ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು.
ಭದ್ರಾವತಿ : ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ರವರ ಮಾರ್ಗದರ್ಶನದಲ್ಲಿ ಹಿರಿಯೂರಿನ ಅಮಲಾ ಮಾತಾ ಆಸ್ಪತ್ರೆಯಲ್ಲಿ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶೆಟ್ಟಿ ನೇತೃತ್ವದಲ್ಲಿ ಒಳ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಯೋಜನೆಗಳ ಮೂಲಕ ಅವರನ್ನು ಸ್ಮರಿಸಲಾಯಿತು.
ಶಂಕರಘಟ್ಟ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಟಿ.ಡಿ ಶಶಿಕುಮಾರ್, ಶಂಕರ್ ರೈಸ್ ಮಿಲ್ ಮಾಲೀಕ ನಂದೀಶ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್ ಹಾಗು ಆಸ್ಪತ್ರೆ ವೈದ್ಯರು, ದಾದಿಯರು ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.