ಭದ್ರಾವತಿ : ಮೆಸ್ಕಾಂ ನಗರ ಮತ್ತು ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದ ರಿಂದ ಅ.೧೫ರ ಮಂಗಳವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆವರೆಗೆ ವಕಾಗದ ನಗರದ ೧ನೇ ವಾರ್ಡ್ ನಿಂದ ೧೦ನೇ ವಾರ್ಡ್ವರೆಗೆ, ಎಂ.ಪಿ.ಎಂ ವಸತಿ, ಎಂ.ಪಿ.ಎಂ ಲೇಔಟ್, ಆನೆಕೊಪ್ಪ, ಜೆಪಿಎಸ್ ಕಾಲೋನಿ, ಉಜ್ಜನಿಪುರ, ದೊಡ್ಡಗೊಪ್ಪೇನಹಳ್ಳಿ, ಬಾರಂದೂರು, ಮೊಸರಹಳ್ಳಿ, ಕಾರೇಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ಕೆಂಚಮ್ಮನಹಳ್ಳಿ, ಜನ್ನಾಪುರ, ಹುತ್ತಾ ಕಾಲೋನಿ, ಭಂಡಾರಹಳ್ಳಿ, ಕಡದಕಟ್ಟೆ, ನಾಗಮ್ಮ ಬಡಾವಣೆ, ಸಂಜಯ ಕಾಲೋನಿ, ವೇಲೂರು ಶೆಡ್, ಜಿಂಕ್ಲೈನ್, ಅಪ್ಪರ್ ಹುತ್ತಾ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ಹಾಗು ೧೦.೩೦ ರಿಂದ ೨.೩೦ರವರೆಗೆ ಸೀಗೆಬಾಗಿ, ಭದ್ರಾ ಕಾಲೋನಿ, ಸೈಯ್ಯದ್ ಕಾಲೋನಿ, ಶ್ರೀರಾಮ ನಗರ, ವೀರಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.