Tuesday, October 17, 2023

ಇಸ್ಮಾಯಿಲ್ ಖಾನ್ ನಿಧನ

ಇಸ್ಮಾಯಿಲ್ ಖಾನ್
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ತಾಲೂಕು ಗ್ರಾಮಾಂತರ ಅಧ್ಯಕ್ಷ, ಬಾಬಳ್ಳಿ ನಿವಾಸಿ ಇಸ್ಮಾಯಿಲ್ ಖಾನ್(೭೩) ನಿಧನ ಹೊಂದಿದರು.
    ಪುತ್ರಿ ಹಾಗು ಮೂವರು ಪುತ್ರರು ಇದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಹಾಗು ಗ್ರಾಮ ಪಂಚಾಯತ್ ಸದಸ್ಯರಾಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಹಾಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್(ಡಿಸಿಸಿ) ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
    ಇವರ ನಿಧನಕ್ಕೆ ಇವರ ಸಹೋದರ, ಉಪನ್ಯಾಸಕ ಡಾ.ಬಿ.ಎಂ ನಾಸಿರ್‌ಖಾನ್, ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ಬ್ಲಾಕ್ ಕಾಂಗ್ರೆಸ್ ನಗರ ಹಾಗು ಗ್ರಾಮಾಂತರ ಘಟಕಗಳ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎನ್.‌ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Monday, October 16, 2023

ಮಲೆಯಾಳಿ ಭಾಷಿಕರು ಇತರರಿಗೆ ಮಾದರಿ : ಬಿ.ಕೆ ಸಂಗಮೇಶ್ವರ್

ಕೇರಳ ಸಮಾಜಂ ವತಿಯಿಂದ ಭದ್ರಾವತಿ ಬಿ.ಹೆಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ೧೧ನೇ ವರ್ಷದ ಓಣಂ ದಿನಾಚರಣೆ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ: ಮಲೆಯಾಳಿ ಭಾಷಿಕರು ದೇಶದ ವಿವಿಧ ಭಾಗಗಳಲ್ಲಿ ನೆಲೆಸಿ ತಮ್ಮದೆ ಆದ ಕೊಡುಗೆಗಳನ್ನು ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
    ಅವರು ನಗರದ ಕೇರಳ ಸಮಾಜಂ ವತಿಯಿಂದ ಬಿ.ಹೆಚ್ ರಸ್ತೆ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ೧೧ನೇ ವರ್ಷದ ಓಣಂ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಕೇರಳ ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ವಿದ್ಯಾವಂತರಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಅಲ್ಲದೆ ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕುವ ಗುಣ ರೂಪಿಸಿಕೊಂಡಿದ್ದಾರೆ. ಇವರ ಏಳಿಗೆಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
    ಉಡುಪಿಯ ಕೇರಳ ಸಮಾಜಂ ಅಧ್ಯಕ್ಷ ಸುಗುಣ ಕುಮಾರ್ ಮಾತನಾಡಿ, ಮಲಯಾಳಿ ಭಾಷಿಕರು ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಮೂಡಿಸಬೇಕು. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.
    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕೇರಳ ಸಮಾಜಂ ಅಧ್ಯಕ್ಷ ಗಂಗಾಧರ ಮಾತನಾಡಿ, ಸಮಾಜದ ಸದಸ್ಯರುಗಳು ತಮ್ಮ ಸಮುದಾಯದ ಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಲದೆ ಮರಣದ ನಂತರ ತಮ್ಮ ಕಣ್ಣುಗಳನ್ನು ಮತ್ತೊಬ್ಬರಿಗೆ ದಾನ ಮಾಡುವ ಮೂಲಕ ಅವರ ಬಾಳಿಗೆ ಬೆಳಕಾಗಬೇಕೆಂದರು.
    ಪ್ರಮುಖರಾದ ಎನ್.ಡಿ.ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಬಾಲಚಂದ್ರನ್, ಯುವ ಘಟಕದ ಅಧ್ಯಕ್ಷ ಎಸ್.ಪ್ರಸನ್ನ ಕುಮಾರ್, ಅಬ್ದುಲ್ ನಜೀಬ್, ಡಾ.ಪ್ರವೀಣ ಜೇಕೋಬ್, ಕೆ.ಇಬ್ರಾಹಿಂ ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಓಣಂ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಹೂವಿನ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಆರ್ಯ ಚಂದ್ರನ್ ಪ್ರಾರ್ಥಿಸಿ, ವಿಜಯ್ ಕುಮಾರ್ ಸ್ವಾಗತಿಸಿದರು. ಪ್ರಶಾಂತ್ ನಿರೂಪಿಸಿ, ವಂದಿಸಿದರು.

ಇಂಧನ ಬಳಸದೆ ಅಡುಗೆ ಮಾಡುವ ಕಲೆಯಲ್ಲೂ ಮುಂಚೂಣಿ ಬನ್ನಿ : ಡಾ. ವರ್ಷಾ

ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವರ್ಷಾ ಉದ್ಘಾಟಿಸಿದರು.

    ಭದ್ರಾವತಿ: ಮಹಿಳೆಯರು ಅಡುಗೆ ಮಾಡುವ ವಿಧಾನದಲ್ಲೂ ಸವಾಲು ಎದುರಿಸುವಂತಾಗಿದ್ದು, ಇಂಧನ ಬಳಸದೆ ಅಡುಗೆ ಮಾಡುವ ಕಲೆಯಲ್ಲೂ ಸಹ ಮಹಿಳೆಯರು ಮೈಗೂಡಿಸಿಕೊಳ್ಳಬೇಕೆಂದು ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ವರ್ಷಾ ಹೇಳಿದರು.

    ನಗರಸಭೆ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

    ದಸರಾ ಹಬ್ಬ ಎಂದರೆ ಮಹಿಳೆಯರಿಗೆ ಸಂಭ್ರಮ. ಮನೆಯಲ್ಲಿ ಮಹಿಳೆಯರು ಖುಷಿಯಿಂದ ಇದ್ದಾಗ ಮಾತ್ರ ಕುಟುಂಬ ಸಹ ಸಂಭ್ರಮದಲ್ಲಿರುತ್ತದೆ. ಅಡುಗೆ ತಯಾರಿಕೆ ಸ್ಪರ್ಧೆ ಎಂದರೆ ಮಹಿಳೆಯರಿಗೆ ನೀಡಿರುವ ಪ್ರಮುಖ ಸಾಧ್ಯತೆ ಎಂಬುದಾಗಿದೆ. ಎಲ್ಲರೂ ಸ್ಪರ್ಧೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ಪ್ರೀತಿಯಿಂದ ಅಡುಗೆ ತಯಾರಿಕೆ ಮಾಡುವ ಮೂಲಕ ತಮ್ಮ ಪ್ರತಿಭೆಗಳನ್ನು ಹೊರಬೇಕೆಂದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಪೌರಾಯುಕ್ತ ಎಚ್.ಎಂ ಮನುಕುಮಾರ್, ಮೈಸೂರಿಗೂ ಭದ್ರಾವತಿ ನಗರಕ್ಕೂ ಬಿಡಿಸಲಾದ ನಂಟಿದೆ. ಮೈಸೂರು ದೊರೆಗಳ ಹಾಗು ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಕೊಡುಗೆ ಅನನ್ಯವಾಗಿದೆ. ಈ ನಿಟ್ಟಿನಲ್ಲಿ ಭದ್ರಾವತಿ, ಶಿವಮೊಗ್ಗ ಸೇರಿದಂತೆ ಇಡೀ ಜಿಲ್ಲೆಯಲ್ಲಿ ದಸರಾ ಹಬ್ಬಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮ ನಾಡಿನ ಪರಂಪರೆ, ಸಂಸ್ಕೃತಿ, ಕಲೆ, ಕ್ರೀಡೆ ಎಲ್ಲವನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕರ್ತವ್ಯ ನಮ್ಮೆಲ್ಲದ್ದಾಗಿದೆ. ದಸರಾ ಎಲ್ಲರ ಹಬ್ಬವಾಗಿದ್ದು, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗಾಗಿ ಆಹಾರ ಮೇಳ ಆಯೋಜಿಸಲಾಗಿದೆ ಎಂದರು.

ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಹಾರ ಮೇಳ ಇಂಧನ ರಹಿತ ಅಡುಗೆ ತಯಾರಿಕೆ ಸ್ಪರ್ಧೆಯಲ್ಲಿ ಸುಮಾರು 15 ಮಹಿಳಾ ತಂಡಗಳು ಭಾಗವಹಿಸಿದ್ದವು.

    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರಸಭಾ ಸದಸ್ಯರಾದ ಚನ್ನಪ್ಪ, ಸವಿತಾ ಉಮೇಶ್, ಮಣಿ ಎಎನ್ಎಸ್, ಕಾಂತರಾಜ್, ಮಂಜುಳ ಸುಬ್ಬಣ್ಣ, ಜಯಶೀಲ ಸುರೇಶ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಲತಾ ಚಂದ್ರಶೇಖರ್, ಅನುಪಮಾ ಚನ್ನೇಶ್, ತೀರ್ಪುಗಾರರಾದ ವಿಕ್ರಂ ಶೆಟ್ಟಿ, ಗೀತಾ ಬೆಂಗಳೂರು ಮತ್ತು ವೀಣಾ ರಾಘವೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಕಾರ್ಯಕ್ರಮ ನಿರೂಪಿಸಿದರು. ಸುಮಿತ್ರ ಎಚ್. ಹರಪ್ಪನಹಳ್ಳಿ ವಂದಿಸಿದರು. ಸ್ಪರ್ಧೆಯಲ್ಲಿ ಸುಮಾರು 15 ಮಹಿಳಾ ತಂಡಗಳು ಭಾಗವಹಿಸಿದ್ದವು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು

ಭದ್ರಾವತಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯಾಧಿಕಾರಿಗಳ ಕಚೇರಿ ಹಾಗು ಡಾ. ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಸೊಸೈಟಿ, ಸ್ಕೂಲ್ ಆಫ್ ನರ್ಸಿಂಗ್ ಅಂಡ್ ಪ್ಯಾರಮೆಡಿಕಲ್ ಇನ್‌ಸ್ಟಿಟ್ಯೂಟ್ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.
    ಭದ್ರಾವತಿ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯಾಧಿಕಾರಿಗಳ ಕಚೇರಿ ಹಾಗು ಡಾ. ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಸೊಸೈಟಿ, ಸ್ಕೂಲ್ ಆಫ್ ನರ್ಸಿಂಗ್ ಅಂಡ್ ಪ್ಯಾರಮೆಡಿಕಲ್ ಇನ್‌ಸ್ಟಿಟ್ಯೂಟ್ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.
    ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ಡಾ. ಅಂಬೇಡ್ಕರ ಪ್ಯಾರಾ ಮೆಡಿಕಲ್ ಎಜುಕೇಷನ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಉದ್ಘಾಟಿಸಿದರು.
    ತಾಲೂಕು ಆರೋಗ್ಯಾಧಿಕಾರಿ ಸುಶೀಲ, ನ್ಯಾಯವಾದಿ ಟಿ.ಎಸ್ ರಾಜು, ಡಾ. ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಟಿ. ರಾಜೇಂದ್ರ, ಕಾರ್ಯದರ್ಶಿ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅ.೧೭ರಂದು ವಿದ್ಯುತ್ ವ್ಯತ್ಯಯ

    ಭದ್ರಾವತಿ: ಮೆಸ್ಕಾಂ  ಕೂಡ್ಲಿಗೆರೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯವಿರುವುದರಿಂದ ಅ.೧೭ರಂದು ಬೆಳಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
    ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಿಳಚಿ, ತಿಮ್ಲಾಪುರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Sunday, October 15, 2023

ಎಮೆರಿಟಸ್ ಪ್ರೊ. ವಿಜಯಾದೇವಿಗೆ `ಡಾ. ಎ.ಪಿ.ಜೆ ಅಬ್ದುಲ್ ಕಲಾಂ' ಪ್ರಶಸ್ತಿ

ಪ್ರೊ. ವಿಜಯಾದೇವಿ
    ಭದ್ರಾವತಿ: ನಗರದ ನಿವಾಸಿ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊ. ವಿಜಯಾದೇವಿಯವರಿಗೆ `ಡಾ. ಎ.ಪಿ.ಜೆ ಅಬ್ದುಲ್ ಕಲಾಂ' ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ.
    ಪ್ರೊ. ವಿಜಯಾದೇವಿಯವರು ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಡೆದಾಡುವ ದೇವರ ಸೇವಾ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
    ಅ.೨೨ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರ ೯೨ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ವಿಜಯಾದೇವಿಯವರಿಗೆ ರಾಜ್ಯ ಮತ್ತು ಜಿಲ್ಲಾಮಟ್ಟದ ಪ್ರಶಸ್ತಿ, ಬಿರುದುಗಳು ಸಂದಿವೆ. ಶಿಕ್ಷಣ ಹಾಗು ಸಾಹಿತ್ಯ ಕ್ಷೇತ್ರದಲ್ಲಿ ಇವರ ಸೇವೆ ಇಂದಿಗೂ ಮುಂದುವರೆದಿದೆ.

ನಾಡಹಬ್ಬ ದಸರಾ ೯ ದಿನಗಳ ವಿಶೇಷ ಆಚರಣೆಗಳಿಂದ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಾಧ್ಯ : ಪಿ. ವೆಂಕಟರಮಣ ಶೇಟ್

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಯನ್ನು ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಭಾನುವಾರ ಉದ್ಘಾಟಿಸಿದರು.
    ಭದ್ರಾವತಿ; ನವದುರ್ಗೆಯರನ್ನು ಪೂಜಿಸುವ ಮೂಲಕ ದುಷ್ಟಶಕ್ತಿಗಳನ್ನು ಹಿಮ್ಮೆಟ್ಟಿಸುವ ಕೆಲಸ ೯ ದಿನಗಳ ವಿಶೇಷ ಆಚರಣೆಗಳಿಂದ ಸಾಧ್ಯವಾಗುತ್ತದೆ. ನಾಡಿನ ಅದಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಕ್ಷೇತ್ರದ ಜನತೆಗೆ ಸುಖ ಶಾಂತಿ ನೀಡಲಿ ಎಂದು ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಹೇಳಿದರು.
    ಅವರು ಭಾನುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ನಗರಸಭೆ ಕಚೇರಿ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.
    ದಸರಾ ಶಕ್ತಿ ದೇವತೆಗಳ ಹಬ್ಬ ಮಾತ್ರವಲ್ಲದೆ ನಾಡಿನ ಸಂಪ್ರದಾಯ ಸಂಸ್ಕೃತಿ ಬಿಂಬಿಸುವ ಹಬ್ಬವಾಗಿದೆ. ಇಂತಹ ಹಬ್ಬಕ್ಕೆ ಚಾಲನೆ ನೀಡಲು ಅವಕಾಶ ಮಾಡಿಕೊಟ್ಟ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆವತಿಯಿಂದ ಆಯೋಜಿಸಿರುವ ನಾಡಹಬ್ಬ ದಸರಾ  ಸೌಹಾರ್ದತೆಯ ಹಬ್ಬವಾಗಬೇಕು. ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತರು ಸೇರಿದಂತೆ ಎಲ್ಲಾ ಸಮಾಜದ ಸಮುದಾಯದ, ಧರ್ಮದ ಜನರು ಒಟ್ಟಾಗಿ ಆಚರಿಸುವಂತಾಗಬೇಕು. ಆಗ ಮಾತ್ರ ಏಕತೆ ಕಾಣಲು ಸಾಧ್ಯವಾಗುತ್ತದೆ. ಅಂತಹ ಸೌಹಾರ್ದತೆಯ ಹಬ್ಬಕ್ಕೆ ನಾವೆಲ್ಲರೂ ಸಾಕ್ಷಿಯಾಗಬೇಕು ಎಂದರು.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ ಮಾತನಾಡಿ, ಹಲವು ಸಂಸ್ಕೃತಿಗಳನ್ನು ಒಳಗೊಂಡಿರುವ ಭಾರತದಲ್ಲಿ ಸಂಸ್ಕೃತಿಯ ಉಳಿವಿಗೆ ದಸರಾ ಪೂರಕವಾಗಿದೆ ಎಂದರು.
    ಪೌರಾಯುಕ್ತ ಮನುಕುಮಾರ್ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿ, ದುಷ್ಟಶಕ್ತಿಗಳ ನಿವಾರಣೆ ಹಾಗು ಶಿಷ್ಟಶಕ್ತಿಗಳ ಏಳಿಗೆಗಾಗಿ ದಸರಾ ಆಚರಿಸಲಾಗುತ್ತದೆ. ಭದ್ರಾವತಿ ದಸರಾ ಆಚರಣೆಯಲ್ಲಿ ಕುಸ್ತಿ ಪಂದ್ಯಾವಳಿಗೆ ಜನರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದರು.


ಭದ್ರಾವತಿಯಲ್ಲಿ ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ನಾಗರೀಕರು ನಾಡಹಬ್ಬ ದಸರಾ ಉದ್ಘಾಟಕರಾದ ಸಮಾಜ ಸೇವಕ ಪಿ. ವೆಂಕಟರಮಣಶೇಟ್ ಹಾಗೂ ಪ್ರೇಮಾ ಶೇಟ್ ದಂಪತಿಯನ್ನು ಮಾಧವಚಾರ್ ವೃತ್ತದಿಂದ ನಗರಸಭೆ ಕಚೇರಿ ಆವರಣದವೆರಗೂ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು.
    ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ವಿವಿಧ ಸಮಿತಿಗಳ ಅಧ್ಯಕ್ಷರಾದ ಬಷೀರ್ ಅಹಮದ್, ಬಸವರಾಜ ಬಿ. ಆನೇಕೊಪ್ಪ, ಚನ್ನಪ್ಪ, ಆರ್. ಮೋಹನ್‌ಕುಮಾರ್, ವಿ. ಕದಿರೇಶ್, ಮಣಿ ಎಎನ್‌ಎಸ್, ಅನುಸುಧಾಮೋಹನ್ ಪಳನಿ, ಬಿ.ಕೆ ಮೋಹನ್,  ಬಿ.ಟಿ ನಾಗರಾಜ್,  ಲತಾಚಂದ್ರಶೇಖರ್, ಅನುಪಮ ಚನ್ನೇಶ್, ಮಂಜುಳ ಸುಬ್ಬಣ್ಣ, ಜಾರ್ಜ್, ಬಿ.ಎಂ ಮಂಜುನಾಥ್, ಅನಿತಾ ಮಲ್ಲೇಶ್, ಕೋಟೇಶ್ವರ ರಾವ್, ಪಲ್ಲವಿ ದಿಲೀಪ್, ರೇಖಾ ಪ್ರಕಾಶ್, ಎಸ್. ಜಯಶೀಲ ಸುರೇಶ್, ಸವಿತಾ ಉಮೇಶ್, ಶಶಿಕಲಾ ನಾರಾಯಣಪ್ಪ, ಆರ್. ಶ್ರೇಯಸ್, ಸೈಯದ್ ರಿಯಾಜ್, ಕಾಂತರಾಜ್, ಉದಯಕುಮಾರ್ ಸೇರಿದಂತೆ  ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಮತ್ತು ನಾಗರೀಕರು ಪಿ. ವೆಂಕಟರಮಣಶೇಟ್ ಹಾಗೂ ಪ್ರೇಮಾ ಶೇಟ್ ದಂಪತಿಯನ್ನು ಮಾಧವಚಾರ್ ವೃತ್ತದಿಂದ ನಗರಸಭೆ ಕಚೇರಿ ಆವರಣದವೆರಗೂ ಕಲಾತಂಡಗಳೊಂದಿಗೆ ಮೆರವಣಿಗೆ ಮೂಲಕ ಕರೆತರಲಾಯಿತು.
    ಕಂದಾಯಾಧಿಕಾರಿ ರಾಜ್‌ಕುಮಾರ್ ನಿರೂಪಿಸಿ, ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿದರು. ಪವನ್‌ಕುಮಾರ್ ಉಡುಪ, ನರಸಿಂಹಚಾರ್, ರಮಾಕಾಂತ್ ನೇತೃತ್ವದ ತಂಡದ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.