ತಾಲೂಕು ಆಡಳಿತಕ್ಕೆ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ
ಮುಂಬರುವ `ವಿಶ್ವ ಜಲ ದಿನಾಚರಣೆ' ಅಂಗವಾಗಿ ಕೆರೆ ಕಟ್ಟೆಗಳ ಉತ್ಸವ ನಡೆಯಲಿರುವುದರಿಂದ ಹಾಗು ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರವರು ಆಗಮಿಸುವ ನಿರೀಕ್ಷೆ ಇದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನೂತನ ತಹಸೀಲ್ದಾರ್ ಪರಶುರಾಮ್ರವರಿಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ: ಮುಂಬರುವ `ವಿಶ್ವ ಜಲ ದಿನಾಚರಣೆ' ಅಂಗವಾಗಿ ಕೆರೆ ಕಟ್ಟೆಗಳ ಉತ್ಸವ ನಡೆಯಲಿರುವುದರಿಂದ ಹಾಗು ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರವರು ಆಗಮಿಸುವ ನಿರೀಕ್ಷೆ ಇದ್ದು, ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನೂತನ ತಹಸೀಲ್ದಾರ್ ಪರಶುರಾಮ್ರವರಿಗೆ ಮನವಿ ಸಲ್ಲಿಸಲಾಗಿದೆ.
ಸದ್ಯದಲ್ಲೇ ಜಿಲ್ಲಾಧಿಕಾರಿಗಳವರ ಸಮ್ಮುಖದಲ್ಲಿ ತಾಲೂಕು ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಒಂದು ಸಭೆ ನಡೆಯಲಿರುವುದರಿಂದ ತಾಲೂಕಿನಲ್ಲಿರುವ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿರುವ ಕೆರೆಗಳ ಪಟ್ಟಿಯನ್ನು ನೀಡುವುದು ಹಾಗೂ ಇತ್ತೀಚೆಗೆ ಸರ್ವೆ ನಡೆದಿರುವ ಕಸಬಾ-೧ ಸೀಗೆಬಾಗಿ ಗ್ರಾಮ ಸರ್ವೆ ನಂ.೫೭ರ ಬೆಂಡಿಕಟ್ಟೆ ಕೆರೆಯ ದಾಖಲೆ ಹಾಗೂ ಈ ಸಂಬಂಧ ತಮ್ಮ ಕಛೇರಿಯಿಂದ ಕ್ರಮ ತೆಗೆದುಕೊಂಡಿರುವ ಬಗ್ಗೆ ಮಾಹಿತಿ ನೀಡುವುದು. ತಾಲೂಕಿನ ಕಲ್ಲಹಳ್ಳಿ ಗ್ರಾಮಪಂಚಾಯತಿ ಸಿರಿಯೂರು ಸರ್ವೆ ನಂ.೪ರ ಬೌಂಡರಿ ನಿಗದಿಪಡಿಸಿ ಒತ್ತುವರಿ ತೆರವುಗೊಳಿಸುವ ಬಗ್ಗೆ ಗ್ರಾಮಪಂಚಾಯತಿವತಿಯಿಂದ ತಾಲೂಕು ಕಛೇರಿಗೆ ಬಂದಿರುವ ಪತ್ರದ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕೋರಲಾಗಿದೆ.
ವಿಧಾನಸಭಾ ಕ್ಷೇತ್ರದ ದೊಣಭಘಟ್ಟ ಸರ್ವೆ ನಂ.೩೬ರ ದೊಡ್ಡಕೆರೆ, ತಡಸ ಸರ್ವೆ ನಂ.೭೨ರ ಕೆರೆ, ಹೊಳೆನೇರಳಕೆರೆ ಸರ್ವೆ ನಂ:೫೦ರ ದೊಡ್ಡಕೆರೆ ಹಾಗು ನಂಜಾಪುರ ಸರ್ವೆ, ನಂ.೧ರ ಸರ್ಕಾರಿ ಕೆರೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರ ಸರ್ವೆ ನಂ.೬೩ ಹಾಗೂ ಇದಕ್ಕೆ ಲಗತ್ತಾಗಿರುವ ಸರ್ವೆ ನಂಬರಿನ ಕೆರೆಗಳು ಮತ್ತು ಸರ್ವೆ ನಂ.೧೧೦ರ ಸರ್ಕಾರಿ ಕೆರೆ, ಜನ್ನಾಪುರ ಸರ್ವೆ ನಂ:೯೦ರ ಕೆರೆ ಮತ್ತು ಸೀಗೆಬಾಗಿ ಸರ್ವೆ ನಂ.೩೩ರ ಕೆರೆ ಸೇರಿದಂತೆ ಇನ್ನಿತರ ಕೆರೆಗಳ ಬೌಂಡರಿ ಕಾರ್ಯ ತುರ್ತಾಗಿ ನಿಗದಿಪಡಿಸಿ ಒತ್ತುವರಿ ತೆರವುಗೊಳಿಸುವ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ.
ಟ್ರಸ್ಟ್ ಛೇರ್ಮನ್ ಆರ್. ವೇಣುಗೋಪಾಲ್, ವೈಸ್ ಛೇರ್ಮನ್ ಎನ್.ಎಲ್ ರಮಾದೇವಿ, ಗೌರವಾಧ್ಯಕ್ಷ ವಿಶ್ವೇಶ್ವರರಾವ್ ಗಾಯಕ್ವಾಡ್, ಪ್ರಧಾನ ಕಾರ್ಯದರ್ಶಿ ಬಿ.ವಿ ಗಿರಿ, ಸಂಚಾಲಕ ಎಂ.ವಿ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಕೆ.ಎಸ್ ಶೈಲಜಾ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.