ಇತ್ತೀಚೆಗೆ ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಶಿವಮೊಗ್ಗದ ಶಿಕ್ಷಣತಜ್ಞರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ಜೆ.ಎಲ್ ಪದ್ಮನಾಭರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಇತ್ತೀಚೆಗೆ ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಶಿವಮೊಗ್ಗದ ಶಿಕ್ಷಣತಜ್ಞರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ಜೆ.ಎಲ್ ಪದ್ಮನಾಭರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೊ.ಪದ್ಮನಾಭ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇವರು ಕುವೆಂಪು ವಿಶ್ವವಿದ್ಯಾನಿಲಯದ ಶಿಕ್ಷಣಮಂಡಳಿ, ಸೆನೆಟ್ ಹಾಗೂ ಹಣಕಾಸು ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರಲ್ಲದೇ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲಾ ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ೪೬ ಜನರಿಗೆ ಸನ್ಮಾನಿಸಲಾಯಿತು. ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ಸಚಿವ ಚಲುವರಾಯಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.