Thursday, November 16, 2023

ಸರ್.ಎಂ ವಿಶ್ವೇಶ್ವರಾಯ ಸರ್ಕಾರಿ ವಿಜ್ಞಾನ ಕಾಲೇಜಿನ ಹಳೇಯ ವಿದ್ಯಾರ್ಥಿ ಕುಲಸಚಿವ

ಡಾ. ಸಿ.ಕೆ ರಮೇಶ್ ಕುಲಸಚಿವ(ಮೌಲ್ಯಮಾಪನ) ಹುದ್ದೆಗೆ ನಿಯೋಜನೆ

ಡಾ.ಸಿ.ಕೆ ರಮೇಶ್
    ಭದ್ರಾವತಿ: ನಗರದ ಬೊಮ್ಮನಕಟ್ಟೆ ಸರ್.ಎಂ ವಿಶ್ವೇಶ್ವರಾಯ ಸರ್ಕಾರಿ ವಿಜ್ಞಾನ ಕಾಲೇಜಿನ ಹಳೇಯ ವಿದ್ಯಾರ್ಥಿ, ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರಾಧ್ಯಾಪಕ ಡಾ. ಸಿ.ಕೆ ರಮೇಶ್ ಅವರನ್ನು ಸರ್ಕಾರ ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಸಚಿವ(ಮೌಲ್ಯಮಾಪನ) ಹುದ್ದೆಗೆ ನಿಯೋಜನೆಗೊಳಿಸಿ ಆದೇಶ ಹೊರಡಿಸಿದೆ.
    ಕುಲಸಚಿವರಾಗಿದ್ದ ಡಾ. ಕೆ. ಶಿವಶಂಕರ್ ಅವರ ಸೇವೆಯನ್ನು ಮಾತೃ ವಿಶ್ವವಿದ್ಯಾಲಯ/ವಿಭಾಗಕ್ಕೆ ಹಿಂದಿರುಗಿಸಲಾಗಿದ್ದು, ಸರ್ಕಾರ ಡಾ. ಸಿ.ಕೆ ರಮೇಶ್ ಅವರನ್ನು ನೇಮಕಗೊಳಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ. ಹಿರೇಮಠ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
    ಡಾ.ಸಿ.ಕೆ ರಮೇಶ್ ಅವರನ್ನು ಕುಲಸಚಿವ ಹುದ್ದೆಗೆ ಸರ್ಕಾರ ನೇಮಕಗೊಳಿಸಿರುವುದಕ್ಕೆ ಸರ್.ಎಂ ವಿಶ್ವೇಶ್ವರಾಯ ಸರ್ಕಾರಿ ವಿಜ್ಞಾನ ಕಾಲೇಜಿನ ಹಳೇಯ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಸಹಕಾರ ಕ್ಷೇತ್ರ ಇನ್ನೂ ಹೆಚ್ಚು ಬಲಗೊಳಿಸಲಿ : ಸಂಗಮೇಶ್ವರ್

ಭದ್ರಾವತಿ ಹಳೇನಗರದ ವೀರಶೈವ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ, ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಸಹಕಾರ ಹಾಲು ಒಕ್ಕೂಟ ನಿಯಮಿತ, ಶಿವಮೊಗ್ಗ, ಸಹಕಾರ ಇಲಾಖೆ ಹಾಗು ತಾಲೂಕಿನ ಎಲ್ಲಾ ರೀತಿಯ ಸಹಕಾರ ಸಂಘ ಮತ್ತು ಬ್ಯಾಂಕುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ೭೦ನೇ ಅಖಲ ಭಾರತ ಸಹಕಾರ ಸಪ್ತಾಹ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ: ಸಾರ್ವಜನಿಕ ಕ್ಷೇತ್ರದಲ್ಲಿ ಹೆಚ್ಚು ಪರಿಣಾಮಕಾರಿಯಾಗಿರುವ ಸಹಕಾರ ಕ್ಷೇತ್ರಕ್ಕೆ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.
    ಅವರು ಗುರುವಾರ ಹಳೇನಗರದ ವೀರಶೈವ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿಯಮಿತ, ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಸಹಕಾರ ಹಾಲು ಒಕ್ಕೂಟ ನಿಯಮಿತ, ಶಿವಮೊಗ್ಗ, ಸಹಕಾರ ಇಲಾಖೆ ಹಾಗು ತಾಲೂಕಿನ ಎಲ್ಲಾ ರೀತಿಯ ಸಹಕಾರ ಸಂಘ ಮತ್ತು ಬ್ಯಾಂಕುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೦ನೇ ಅಖಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
    ಸಹಕಾರ ಕ್ಷೇತ್ರ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಸಹಕಾರ ಕ್ಷೇತ್ರದ ಕೊಡುಗೆ ಹೆಚ್ಚಿನದ್ದಾಗಿದೆ. ರಾಜ್ಯ ಸರ್ಕಾರ ಈ ಕ್ಷೇತ್ರ ಬಲಪಡಿಸುವ ಮೂಲಕ ಹಿತಕಾಪಾಡಬೇಕೆಂದರು.
    ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥಗೌಡ ಮಾತನಾಡಿ, ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆ ಹಾಗು ಪ್ರಸ್ತುತ ಕೈಗೊಳ್ಳಬೇಕಾಗಿರುವ ಕ್ರಮಗಳ ವಿವರಿಸಿದರು.
    ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಅರಕೆರೆ ಎಚ್.ಎಲ್ ಷಡಾಕ್ಷರಿ, ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟ ನಿಯಮಿತದ ಮಾಜಿ ಅಧ್ಯಕ್ಷ ಡಿ. ಆನಂದ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಕೆ.ಎಲ್ ಜಗದೀಶ್ವರ್ ಸೇರಿದಂತೆ ಇನ್ನಿತರರು ಮಾತನಾಡಿದರು.
    ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾ ಮಂಡಳ ನಿಯಮಿತದ ನಿರ್ದೇಶಕ ಕೆ.ಎನ್ ಭೈರಪ್ಪಗೌಡ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಜೆ.ಪಿ ಯೋಗೇಶ್, ದಶರಥಗಿರಿ, ರಾಜ್ಯ ಸಹಕಾರ ಅಡಕೆ ಮಾರಾಟ ಮಹಾಮಂಡಳ ನಿರ್ದೇಶಕ ಎಚ್.ಎನ್ ನಾಗರಾಜ್, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಾಜಿ ಅಧ್ಯಕ್ಷ ಟಿ.ಎಸ್ ದುಗ್ಗೇಶ್, ನಿರ್ದೇಶಕ ಗೊಂದಿ ಜಯರಾಂ, ಮಾಡೆಲ್ ಹೌಸಿಂಗ್ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್ ಅಧ್ಯಕ್ಷ ಎನ್. ಕೃಷ್ಣಮೂರ್ತಿ, ಭದ್ರಾ ನೀರು ಬಳಕೆದಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಉಪಾಧ್ಯಕ್ಷ ಆರ್. ಶ್ರೀನಿವಾಸ್, ಸಹಕಾರ ಹಾಲು ಒಕ್ಕೂಟ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಚ್.ಜಿ ಶೇಖರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎನ್.ಜಿ ರುದ್ರಪ್ಪ, ಶ್ರೀ ಕನ್ನಿಕಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘ ನಿಯಮಿತದ ಸಿ.ಎನ್ ಗಿರೀಶ್, ಭದ್ರಾ ಕುರಿಉಣ್ಣೆ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಬಿ.ಎಚ್ ವಸಂತ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕೆಐಸಿಎಂ ಉಪನ್ಯಾಸಕ ಏಕಾಂತ್ ಉಪನ್ಯಾಸ ನೀಡಿದರು. ಹೇಮಕ್ಕ ಪ್ರಾರ್ಥಿಸಿದರು. ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ನಿರ್ದೇಶಕ ಎಚ್.ಎಸ್ ಸಂಜೀವಕುಮಾರ್ ಸ್ವಾಗತಿಸಿದರು. ರ್‍ಯಾಮ್ಕೋಸ್ ವ್ಯವಸ್ಥಾಪಕ ವಿರುಪಾಕ್ಷಪ್ಪ ನಿರೂಪಿಸಿದರು. ಜನ್ನಾಪುರ ಅಂಬೇಡ್ಕರ್ ಜಾನಪದ ಕಲಾತಂಡದ ಕಲಾವಿದರು ಜಾನಪದ ಗೀತೆಗಳನ್ನು ಹಾಡಿದರು.

Wednesday, November 15, 2023

ಆಂಬ್ಯುಲೆನ್ಸ್ ಸೇವೆಗೆ ಚಾಲನೆ

ಭದ್ರಾವತಿಯಲ್ಲಿ ಟವನ್ ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಸೊಸೈಟಿ ಹಾಗೂ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ತುರ್ತು ಆರೋಗ್ಯ ರಕ್ಷಣೆಗಾಗಿ  ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು.
    ಭದ್ರಾವತಿ: ಟವನ್ ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಸೊಸೈಟಿ ಹಾಗೂ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ತುರ್ತು ಆರೋಗ್ಯ ರಕ್ಷಣೆಗಾಗಿ  ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಲಾಯಿತು.
    ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ತುರ್ತು ಆರೋಗ್ಯ ರಕ್ಷಣೆಗಾಗಿ ಆಂಬ್ಯುಲೆನ್ಸ್ ಸೇವೆಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಚಾಲನೆ ನೀಡಿದರು.
    ಸಂಘದ ಅಧ್ಯಕ್ಷ ಟಿ.ಎಸ್ ದುಗ್ಗೇಶ್, ಉಪಾಧ್ಯಕ್ಷ ಎಚ್.ಎನ್ ಯೋಗೇಶ್ ಕುಮಾರ್, ಸಮಾಜದ ಅಧ್ಯಕ್ಷ ಡಿ.ಕೆ ರಾಘವೇಂದ್ರ ರಾವ್ ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಡಾ.ಎಂ.ವಿ ಅಶೋಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ದೀಪಾವಳಿ : ತಾಂಡಗಳಲ್ಲಿ ಮನೆ ಮನೆಗೆ ದೀಪ ತೋರಿಸುವ ಆಚರಣೆ

ದೀಪಾವಳಿ ಹಬ್ಬದಲ್ಲಿ ಲಂಬಾಣಿ ಸಮಾಜದ ವಿಶೇಷತೆಗಳಲ್ಲಿ ಒಂದಾದ ಮನೆ ಮನೆಗೆ ದೀಪ ತೋರಿಸುವ ಆಚರಣೆ ಭದ್ರಾವತಿ ತಾಲೂಕಿನ ಲಂಬಾಣಿ ತಾಂಡಗಳಲ್ಲಿ ಕಂಡು ಬಂದಿತು.
    ಭದ್ರಾವತಿ: ದೀಪಾವಳಿ ಹಬ್ಬದಲ್ಲಿ ಲಂಬಾಣಿ ಸಮಾಜದ ವಿಶೇಷತೆಗಳಲ್ಲಿ ಒಂದಾದ ಮನೆ ಮನೆಗೆ ದೀಪ ತೋರಿಸುವ ಆಚರಣೆ ತಾಲೂಕಿನ ಲಂಬಾಣಿ ತಾಂಡಗಳಲ್ಲಿ ಕಂಡು ಬಂದಿತು.
    ತಾಲೂಕಿನ ಸಿರಿಯೂರು ತಾಂಡ ಸೇರಿದಂತೆ ಲಂಬಾಣಿ ಸಮಾಜದವರು ವಾಸಿಸುತ್ತಿರುವ ತಾಂಡಗಳಲ್ಲಿ ದೀಪಾವಳಿ ಹಬ್ಬದಂದು ಹೆಣ್ಣು ಮಕ್ಕಳು ಮನ ಮನೆಗೆ ತೆರಳಿ ದೀಪ ತೋರಿಸಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವ ಜೊತೆಗೆ ಹಿರಿಯ ಆಶೀರ್ವಾದ ಪಡೆಯುವುದು ವಾಡಿಕೆಯಾಗಿದೆ.
    ಸಿರಿಯೂರು ಗ್ರಾಮದ ಮುಖಂಡ ಕೃಷ್ಣನಾಯ್ಕ ನೇತೃತ್ವದಲ್ಲಿ ಗ್ರಾಮದ ಹೆಣ್ಣು ಮಕ್ಕಳು ಮನೆ ಮನೆಗೆ ದೀಪ ತೋರಿಸುವ ಆಚರಣೆ ನಡೆಸಿದರು. ಲಂಬಾಣಿ ಸಮಾಜದಲ್ಲಿ ದೀಪಾವಳಿಗೆ ಹೆಚ್ಚಿನ ಮಹತ್ವವಿದೆ.

ಮಕ್ಕಳ ಹಕ್ಕುಗಳ ರಕ್ಷಣೆ ಜೊತೆಗೆ ಅಭಿವೃದ್ಧಿಗೆ ಶ್ರಮಿಸಿ : ಪ್ರಮೋದ್

ಭದ್ರಾವತಿ ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣ ಸೇವಾ ಕೇಂದ್ರದಲ್ಲಿ ಪ್ರೌಢಶಾಲೆ ಮಕ್ಕಳಿಗೆ `ಮಾನವ ಕಳ್ಳ ಸಾಗಾಣಿಕೆ ಮಾಹಿತಿ' ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ : ಮಕ್ಕಳ ಹಕ್ಕುಗಳ ರಕ್ಷಣೆಯೊಂದಿಗೆ ಅವರು ಅಭಿವೃದ್ಧಿ ಪಥದಲ್ಲಿ ಸಾಗಲು ಎಲ್ಲರೂ ಶ್ರಮಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕ ಪ್ರಮೋದ್ ಕರೆ ನೀಡಿದರು.
    ಅವರು ನ್ಯೂಟೌನ್ ಸೇಂಟ್ ಚಾರ್ಲ್ಸ್ ಕರುಣ ಸೇವಾ ಕೇಂದ್ರದಲ್ಲಿ ಪ್ರೌಢಶಾಲೆ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದ್ದ `ಮಾನವ ಕಳ್ಳ ಸಾಗಾಣಿಕೆ ಮಾಹಿತಿ' ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
    ಮಕ್ಕಳ ರಕ್ಷಣೆಗಾಗಿ ವಿಶ್ವಸಂಸ್ಥೆ ಜಾರಿಗೊಳಿಸಿರುವ ೪ ಮೂಲಭೂತ ಹಕ್ಕುಗಳ ಕುರಿತು ವಿವರಿಸಿ ಮಕ್ಕಳು ಮೊಬೈಲ್ ದುರ್ಬಳಕೆಯಿಂದ ದಾರಿ ತಪ್ಪದಂತೆ ಎಚ್ಚರವಹಿಸಬೇಕೆಂದರು.
    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯೋಜಕಿ ಶೃತಿ, ಲೈಂಗಿಕ ದೌರ್ಜನ್ಯ ಹಾಗು ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಿ ಮಕ್ಕಳು ಸಾಧನೆಯ ಪಥದಲ್ಲಿ ಮುನ್ನಡೆಯಬೇಕೆಂದರು. ಅಲ್ಲದೆ ಬಾಲ್ಯವಿವಾಹ ತಡೆಗಟ್ಟಲು ಮಕ್ಕಳಿಗೆ ಅರಿವು ಮೂಡಿಸುವುದರ ಜೊತೆಗೆ ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ಕಳ್ಳಸಾಗಾಣಿಕೆ ಕುರಿತು ತಿಳುವಳಿಕೆ ನೀಡಿದರು.
    ಸೇಂಟ್ ಚಾರ್ಲ್ಸ್ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಸಾ ಡಿಕಾಸ್ಟ, ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆ ಮುಖ್ಯಸ್ಥೆ ಸಿಸ್ಟರ್ ಪ್ರಭ, ಕರುಣಾ ಸೇವಾ ಕೇಂದ್ರದ ನಿರ್ದೇಶಕಿ ಹೆಲೆನ್ ಮೋರಸ್, ಕಾರ್ಯಕರ್ತೆಯರಾದ ಗ್ರೇಸಿ, ವಿನಿ, ಧನಲಕ್ಷ್ಮಿ ಹಾಗೂ ಸೇಂಟ್ ಚಾರ್ಲ್ಸ್ ಪ್ರೌಢಶಾಲೆ ಶಿಕ್ಷಕ ವೃಂದ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸುಮಾರು ೧೭೫ ಪ್ರೌಢ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬಲಿಪಾಡ್ಯಮಿ ಹಬ್ಬಕ್ಕೆ ಅಂಟಿಗೆ ಪಂಟಿಗೆ ತಂಡ ಮೆರಗು

ದೀಪಾವಳಿ ಬಲಿಪಾಡ್ಯಮಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಕರ್ನಾಟಕ ಜಾನಪದ ಪರಿಷತ್ತು ಭದ್ರಾವತಿ ತಾಲೂಕು ಖಾಖೆ ವತಿಯಿಂದ ಅಂಟಿಗೆ ಪಂಟಿಗೆ ಕಾರ್ಯಕ್ರಮ ನಡೆಯಿತು.
    ಭದ್ರಾವತಿ: ದೀಪಾವಳಿ ಬಲಿಪಾಡ್ಯಮಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಖಾಖೆ ವತಿಯಿಂದ ಅಂಟಿಗೆ ಪಂಟಿಗೆ ಕಾರ್ಯಕ್ರಮ ನಡೆಯಿತು.
  ಮಲೆನಾಡಿನ ಜನಪದ ಕಲೆ, ತೀರ್ಥಹಳ್ಳಿ ತಾಲೂಕಿನ ಹುಲ್ಲತ್ತಿಯ ಅಂಟಿಗೆ ಪಂಟಿಗೆ ತಂಡ ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿತು. ಕಾಗದನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ  ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಚಾಲನೆ ನೀಡಿದರು.
    ಅಂಟಿಗೆ ಪಂಟಿಗೆ ತಂಡ ದೀಪಾವಳಿ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡಿತು. ನಗರದ ವಿವಿಧ ಮನೆಗಳಿಗೆ ಭೇಟಿ ನೀಡಿ ಕಲೆ ಅನಾವರಣಗೊಳಿಸುವ ಮೂಲಕ ಜಾನಪದ ಕಲೆಯ ಮಹತ್ವ ತಿಳಿಸಿತು.
    ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಪ್ರಮುಖರಾದ ಎಂ.ಎಂ ಸ್ವಾಮಿ, ಡಿ. ಗಣೇಶ್, ಪಿ.ಕೆ ಸತೀಶ್, ಮೋಹನ್, ಎಚ್. ತಿಮ್ಮಪ್ಪ, ನಾಗೋಜಿರಾವ್, ಕಮಲಾಕರ್, ಪ್ರಕಾಶ್, ಚಕ್ರಸಾಲಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, November 13, 2023

ವಿಮಾ ಚಿಕಿತ್ಸಾಯಕ್ಕೆ ಕಟ್ಟಡ, ವಸತಿ ಗೃಹ ನಿರ್ಮಾಣಕ್ಕೆ ೧೦ ಕೋ ರು. ಅನುದಾನ ಬಿಡುಗಡೆಗೊಳಿಸಿ

ಕಾರ್ಮಿಕ ಸಚಿವರಿಗೆ ಶಾಸಕ ಸಂಗಮೇಶ್ವರ್ ಮನವಿ

ಬಿ.ಕೆ ಸಂಗಮೇಶ್ವರ್
    ಭದ್ರಾವತಿ: ಕಾರ್ಮಿಕರ ವಿಮಾ ಚಿಕಿತ್ಸಾಯಕ್ಕೆ ಸರ್ಕಾರಿ ಕಟ್ಟಡ ಮತ್ತು ವಸತಿ ಗೃಹ ನಿರ್ಮಿಸಿಕೊಡಲು ರು. ೧೦ ಕೋ. ಅನುದಾನ ಬಿಡುಗಡೆಗೊಳಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಮಿಕ ಸಚಿವ ಸಂತೋಷ್ ಲಾಡ್‌ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
    ಕ್ಷೇತ್ರದಲ್ಲಿ ಸುಮಾರು ೨೫ ವರ್ಷಗಳಿಂದ ಕಾರ್ಮಿಕರ ವಿಮಾ ಚಿಕಿತ್ಸಾಯ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಕ್ಷೇತ್ರದಲ್ಲಿ ಸುಮಾರು ೨೦ ಸಾವಿರ ಎಂ.ಆರ್.ಇ ಕಾರ್ಡ್‌ಗಳು ಇದ್ದು, ವಿಮಾದಾರರು ಹಾಗು ಅವರ ಅವಲಂಬಿತರು ಸೇರಿದಂತೆ ಸುಮಾರು ೬೦ ಸಾವಿರ ವಿಮಾರೋಗಿಗಳು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವಿಶಾಲವಾದ ಸರ್ಕಾರಿ ಕಟ್ಟಡ ಹಾಗು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಿಸಿಕೊಡುವುದು ಅವಶ್ಯಕವಾಗಿದೆ.
    ಈ ಹಿನ್ನಲೆಯಲ್ಲಿ ಅಗತ್ಯವಿರುವ ಸುಮಾರು ರು. ೧೦ ಕೋ. ಅನುದಾನ ಬಿಡುಗಡೆಗೊಳಿಸುವ ಮೂಲಕ ಕಾರ್ಮಿಕರ ಹಿತ ಕಾಪಾಡುವಂತೆ ಮನವಿಯಲ್ಲಿ ಕೋರಿದ್ದಾರೆ.