ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಯಲಿ ಎಂಬ ಆಶಯದೊಂದಿಗೆ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತ(ಎಸ್ಎವಿ ಸರ್ಕಲ್)ದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಯಲಿ ಎಂಬ ಆಶಯದೊಂದಿಗೆ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತ(ಎಸ್ಎವಿ ಸರ್ಕಲ್)ದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಅ.೨೮ರ ಶನಿವಾರ ನಡೆಯಲಿದೆ.
ಪ್ರಸ್ತುತ ಕಾರ್ಖಾನೆ ಎದುರಿಸುತ್ತಿರುವ ಸಂಕಷ್ಟ ಪರಿಹರಿಸುವಂತೆ ಇಲ್ಲಿನ ಯುವಕರು ವಿಘ್ನ ನಿವಾರಕನಲ್ಲಿ ಮೊರೆ ಹೋಗುವ ಉದ್ದೇಶದಿಂದ ಈ ಬಾರಿ ೧೩ನೇ ವರ್ಷದ ವಿನಾಯಕ ಚತುರ್ಥಿಯಂದು ವಿಶೇಷವಾಗಿ ಕಾರ್ಖಾನೆಯ ಸಂಪೂರ್ಣ ಚಿತ್ರಣ ಅನಾವರಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಗುರುವಾರ ಸರ್.ಎಂ.ವಿ ಗಾನವೃಂದ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುತ್ತಮುತ್ತಲಿನ ನಿವಾಸಿಗಳು ಪಾಲ್ಗೊಂಡಿದ್ದರು.
ಅ.೨೭ರಂದು ಬೆಳಿಗ್ಗೆ ೧೦ ಗಂಟೆಗೆ ವಿಐಎಸ್ಎಲ್ ಉಳಿಯಲಿ ಎಂಬ ಸಂಕಲ್ಪದೊಂದಿಗೆ ಗಣಹೋಮ ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.