷರಾದ ಸುರೇಶ್, ಕುಮಾರ್, ನಗರಸಭಾ ಸದಸ್ಯ ಆರ್. ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರದ ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಶನಿವಾರ ಒಕ್ಕಲಿಗರ ಸಮುದಾಯ ಭವನದಲ್ಲಿ ನರರೋಗ ಮತ್ತು ಕೀಲು ಮೂಳೆ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
    ಶಿಬಿರದಲ್ಲಿ ಸುಮಾರು ೩೫೦ಕ್ಕೂ ಹೆಚ್ಚು ಮಂದಿಗೆ ಉಚಿತ ತಪಾಸಣೆ ನಡೆಸಲಾಯಿತು. ಆಸ್ಪತ್ರೆಯ ಒಟ್ಟು ೪ ವೈದ್ಯರು ಹಾಗು ೭ ಸಿಬ್ಬಂದಿಗಳನ್ನೊಳಗೊಂಡ ತಂಡ ಶಿಬಿರದಲ್ಲಿ ಪಾಲ್ಗೊಂಡಿತ್ತು.
    ಅಪ್ಪರ್ ಹುತ್ತಾ ಗೆಳೆಯರ ಬಳಗ ಟ್ರಸ್ಟ್ ವತಿಯಿಂದ ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಉತ್ಸುಕವಾಗಿದ್ದು, ಜನರ ಸಹಕಾರ, ಪ್ರೋತ್ಸಾಹದ ನಿರೀಕ್ಷೆಯಲ್ಲಿದೆ.