Friday, December 15, 2023
ಹುಟ್ಟುಹಬ್ಬಕ್ಕೆ ರಕ್ತದಾನ ಮಾಡಿ ಮಾದರಿಯಾದ ಯುವ ಮುಖಂಡ ಬಿ.ಎಸ್ ಬಸವೇಶ್
ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಸುಶ್ರೀಂದ್ರತೀರ್ಥ ಶ್ರೀಪಾದರು
ಭದ್ರಾವತಿ : ಉಡುಪಿ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಶ್ರೀಪಾದರು ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ನಂತರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಕ್ತರಿಗೆ ಆಶೀರ್ವಚನ ನೀಡಿದರು.
ಉಡುಪಿ ಪುತ್ತಿಗೆ ಮಠದಲ್ಲಿ ಹಮ್ಮಿಕೊಳ್ಳಲಾಗಿರುವ ಶ್ರೀಕೃಷ್ಣನ ಭಾವಿ ಪರ್ಯಾಯ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವದ ಅಂಗವಾಗಿ ಆಹ್ವಾನ ಪತ್ರಿಕೆ ನೀಡಲು ಸುಶ್ರೀಂದ್ರತೀರ್ಥ ಶ್ರೀಪಾದರು ನಗರಕ್ಕೆ ಆಗಮಿಸಿದ್ದರು.
ವಿವಿಧ ಭಜನಾ ಮಂಡಳಿ ಹಾಗೂ ಸಂಘ ಸಂಸ್ಥೆಗಳಿಂದ ಶ್ರೀಪಾದರಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಯಿತು. ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರುಳಿಧರ್ ತಂತ್ರಿ, ಉಪಾಧ್ಯಕ್ಷೆ ಸುಮಾರಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ನಿರಂಜನಾಚಾರ್ಯ, ಗೋಪಾಲಕೃಷ್ಣ ಆಚಾರ್, ಮಧುರ ಸುಧೀಂದ್ರ, ಜಯತೀರ್ಥ, ನಿತ್ಯಾನಂದ ನಾಯಕ, ಶುಭ ಗುರುರಾಜ್, ಸುಪ್ರಿತ ತಂತ್ರಿ, ಸತ್ಯನಾರಾಯಣಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.