![](https://blogger.googleusercontent.com/img/a/AVvXsEgmKzb1L8Hf98XlCntXgLTlyzwlVPac8jbr5MMkqE_MrcfV1ttVx6qqAzlxk_p1jqAwI_VATBMW5iZycGGZJtk3-4gll_JL9wR_9WAHk72rKK7490vP4hu5lAsdVwaPqH5Y6627NtW6WasVvCqeGPPg4ujusmdBeCVyoFBMmhob5N99m_LTyIBj7bK5ABHd=w400-h300-rw)
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ, ಕಾಯಂ ಹಾಗು ನಿವೃತ್ತ ಕಾರ್ಮಿಕರು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ರಾಮೀಜಿಯವರನ್ನು ಭೇಟಿಯಾಗಿ ಇತ್ತೀಚೆಗೆ ಜರುಗಿದ ಕಾರ್ಖಾನೆ ಶತಮಾನೋತ್ಸವ ಹಾಗೂ ಪ್ರಸ್ತುತ ಬೆಳವಣಿಗೆಗಳನ್ನು ಶ್ರೀಗಳಿಗೆ ವಿವರಿಸಿ ಕಾರ್ಖಾನೆ ಉಳಿಸಿಕೊಳ್ಳಲು ಮನವಿ ಮಾಡಿದ್ದಾರೆ.
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಳೆದ ಸುಮಾರು ೧೧ ತಿಂಗಳಿನಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಇದೀಗ ಹೋರಾಟ ಮತ್ತಷ್ಟು ತೀವ್ರಗೊಳಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿಯೋಗದಲ್ಲಿ ಪಾಲ್ಗೊಳ್ಳಲು ಕಾರ್ಮಿಕರು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ರಾಮೀಜಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕಾರ್ಖಾನೆ ಮಾಜಿ ಉದ್ಯೋಗಿ, ಹಿರಿಯ ಚಲನಚಿತ್ರ ದೊಡ್ಡಣ್ಣನವರ ನೇತೃತ್ವದಲ್ಲಿ ಇತ್ತೀಚೆಗೆ ಜರುಗಿದ ಕಾರ್ಖಾನೆ ಶತಮಾನೋತ್ಸವ ಹಾಗೂ ಕಾರ್ಖಾನೆಯ ಪ್ರಸ್ತುತ ಬೆಳವಣಿಗೆಗಳನ್ನು ಕಾರ್ಮಿಕರು ಶ್ರೀಗಳಿಗೆ ವಿವರಿಸಿದ್ದಾರೆ.
ಕಾರ್ಖಾನೆ ಉಳಿಸಿಕೊಳ್ಳಲು ಮೈಸೂರು ಮಹಾರಾಜರು, ಜಿಲ್ಲೆಯ ಸಂಸದರು, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯದ ಪ್ರಮುಖ ಮಠಗಳ ಮಠಾಧೀಶರು ಹಾಗೂ ನಾಡಿನ ಪ್ರಮುಖರನ್ನೊಳಗೊಂಡ ನಿಯೋಗ ಪ್ರಧಾನಮಂತ್ರಿಯವರನ್ನು ಭೇಟಿಯಾಗುತ್ತಿದ್ದು. ಈ ನಿಯೋಗದಲ್ಲಿ ಭಾಗಿಯಾಗಿ ಪ್ರಧಾನಮಂತ್ರಿಯವರ ಮನವೊಲಿಸಿ ಕಾರ್ಖಾನೆ ಉಳಿಸಿ ಕೊಡಬೇಕಾಗಿ ಮನವಿ ಮಾಡಿದರು.
ಕಾರ್ಮಿಕರ ಮನವಿಗೆ ಶ್ರೀಗಳು ಪೂರಕವಾಗಿ ಸ್ಪಂದಿಸಿದ್ದು, ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅಭಯ ನೀಡಿದ್ದಾರೆ.
ಗುತ್ತಿಗೆ, ಕಾಯಂ ಹಾಗು ನಿವೃತ್ತ ಕಾರ್ಮಿಕರಾದ ರಾಕೇಶ್, ಆನಂದ್, ಅಮೃತ್ ಮತ್ತು ನರಸಿಂಹಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.