ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ (ಎಚ್.ಕೆ ಜಂಕ್ಷನ್) ಬಳಿ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವ ವ್ಯಕ್ತಿಯೋರ್ವನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರ ತಂಡ ಯಶಸ್ವಿಯಾಗಿರುವ ಘಟನೆ ನಡೆದಿದೆ.
ಭದ್ರಾವತಿ: ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ (ಎಚ್.ಕೆ ಜಂಕ್ಷನ್) ಬಳಿ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವ ವ್ಯಕ್ತಿಯೋರ್ವನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರ ತಂಡ ಯಶಸ್ವಿಯಾಗಿರುವ ಘಟನೆ ನಡೆದಿದೆ.
ಬಂಧಿತ ವ್ಯಕ್ತಿ ಉಮೇಶ ಅಲಿಯಾಸ್ ಮುದ್ದ ಬಿನ್ ಹರಿಹರಪ್ಪ ಎಂದು ಗುರುತಿಸಲಾಗಿದೆ. ಈತನಿಂದ ಕಳ್ಳತನ ಮಾಡಲಾಗಿರುವ ೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಅಂದಾಜು ಮೌಲ್ಯ ಒಟ್ಟು ೮೦ ಸಾವಿರ ರುಪಾಯಿಗಳಾಗಿರುತ್ತದೆ.
ಕಾರ್ಯಾಚರಣೆ ತಂಡದಲ್ಲಿ ಪಾಲ್ಗೊಂಡಿದ್ದ ಠಾಣಾ ಪೊಲೀಸ್ ನಿರೀಕ್ಷಕ ಜಗದೀಶ್ ಹಂಚಿನಾಲ್, ಠಾಣಾಧಿಕಾರಿಗಳಾದ ಶ್ರೀಶೈಲ ಕೆಂಚಣ್ಣವರ, ಜಯಪ್ಪ, ಶಿಲ್ಪ ನಾಯನೇಗಲಿ, ಮಹೇಶ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ಮಂಜುನಾಥ್, ಈರಯ್ಯ ಮತ್ತು ಶಿವಪ್ಪರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ಧಾರೆ.