Wednesday, September 25, 2024

ಬಲಿಜ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಎಚ್.ಆರ್ ರಂಗನಾಥ್ ಆಯ್ಕೆ

ಭದ್ರಾವತಿ ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ತಾಲೂಕು ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಸಮಾಜದ ಹಿರಿಯ ಮುಖಂಡ ಎಚ್.ಆರ್ ರಂಗನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ರಂಗನಾಥ್‌ರವರು ಆಯ್ಕೆಯಾಗಿದ್ದಾರೆ. ರಂಗನಾಥ್‌ರವರು ಹಿರಿಯ ಕಬಡ್ಡಿ ಆಟಗಾರರಾಗಿದ್ದು, ಕೇಸರಿ ಪ್ರಶಸ್ತಿ ವಿಜೇತರಾಗಿದ್ದಾರೆ. ಇವರು ಹಲವಾರು ವರ್ಷಗಳಿಂದ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಹಿಂದೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 
    ಸಭೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಸಂಜೀವ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಸುಬ್ರಮಣ್ಯ(ತಾತಯ್ಯ), ಉಪಾಧ್ಯಕ್ಷರಾದ ಜಂಗಮಪ್ಪ, ಶಕುಂತಲ, ಕಾರ್ಯದರ್ಶಿ ಟಿ. ರಮೇಶ್, ಖಜಾಂಚಿ ನರೇಂದ್ರ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಸ್ವಚ್ಛ ಭಾರತ ಅಭಿಯಾನ : ಶಾಲಾ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ


 ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.  
ಭದ್ರಾವತಿ:  ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೆಶಕ ಬಿ.ಎಲ್ ಚಂದ್ವಾನಿ ಸ್ಪರ್ಧೆ ಉದ್ಘಾಟಿಸಿ ಆಂಗ್ಲಭಾಷೆಯಲ್ಲಿ ಸ್ವಚ್ಛತೆಯ ಪ್ರತಿಜ್ಞೆಯನ್ನು ಬೋಧಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಕನ್ನಡದಲ್ಲಿ  ಬೋಧಿಸಿದರು. 
ಬಿ.ಎಲ್ ಚಂದ್ವಾನಿ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯ ಅಭ್ಯಾಸ ಅಳವಡಿಸಿಕೊಳ್ಳಬೇಕು ಮತ್ತು ಇತರರಿಗೂ ಈ ಅಭ್ಯಾಸ ರೂಢಿಸಿಕೊಳ್ಳಲು ಪ್ರೇರೇಪಿಸಬೇಕು ಎಂದರು.
    ಕಾರ್ಖಾನೆಯ ಪರಿಸರ ನಿರ್ವಹಣಾ ವಿಭಾಗದ ಮಹಾಪ್ರಬಂಧಕ ಮುತ್ತಣ್ಣ ಸುಬ್ಬರಾವ್ ಮಾತನಾಡಿ, ಸ್ವಚ್ಛತೆಯು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು.
    ಮಾರುಕಟ್ಟೆ ವಿಭಾಗದ ಮಹಾಪಬಂಧಕ ಹರಿಕೃಷ್ಣ ಗುಡೆ, ಪರಿಸರ ನಿರ್ವಹಣಾ ವಿಭಾಗದ ಉಪ ಮಹಾಪಬಂಧಕ ವಿಕಾಸ್ ಬಸೇರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. ತಾಲೂಕಿನ ೧ ರಿಂದ ೧೦ನೇ ತರಗತಿವರೆಗಿನ ಒಟ್ಟು ೪೨೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮಲ್ಲಿನ ಪರಿಸರದ ಮೇಲಿನ ಅಭಿಮಾನ ಹಾಗು ಪ್ರತಿಭೆಯನ್ನು ಕಲಾತ್ಮಕ ಚಿತ್ರಣದ ಮೂಲಕ ಪ್ರದರ್ಶಿಸಿದರು.  
 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು. ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. 

ಸ್ವಚ್ಛ ಭಾರತ ಅಭಿಯಾನ : ಶಾಲಾ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ


ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಭದ್ರಾವತಿ:  ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು.
    ಕಾರ್ಖಾನೆಯ ಕಾರ್ಯಪಾಲಕ ನಿರ್ದೆಶಕ ಬಿ.ಎಲ್ ಚಂದ್ವಾನಿ ಸ್ಪರ್ಧೆ ಉದ್ಘಾಟಿಸಿ ಆಂಗ್ಲಭಾಷೆಯಲ್ಲಿ ಸ್ವಚ್ಛತೆಯ ಪ್ರತಿಜ್ಞೆಯನ್ನು ಬೋಧಿಸಿದರು. ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಕನ್ನಡದಲ್ಲಿ  ಬೋಧಿಸಿದರು. 
ಬಿ.ಎಲ್ ಚಂದ್ವಾನಿ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಸ್ವಚ್ಛತೆಯ ಅಭ್ಯಾಸ ಅಳವಡಿಸಿಕೊಳ್ಳಬೇಕು ಮತ್ತು ಇತರರಿಗೂ ಈ ಅಭ್ಯಾಸ ರೂಢಿಸಿಕೊಳ್ಳಲು ಪ್ರೇರೇಪಿಸಬೇಕು ಎಂದರು.
    ಕಾರ್ಖಾನೆಯ ಪರಿಸರ ನಿರ್ವಹಣಾ ವಿಭಾಗದ ಮಹಾಪ್ರಬಂಧಕ ಮುತ್ತಣ್ಣ ಸುಬ್ಬರಾವ್ ಮಾತನಾಡಿ, ಸ್ವಚ್ಛತೆಯು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದರು.
    ಮಾರುಕಟ್ಟೆ ವಿಭಾಗದ ಮಹಾಪಬಂಧಕ ಹರಿಕೃಷ್ಣ ಗುಡೆ, ಪರಿಸರ ನಿರ್ವಹಣಾ ವಿಭಾಗದ ಉಪ ಮಹಾಪಬಂಧಕ ವಿಕಾಸ್ ಬಸೇರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. ತಾಲೂಕಿನ ೧ ರಿಂದ ೧೦ನೇ ತರಗತಿವರೆಗಿನ ಒಟ್ಟು ೪೨೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮಲ್ಲಿನ ಪರಿಸರದ ಮೇಲಿನ ಅಭಿಮಾನ ಹಾಗು ಪ್ರತಿಭೆಯನ್ನು ಕಲಾತ್ಮಕ ಚಿತ್ರಣದ ಮೂಲಕ ಪ್ರದರ್ಶಿಸಿದರು.  
 

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ "ಸ್ವಚ್ಛತಾ ಹಿ ಸೇವಾ-೨೦೨೪ ಅಭಿಯಾನ" ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ  'ನನ್ನ ಕನಸಿನ ಸ್ವಚ್ಛ ಭದ್ರಾವತಿ' ಎಂಬ ವಿಷಯ ಕುರಿತು ಕುಳಿತು ಚಿತ್ರ ಬರೆಯುವ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣ ಆಯೋಜಿಸಲಾಗಿತ್ತು. ನೂರಕ್ಕೂ ಹೆಚ್ಚು ಸಸಿಗಳನ್ನು ಆಸಕ್ತ ಪೋಷಕರಿಗೆ ವಿತರಣೆ ಮಾಡಲಾಯಿತು. 

Friday, January 26, 2024

ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಚುನಾವಣಾ ಕಮಿಟಿ ಸದಸ್ಯರಾಗಿ ಎಸ್.ಎನ್ ಶಿವಪ್ಪ ನೇಮಕ

ಎಸ್.ಎನ್ ಶಿವಪ್ಪ 
    ಭದ್ರಾವತಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ನಗರದ ಎಸ್.ಎನ್ ಶಿವಪ್ಪ ಅವರನ್ನು ಶಿವಮೊಗ್ಗ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
    ಶಿವಪ್ಪ ಅವರಿಗೆ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಿದ್ದು, ಈ ಕುರಿತು ಜ.24ರಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಧರ್ಮಸೇನ ಅವರು ಆದೇಶ ಹೊರಡಿಸಿದ್ದಾರೆ.
    ಶಿವಪ್ಪ ಅವರು ರಾಜಕೀಯ ಹೆಚ್ಚಿನ ಅನುಭವ ಹೊಂದಿದ್ದು, ಈ ಹಿಂದಿನ ಚುನಾವಣೆ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಕಗೊಳಿಸಲಾಗಿತ್ತು.

ಸಂಗಮೇಶ್ವರ್‌ಗೆ ಎರಡನೇ ಬಾರಿಗೆ ಕೆಆರ್‌ಐಡಿಎಲ್ ಅಧ್ಯಕ್ಷ ಪಟ್ಟ

ಶಾಸಕ ಬಿ.ಕೆ ಸಂಗಮೇಶ್ವರ್
    ಭದ್ರಾವತಿ: ಶಾಸಕ ಬಿ.ಕೆ ಸಂಗಮೇಶ್ವರ್‌ಗೆ 2ನೇ ಬಾರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ಅಧ್ಯಕ್ಷ ಪಟ್ಟ ಒಲಿದು ಬಂದಿದ್ದು, ಕ್ಷೇತ್ರದ ಜನತೆಯಲ್ಲಿ ಸ್ವಲ್ಪಮಟ್ಟಿಗೆ ಸಮಾಧಾನ ಉಂಟು ಮಾಡಿದೆ.  
    4 ಬಾರಿ ಕ್ಷೇತ್ರದ ಶಾಸಕರಾಗಿರುವ ಸಂಗಮೇಶ್ವರ್‌ಗೆ ಈ ಬಾರಿ ಬಹುತೇಕ ಸಚಿವ ಸ್ಥಾನ ಲಭಿಸುವ ನಿರೀಕ್ಷೆ ಇತ್ತು. ಆದರೆ ಕ್ಷೇತ್ರದ ಜನರ ನಿರೀಕ್ಷೆ ಹುಸಿಯಾಗುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಕಂಡು ಬಂದಿತ್ತು. ಈ ನಡುವೆ ಸಂಗಮೇಶ್ವರ್ ಬೆಂಬಲಿಗರು, ಅಭಿಮಾನಿಗಳು ಸಚಿವ ಸ್ಥಾನ ನೀಡುವಂತೆ ನಿರಂತರವಾಗಿ ಆಗ್ರಹಿಸುತ್ತಿದ್ದರು. ಅಲ್ಲದೆ ಸಂಗಮೇಶ್ವರ್ ಸಹ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಇದೀಗ ಪುನಃ ಎರಡನೇ ಬಾರಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ಅಧ್ಯಕ್ಷ ಪಟ್ಟ ಲಭಿಸಿದೆ.
    ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಗಮೇಶ್ವರ್ ಪುನಃ ಆಯ್ಕೆಯಾದಲ್ಲಿ ಸಚಿವ ಸ್ಥಾನ ನೀಡುವುದಾಗಿ ಹಲವು ಬಾರಿ ಬಹಿರಂಗ ಸಭೆಗಳಲ್ಲಿ ಭರವಸೆ ನೀಡಿದ್ದರು. ಅಲ್ಲದೆ ಕಳೆದ ಸುಮಾರು 9 ವರ್ಷಗಳಿಂದ ಸ್ಥಗಿತಗೊಂಡಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದಾಗಿ ಸಹ ಭರವಸೆ ನೀಡಲಾಗಿತ್ತು. ಇದೀಗ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕ್ಷೇತ್ರದ ಜನತೆಗೆ ನೀಡಿರುವ ಒಂದು ಭರವಸೆ ಕೈತಪ್ಪಿ ಹೋಗಿದ್ದು,  ಕಾರ್ಖಾನೆ ಪುನರ್ ಆರಂಭಿಸುವ ಮೂಲಕ ಎರಡನೇ ಭರವಸೆಯನ್ನಾದರೂ ಈಡೇರಿಸಲು ಮುಂದಾಗಬೇಕಾಗಿದೆ.

ಸಾಮಾಜಿಕ ಸೇವೆ : ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್‌ಗೆ ಸನ್ಮಾನ, ಗೌರವ

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭದ್ರಾವತಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಶಿವಕುಮಾರ್ ಅವರು ಹಲವಾರು ವರ್ಷಗಳಿಂದ ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳ ಸೇವಾ ಕಾರ್ಯಗಳಲ್ಲೂ ಕೈಜೋಡಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಗಿದೆ.

    ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸ.ನೌ. ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ದಿವಾಕರ್, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು ಹಾಗೂ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ವಾತಂತ್ರ ಹೋರಾಟಗಾರರು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

Thursday, January 25, 2024

ಅಂಬೇಡ್ಕರ್‌ರವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ : ಸಂಗಮೇಶ್ವರ್

 


ಭದ್ರಾವತಿ:  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರ ಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜು ಧ್ವಜಾರೋಹಣ ನೆರವೇರಿಸಿದರು.

  ಶಾಸಕ ಬಿ.ಕೆ ಸಂಗಮೇಶ್ವರ ಅಧ್ಯಕ್ಷತೆವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾಣಗೊಳ್ಳಬೇಕಾಗಿದೆ ಎಂದರು.

 ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ  ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸ.ನೌ. ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪಸ್ಥಿತರಿದ್ದರು. ಉಪ ತಹಸೀಲ್ದಾರ್  ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರ ಸ್ಥಳೀಯ ಸಂಸ್ಥೆಗಳ  ಸದಸ್ಯರುಗಳು ಹಾಗೂ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ವಾತಂತ್ರ ಹೋರಾಟಗಾರರು ಪ್ರತಿಕಾ ಪ್ರತಿನಿಧಿಗಳು,  ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಮತ್ತು  ನಾಗರೀಕರು ಹಾಗು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

     ಇದಕ್ಕೂ ಮೊದಲು ಶ್ರೀಶೈಲ ಕೆಂಚಣ್ಣನವರು ಪಥ ಸಂಚಲನದ ವಂದನೆ ಸ್ವೀಕರಿಸಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿದರು.