![](https://blogger.googleusercontent.com/img/a/AVvXsEhACNa_OZe5L15d8wCzhir1IEGOvC4WPxLZjUrzpXFOLOzxPZD_YILFuG_tyGLy65mM4ygsL4LikPE6cLYz0_pqWF0RblqSMRdX5oGbGP9NpBktSSIJzJ2dGjFHs7BnrmVy4PWSOHfFK_CLEm9FT9gQCnSU2bjBUXrTR4qWMuwvZeZOi1Id7nXuxQNY6Fa7=w400-h155-rw)
ಹಲವು ವರ್ಷಗಳ ಬೇಡಿಕೆಯಂತೆ ಭದ್ರಾವತಿ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹೈಟೆಕ್ ಫುಡ್ ಕೋರ್ಟ್ ನಿರ್ಮಾಣಕ್ಕೆ ನಗರಸಭೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಸ್ಥರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.
ಭದ್ರಾವತಿ : ಹಲವು ವರ್ಷಗಳ ಬೇಡಿಕೆಯಂತೆ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಹೈಟೆಕ್ ಫುಡ್ ಕೋರ್ಟ್ ನಿರ್ಮಾಣಕ್ಕೆ ನಗರಸಭೆ ಮುಂದಾಗಿದೆ.
ಮಹಾತ್ಮಗಾಂಧಿ ವೃತ್ತದಲ್ಲಿ ಪುಟ್ಪಾತ್ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕನ್ಸರ್ವೆನ್ಸಿಯಲ್ಲಿ ಸುಸಜ್ಜಿತ ಹೈಟೆಕ್ ಫುಡ್ ಕೋರ್ಟ್ ನಿರ್ಮಿಸುವ ಸಂಬಂಧ ನಗರಸಭೆ ಹೆಚ್ಚಿನ ಆಸಕ್ತಿವಹಿಸಿದ್ದು, ಈ ಹಿನ್ನಲೆಯಲ್ಲಿ ವ್ಯಾಪಾರಸ್ಥರೊಂದಿಗೆ ನಗರಸಭೆ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
೧೨೦ ಮೀಟರ್ ಉದ್ದ ಮತ್ತು ೮ ಮೀಟರ್ ಅಗಲ ವಿಸ್ತೀರ್ಣ ಹೊಂದಿರುವ ಕನ್ಸರ್ವೆನ್ಸಿಯಲ್ಲಿ ಒಟ್ಟು ೨೫ ವ್ಯಾಪಾರಸ್ಥರಿಗೆ ಸುಮಾರು ೧.೫ ಕೋ. ರು. ವೆಚ್ಚದಲ್ಲಿ ಫುಡ್ ಕೋರ್ಟ್ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ನೀಲನಕ್ಷೆ ಸಿದ್ದಪಡಿಸಿ ಅನುಮೋದನೆ ಕಳುಹಿಸಬೇಕಾಗಿದೆ. ಈಗಾಗಲೇ ಬಸವೇಶ್ವರ ವೃತ್ತದಲ್ಲಿ ಒಟ್ಟು ೮ ವ್ಯಾಪಾರಸ್ಥರಿಗೆ ಸುಮಾರು ೮೫ ಲಕ್ಷ ರು. ವೆಚ್ಚದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡಲು ನೀಲನಕ್ಷೆ ಸಿದ್ದಪಡಿಸಿ ಕಳುಹಿಸಲಾಗಿದೆ. ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಧಿಯಲ್ಲಿ ಸಾಲದ ರೂಪದಲ್ಲಿ ಅನುದಾನ ಬಳಸಿಕೊಳ್ಳಲಾಗುತ್ತಿದ್ದು, ೧೨ ವರ್ಷಗಳ ಕಾಲಾವಧಿಯಲ್ಲಿ ಮರುಪಾವತಿ ಮಾಡಬೇಕಾಗಿದೆ.
ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ ವಹಿಸಿದ್ದರು. ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಎಚ್.ಎಂ ಮನುಕುಮಾರ್, ಸದಸ್ಯರಾದ ಬಿ.ಕೆ ಮೋಹನ್, ವಿ. ಕದಿರೇಶ್, ಚನ್ನಪ್ಪ, ಆರ್. ಮೋಹನ್ಕುಮಾರ್, ಜಾರ್ಜ್, ಕಾಂತರಾಜ್, ಟಿಪ್ಪು ಸುಲ್ತಾನ್, ಮೋಹನ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.