Tuesday, January 14, 2025

ಜಗದ್ಗುರು ಶ್ರೀ ಸಿದ್ದಾರೂಢ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

ಶ್ರೀ ಸಿದ್ದಾರೂಢರ ೧೯೦ನೇ ಹಾಗೂ ಶ್ರೀ ಗುರುನಾಥಾರೂಢರ ೧೧೫ನೇ ಜಯಂತ್ಯುತ್ಸವ ಮತ್ತು ಶ್ರೀ ಸಿದ್ದಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ಅಂಗವಾಗಿ ಆರಂಭಗೊಂಡಿರುವ ಜಗದ್ಗುರು ಶ್ರೀ ಸಿದ್ದಾರೂಢ ಜ್ಯೋತಿ ರಥಯಾತ್ರೆ ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿತು. 
    ಭದ್ರಾವತಿ: ಶ್ರೀ ಸಿದ್ದಾರೂಢರ ೧೯೦ನೇ ಹಾಗೂ ಶ್ರೀ ಗುರುನಾಥಾರೂಢರ ೧೧೫ನೇ ಜಯಂತ್ಯುತ್ಸವ ಮತ್ತು ಶ್ರೀ ಸಿದ್ದಾರೂಢ ಕಥಾಮೃತ ಗ್ರಂಥದ ಶತಮಾನೋತ್ಸವ ಅಂಗವಾಗಿ ಆರಂಭಗೊಂಡಿರುವ ಜಗದ್ಗುರು ಶ್ರೀ ಸಿದ್ದಾರೂಢ ಜ್ಯೋತಿ ರಥಯಾತ್ರೆ ಸೋಮವಾರ ನಗರಕ್ಕೆ ಆಗಮಿಸಿತು. 
    ಡಿ.೨೨ರಿಂದ ಹುಬ್ಬಳಿಯ ಶ್ರೀ ಸಿದ್ದಾರೂಢ ಸ್ವಾಮಿಯವರ ಮಠದಿಂದ ಆರಂಭಗೊಂಡಿರುವ ರಥಯಾತ್ರೆ ನಗರದ ಹೊಸಸೇತುವೆ ರಸ್ತೆಯ ಶ್ರೀ ಸಿದ್ದಾರೂಢ ಆಶ್ರಮಕ್ಕೆ ಆಗಮಿಸಿತು. ಶ್ರೀ ಶಿವಲಿಂಗಾನಂದ ಸ್ವಾಮಿಗಳ ನೇತೃತ್ವದಲ್ಲಿ ಭಕ್ತರು ಪೂರ್ಣಕುಂಭ ಸ್ವಾಗತದೊಂದಿಗೆ ರಥಯಾತ್ರೆಯನ್ನು ಬರಮಾಡಿಕೊಂಡರು.
    ಟ್ರಸ್ಟ್ ಕಾರ್ಯದರ್ಶಿ ರಾಮಮೂರ್ತಿ, ಬಿ. ದಿವಾಕರ ಶೆಟ್ಟಿ, ಮಾರುತಿ, ರಂಗನಾಥ ಗಿರಿ, ಬಾಬು, ವಿಜಯಕುಮಾರ್, ಜಿ. ಧರ್ಮಪ್ರಸಾದ್, ಮಂಜುನಾಥ್ ರಾವ್, ಹನುಮಂತಪ್ಪ, ಎರೇಸೀಮೆ, ಭಾರತಮ್ಮ, ಲಕ್ಷ್ಮಣಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನಗರದ ವಿವಿದೆಢೆ ಸಂಚರಿಸಿ ಶ್ರೀ ಮಠದ ಆವರಣದಲ್ಲಿ ವಾಸ್ತವ್ಯ ಹೂಡಿದ ರಥಯಾತ್ರೆ ಮಂಗಳವಾರ ಬೆಳಿಗ್ಗೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿತು. 
    ಸಿದ್ಧಾರೂಢ ಮಠದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಹುಣ್ಣಿಮೆ ಕಾರ್ಯಕ್ರಮದಲ್ಲಿ ಶ್ರೀ ಶಿವಲಿಂಗಾನಂದ ಸ್ವಾಮಿಜಿ ಉಪನ್ಯಾಸ ನೀಡಿ ಆಶೀರ್ವಚಿಸಿದರು. ಗುತ್ತಿಗೆದಾರ ಎಸ್. ಬಾಬಣ್ಣ ಕುಟುಂಬದವರಿಂದ ದಾಸೋಹ ಏರ್ಪಡಿಸಲಾಗಿತ್ತು.

ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಜಿ. ರಮೇಶ್

ಜಿ. ರಮೇಶ್ 
    ಭದ್ರಾವತಿ:  ತಾಲೂಕು ಬ್ರಾಹ್ಮಣ ಮಹಾಸಭಾ ನೂತನ ಅಧ್ಯಕ್ಷರಾಗಿ ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಉದ್ಯೋಗಿ ಜಿ. ರಮೇಶ್ ಆಯ್ಕೆಯಾಗಿದ್ದಾರೆ. 
    ಸಿದ್ಧಾರೂಢನಗರದ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅಧ್ಯಕ್ಷರಾಗಿ ಜಿ. ರಮೇಶ್ 
    ಉಪಾಧ್ಯಕ್ಷರಾಗಿ ಎಸ್.ಸಿ ನೀಲಕಂಠ ಜೋಯ್ಸ್ ಮತ್ತು  ರಾಜಶೇಖರ್(ಬಿಆರ್‌ಪಿ), ಪ್ರಧಾನ ಕಾರ್ಯದರ್ಶಿಯಾಗಿ ಕೆ. ಮಂಜುನಾಥ್, ಸಹ ಕಾರ್ಯದರ್ಶಿಯಾಗಿ ಬಿ.ಆರ್ ಇಂದ್ರಸೇನಾ ರಾವ್, ಖಜಾಂಚಿಯಾಗಿ ಎಸ್. ಶೇಷಾದ್ರಿ ಹಾಗು ಸಂಘಟನಾ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ. 

ಸಹ್ಯಾದ್ರಿ ಬಡಾವಣೆಯಲ್ಲಿ ಸಂಕ್ರಾಂತಿ ಸಂಭ್ರಮ

ಭದ್ರಾವತಿ ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಮಂಗಳವಾರ ಇಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ : ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಮಂಗಳವಾರ ಇಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ನಿವಾಸಿಗಳು ಒಟ್ಟಾಗಿ ಕಳೆದ ಕೆಲವು ವರ್ಷಗಳಿಂದ ಸಂಕ್ರಾಂತಿ ಹಬ್ಬ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದ್ದು, ಹಬ್ಬದ ಮಹತ್ವ ಸಾರುವ ಜೊತೆಗೆ ಇಂದಿನ ಪೀಳಿಗೆಗೆ ಪರಂಪರೆ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರೋತ್ಸಾಹಿಸಲಾಗುತ್ತಿದೆ.  
    ಬಡಾವಣೆಯಲ್ಲಿ ಇಡೀ ದಿನ ಹಬ್ಬದ ಸಂಭ್ರಮ ಕಂಡು ಬಂದಿದ್ದು, ಬೆಳಿಗ್ಗೆಯಿಂದಲೇ ಹಬ್ಬಕ್ಕಾಗಿ ಸಿದ್ದತೆಗಳು ಆರಂಭಗೊಂಡವು. ಹಸಿರು ತೋರಣಗಳು, ಮನೆಯ ಮುಂಭಾಗ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರಗಳು ಕಂಗೊಳಿಸಿದವು. ಬಡಾವಣೆಯ ಮುಖ್ಯ ಅಡ್ಡ ರಸ್ತೆಯಲ್ಲಿ ವೇದಿಕೆ ನಿರ್ಮಿಸಲಾಗಿತ್ತು. 
    ಸಂಜೆ ಸಂಪ್ರದಾಯದಂತೆ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಮಕ್ಕಳು, ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬಡಾವಣೆಯಲ್ಲಿರುವ ಪ್ರತಿಯೊಬ್ಬರು ಸಾಂಪ್ರದಾಯಿಕ ಉಡುಗೆ ತೊಡುಗೆಗಳೊಂದಿಗೆ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. 
    ಬಡಾವಣೆಯ ಹಿರಿಯರಾದ ಎಚ್.ವಿ ರುದ್ರಪ್ಪ, ಕೆ.ಎನ್ ಭೈರಪ್ಪಗೌಡ, ಡಾ. ವೈದ್ಯ, ಸುಬ್ಬಣ್ಣ ರೈ, ಇಂದಿರಾ ಮುರುಳಿ, ಮನು, ರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

Monday, January 13, 2025

ತಳ್ಳಿಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಧರ್ಮೇಗೌಡ, ಉಪಾಧ್ಯಕ್ಷರಾಗಿ ರವೀಂದ್ರನಾಯ್ಡು

ಭದ್ರಾವತಿ ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಧರ್ಮೇಗೌಡ(ಕುಮ್ರಿ ಚಂದ್ರಣ್ಣ) ಹಾಗು ಉಪಾಧ್ಯಕ್ಷರಾಗಿ ರವೀಂದ್ರನಾಯ್ಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ : ತಾಲೂಕಿನ ತಳ್ಳಿಕಟ್ಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಧರ್ಮೇಗೌಡ(ಕುಮ್ರಿ ಚಂದ್ರಣ್ಣ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ಭಾನುವಾರ ನಡೆದ ಚುನಾವಣೆಯಲ್ಲಿ ೧೨ ನಿರ್ದೇಶಕರನ್ನು ಹೊಂದಿರುವ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಧರ್ಮೇಗೌಡ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ರವೀಂದ್ರನಾಯ್ಡು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಡಿ.೨೮ರಂದು ಸಹಕಾರ ಸಂಘಕ್ಕೆ ನೂತನ ನಿರ್ದೇಶಕರು ಆಯ್ಕೆಯಾಗಿದ್ದರು. 
    ನೂತನ ಅಧ್ಯಕ್ಷ ಧರ್ಮೇಗೌಡ ಹಾಗು ಉಪಾಧ್ಯಕ್ಷ ರವೀಂದ್ರನಾಯ್ಡು ಅವರನ್ನು ಜೆಡಿಎಸ್ ಗ್ರಾಮಾಂತರ ಅಧ್ಯಕ್ಷ ಧರ್ಮಮೂರ್ತಿ ಸೇರಿದಂತೆ ಪಕ್ಷದ ಮುಖಂಡರು ಅಭಿನಂದಿಸಿದ್ದಾರೆ. 

ಮಾಜಿ ಸೈನಿಕ, ಪಿಡಿಓ ಜಿ. ವೆಂಕಟೇಶ್ ನಿಧನ

ಜಿ. ವೆಂಕಟೇಶ್ 
    ಭದ್ರಾವತಿ: ತಾಲೂಕಿನ ಅತ್ತಿಗುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಓ), ಮಾಜಿ ಸೈನಿಕ ಜಿ. ವೆಂಕಟೇಶ್(೫೨) ಭಾನುವಾರ ನಿಧನ ಹೊಂದಿದರು. 
    ಪತ್ನಿ, ಪುತ್ರಿ, ತಾಯಿ, ಸಹೋದರ ಹಾಗು ಸಹೋದರಿ ಇದ್ದಾರೆ. ಇವರ ಅಂತ್ಯಕ್ರಿಯೆ ತಾಲೂಕಿನ ಬಾರಂದೂರು ಗ್ರಾಮದ ಇವರ ತೋಟದಲ್ಲಿ ನೆರವೇರಿತು. ವೆಂಕಟೇಶ್‌ರವರು ಕಾರೇಹಳ್ಳಿ-ಬಾರಂದೂರು ಗ್ರಾಮದಲ್ಲಿ ವಾಸವಾಗಿದ್ದರು. 
    ವೆಂಕಟೇಶ್‌ರವರು ತಾಲೂಕು ಮಾಜಿ ಸೈನಿಕರ ಸಂಘದ ನಿರ್ದೇಶಕರಾಗಿದ್ದು, ತಾಲೂಕಿನ ವಿವಿಧೆಡೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.  ಇವರ ನಿಧನಕ್ಕೆ ತಾಲೂಕು ಮಾಜಿ ಸೈನಿಕರ ಸಂಘ ಸಂತಾಪ ಸೂಚಿಸಿದೆ.  

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ ಶಿವಕುಮಾರ್, ಉಪಾಧ್ಯಕ್ಷರಾಗಿ ಮೀರಾಬಾಯಿ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್ ಭದ್ರಾವತಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಮತ್ತು ಮೀರಾಬಾಯಿ ಉಪಾಧ್ಯಕ್ಷರಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. 
    ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ ಶಿವಕುಮಾರ್ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
    ಸೋಮವಾರ ನಡೆದ ಚುನಾವಣೆಯಲ್ಲಿ ಸಾಲ ಪಡೆಯದ ಕ್ಷೇತ್ರದ ನಿರ್ದೇಶಕ ಸ್ಥಾನದಿಂದ ಆಯ್ಕೆಯಾಗಿದ್ದ ಬಿ.ಕೆ ಶಿವಕುಮಾರ್ ಅಧ್ಯಕ್ಷರಾಗಿ ಮತ್ತು ತಾಲೂಕಿನ ವೀರಾಪುರ ಕ್ಷೇತ್ರದ ನಿರ್ದೇಶಕ ಸ್ಥಾನದಿಂದ ಆಯ್ಕೆಯಾಗಿದ್ದ ಮೀರಾಬಾಯಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ನಿರ್ದೇಶಕರಾದ ಎಸ್. ವಿರುಪಾಕ್ಷಪ್ಪ, ಎಸ್. ಕೃಷ್ಣಪ್ಪ, ಜಿ.ಎಂ ಚನ್ನಬಸಪ್ಪ, ಬಿ. ನಾಗೇಶ್, ಎಚ್.ಎಲ್ ಏಕಾಂತ, ಕೆ. ಶ್ರೀನಿವಾಸ್, ಎನ್.ಟಿ ಸಂಗನಾಥ, ಟಿ.ಎಸ್ ಮೌನೇಶ್ವರ, ಕೆ. ಕೇಶವಚಾರ್, ಬಿ. ಶಶಿಕಲಾ ಮತ್ತು ಸುಲೋಚನ ಸೇರಿದಂತೆ ಇನ್ನಿತರರು ಚುನಾವಣಾ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು. 
    ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಎನ್‌ಟಿಸಿ ನಾಗೇಶ್, ಬಸವಂತಪ್ಪ, ವೈ. ನಟರಾಜ್, ಎಂ.ಎಸ್ ರವಿ,  ಸೂಡಾ ಸದಸ್ಯ ಎಚ್. ರವಿಕುಮಾರ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಬಿ.ಕೆ ಶಿವಕುಮಾರ್ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ರವರ ಬೀಗರಾಗಿದ್ದು, ಸಹೋದರ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದಿಸಿದ್ದಾರೆ. 
 
ನಾನು ರೈತರ ಸಂಕಷ್ಟಗಳನ್ನು ಅರಿತುಕೊಂಡಿದ್ದೇನೆ. ಜಿಲ್ಲೆಯಲ್ಲಿರುವ ಲೋಕಸಭೆ ಹಾಗು ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸಹಕಾರ ಪಡೆದುಕೊಂಡು ಸರ್ಕಾರದ ಅನುದಾನ ಬಳಸಿಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಅಲ್ಲದೆ ಬ್ಯಾಂಕ್ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತೇನೆ. ಶಾಸಕ ಬಿ.ಕೆ ಸಂಗಮೇಶ್ವರ್, ಸಹಕಾರ ಸಚಿವ ಕೆ.ಎನ್ ರಾಜಣ್ಣ ಹಾಗು ಬ್ಯಾಂಕ್ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 
                                                               - ಬಿ.ಕೆ ಶಿವಕುಮಾರ್, ಅಧ್ಯಕ್ಷರು, ಪಿಎಲ್‌ಡಿ ಬ್ಯಾಂಕ್, ಭದ್ರಾವತಿ 
 

Sunday, January 12, 2025

ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ : ಓಂ ಕ್ರಿಕೆಟರ್‍ಸ್ ತಂಡಕ್ಕೆ ಮೊದಲ ಬಹುಮಾನ, ಟ್ರೋಫಿ

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭದ್ರಾವತಿ : ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆಟರ್‍ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ'ಯಲ್ಲಿ ನಗರದ ಓಂ ಕ್ರಿಕೆಟರ್‍ಸ್ ತಂಡ ಮೊದಲ ಬಹುಮಾನದೊಂದಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. 
    ಭಾನುವಾರ ಜರುಗಿದ ಅಂತಿಮ ಪಂದ್ಯಾದಲ್ಲಿ ಬೆಂಗಳೂರಿನ ಜೈ ಕರ್ನಾಟಕ ತಂಡ ವಿರುದ್ಧ ಓಂ ಕ್ರಿಕೆಟರ್‍ಸ್ ತಂಡ ಜಯಭೇರಿ ಭಾರಿಸಿತು. ಮೊದಲನೇ ಬಹುಮಾನ ೨.೫೦ ಲಕ್ಷ ರು. ನಗದು ಮತ್ತು ಟ್ರೋಫಿ ಪಡೆದುಕೊಂಡಿತು. ಎರಡನೇ ಬಹುಮಾನ ಜೈ ಕರ್ನಾಟಕ ತಂಡ ಎರಡನೇ ಬಹುಮಾನ ೧.೨೫ ಲಕ್ಷ ರು. ನಗದು ಮತ್ತು ಟ್ರೋಫಿ ತನ್ನದಾಗಿಸಿಕೊಂಡಿತು. ಮೂರನೇ ಬಹುಮಾನ ಸಚಿನ್ ಇಲೆವೆನ್ ಬೆಂಗಳೂರು ಮತ್ತು ಪ್ರಕೃತಿ ನ್ಯಾಶ್ ತಂಡಗಳು ಹಂಚಿಕೊಂಡಿವೆ. 
    ಚಲನಚಿತ್ರ ನಟ ವಸಿಷ್ಠ ಸಿಂಹ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಿದರು. ಓಂ ಕ್ರಿಕೆಟರ್‍ಸ್ ಕ್ಲಬ್ ಅಧ್ಯಕ್ಷ ಗಿರೀಶ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ಪ್ರಮುಖರಾದ ಕುಮಾರ್(ಮಾಸ್ಟರ್), ಅಭಿಲಾಷ್, ಚಂದ್ರಶೇಖರ್, ಶಿವು ಪಾಟೀಲ್, ಕೇಶವ, ಮಂಜುನಾಥ್ ಕೊಯ್ಲಿ ಮತ್ತು  ವೈ. ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.