Wednesday, October 2, 2024

ವಿಐಎಸ್‌ಎಲ್, ಬಿಜೆಪಿ ಮಂಡಲ ಸೇರಿದಂತೆ ವಿವಿಧೆಡೆ ರಾಷ್ಟ್ರಪಿತ ಗಾಂಧಿ ಜಯಂತಿ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಬಿಜೆಪಿ ತಾಲೂಕು ಮಂಡಲ, ಲಯನ್ಸ್  ಕ್ಲಬ್ ಶುಗರ್ ಟೌನ್, ಬಿಪಿಎಲ್ ಸಂಘ ಸೇರಿದಂತೆ ವಿವಿಧೆಡೆ ಬುಧವಾರ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು. 
    ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪನಮನ, ನಂತರ ವಿಶೇಷವಾಗಿ ಈ ಬಾರಿ ಮಕ್ಕಳಿಂದ ಧರ್ಮ ಗ್ರಂಥಗಳಾದ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಸಂದೇಶ ವಾಚನ ನಡೆಯಿತು. ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಶಾಲಾ ಮಕ್ಕಳಿಗೆ ಮತ್ತು ಕಾರ್ಖಾನೆಯ ಉದ್ಯೋಗಿಗಳು ಹಾಗು ಕುಟುಂಬ ವರ್ಗದವರಿಗೆ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. 
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರಾ, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಮತ್ತು ರವಿಚಂದ್ರನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳಾದ  ಎಲ್. ಪ್ರವೀಣ್‌ಕುಮಾರ್, ಮೋಹನ್‌ರಾಜ್ ಶೆಟ್ಟಿ, ಯೋಗೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಸಂಘ ಹಾಗು ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಪಾಲ್ಗೊಂಡಿದ್ದರು. 


ಭದ್ರಾವತಿಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ನಗರದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ  ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 
    ಬಿಜೆಪಿ ಮಂಡಲದಿಂದ ಲಾಲ್ ಬಹದ್ದೂರ್ ಶಾಸ್ತ್ರಿ-ಗಾಂಧಿ ಜಯಂತಿ : 
    ಮಂಡಲದ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ಹಾಗೂ ಸೇವಾ ಪಾಕ್ಷಿಕ ಅಂಗವಾಗಿ ನಗರದ ತರೀಕೆರೆ ರಸ್ತೆಯ ಮಹಾತ್ಮ ಗಾಂಧಿ ವೃತ್ತದಲ್ಲಿರುವ  ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಖಾದಿ ಗ್ರಾಮೋದ್ಯೋಗ ಭವನದಲ್ಲಿ ಖಾದಿ ಖರೀದಿಸಲಾಯಿತು.
    ಪ್ರಧಾನ ಕಾರ್ಯದರ್ಶಿಗಳಾ ಚನ್ನೇಶ್ ಮತ್ತು ಮೊಸರಳ್ಳಿ ಅಣ್ಣಪ್ಪ, ಮುಖಂಡರಾದ ಮಂಗೋಟೆ ರುದ್ರೇಶ್, ಎಚ್. ತೀರ್ಥಯ್ಯ, ರಾಜಶೇಖರ್ ಉಪ್ಪಾರ, ಧನುಷ್ ಬೋಸ್ಲೆ, ಜಿ. ಆನಂದ್‌ಕುಮಾರ್, ಸರಸ್ವತಿ, ರವಿಕುಮಾರ್, ರಘುರಾವ್, ನಿರಂಜನ್ ಗೌಡ, ಕಾ.ರಾ ನಾಗರಾಜ್,  ಸುಲೋಚನಾ ಪ್ರಕಾಶ್, ಮಂಜುಳಾ, ಡಾ. ಜಿ.ಎಂ ನಟರಾಜ್, ಬಸವರಾಜ್ ಆಚಾರ್ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮೋರ್ಚಾ, ಮಹಾಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು. 


ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಲಯನ್ಸ್ ಕ್ಲಬ್ ಶುಗರ್ ಟೌನ್‌ನಲ್ಲಿ ಗಾಂಧಿ ಜಯಂತಿ :  
    ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜನ್ಮದಿನ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ೧೨೦ನೇ ಜನ್ಮದಿನ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಶುಗರ್ ಟೌನ್ ಸಮುದಾಯ ಭವನದಲ್ಲಿ ಆಚರಿಸಲಾಯಿತು.
    ಕ್ಲಬ್ ಆವರಣದಲ್ಲಿರುವ ಕೋಟಾ ಶಿವರಾಮ ಕಾರಂತ ವನದಲ್ಲಿ ಶ್ರಮದಾನ ನಡೆಸಲಾಯಿತು. ಅಂತರಾಷ್ಟ್ರೀಯ ಹಿರಿಯ ನಾಗರೀಕ ದಿನಾಚರಣೆ ಅಂಗವಾಗಿ ಕ್ಲಬ್ ಮಹಾಪೋಷಕರಾದ ಡಾ. ಟಿ. ನರೇಂದ್ರ ಭಟ್, ಕೆ. ಅನಂತ ಕೃಷ್ಣನಾಯಕ್ ಮತ್ತು ಮದಿಯಲಗನ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕ್ಲಬ್ ಅಧ್ಯಕ್ಷ ಆರ್. ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ತಮ್ಮೇಗೌಡ, ಎಂ.ಸಿ ಯೋಗೀಶ್, ಡಾ. ಸಿ.ಆರ್ ಗುರುರಾಜ್, ಲಿಂಗೋಜೀರಾವ್, ಮಂಜುನಾಥ್, ಕೃಷ್ಣ ,ನಾಗರಾಜ್ ಸೋಲಾರ್, ಮಧುಸೂದನ್ ಮತ್ತು ವಿಜಯ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
    ಬಿಪಿಎಲ್ ಸಂಘದಿಂದ ಗಾಂಧಿ ಜಯಂತಿ :
    ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು. 
    ಸಂಘದ ಅಧ್ಯಕ್ಷ ಬಿ. ಜಗದೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಳಳು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗು ಸ್ಥಳೀಯರು ಪಾಲ್ಗೊಂಡಿದ್ದರು. 

Tuesday, October 1, 2024

ಹಿಂದೂ-ಮುಸ್ಲಿಂ ಸೌಹಾರ್ದತೆ ಸಂಕೇತವಾದ ವಿಸರ್ಜನಾ ಪೂರ್ವ ಮೆರವಣಿಗೆ

    ಭದ್ರಾವತಿ: ನಗರದ ಕೂಲಿ ಬ್ಲಾಕ್ ಶೆಡ್ ಶ್ರೀ ರಾಮ ದೇವಾಲಯದ ಬಳಿ ಶ್ರೀ ರಾಮ ಹಿಂದೂ ಸೇವಾ ಸಮಿತಿ ವತಿಯಿಂದ ಈ ಬಾರಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿಂದೂ-ಮುಸ್ಲಿಂ  ಸೌಹಾರ್ದತೆ ಸಂಕೇತವಾಗಿ ಕಂಡು ಬಂದಿತು. 
    ಕೂಲಿ ಬ್ಲಾಕ್ ಶೆಡ್ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮುಸ್ಲಿಂ ಸಮುದಾಯದವರು ವಾಸಿಸುತ್ತಿದ್ದು, ಇಲ್ಲಿ ಹಬ್ಬ-ಹರಿದಿನಗಳನ್ನು ಶಾಂತಿ, ಸೌಹಾರ್ದತೆಯಿಂದ ಹಾಗು ಭಕ್ತಿ-ಭಾವನೆ ಮೂಡಿಸುವ ಭಾವೈಕತ್ಯತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ.   
    ಪ್ರತಿ ವರ್ಷ ಶ್ರೀ ರಾಮ ಹಿಂದೂ ಸೇವಾ ಸಮಿತಿ ವತಿಯಿಂದ ವಿನಾಯಕ ಚತುರ್ಥಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಹಿಂದೂ ಯುವಕರೊಂದಿಗೆ ಮುಸ್ಲಿಂ ಯುವಕರು ಸಹ ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಗಳಲ್ಲಿ ಕೈ ಜೋಡಿಸುತ್ತಿರುವುದು ವಿಶೇಷತೆಯಾಗಿದೆ. 
    ಈ ಬಾರಿ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರು ಸಹ ಪಾಲ್ಗೊಂಡು ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸುವ ಜೊತೆ ಪ್ರಸಾದ ವಿತರಣೆ ಸಹ ಕೈಗೊಂಡು ಗಮನ ಸೆಳೆದರು. 
    ಮಧ್ಯಾಹ್ನ ಆರಂಭಗೊಂಡ ಮೆರವಣಿಗೆ ರಾತ್ರಿ ಸುಮಾರು ೧೦ ಗಂಟೆವರೆಗೂ ನಡೆಯಿತು. ನಂತರ ಮೂರ್ತಿಯನ್ನು ಭದ್ರಾ ನದಿಯಲ್ಲಿ ವಿಸರ್ಜಿಸುವ ಮೂಲಕ ವಿನಾಯಕ ಚತುರ್ಥಿ ಆಚರಣೆ ಸಂಪನ್ನಗೊಳಿಸಲಾಯಿತು. ಇಲ್ಲಿನ ಹಿಂದೂ-ಮುಸ್ಲಿಂ ನಡುವಿನ ಸೌಹಾರ್ದತೆ ಕಂಡು ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರು ಸಹ ಬೆರಗುಗೊಂಡಿದ್ದಾರೆ.  
 

ಭದ್ರಾವತಿ ನಗರದ ಕೂಲಿ ಬ್ಲಾಕ್ ಶೆಡ್ ಶ್ರೀ ರಾಮ ದೇವಾಲಯದ ಬಳಿ ಶ್ರೀ ರಾಮ ಹಿಂದೂ ಸೇವಾ ಸಮಿತಿ ವತಿಯಿಂದ ಈ ಬಾರಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿಂದೂ-ಮುಸ್ಲಿಂ  ಸೌಹಾರ್ದತೆ ಸಂಕೇತವಾಗಿ ಕಂಡು ಬಂದಿತು. 
 

ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ : ಬಿ. ಸಿದ್ದಬಸಪ್ಪ

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಬಿ. ಇಡಿ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಶಿವಮೂರ್ತಿ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಕೆಂಪೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ: ಹಿರಿಯರು ಮನೆಗೆ ಆದರ್ಶಪ್ರಾಯ, ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಅತ್ಯಗತ್ಯ ಆದರಿಂದ ಹಿರಿಯ ನಾಗರಿಕರನ್ನು ಮನೆಯ ಹಾಗೂ ಸಮಾಜದಲ್ಲಿರುವ ಹಿರಿಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು. 
  ಅವರು ಮಂಗಳವಾರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆ ಬಿ. ಇಡಿ ಕಾಲೇಜಿನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. 
    ನಿವೃತ್ತ ಶಿಕ್ಷಕ ಶಿವಮೂರ್ತಿ ಹಾಗೂ ನಿವೃತ್ತ ಅರಣ್ಯ ಅಧಿಕಾರಿ ಕೆಂಪೇಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸನ್ಮಾನಿತರು ಮಾತನಾಡಿ, ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಈ ಸಂಪ್ರದಾಯ ಸಮಾಜಕ್ಕೆ ಮಾದರಿ ಮತ್ತು ಆದರ್ಶಪ್ರಾಯ ಎಂದರು. 
    ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಹಾಗೂ ಬಿ. ಇಡಿ  ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಪಿ ರಾಕೇಶ್ ಕಾರ್ಯಕ್ರಮ ಉದ್ಘಾಟಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗಗೌಡ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬಿಇಡಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ವತಿಯಿಂದ ಗಾಂಧಿ ಜಯಂತಿ

    ಭದ್ರಾವತಿ: ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಅ.೨ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ. 
    ನ್ಯೂಟೌನ್ ವಿಐಎಸ್‌ಎಲ್ ಭದ್ರಾ ಅತಿಥಿ ಗೃಹದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿಜೀಯವರ ಭಾವಚಿತ್ರ ಪುಷ್ಪನಮನ, ನಂತರ ಧರ್ಮ ಗ್ರಂಥಗಳಾದ ಭಗವದ್ಗೀತೆ, ಕುರಾನ್ ಮತ್ತು ಬೈಬಲ್ ಸಂದೇಶ ವಾಚನ ನಡೆಯಲಿದೆ. ಅಲ್ಲದೆ ದೇಶ ಭಕ್ತಿ ಗೀತೆ ಗಾಯನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ವ್ಯವಸ್ಥಾಪಕ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ. 

ಭದ್ರಾವತಿ ನಗರಸಭೆ : ೫೪.೫೦ ಲಕ್ಷ ರು. ವೆಚ್ಚದಲ್ಲಿ ನಾಡಹಬ್ಬ ದಸರಾ ಆಚರಣೆ

ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರಿಂದ ಆಚರಣೆಗೆ ಚಾಲನೆ 

ಭದ್ರಾವತಿ ನಗರಸಬೆ ಕಚೇರಿ ಸಭಾಂಗಣದಲ್ಲಿ ಪ್ರಭಾರ ಅಧ್ಯಕ್ಷ ಎಂ.ಮಣಿ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣೆ ಕುರಿತು ಸಭೆ ನಡೆಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಕದಿರೇಶ್, ಲತಾಚಂದ್ರಶೇಖರ್ ಸೇರಿದಂತೆ ಹಲವರಿದ್ದರು.
    ಭದ್ರಾವತಿ; ನಗರಸಭೆವತಿಯಿಂದ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವ ಸುಮಾರು ೫೪.೫೦ ಲಕ್ಷ ರು. ವೆಚ್ಚದಲ್ಲಿ ೧೦ ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಹೇಳಿದರು.
    ಅವರು ನಗರಸಭೆ ಕಚೇರಿ ಸಭಾಂಗಣದಲ್ಲಿ ದಸರಾ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅ.೩ ರಿಂದ ೧೨ರವರೆಗೆ ೧೦ ದಿನಗಳ ಕಾಲ ನಡೆಯುವ ದಸರಾ ಮಹೋತ್ಸವ ಆಚರಿಸಲಾಗುವುದು. ಅ.೩ ರಂದು ಬೆಳಗ್ಗೆ ೧೦ ಗಂಟೆಗೆ ನಗರಸಭೆ ಮುಂಭಾಗದಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ದಸರಾ ಆಚರಣೆಗೆ ಚಾಲನೆ ನೀಡುವರು ಎಂದರು.
    ಅ.೪ ರಂದು ಕನಕಮಂಟಪ ಮೈದಾನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಪಂದ್ಯಾವಳಿಯನ್ನು ಅಂತರಾಷ್ಟ್ರೀಯ ಕ್ರೀಡಾಪಟು ಸುಧೀರ್ ಕುಮಾರ್ ಉದ್ಘಾಟಿಸುವರು. ಅ.೫ ರಂದು ಸಂಜೆ ೪ ಗಂಟೆಗೆ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ನಡೆಯಲಿದ್ದು, ಅ.೬ರಂದು ಜನ್ನಾಪುರ ಬಂಟರ ಭವನದಲ್ಲಿ ಮಹಿಳೆಯರಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಯಲಿದೆ. ಅ.೭ ರಂದು ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ರಾಷ್ಟ್ರೀಯ ಕ್ರೀಡಾಪಟು ಮಹೇಶ್ವರಪ್ಪ ಉದ್ಘಾಟಿಸಲಿದ್ದಾರೆ. ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದ ವಿಜೇತರಿಗೆ ಬೆಳ್ಳಿ ಗದೆ ಹಾಗೂ "೨೦೨೪ ದಸರಾ ಕೇಸರಿ" ಬಿರುದು ನೀಡಿ ಗೌರವಿಸಲಾಗುವುದು. ಅ.೮ರಂದು ಮಹಿಳೆಯರಿಗಾಗಿ ಮಹಿಳಾ ದಸರಾ ಆಚರಿಸಲಾಗುತ್ತಿದ್ದು, ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

    ಅ.೯ ರಂದು ಮಿಮಿಕ್ರಿ ಗೋಪಿ ಹಾಗೂ ಗಿಚ್ಚಿಗಿಲಿಗಿಲಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಕನಕ ಮಂಟಪ ಮೈದಾನದಲ್ಲಿ ನಡೆಯಲಿದೆ. ಅ.೧೨ ರ ಕೊನೆಯ ದಿನ ವಿಜಯದಶಮಿಯಂದು ಮಧ್ಯಾಹ್ನ ೩ ಗಂಟೆಗೆ ಅಪ್ಪರ್‌ಹುತ್ತಾ ಬಸ್ ನಿಲ್ದಾಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿ ಸೇರಿದಂತೆ ೫೦ಕ್ಕೂ ಹೆಚ್ಚು ವಿವಿಧ ದೇವಾನುದೇವತೆಗಳ ಬೃಹತ್ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಲಿದ್ದಾರೆ. ವಿವಿದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ. ಕನಕ ಮಂಟಪ ಮೈದಾನದಲ್ಲಿ ಸಂಜೆ ಬನ್ನಿ ಮುಡಿಯುವ ಮೂಲಕ ರಾವಣನ ಸಂಹಾರದೊಂದಿಗೆ ನಾಡಹಬ್ಬ ದಸರಾ ಸಂಪನ್ನಗೊಳ್ಳಲಿದೆ ಎಂದರು.
    ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಪ್ರಮುಖರಾದ ಕದಿರೇಶ್, ಲತಾಚಂದ್ರಶೇಖರ್, ಅನುಸುಧಾ ಮೋಹನ್ ಪಳನಿ, ಚನ್ನಪ್ಪ, ರಿಯಾಜ್ ಅಹಮದ್, ಕೋಟೇಶ್ವರರಾವ್,  ನಗರಸಭೆ ಕಛೇರಿ ವ್ಯವಸ್ಥಾಪಕಿ ಸುನಿತಾ ಕುಮಾರಿ ಉಪಸ್ಥಿತರಿದ್ದರು.  

     ನಾಡಹಬ್ಬ ದಸರಾ ಉತ್ಸವ ಮೆರವಣಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭಿಸಿ 

 

     " ಮೈಸೂರು ದಸರಾ ಮಾದರಿಯಲ್ಲಿ ಭದ್ರಾವತಿ ನಗರದ ದಸರಾ ಮಹೋತ್ಸವು ಪ್ರತಿ ವರ್ಷ ನಡೆದುಕೊಂಡು ಬರುತ್ತಿದ್ದು, ಸಾವಿರಾರು ಭಕ್ತರು ಕನಕಮಂಟಪ ಮೈದಾನದಲ್ಲಿ ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ. ನಿಗದಿತ ಸಮಯಕ್ಕೆ ಮೆರವಣಿಗೆ ಆರಂಭಿಸಿ ಸಂಜೆ ೭ ಗಂಟೆಯ ಒಳಗಾಗಿ ಕಾರ್ಯಕ್ರಮ ಮುಗಿಸಿ" ಎಂದು ದೇವಸ್ಥಾನಗಳ ಕಮಿಟಿ ಸದಸ್ಯರುಗಳಿಗೆ ಕರೆಯಲಾಗಿದ್ದ ಸಭೆಯಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ, ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಹಾ.ರಾಮಪ್ಪ, ಹಾಗೂ ಹಳದಮ್ಮ ದೇವಿ ದೇವಸ್ಥಾನದ ಪದಾಧಿಕಾರಿ ಕೃಷ್ಣಪ್ಪ ಸೇರಿದಂತೆ ಇನ್ನಿತರರು ಆಗ್ರಹಿಸಿದರು.
      ನಾವು ಮಾಡುವ ಹಬ್ಬ ಸಂಪ್ರದಾಯಬದ್ದವಾಗಿರಬೇಕು. ಸಕಾಲದಲ್ಲಿ ಬನ್ನಿ ಮುಡಿಯುವುದರಿಂದ ದೇವರುಗಳ ಅನುಗ್ರಹವೂ ನಮ್ಮ ಮೇಲಿರುತ್ತದೆ. ಸಂಜೆ ೫ ಗಂಟೆಗೆ ಬನ್ನಿ ಮುಡಿಯುವುದು ಸೂಕ್ತ, ಎಂದು ರಂಗನಾಥಶರ್ಮ ಸಲಹೆ ನೀಡಿದರೆ, ಉತ್ಸವ ಮೂರ್ತಿಯನ್ನು ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಮೆರವಣಿಗೆ ಮಾಡಬೇಕಾಗಿರುವುದರಿಂದ ಕನಕ ಮಂಟಪದ ಕಾರ್ಯಕ್ರಮ ತಡಮಾಡಿದರೆ ನಾವು ಇಡಿ ರಾತ್ರಿ ದೇವರ ಮೆರವಣಿಗೆ ಮಾಡಬೇಕಾಗುತ್ತದೆ ಎಂದು ಕೃಷ್ಣಪ್ಪ ಹೇಳಿದರು.
  ಹಾ.ರಾಮಪ್ಪ ಮಾತನಾಡಿ, ೪೧೪ನೇ ವರ್ಷದ ದಸರಾ ಉತ್ಸವ ಇದಾಗಿದ್ದು ೧೯೮೦ ರಿಂದಲೂ ವಿಶ್ವ ಹಿಂದೂ ಪರಿಷತ್ ಸಹಕರಿಸುತ್ತಾ ಬಂದಿದೆ.  ಉದ್ಘಾಟಕರು ನಿಗದಿತ ಸಮಯಕ್ಕೆ ಆಗಮಿಸಿ ಮೆರವಣಿಗೆ ಆರಂಭಿಸಿ ೬ ಗಂಟೆಯ ಒಳಗಾಗಿ ಮೆರವಣಿಗೆಯು ಬನ್ನಿ ಮುಡಿಯುವ ಕನಕಮಂಟಪ ಮೈದಾನ ತಲುಪಬೇಕು. ಬನ್ನಿ ಮುಡಿಯುವ ವೇದಿಕೆ ಸ್ಥಳದಲ್ಲಿ ಅರ್ಚಕರು ಹೊರತಾಗಿ ಹೆಚ್ಚಿನ ಜನಸಂದಣಿ ಆಗಬಾರದು. ಮೆರವಣಿಗೆಯಲ್ಲೂ ಮೊದಲು ನಗರಸಭೆಯ ಚಾಮುಂಡೇಶ್ವರಿ ದೇವಿಯ ರಥ, ನಂತರ ಕ್ಷೇತ್ರ ಪಾಲಕ ಲಕ್ಷ್ಮೀನರಸಿಂಹಸ್ವಾಮಿ ನಂತರ ಗ್ರಾಮ ದೇವತೆ ಹಳದಮ್ಮ ದೇವಿ ದೇವಿ ನಂತರ ಮಿಕ್ಕೆಲ್ಲಾ ದೇವರುಗಳ ಸರದಿ ಸಾಲು ಇರಬೇಕು ಎಂದು ಸಲಹೆ ನೀಡಿದರು.

Monday, September 30, 2024

ಅಥ್ಲೆಟಿಕ್ ಅಂಧ ಕ್ರೀಡಾಪಟುಗಳಿಗೆ ತರಬೇತಿ : ಸೌಮ್ಯ ಸಾವಂತ್‌ಗೆ ಸನ್ಮಾನ

ಭದ್ರಾವತಿ ಹೊಸಮನೆ ನಿವಾಸಿ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್ ಕಳೆದ ಕೆಲವು ವರ್ಷಗಳಿಂದ ಅಂತರಾಷ್ಟ್ರೀಯ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಒಲಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಇವರ ಪರಿಶ್ರಮ ಸಹ ಹೆಚ್ಚಿನದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ : ನಗರದ ಹೊಸಮನೆ ನಿವಾಸಿ ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್ ಕಳೆದ ಕೆಲವು ವರ್ಷಗಳಿಂದ ಅಂತರಾಷ್ಟ್ರೀಯ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಒಲಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಇವರ ಪರಿಶ್ರಮ ಸಹ ಹೆಚ್ಚಿನದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  
    ಸೌಮ್ಯ ಸಾವಂತ್ ಈ ಹಿಂದೆ ಅಥ್ಲೆಟಿಕ್ ಕ್ರೀಡಾಪಟು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವು ಸಾಧನೆಗಳನ್ನು ಮಾಡುವ ಮೂಲಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಗಮನ ಸೆಳೆದಿದ್ದರು. ನಂತರ ಅಂತರಾಷ್ಟ್ರೀಯ ತರಬೇತಿದಾರರಾಗಿ ಅಂಧ ಕ್ರೀಡಾಪಟುಗಳಿಗೆ ತರಬೇತಿ ನೀಡಿ ಅವರುಗಳು ಸಹ ರಾಜ್ಯ ಮತ್ತು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಂಗಾರ ಮತ್ತು ಬೆಳ್ಳಿ ಪದಕಗಳನ್ನು ಗಳಿಸುವಲ್ಲಿ ಕಾರಣಕರ್ತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೆ.೨೯ರಂದು ರಿಲೆಯನ್ಸ್ ಫೌಂಡೇಷನ್ ವತಿಯಿಂದ ಮುಂಬೈನಲ್ಲಿ ಏರ್ಪಡಿಸಲಾಗಿದ್ದ ಒಲಿಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಕ್ರೀಡಾಪಟು ಹಾಗು ತರಬೇತಿದಾರರೊಂದಿಗೆ ಸಂತೋಷ ಕೂಟ ಸಂಭ್ರಮ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.  ಮುಕೇಶ್ ಅಂಬಾನಿ, ನೀತು ಅಂಬಾನಿ, ಅನಂತ್ ಅಂಬಾನಿ, ರಾಧಿಕಾ ಅಂಬಾನಿ ಸೇರಿದಂತೆ ಅಂಬಾನಿ ಕುಟುಂಬ ವರ್ಗದವರು ಹಾಗು ಇನ್ನಿತರ ಗಣ್ಯರು ಉಪಸ್ಥಿತರಿದ್ದರು. 
    ಸೌಮ್ಯ ಸಾವಂತ್ ಹಿರಿಯ ಪತ್ರಕರ್ತ ಯು.ಆರ್ ಸಾವಂತ್-ಅನ್ನಪೂರ್ಣ ಸಾವಂತ್ ದಂಪತಿಯ ಹಿರಿಯ ಪುತ್ರಿಯಾಗಿದ್ದಾರೆ. ಪ್ರಸ್ತುತ ಸೌಮ್ಯ ಸಾವಂತ್ ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಇವರ ಪತಿ ಬಿ.ರಾಹುಲ್ ಸಹ ಅಥ್ಲೆಟಿಕ್ ಕ್ರೀಡಾಪಟುವಾಗಿದ್ದು, ಪ್ರಸ್ತುತ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
 

ಪಡಿತರ ವಿತರಕರ ಸಂಘ : ಅಧ್ಯಕ್ಷರಾಗಿ ಎಸ್.ಆರ್ ನಾಗರಾಜ್

ಎಸ್.ಆರ್ ನಾಗರಾಜ್ 
    ಭದ್ರಾವತಿ: ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ನಗರ ಘಟಕದ ಹಂಗಾಮಿ ಅಧ್ಯಕ್ಷರಾಗಿ ಎಸ್.ಆರ್ ನಾಗರಾಜ್ ಅವರನ್ನು ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. 
    ಹಂಗಾಮಿ ಅಧ್ಯಕ್ಷರ ಆಯ್ಕೆ ಸಂಬಂಧ ಸಿದ್ದಲಿಂಗಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಎಸ್.ಆರ್ ನಾಗರಾಜ್ ಆಯ್ಕೆಯಾಗಿದ್ದಾರೆ. ಸುಮಾರು ೨೫ ಸದಸ್ಯರು ಅಧ್ಯಕ್ಷರ ಆಯ್ಕೆ ಅನುಮೋದಿಸಿದ್ದು, ಈ ನಡುವೆ ಸಿದ್ದಲಿಂಗಯ್ಯ ಸೇರಿದಂತೆ ಪದಾಧಿಕಾರಿಗಳು ಹಂಗಾಮಿ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.