Saturday, December 28, 2024

ಕೃಷಿ ಪತ್ತಿನ ಸಹಕಾರಕ್ಕೆ ನೂತನ ನಿರ್ದೇಶಕರು ಆಯ್ಕೆ


ಭದ್ರಾವತಿ: ತಾಲೂಕಿನ ಕಡದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದಾರೆ. 
    ಸಾಮಾನ್ಯ ಸ್ಥಾನದಿಂದ ಬಿ. ಆನಂದ, ಇಂದ್ರೇಗೌಡ, ಸುರೇಶ್, ಉಮೇಶ್, ಕೆ.ಜಿ ರವಿಕುಮಾರ್, ಮಹಿಳಾ ಮೀಸಲು ಕ್ಷೇತ್ರದಿಂದ ಎ. ಭಾಗ್ಯಲಕ್ಷ್ಮೀ, ಪಾರ್ವತಮ್ಮ, ಹಿಂದುಳಿದ `ಎ' ವರ್ಗದಿಂದ ಬಿ.ಎಸ್ ಹನುಮಂತಪ್ಪ, `ಬಿ' ವರ್ಗದಿಂದ ಡಿ. ಶಿವಶಂಕರ್, ಪರಿಶಿಷ್ಟ ಜಾತಿ ನಾಗರಾಜನಾಯ್ಕ ಮತ್ತು ಪರಿಶಿಷ್ಟ ಪಂಗಡದಿಂದ ಹನುಮಂತಪ್ಪ ಹಾಗು ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದಿಂದ ವೆಂಕಟೇಶ್ ಸೇರಿದಂತೆ ಒಟ್ಟು ೧೨ ಮಂದಿ ನಿರ್ದೇಶಕರು ನೂತನವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. 


ನಿರ್ಮಲ ಆಸ್ಪತ್ರೆಯಲ್ಲಿ ಅಪರಾಧ ತಡೆ ಮಾಸಾಚರಣೆ

ಭದ್ರಾವತಿ ನಗರದ ಸಂಚಾರಿ ಪೊಲೀಸ್ ಠಾಣೆವತಿಯಿಂದ ಹಳೇನಗರದ ನಿರ್ಮಲ ಸೇವಾ ಕೇಂದ್ರದ ಸಹಯೋಗದೊಂದಿಗೆ ನಿರ್ಮಲ ಆಸ್ಪತ್ರೆಯಲ್ಲಿ ಶನಿವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. 
    ಭದ್ರಾವತಿ:  ನಗರದ ಸಂಚಾರಿ ಪೊಲೀಸ್ ಠಾಣೆವತಿಯಿಂದ ಹಳೇನಗರದ ನಿರ್ಮಲ ಸೇವಾ ಕೇಂದ್ರದ ಸಹಯೋಗದೊಂದಿಗೆ ನಿರ್ಮಲ ಆಸ್ಪತ್ರೆಯಲ್ಲಿ ಶನಿವಾರ ಅಪರಾಧ ತಡೆ ಮಾಸಾಚರಣೆ ನಡೆಯಿತು. 
    ಸಂಚಾರಿ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಶಾಂತಲರವರು ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ, ಸೈಬರ್ ಅಪರಾಧ, ಸಂಚಾರ ನಿಯಮಗಳ ಕುರಿತು ಕಾನೂನು ಅರಿವು ಮೂಡಿಸಿದರು. 
    ನಿರ್ಮಲ ಸೇವಾ ಕೇಂದ್ರದ ಪ್ರಮುಖರು, ಮಹಿಳೆಯರು ಪಾಲ್ಗೊಂಡಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜು ಸೇರಿದಂತೆ ವಿವಿಧೆಡೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. 

ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕೇಂದ್ರ ಉಕ್ಕು ಪ್ರಾಧಿಕಾರ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಶನಿವಾರ ಶಿವಮೊಗ್ಗ ಎನ್.ಯು ಆಸ್ಪತ್ರೆ ಹಾಗು ಎಂಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬರ ಆಯೋಜಿಸಲಾಗಿತ್ತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದಲ್ಲಿ ಶನಿವಾರ ಶಿವಮೊಗ್ಗ ಎನ್.ಯು ಆಸ್ಪತ್ರೆ ಹಾಗು ಎಂಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬರ ಆಯೋಜಿಸಲಾಗಿತ್ತು. 
    ಎನ್.ಯು ಆಸ್ಪತ್ರೆಯ ಸಹಾಯಕ ವೈದ್ಯಕೀಯ ನಿರ್ದೇಶಕ ಡಾ. ಪ್ರವೀಣ್ ಮಳವಾಡೆ ಹಾಗು ತಜ್ಞ ವೈದ್ಯ ಡಾ. ಶರತ್ ಮೂತ್ರ ಶಾಸ್ತ್ರ, ಮೂತ್ರ ಪಿಂಡ ಹಾಗು ಬಂಜೆತನ ನಿವಾರಣೆ ಕುರಿತು ಆರೋಗ್ಯ ಮಾಹಿತಿ ನೀಡಿದರು. ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ ಶಿಬಿರದ ನೇತೃತ್ವದ ವಹಿಸಿದ್ದರು. 
    ಎನ್.ಯು ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಶ್ರೀಜಿತ್, ಮಾರುಕಟ್ಟೆ ಅಧಿಕಾರಿ ಪ್ರಿನ್ಸನ್ ಲೋಬೊ, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಪ್ರಮುಖರಾದ ಉಪಾಧ್ಯಕ್ಷ ಅಡವೀಶಯ್ಯ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿಗಳಾದ ಹನುಮಂತರಾವ್, ಜಯರಾಜ್, ರವೀಂದ್ರ ರೆಡ್ಡಿ, ನಿರ್ದೇಶಕರಾದ ನರಸಿಂಹಚಾರ್, ಶಂಕರ್, ನಾಗರಾಜ್, ಮಹೇಶ್ವರಪ್ಪ, ವೆಂಕಟೇಶ್ ಪ್ರಸಾದ್, ರಾಮಪ್ಪ ಹಾಗು ಕೆಂಪಯ್ಯ ಸೇರಿದಂತೆ ನಿವೃತ್ತ ಕಾರ್ಮಿಕರು, ಎಂ.ಡಿ ಇಂಡಿಯಾ ಇನ್ಸೂರೆನ್ಸ್ ಕಂಪನಿ ಅಧಿಕಾರಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. 
    ಶಿಬಿರದ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರ ನಿಧನಕ್ಕೆ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. 

Friday, December 27, 2024

ನೋಟುಗಳ ಮೂಲಕ ಮಾಜಿ ಪ್ರಧಾನಿ ನಿಧನಕ್ಕೆ ಸಂತಾಪ

ಭದ್ರಾವತಿ ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ. 
    ಭದ್ರಾವತಿ : ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ. 
    ಸಿಂಗ್‌ರವರ ಜನ್ಮದಿನ ಹಾಗು ನಿಧನ ಹೊಂದಿದ ದಿನದ ದಿನಾಂಕ ಹೊಂದಿರುವ ೧೦ ರು. ಮುಖಬೆಲೆಯ ನೋಟುಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಗಣೇಶ್‌ರವರು ಸುಮಾರು ೫ ದಶಕ್ಕೂ ಹೆಚ್ಚು ಕಾಲದಿಂದ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಗಣ್ಯ ವ್ಯಕ್ತಿಗಳ ಹುಟ್ಟು, ನಿಧನ ಹೊಂದಿದ ದಿನ ಹಾಗು ಪ್ರಮುಖ ಐತಿಹಾಸಿಕ ಘಟನೆಗಳ ಸಂದರ್ಭದಲ್ಲಿ ನೋಟುಗಳ ಮೂಲಕ ಶುಭ ಹಾರೈಕೆ, ಸಂತಾಪ ಸೂಚಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ. 

ಡಿ.೨೮ರಂದು ಶ್ರೀ ರಾಮಾಯಣ ದರ್ಶನಂ ಆಧಾರಿತ ಉಪನ್ಯಾಸ-ಪ್ರಾತ್ಯಕ್ಷಿಕೆ



    ಭದ್ರಾವತಿ: ನಗರದ ರೋಟರಿ ಕ್ಲಬ್ ವತಿಯಿಂದ ಆನಂದ ಆರೋಗ್ಯ ನೃತ್ಯ ಪ್ರಾತ್ಯಕ್ಷಿಕಾ ಮಾಲಿಕೆ `ರಾಮಂಗೆ ಮೊದಲಲ್ತೆ ರಾಮಾಯಣಂ?' ವಿಶೇಷ ಕಾರ್ಯಕ್ರಮ ರಾಷ್ಟ್ರಕವಿ ಕುವೆಂಪುರವರ ಜ್ಞಾನಪೀಠ ಪುರಸ್ಕೃತ ಶ್ರೀ ರಾಮಾಯಣ ದರ್ಶನಂ ಆಧಾರಿತ ಉಪನ್ಯಾಸ-ಪ್ರಾತ್ಯಕ್ಷಿಕೆ ಡಿ.೨೮ರಂದು ಸಂಜೆ ೬ ಗಂಟೆಗೆ ನಗರದ ರೋಟರಿ ಕ್ಲಬ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಮನೋವೈದ್ಯೆ, ನೃತ್ಯ ಕಲಾವಿದೆ ಡಾ.ಕೆ.ಎಸ್ ಪವಿತ್ರಾ ಅವರಿಂದ ಉಪನ್ಯಾಸ-ಪ್ರಾತ್ಯಕ್ಷಿಕೆ ನಡೆಯಲಿದ್ದು, ಡಾ. ಅನುರಾಧ ಪಟೇಲ್ ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್ ಅಧ್ಯಕ್ಷ ಜಿ. ರಾಘವೇಂದ್ರ ಉಪಾಧ್ಯಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಜ.೪ರಂದು `ಸಾರ್ಥಕ ಸೇವೆಯ ಸವಿನೆನಪಿನ ಕ್ಷಣದ' ಅಭಿನಂದನಾ ಕಾರ್ಯಕ್ರಮ

ಅಪೇಕ್ಷ ಮಂಜುನಾಥ್ 
    ಭದ್ರಾವತಿ: ಜ್ಯೂನಿಯರ್ ವಿಷ್ಣವರ್ಧನ್ ಎಂದೇ ಗುರುತಿಸಿಕೊಂಡಿರುವ ಕಾಗದನಗರ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಅಪೇಕ್ಷ ಮಂಜುನಾಥ್ ೩೫ ವರ್ಷಗಳ ವೃತ್ತಿ ಕರ್ತವ್ಯದಿಂದ ನಿವೃತ್ತಿ ಹೊಂದುತ್ತಿದ್ದು, ಈ ಹಿನ್ನಲೆಯಲ್ಲಿ ಜ.೪ರಂದು `ಸಾರ್ಥಕ ಸೇವೆಯ ಸವಿನೆನಪಿನ ಕ್ಷಣದ' ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. 
    ಅಪೇಕ್ಷ ಕಲಾ ನೃತ್ಯ ವೃಂದ ಹಾಗು ಸ್ನೇಹ ಬಳಗದ ವತಿಯಿಂದ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಮಧ್ಯಾಹ್ನ ೩ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಸ್ನೇಹ ಬಳಗದವರು, ಅಭಿಮಾನಿಗಳು, ಶಿಕ್ಷಕರು, ಕಲಾವಿದರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 
    ಅಪೇಕ್ಷ ಮಂಜುನಾಥ್ : 
    ಅಪೇಕ್ಷ ಮಂಜುನಾಥ್‌ರವರು ವೃತ್ತಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ವೃತ್ತಿ ಜೊತೆಯಲ್ಲಿ ನೃತ್ಯ ಕಲಾವಿದರಾಗಿ ಬೆಳೆದು ಅಪೇಕ್ಷ ಕಲಾ ನೃತ್ಯ ವೃಂದ ಆರಂಭಿಸಿ ಆ ಮೂಲಕ ನೂರಾರು ಯುವ ಕಲಾ ಪ್ರತಿಭೆಗಳನ್ನು ಪ್ರೋತ್ಸಾಯಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ಕಾರಣಕರ್ತರಾಗಿದ್ದಾರೆ. ಅಲ್ಲದೆ ಮಂಜುನಾಥ್‌ರವರು ಹಿರಿಯ ನಟ, ದಿವಂಗತ ಡಾ. ವಿಷ್ಣುವರ್ಧನ್‌ರವರ ಅಭಿಮಾನಿಯಾಗಿದ್ದು, ಅವರ ಅಭಿನಯದ ಮೂಲಕ ಜ್ಯೂನಿಯರ್ ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಯದ ವಿವಿಧೆಡೆ ಹಲವಾರು ಕಾರ್ಯಕ್ರಮಗಳಲ್ಲಿ ತಮ್ಮ ಅಭಿನಯ ಪ್ರದರ್ಶಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಪ್ರತಿವರ್ಷ ವಿಷ್ಣುವರ್ಧನ್‌ರವರ ಜನ್ಮದಿನ ಹಾಗು ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದ್ದು, ವಿಷ್ಣುವರ್ಧನ್‌ರವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ಸಹ ನೀಡುತ್ತಿದ್ದಾರೆ. ಅಲ್ಲದೆ ಅಪೇಕ್ಷ ಕಲಾ ನೃತ್ಯ ವೃಂದ ಮೂಲಕ ಪ್ರತಿಭಾವಂತ ಸಾಧಕರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದ್ದಾರೆ. ಇವರಿಗೆ ಜಿಲ್ಲಾ ಹಾಗು ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳು ಲಭಿಸಿವೆ. 

ಡಿ.೨೯ರಂದು ರಕ್ತದಾನ ಶಿಬಿರ


    ಭದ್ರಾವತಿ: ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರರವರ ಸಹಯೋಗದೊಂದಿಗೆ ನಗರದ ಹೊಸಮನೆ ಶಿವಾಜಿ ಸರ್ಕಲ್, ಹಳೇನಗರ, ನ್ಯೂಟೌನ್ ಮತ್ತು ಸಂಚಾರಿ ಪೊಲೀಸ್ ಠಾಣೆಗಳ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. 
    ಹಳೇನಗರ ಪೊಲೀಸ್ ಠಾಣೆ ಆವರಣದಲ್ಲಿ ಡಿ.೨೯ರ ಭಾನುವಾರ ಬೆಳಿಗ್ಗೆ ೧೦ ಗಂಟೆಯಿಂದ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರತಿ ಭಾನುವಾರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದ್ದು, ಈ ಪೈಕಿ ರಕ್ತದಾನ ಶಿಬಿರ ಸಹ ಒಂದಾಗಿದೆ.