Saturday, November 4, 2023

ವಿಐಎಸ್‌ಎಲ್ ಶತಮಾನೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮಗಳು

ಭದ್ರಾವತಿ  ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಎರಡು ದಿನಗಳ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಶನಿವಾರ ಸಂಜೆ  ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಎರಡು ದಿನಗಳ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಶನಿವಾರ ಸಂಜೆ  ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ನಾಡು-ನುಡಿ, ಜಾತಿ-ಧರ್ಮ, ಸಂಸ್ಕೃತಿ ಹಾಗು ಪರಂಪರೆ ಬಿಂಬಿಸುವ ಹಲವು ನೃತ್ಯ ರೂಪಕಗಳು ನೋಡುಗರ ಗಮನ ಸೆಳೆದವು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಕಲಾವಿದರು ತಮ್ಮ ಪ್ರತಿಭೆಗಳನ್ನು ಆಕರ್ಷಕವಾಗಿ ಆನಾವರಣಗೊಳಿಸಿದರು.


    ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಕಾರ್ಖಾನೆ ಮಾಜಿ ಉದ್ಯೋಗಿ ಎಸ್. ದೊಡ್ಡಣ್ಣ ಕಾರ್ಖಾನೆಯಲ್ಲಿ ತಮ್ಮೊಂದಿಗೆ ವೃತ್ತಿ ಸೇವೆ ಸಲ್ಲಿಸಿದವರು ಹಾಗು ಹೋರಾಟಗಳಲ್ಲಿ ಭಾಗಿಯಾದವರನ್ನು ಸ್ಮರಿಸುವ ಜೊತೆಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.
    ಈ ನಡುವೆ ಶತಮಾನೋತ್ಸವ ಯಶಸ್ವಿಗಾಗಿ ತೆರೆಮರೆಯಲ್ಲಿ ಶ್ರಮಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಸಂಜೆ ಕಾರ್ಯಕ್ರಮದಲ್ಲಿ ಹೊರದೇಶ, ಹೊರರಾಜ್ಯ ಹಾಗು ರಾಜ್ಯದ ವಿವಿಧ ಮೂಲೆಗಳಿಂದ ಮತ್ತು ನಗರದ ವಿವಿಧೆಡೆಗಳಿಂದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.



    ನ.೫ರಂದು ಸಮಾರೋಪ ಸಮಾರಂಭ:
    ಶತಮಾನೋತ್ಸವ ಸಮಾರೋಪ ನ.೫ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ರಾಜ್ಯ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಮೈಸೂರು ಮಹಾರಾಜರಿಂದ ಭದ್ರಾವತಿಯಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಉದ್ಘಾಟನೆ

ಪೂರ್ವಿಕರ ಕೊಡುಗೆಯಾಗಿರುವ ಕಾರ್ಖಾನೆ ಉಳಿಸಿಕೊಳ್ಳುವ ಹೋರಾಟದ ಜೊತೆಯಲ್ಲಿರುವೆ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಶನಿವಾರ ಉದ್ಘಾಟಿಸಿದರು.
    ಭದ್ರಾವತಿ: ಅಂದು ಮೈಸೂರು ಮಹಾರಾಜರು ತಮ್ಮ ಆಡಳಿತ ಅವಧಿಯಲ್ಲಿ ವಿನಾಕಾರಣ ರಾಜ್ಯ ಬಿಟ್ಟು ಎಲ್ಲಿಗೂ ಹೋಗುತ್ತಿರಲಿಲ್ಲ  ಸದಾ ಕಾಲ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದರು. ಅವರು ಕೈಗೊಂಡಿರುವ ಕಾರ್ಯಗಳು ಇಂದಿಗೂ ಉಳಿದು ಕೊಂಡಿವೆ ಎಂದು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಸ್ಮರಿಸಿದರು.
ಅವರು ಶನಿವಾರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದರು.
     ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗು ಸರ್.ಎಂ ವಿಶ್ವೇಶ್ವರಾಯರವರ ಕೊಡುಗೆ ಅಪಾರವಾಗಿದ್ದು, ಅಂದು ಮಹಾರಾಜರು ಕೆಲಸದ ನಿಮಿತ್ತ ವಿದೇಶ ಪ್ರಯಾಣ ಮಾಡಿದ್ದು ಬಿಟ್ಟರೇ ಎಂದಿಗೂ ರಾಜ್ಯ ಬಿಟ್ಟು ಹೊರಗೆ ಹೋದವರಲ್ಲ. ಅವರು ಕೆಲವು ಬಾರಿ ವಿಶ್ರಾಂತಿಗಾಗಿ ಕೆಮ್ಮಣ್ಣುಗುಂಡಿ ಮತ್ತು ಜೋಗ ಜಲಪಾತ ಸೇರಿದಂತೆ ಸುತ್ತಮುತ್ತಲ ಪ್ರಾಕೃತಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದರು. ಅವರು ಅವಧಿಯಲ್ಲಿ ನಿರ್ಮಿಸಿರುವ ಅತಿಥಿ ಗೃಹಗಳೇ ಇವುಗಳಿಗೆ ಸಾಕ್ಷಿಯಾಗಿದೆ ಎಂದರು.
ನಮ್ಮ ಪೂರ್ವಕರ ಕೊಡುಗೆಯಾಗಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಖಾನೆ ಉಳಿಸಿಕೊಳ್ಳುವ ನಿಮ್ಮಲ್ಲರ ಹೋರಾಟದ ಪ್ರಯತ್ನದಲ್ಲಿ ನಾನು ಸಹ ಜೊತೆಯಲ್ಲಿರುವೆ ಎಂದು ಭರವಸೆ ನೀಡಿದರು.


ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ನಾಯಕರನ್ನು ಒಗ್ಗೂಡಿಸಿಕೊಂಡು ಕಾರ್ಖಾನೆ ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ವಿಐಎಸ್‌ಎಲ್ ಕೇವಲ ಕಾರ್ಖಾನೆಯಾಗಿ ಉಳಿದಿಲ್ಲ. ನಮ್ಮೆಲ್ಲರ ಬಾಂಧವ್ಯದ ಕೊಂಡಿಯಾಗಿದೆ. ಈ ಕಾರ್ಖಾನೆ ರಾಜ್ಯಕ್ಕೆ, ದೇಶಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಬೇಕಾದ ಕಾರ್ಖಾನೆಯಾಗಿದೆ. ಇದನ್ನು ಉಳಿಸಿಕೊಳ್ಳಲು ಎಲ್ಲರೂ ಸಹ ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನಮ್ಮೆಲ್ಲರ ನಾಯಕರಾದ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಈಗಲೂ ಪ್ರಯತ್ನ ಮುಂದುವರೆದಿದೆ. ಭವಿಷ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಅಭಿವೃದ್ಧಿಗೊಳಿಸುವ ವಿಶ್ವಾಸವಿದೆ ಎಂದರು.
ಮೈಸೂರು ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದರು.


ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೦ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ಚಲನ ಚಿತ್ರ ನಟ, ನಿವೃತ್ತ ಉದ್ಯೋಗಿ ಎಸ್. ದೊಡ್ಡಣ್ಣ ನೇತೃತ್ವದಲ್ಲಿ ನಗರದ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಶತಮಾನೋತ್ಸವದಲ್ಲಿ ಗು ಸರ್.ಎಂ ವಿಶ್ವೇಶ್ವರಾಯರವರ ಮೊಮ್ಮಗ ಮೋಕ್ಷಗೊಂಡಂ ಶೇಷಾದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
     ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಧರ್ಮಪ್ರಸಾದ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಯುವ ಮುಖಂಡ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರಾದ ಚನ್ನಪ್ಪ, ಮಣಿ ಎಎನ್‌ಎಸ್, ಲತಾ ಚಂದ್ರಶೇಖರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
    ಉದ್ಯಮಿ ಡಾ. ವಿಜಯಸಂಕೇಶ್ವರ ಹಾಗು ಸರ್.ಎಂ ವಿಶ್ವೇಶ್ವರಾಯರವರ ಮೊಮ್ಮಗ ಮೋಕ್ಷಗೊಂಡಂ ಶೇಷಾದ್ರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ ಅಧ್ಯಕ್ಷತೆವಹಿಸಿದ್ದರು. ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎಂ.ವಿ ರೇವಣ್ಣ ಸಿದ್ದಯ್ಯ ಸ್ವಾಗತಿಸಿದರು.
    ವಿಐಎಸ್‌ಎಲ್ ಕಾರ್ಖಾನೆ ಗುತ್ತಿಗೆ, ಕಾಯಂ ಹಾಗು ನಿವೃತ್ತ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ, ಸಂಘ-ಸಂಸ್ಥೆಗಳ ಪ್ರಮುಖರು, ಮಹಿಳಾ ಸಂಘಟನೆಗಳ ಪ್ರಮುಖರು ಹಾಗು ಹೊರ ದೇಶ ಹಾಗು ಹೊರ ರಾಜ್ಯಗಳಲ್ಲಿ ನಿವೃತ್ತ ಕಾರ್ಮಿಕರು, ಕುಟುಂಬ ವರ್ಗದವರು ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Friday, November 3, 2023

ಓ.ಸಿ, ಮಟ್ಕಾ ಜೂಜಾಟ : ಪ್ರಕರಣ ದಾಖಲು




    ಭದ್ರಾವತಿ : ತಾಲೂಕಿನ ವೀರಾಪುರ ಗ್ರಾಮ ಆಟೋ ನಿಲ್ದಾಣದ ಹತ್ತಿರ ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತರಾಗಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಈ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಚಂದ್ರಶೇಖರ್, ಓ.ಸಿ, ಮಟ್ಕಾ ಜೂಜಾಟದಲ್ಲಿ ನಿರತನಾಗಿದ್ದ ರಾಜೇಶ ಅಲಿಯಾಸ್ ರಾಜು ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಲಯದ ಅನುಮತಿ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

೨ ಪಂಪ್ ಸೆಟ್ ಮೋಟಾರ್ ಕಳವು : ದೂರು ದಾಖಲು

    ಭದ್ರಾವತಿ: ತೋಟದ ಹಳ್ಳದಲ್ಲಿ ಅಳವಡಿಸಲಾಗಿದ್ದ ಎರಡು ಪಂಪ್‌ಸೆಟ್ ಮೋಟಾರ್‌ಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ನಡೆದಿದೆ.
    ಗ್ರಾಮದ ನಿವಾಸಿ ಮಂಜುನಾಥ್ ಎಂಬುವರು ತಮ್ಮ ತೋಟದಲ್ಲಿ ನೀರಿನ ವ್ಯವಸ್ಥೆಗಾಗಿ ೨ ಪಂಪ್ ಸೆಟ್ ಮೋಟಾರ್‌ಗಳನ್ನು ಹಳ್ಳಕ್ಕೆ ಅಳವಡಿಸಿದ್ದು, ಅ.೨೬ರಂದು ಈ ಮೋಟಾರ್‌ಗಳನ್ನು ಕಳವು ಮಾಡಲಾಗಿದೆ. ಇವುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ೩೦ ಸಾವಿರ ರು.ಗಳಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಿಐಎಸ್‌ಎಲ್ ಶತಮಾನೋತ್ಸವ ಯಶಸ್ವಿಗಾಗಿ ಭದ್ರಾ ಮಾತೆ ಆರಾಧನೆ

ವಿಶೇಷವಾಗಿ ಭದ್ರಾರತಿ ಮೂಲಕ ಪ್ರಾರ್ಥನೆ


ಭದ್ರಾವತಿ ನಗರದಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿರುವ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಹಳೇಸೇತುವೆ ಬಳಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಭದ್ರಾರತಿ ನಡೆಯಿತು. ಇದಕ್ಕೂ ಮೊದಲು ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣ ಜ್ಯೋತಿಯನ್ನು ಕಾರ್ಮಿಕರಿಗೆ ಹಸ್ತಾಂತರಿಸಿದರು.
    ಭದ್ರಾವತಿ: ನಗರದಲ್ಲಿ ೨ ದಿನಗಳ ಕಾಲ ಆಯೋಜಿಸಲಾಗಿರುವ ವಿಐಎಸ್‌ಎಲ್ ಶತಮಾನೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಹಳೇಸೇತುವೆ ಬಳಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಭದ್ರಾರತಿ ನಡೆಯಿತು.
    ಶತಮಾನೋತ್ಸವ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಬೇಕೆಂಬ ಆಶಯದೊಂದಿಗೆ ವಿಶೇಷವಾಗಿ ಭದ್ರಾ ಮಾತೆಗೆ ಭದ್ರಾರತಿ ಮೂಲಕ ಪ್ರಾರ್ಥಿಸಲಾಯಿತು. ಇದಕ್ಕೂ ಮೊದಲು ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ ವಿಶೇಷ ಪೂಜೆ ಸಲ್ಲಿಸಿ ಶತಮಾನೋತ್ಸವ ಆಚರಣಾ ಸಮಿತಿ ಮಾರ್ಗದರ್ಶರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಸಮಿತಿ ಅಧ್ಯಕ್ಷ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಜ್ಯೋತಿಯನ್ನು ತರುವ ಮೂಲಕ ದೇವಸ್ಥಾನದ ಮುಂಭಾಗದಲ್ಲಿ ಕಾರ್ಮಿಕರಿಗೆ ಹಸ್ತಾಂತರಿಸಿದರು.
    ನಂತರ ಜ್ಯೋತಿ ಪ್ರಮುಖ ರಸ್ತೆಗಳಲ್ಲಿ ಭದ್ರಾನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ತಲುಪಿತು. ಬುಟ್ಟಿ ದೀಪ ಹಾರಿ ಬಿಡುವ ಜೊತೆಗೆ ಆಕರ್ಷಕ ಸಿಡಿಮದ್ದುಗಳ ಪ್ರದರ್ಶನ ನಡೆಯಿತು.
    ನಗರಸಭೆ ಪೌರಾಯುಕ್ತ ಮನುಕುಮಾರ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಹಾಗು ಪದಾಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು, ಶತಮಾನೋತ್ಸವ ಆಚರಣಾ ಸಮಿತಿ ಸದಸ್ಯರುಗಳು ಹಾಗು ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

ವಿಐಎಸ್‌ಎಲ್ ಅಭಿವೃದ್ಧಿಗೊಳಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿ

ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘ ಮನವಿ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾರ್ವಜನಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಬಹದ್ದೂರ್‌ರವರನ್ನು ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು.
    ಅಂದಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹದ್ದೂರ್‌ರವರ ದೂರದೃಷ್ಟಿ ಹಾಗು ಪರಿಶ್ರಮದ ಫಲವಾಗಿ ನಿರ್ಮಾಣಗೊಂಡಿರುವ ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಬೇಕೆಂಬುದು ಕ್ಷೇತ್ರದ ನಾಗರೀಕರ ಆಶಯವಾಗಿದೆ. ಕಾರ್ಖಾನೆಯ ಶತಮಾನೋತ್ಸವ ಉದ್ಘಾಟಿಸುತ್ತಿರುವುದು ಸಂತಸ ತಂದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಶಿಫಾರಸ್ಸು ಮಾಡಬೇಕೆಂದು ಕೋರಿದರು.
    ಸಂಘದ ಗೌರವಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣ, ಅಧ್ಯಕ್ಷ ಆರ್. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬಿ. ಜಗದೀಶ್, ಖಜಾಂಚಿ ಬಿ. ಶಂಕರನಾಯ್ಕ, ಸಹಕಾರ್ಯದರ್ಶಿ ಮಂಜು, ಸಲಹೆಗಾರ ಸತ್ಯ ಭದ್ರಾವತಿ, ವಿಲ್ಸನ್ ಬಾಬು, ಭಾಸ್ಕರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಶತಮಾನೋತ್ಸವ ಉದ್ಘಾಟನೆಗಾಗಿ ನಗರಕ್ಕೆ ಆಗಮಿಸಿದ ಮೈಸೂರು ಸಂಸ್ಥಾನದ ದೊರೆ

ಭದ್ರಾವತಿ: ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರು ಶುಕ್ರವಾರ ನಗರಕ್ಕೆ ಆಗಮಿಸಿದ್ದಾರೆ.  
    ಭದ್ರಾವತಿ: ನಗರದಲ್ಲಿ ನ.೪ ಮತ್ತು ೫ರಂದು ನಡೆಯಲಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಹದ್ದೂರ್‌ರವರು ಶುಕ್ರವಾರ ನಗರಕ್ಕೆ ಆಗಮಿಸಿದ್ದಾರೆ.
    ನಗರದ ಹೊರವಲಯ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಭದ್ರಾ ಜಲಾಶಯ ಸಮೀಪದ ಜಂಗಲ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಬೆಳಿಗ್ಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬಸ್ಥರು ಹಾಗು ಅಭಿಮಾನಿಗಳು ಬಹದ್ದೂರ್‌ರವರನ್ನು ಸ್ವಾಗತಿಸಿದರು.
    ನ.೪ರ ಬೆಳಿಗ್ಗೆ ೧೦ ಗಂಟೆಗೆ ವಿಐಎಸ್‌ಎಲ್ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಲಾಗಿರುವ ಶತಮಾನೋತ್ಸವ ಬಹದ್ದೂರ್‌ರವರು ಉದ್ಘಾಟಿಸಲಿದ್ದು, ಕೇಂದ್ರ ಹಾಗು ರಾಜ್ಯ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ವಿವಿಧ ಕ್ಷೇತ್ರಗಳ ಸಾಧಕರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.