Friday, October 18, 2024

ಅ.೧೯ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ: ಮೆಸ್ಕಾಂ ನಗರ ಮತ್ತು ಗ್ರಾಮೀಣ ಉಪವಿಭಾಗಗಳ ವಾಪ್ತಿಯ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.೧೯ರ ಶನಿವಾರ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  
    ಕಾಗದ ನಗರದ ೧ನೇ ವಾರ್ಡ್ ನಿಂದ ೧೦ನೇ ವಾರ್ಡ್‌ವರೆಗೆ ಎಂ.ಪಿ.ಎಂ. ವಸತಿ, ಎಂ.ಪಿ.ಎಂ ಬಡಾವಣೆ, ಆನೆಕೊಪ್ಪ, ಜೆಪಿಎಸ್ ಕಾಲೋನಿ, ಉಜ್ಜನಿಪುರ, ದೊಡ್ಡಗೊಪ್ಪೇನಹಳ್ಳಿ, ಬಾರಂದೂರು, ಮಸರಹಳ್ಳಿ, ಕಾರೇಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಿಕೆರೆ ಕಾಲೋನಿ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ಕೆಂಚಮ್ಮನಹಳ್ಳಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

ಎಸ್.ಎಸ್ ಸುಮಿತ್ರ ನಿಧನ

ಎಸ್.ಎಸ್ ಸುಮಿತ್ರ
    ಭದ್ರಾವತಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ಅಧ್ಯಕ್ಷೆ, ಸಾಹಿತಿ, ನಿವೃತ್ತ ಉಪನ್ಯಾಸಕಿ ಎಮೆರಿಟಸ್ ಡಾ. ವಿಜಯದೇವಿಯವರ ಅತ್ತಿಗೆ  ಎಸ್.ಎಸ್ ಸುಮಿತ್ರ(೭೨) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. 
       ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದರು. ಸುಮಿತ್ರಮ್ಮ ನಗರದ ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಎಸ್.ಜಿ ಶಿವಶಂಕರಯ್ಯ ಅಂಡ್ ಸನ್ಸ್  ಪೆಟ್ರೋಲ್ ಬಂಕ್ ಮಾಲೀಕ ದಿವಂಗತ ಎಸ್.ಎಸ್ ಶಿವಾನಂದ್‌ರವರ ಪತ್ನಿಯಾಗಿದ್ದಾರೆ. ಹಳೇನಗರದ ಎಸ್.ಎಸ್.ಕೆ ಬಡಾವಣೆಯಲ್ಲಿ ವಾಸವಾಗಿದ್ದರು.  
    ಇವರ ಅಂತ್ಯಕ್ರಿಯೆ ಸಂಜೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು. ಸುಮಿತ್ರಮ್ಮನವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಎಸ್.ಎಸ್ ಕುಮಾರಸ್ವಾಮಿ ಹಾಗು ಸಹೋದರರು ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಅನ್ನಸಂತರ್ಪಣೆ

ಭದ್ರಾವತಿ ನಗರಸಭೆ ವ್ಯಾಪ್ತಿ ಸುರಗಿತೋಪು ೪ನೇ ತಿರುವಿನ ರಸ್ತೆಯಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸೇವಾ ಸಮಿತಿ ವತಿಯಿಂದ  ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಗಣ ಹೋಮ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. 
    ಭದ್ರಾವತಿ : ನಗರಸಭೆ ವ್ಯಾಪ್ತಿ ಸುರಗಿತೋಪು ೪ನೇ ತಿರುವಿನ ರಸ್ತೆಯಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸೇವಾ ಸಮಿತಿ ವತಿಯಿಂದ  ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶುಕ್ರವಾರ ಗಣ ಹೋಮ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. 
    ಈ ಬಾರಿ ವಿಶೇಷವಾಗಿ ಅಡುಗೆ ಭಟ್ಟನಾಗಿ ಅಡುಗೆ ತಯಾರಿಯಲ್ಲಿ ತೊಡಗಿರುವ ಗಣಪ ಹಾಗು ಸಹಾಯಕನಾಗಿರುವ ಮೂಷಿಕ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಪ್ರತಿವರ್ಷದಂತೆ ಈ ಬಾರಿ ಸಹ ಬೆಳಿಗ್ಗೆ ಗಣ ಹೋಮ, ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ಜರುಗಿತು. 
    ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ನಗರಸಭೆ ಸದಸ್ಯೆ ಜನಶೀಲ ಸುರೇಶ್, ಸೇರಿದಂತೆ ಸುರಗಿತೋಪು ಹಾಗು ಸುತ್ತಮುತ್ತಲ ಪ್ರದೇಶಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. 

ಇಸ್ಪೀಟ್ ಅಡ್ಡೆ ಮೇಲೆ ದಾಳಿ : ಪ್ರಕರಣ ದಾಖಲು

ಭದ್ರಾವತಿ: ತಾಲೂಕಿನ ಅತ್ತಿಗುಂದ ಚಾನಲ್ ಏರಿಯಾ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಅತ್ತಿಗುಂದ ಚಾನಲ್ ಏರಿಯಾ ಹತ್ತಿರ ಪರಿಶೀಲನೆ ನಡೆಸಿದಾಗ ಚಂದ್ರಶೇಖರ್, ಮಂಜುನಾಥ ಸೇರಿದಂತೆ ೩-೪ ಜನರು ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. 

Thursday, October 17, 2024

ಪ್ರಗತಿಪರ ರೈತ ಶ್ರೀಧರ್ ಜಮೀನಿನಲ್ಲಿ ಭೂಮಿ ಹುಣ್ಣಿಮೆ ಆಚರಣೆ

ಮಲೆನಾಡಿನ ರೈತರ ನೆಚ್ಚಿನ ಹಬ್ಬ ಭೂಮಿ ಹುಣ್ಣಿಮೆ ಭದ್ರಾವತಿ ತಾಲೂಕಿನಾದ್ಯಂತ ಕೆಲವು ರೈತ ಕುಟುಂಬಗಳು ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿವೆ. ಪ್ರಗತಿಪರ ರೈತ, ಭಂಡಾರ ಹಳ್ಳಿ ನಿವಾಸಿ ಶ್ರೀಧರ್‌ರವರು ತಮ್ಮ ಜಮೀನಿನಲ್ಲಿ ಗುರುವಾರ ಭೂಮಿ ಹುಣ್ಣಿಮೆ ಆಚರಿಸಿದರು. 
    ಭದ್ರಾವತಿ: ಮಲೆನಾಡಿನ ರೈತರ ನೆಚ್ಚಿನ ಹಬ್ಬ ಭೂಮಿ ಹುಣ್ಣಿಮೆ ತಾಲೂಕಿನಾದ್ಯಂತ ಕೆಲವು ರೈತ ಕುಟುಂಬಗಳು ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿವೆ. ಪ್ರಗತಿಪರ ರೈತ, ಭಂಡಾರ ಹಳ್ಳಿ ನಿವಾಸಿ ಶ್ರೀಧರ್‌ರವರು ತಮ್ಮ ಜಮೀನಿನಲ್ಲಿ ಗುರುವಾರ ಭೂಮಿ ಹುಣ್ಣಿಮೆ ಆಚರಿಸಿದರು. 
    ಶ್ರೀಧರ್‌ರವರು ಭಂಡಾರಹಳ್ಳಿಯಲ್ಲಿರುವ ತಮ್ಮ ಜಮೀನಿನಲ್ಲಿ ವಿವಿಧ ರೀತಿಯ ಬೆಳೆಗಳನ್ನು ಬೆಳೆದು ಅಸಾಧಾರಣ ಸಾಧನೆಗಳನ್ನು ಮಾಡಿದ್ದು, ಇವರ ಸಾಧನೆಗೆ ಹಲವಾರು ಪ್ರಶಸ್ತಿ, ಬಿರುದುಗಳು ಸಂದಿವೆ. 
    ಈ ಬಾರಿ ಭೂಮಿ ಹುಣ್ಣಿಮೆ ಕಾರ್ಯಕ್ರಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ಅಧ್ಯಕ್ಷೆ, ಸಾಹಿತಿ, ನಿವೃತ್ತ ಉಪನ್ಯಾಸಕಿ ಎಮೆರಿಟಸ್ ಡಾ. ವಿಜಯದೇವಿ ಹಾಗು ಕನ್ನಡ ಸಾಹಿತ್ಯ, ಸಾಂಸ್ಕೃತಿ ವೇದಿಕೆ ತಾಲೂಕು ಅಧ್ಯಕ್ಷ, ಬಗರ್ ಹುಕುಂ ಸಮಿತಿ ಸದಸ್ಯೆ ಎಂ.ಎಸ್ ಸುಧಾಮಣಿ ಪಾಲ್ಗೊಂಡು ಹಬ್ಬದ ಸಂಭ್ರಮ ಹಂಚಿಕೊಂಡರು. ಪ್ರಗತಿಪರ ರೈತ ಶ್ರೀಧರ್ ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಅನ್ನಸಂತರ್ಪಣೆ


    ಭದ್ರಾವತಿ : ನಗರಸಭೆ ವ್ಯಾಪ್ತಿ ಸುರಗಿತೋಪು ೪ನೇ ತಿರುವಿನ ರಸ್ತೆಯಲ್ಲಿ ಅನ್ನಪೂರ್ಣೇಶ್ವರಿ ಯುವಕರ ಸಂಘದ ವತಿಯಿಂದ  ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಅ.೧೮ರಂದು ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. 
    ಈ ಬಾರಿ ವಿಶೇಷವಾಗಿ ಅಡುಗೆ ಭಟ್ಟನಾಗಿ ಅಡುಗೆ ತಯಾರಿಯಲ್ಲಿ ತೊಡಗಿರುವ ಗಣಪ ಹಾಗು ಸಹಾಯಕನಾಗಿರುವ ಮೂಷಿಕ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಪ್ರತಿವರ್ಷದಂತೆ ಈ ಬಾರಿ ಸಹ ಬೆಳಿಗ್ಗೆ ಗಣ ಹೋಮ, ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ನಿವೃತ್ತ ಉಪ ವ್ಯವಸ್ಥಾಪಕ ಪದ್ಮನಾಭ ಗೊಲ್ಲ ನಿಧನ

ಪದ್ಮನಾಭ ಗೊಲ್ಲ 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಉಪ ವ್ಯವಸ್ಥಾಪಕ ಪದ್ಮನಾಭ ಗೊಲ್ಲ(೮೨) ಬುಧವಾರ ನಿಧನ ಹೊಂದಿದರು.
    ಇವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಪದ್ಮನಾಭರವರು ವಿಐಎಸ್‌ಎಲ್ ಕಾರ್ಖಾನೆಯ ಅನಿಲ ಮತ್ತು ಇಂಧನ ಇಲಾಖೆಯಲ್ಲಿ ಉಪ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರ ಅಂತ್ಯಕ್ರಿಯೆ ಗುರುವಾರ ಜೋಗದಲ್ಲಿ ನಡೆಯಿತು. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.