Friday, February 7, 2025

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಜಾನಪದ ಕಲಾ ತಂಡದಿಂದ ಪ್ರದರ್ಶನ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಜಾನಪದ ಪರಿಷತ್ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಜಾನಪದ ಕಲಾವಿದರು ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಜಾನಪದ ಕಲಾವಿದರು ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 
    ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಮತ್ತು ಸಂಗಡಿಗರು  "ಗೀ ಗೀ ಪದ, ಸ್ವಚ್ಛ ಭಾರತ ಅಭಿಯಾನ ಗೀತೆ, ಗುರುವೇ ನಿನ್ನಾಟ ಬಲ್ಲವರ್ಯಾರು ಜಾನಪದ ಗೀತೆ ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.
    ತಂಡದಲ್ಲಿ ಕಲಾವಿದರಾದ ಚಂದ್ರಶೇಖರ ಚಕ್ರಸಾಲಿ, ನಿಸಾರ್‌ಖಾನ್, ದಯಾನಂದ್ ಸಾಗರ್, ಸೋಮಶೇಖರ್, ದೇವರಾಜ್ ಮತ್ತು ದೇವೇಂದ್ರ ಭಾಗವಹಿಸಿದ್ದರು.

ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್‌ರಿಗೆ ಕಾಂಗ್ರೆಸ್ ಹಿಂದುಳಿದ ಘಟಕದಿಂದ ಅಭಿನಂದನೆ

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಸೈಯದ್ ರಿಯಾಜ್‌ರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ವತಿಯಿಂದ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ : ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಸೈಯದ್ ರಿಯಾಜ್‌ರನ್ನು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ವತಿಯಿಂದ ಶುಕ್ರವಾರ ಸನ್ಮಾನಿಸಿ ಅಭಿನಂದಿಸಲಾಯಿತು. 
    ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ ನೇತೃತ್ವದಲ್ಲಿ ಸೈಯದ್ ರಿಯಾಜ್‌ರನ್ನು ಸನ್ಮಾನಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಉತ್ತಮ ಸೇವೆ ಸಲ್ಲಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಅಧಿಕಾರ ಲಭಿಸುವಂತಾಗಲಿ ಎಂದು ಅಭಿನಂದಿಸಲಾಯಿತು. 
  ಉಪಾಧ್ಯಕ್ಷ ಜಿ. ಜಯಕಾಂತ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಬೋಸ್ಲೆ, ಮುಖಂಡರಾದ ಕಾಂಗ್ರೆಸ್ ಕಲ್ಪನಳ್ಳಿ ಪ್ರವೀಣ್ ನಾಯ್ಕ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ರೇಷ್ಮಾ ಬಾನು, ಜಯಶೀಲ, ಅನುಸೂಯಮ್ಮ ಮತ್ತು ನೇತ್ರಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಭದ್ರಾವತಿ ಆಕಾಶವಾಣಿ ಕೇಂದ್ರ ಇಂದಿಗೂ ಜನಪ್ರಿಯತೆ ಉಳಿಸಿಕೊಂಡಿದೆ : ಡಾ. ಶ್ರೀಕಂಠ ಕೂಡಿಗೆ

ಭದ್ರಾವತಿ ಜೆಪಿಎಸ್ ಕಾಲೋನಿಯ ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಶುಕ್ರವಾರ ೬೦ನೇ ವರ್ಷದ ವಜ್ರಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ಕಳೆದ ೬೦ ವರ್ಷಗಳಲ್ಲಿ ನೂರಾರು ಉಪಯುಕ್ತ ಹಾಗು ಜನಪ್ರಿಯ ಕಾರ್ಯಕ್ರಮಗಳನ್ನು ನೀಡುವ ಮೂಲಕ ಭದ್ರಾವತಿ ಆಕಾಶವಾಣಿ ಕೇಂದ್ರ ಒಂದು ಕಾಲದಲ್ಲಿ ಶ್ರೋತೃಗಳ ಮನೆಮಾತಾಗಿತ್ತು. ತಾಂತ್ರಿಕವಾಗಿ ಸಾಕಷ್ಟು ಬೆಳವಣಿಗೆಗಳ ನಡುವೆಯೂ ತನ್ನ ತನವನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಕುವೆಂಪು ವಿ.ವಿ ವಿಶ್ರಾಂತ ಕುಲಸಚಿವ ಡಾ. ಶ್ರೀಕಂಠ ಕೂಡಿಗೆ ಪ್ರಶಂಸೆ ವ್ಯಕ್ತಪಡಿಸಿದರು. 
    ಅವರು ಶುಕ್ರವಾರ ನಗರದ ಜೆಪಿಎಸ್ ಕಾಲೋನಿಯ ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಉತ್ತಮ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಜನರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ ಅತ್ಯುತ್ತಮ ನೂರಾರು ಕಲಾವಿದರು ಕಾರ್ಯಕ್ರಮಗಳನ್ನು ನೀಡುವ ಮೂಲಕ ಇಂದಿಗೂ ಶ್ರೋತೃಗಳ ಮನದಾಳದಲ್ಲಿ ಉಳಿದುಕೊಂಡಿದ್ದಾರೆ. ಸಾವಿರಾರು ಕಲಾವಿದರು ಈ ಆಕಾಶವಾಣಿ ಕೇಂದ್ರದ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದಾರೆ ಎಂದರು. 
    ಬದಲಾದ ಕಾಲಘಟ್ಟದಲ್ಲಿ ಇದೀಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಕಷ್ಟು ಸವಾಲುಗಳನ್ನು ಆಕಾಶವಾಣಿ ಕೇಂದ್ರ ಎದುರಿಸುವಂತಾಗಿದೆ. ಈ ನಡುವೆಯೂ ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಂಡು ಮುನ್ನಡೆಯುತ್ತಿರುವುದು ಬಹಳ ಸಂತೋಷದ ಸಂಗತಿಯಾಗಿದೆ ಎಂದರು. 
    ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ  ಡಾ.ಕೆ.ಸಿ ಶಶಿಧರ್ ಮಾತನಾಡಿ, ದೇಶದಲ್ಲಿ ಕೃಷಿಗೆ ಸಂಬಂಧಿಸಿದಂತೆ ರೈತಬಂಧುಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿ ಸ್ವಾವಲಂಬನೆ ಬದುಕಿಗೆ ಬಹುದೊಡ್ಡ ಕೊಡುಗೆ ಈ ಆಕಾಶವಾಣಿ ಕೇಂದ್ರ ನೀಡಿದೆ ಎಂದರು. 
    ಕುವೆಂಪು ವಿಶ್ವವಿದ್ಯಾಲಯದ ಉಪಕುಲಸಚಿವ ಡಾ.ಕೆ.ಆರ್.ಮಂಜುನಾಥ್ ಮಾತನಾಡಿ, ಎಲೆಮರೆಕಾಯಿಯಂತಿರುವ ಎಷ್ಟೋ ಪ್ರತಿಭೆಗಳಿಗೆ ಈ ಆಕಾಶವಾಣಿ ಕೇಂದ್ರ ವೇದಿಕೆಯನ್ನು ಕೊಟ್ಟು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವುದರಲ್ಲಿ ಬಹುದೊಡ್ಡ ಕೊಡುಗೆಯನ್ನು ನೀಡಿದೆ ಎಂದರು.   
    ಇನ್ನು ಕೆಲವೇ ದಿನಗಳಲ್ಲಿ ಆಕಾಶವಾಣಿಯ ಪ್ರಸಾರಣ ಸಾಮರ್ಥ್ಯ, ಶಿವಮೊಗ್ಗದಲ್ಲಿ ಸ್ಥಾಪನೆಯಾಗುತ್ತಿರುವ ೧೦ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ ಟ್ರಾನ್ಸ್‌ಮೀಟರ್‌ನಿಂದಾಗಿ ಹೆಚ್ಚು ವ್ಯಾಪ್ತಿಯನ್ನು ತಲುಪಲಿದೆ. ಈ ಕಾರ್ಯದಲ್ಲಿ ಸಂಸದ ಬಿ.ವೈ.ರಾಘವೇಂದ್ರರವರ ಶ್ರಮ ಹೆಚ್ಚಿನದ್ದಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಭದ್ರಾವತಿ ಮತ್ತು ಚಿತ್ರದುರ್ಗ ಆಕಾಶವಾಣಿ ಕೇಂದ್ರಗಳ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್ ಭಟ್ ತಿಳಿಸಿದರು. 
    ಅಂಬೇಡ್ಕರ್ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ. ನೆಲ್ಲಿಕಟ್ಟೆ ಸಿದ್ದೇಶ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಿ. ಗೋಪಿನಾಥ್, ಪಿ.ಇ.ಎಸ್ ಶಿಕ್ಷಣ ಸಂಸ್ಥೆಗಳ ಸಮೂಹ ಆಡಳಿತ ಮಂಡಳಿ ಮುಖ್ಯ ಸಂಯೋಜಕ ಡಾ. ಆರ್. ನಾಗರಾಜ್, ಶಿವಮೊಗ್ಗ ಐಎಂಎ ಕಾರ್ಯದರ್ಶಿ ಹಾಗು ಸುಬ್ಬಯ್ಯ ಸಮೂಹ ಸಂಸ್ಥೆ ಸಿಇಒ ಡಾ. ವಿನಯ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನಂತರ ಕಥಾ ಸ್ವರ್ಧೆಯಲ್ಲಿ ವಿಜೇತರಾದ ದೀಪ್ತಿ ಭದ್ರಾವತಿ, ಶ್ರೇಯ ಕೆ.ಎಂ ಹಾಗು ಸಂತೆಬೆನ್ನೂರು ಫೈಜ್ ನಟರಾಜ್ ಮತ್ತು ಪಾಕಸ್ಪರ್ಧೆಯಲ್ಲಿ ವಿಜೇತರಾದ ಗಿರಿಜಾ ಹೆಗಡೆ, ಎಂ.ಎನ್ ಸುಶೀಲ, ಡಾ. ಮೈತ್ರೇಯಿ ಅವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು. 
    ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮತ್ತು  ಮುಖ್ಯಮಹಾಪ್ರಬಂಧಕ (ಸ್ಥಾವರ) ಕೆ.ಎಸ್ ಸುರೇಶ್,  ಮಹಾಪ್ರಭಂಧಕ (ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಾನವ ಸಂಪನ್ಮೂಲ) ಎಲ್.ಪ್ರವೀಣ್‌ಕುಮಾರ್,  ಮಹಾಪ್ರಬಂಧಕ(ಪರಿಸರ ವಿಭಾಗ) ಮುತ್ತಣ್ಣ ಸುಬ್ಬರಾವ್, ಹಾಗು  ಸಹಾಯಕ ಮಹಾಪ್ರಬಂಧಕ ವಿಕಾಸ್ ಬಷೀರ್ ಮತ್ತು ಇತರ ಸಿಬ್ಬಂದಿವರ್ಗದವರು, ಭದ್ರಾವತಿ ಆಕಾಶವಾಣಿ ಕೇಂದ್ರದ ೬೦ ವರ್ಷದ ಸವಿನೆನಪಿಗೆ ೬೦ ಸಸಿಗಳನ್ನು ವಿತರಿಸಿದರು. 
    ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದವರಿಗೆ ಮತ್ತು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. 
    ರಾಜ್ಯದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ ಕೇಳುಗರು ತಮ್ಮ ಅಭಿಪ್ರಾಯಗಳನ್ನು ಹಚ್ಚಿಕೊಂಡರು. ಶೋಭ ಮತ್ತು ತಂಡದವರು ಪ್ರಾರ್ಥಿಸಿದರು.   ಕಾರ್ಯಕ್ರಮ ಅಧಿಕಾರಿ ಎಸ್.ಎಲ್ ರಮೇಶ್‌ಪ್ರಸಾದ್ ಸ್ವಾಗತಿಸಿದರು. ಡಾ.ಗಣೇಶ್ ಆರ್ ಕೆಂಚನಾಳ ಪ್ರಾಸ್ತವಿಕ ನುಡಿಗಳನ್ನಾಡಿದರು. ಶಕೀಲ್ ಅಹ್ಮದ್ ಮತ್ತು ಮೀನ ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಕಾಶವಾಣಿಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.  
    ಶಿವಮೊಗ್ಗ ರೋಟರಿ ವಿಜಯ್ ಕುಮಾರ್, ಸಾಹಿತಿಗಳಾದ ಬಸವರಾಜ ನೆಲ್ಲಿಸರ, ಜೆ.ಎನ್ ಬಸವರಾಜಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಭದ್ರಾವತಿ ಜೆಪಿಎಸ್ ಕಾಲೋನಿಯ ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ೬೦ನೇ ವರ್ಷದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಕುವೆಂಪು ವಿ.ವಿ ವಿಶ್ರಾಂತ ಕುಲಸಚಿವ ಡಾ. ಶ್ರೀಕಂಠ ಕೂಡಿಗೆ ಮಾತನಾಡಿದರು. 

Thursday, February 6, 2025

ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಜ.೭ರಂದು ವಜ್ರ ಮಹೋತ್ಸವ ಸಂಭ್ರಮಾಚರಣೆ

ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಇದೀಗ ೬೦ರ ಸಂಭ್ರಮ. ಶುಕ್ರವಾರ ವಜ್ರ ಮಹೋತ್ಸವ ಅದ್ದೂರಿ ಆಚರಣೆಗೆ ಸಿದ್ದತೆಗಳು ನಡೆದಿವೆ.
ಭದ್ರಾವತಿ : ಇಲ್ಲಿನ ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಇದೀಗ ೬೦ರ ಸಂಭ್ರಮ. ಶುಕ್ರವಾರ ವಜ್ರ ಮಹೋತ್ಸವ ಅದ್ದೂರಿ ಆಚರಣೆಗೆ ಸಿದ್ದತೆಗಳು ನಡೆದಿವೆ. 
ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಆಡಳಿತ ಕಛೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಕಾಶವಾಣಿ ಕೇಂದ್ರವನ್ನು ವಿದ್ಯುತ್ ದೀಪಗಳಿಂದ, ಬಣ್ಣ ಬಣ್ಣದ ರಂಗೋಲಿ ಚಿತ್ತಾರಗಳಿಂದ, ತಳಿರುತೋರಣಗಳಿಂದ ಅಲಂಕರಿಸಲಾಗಿದೆ. ಅಧಿಕಾರಿಗಳು, ಸಿಬ್ಬಂದಿ ವರ್ಗದವರಲ್ಲಿ ಸಂತಸ ಮನೆ ಮಾಡಿದೆ. 
ಭದ್ರಾವತಿ ಆಕಾಶವಾಣಿ ಕೇಂದ್ರ : 
೦೭.೦೨.೧೯೬೫ರಲ್ಲಿ ಆರಂಭಗೊಂಡ ಭದ್ರಾವತಿ ಆಕಾಶವಾಣಿ ಕೇಂದ್ರ ಆರಂಭದಲ್ಲಿ ಸುಣ್ಣದಹಳ್ಳಿಯಲ್ಲಿ ೬೭೫ ಕಿಲೋ ಹರ್ಟ್ಜ್ ತರಂಗಾಂತರ ಸಾಮರ್ಥ್ಯದ ಒಂದು ಟ್ರಾನ್ಸ್‌ಮಿಟರ್ ಒಳಗೊಂಡಿದೆ. ಅಲ್ಲದೆ ಜೆಪಿಎಸ್ ಕಾಲೋನಿಯಲ್ಲಿ ಒಂದು ಸ್ಟುಡಿಯೋ ಮತ್ತು ಆಡಳಿತ ಕಛೇರಿಯನ್ನು ಹೊಂದಿದೆ.  ಅತಿ ಎತ್ತರದ ಒಂದು ಟವರ್ ಕೂಡ ಹೊಂದಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ, ಹಾಸನ್, ನಾರ್ತ್ ಕೆನರಾ, ಉಡುಪಿ ಮತ್ತು ತುಮಕೂರು ನಗರಗಳಲ್ಲಿ ಕ್ಷೇತ್ರ ವ್ಯಾಪ್ತಿಯನ್ನು ಹೊಂದಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತಿವೆ. ಸುಮಾರು ೩೦ ರಿಂದ ೪೦ ಲಕ್ಷ ಶ್ರೋತೃಗಳನ್ನು ತಲುಪುತ್ತಿದೆ. 
ಸುಮಾರು ೫ ದಶಕಗಳ ನಂತರ ಎಫ್‌ಎಂ ಕೇಂದ್ರ ಆರಂಭಗೊಂಡಿದೆ. ಪ್ರಸ್ತುತ ಎಂ.ಎಫ್ ೧೦೩.೫ ಎಂಎಚ್‌ಝಡ್ ತರಂಗಾಂತರದಲ್ಲಿ ಪ್ರಸಾರಗೊಳ್ಳುತ್ತಿದೆ. ಅಲ್ಲದೆ ಎಂಡಬ್ಲ್ಯೂ ಸಹ ೬೭೫ ಕೆಎಚ್‌ಝಡ್ ತರಂಗಾಂತರದಲ್ಲಿ ಪ್ರಸಾರಗೊಳ್ಳುತ್ತಿದೆ. 

ರಥಸಪ್ತಮಿ : ಭದ್ರಾ ನದಿಯಲ್ಲಿ ಮಾಘ ಮಾಸದ ಸ್ನಾನ

ಭದ್ರಾವತಿಯಲ್ಲಿ ರಥಸಪ್ತಮಿ ದಿನ ಬೆಳಗಿನಜಾವ ಮಂಜುಮುಸುಕಿದ ವಾತವರಣದಲ್ಲಿ ಭದ್ರಾನದಿಯಲ್ಲಿ ಹಳೇನಗರ ಭಾಗದ ನಿವಾಸಿಗಳು ಸಾಮೂಹಿಕವಾಗಿ ಮಾಘಮಾಸದ ಸ್ನಾನ ಮಾಡಿದರು.
    ಭದ್ರಾವತಿ : ರಥಸಪ್ತಮಿ ದಿನ ಬೆಳಗಿನಜಾವ ಮಂಜುಮುಸುಕಿದ ವಾತವರಣದಲ್ಲಿ ಭದ್ರಾನದಿಯಲ್ಲಿ ಹಳೇನಗರ ಭಾಗದ ನಿವಾಸಿಗಳು ಸಾಮೂಹಿಕವಾಗಿ ಮಾಘಮಾಸದ ಸ್ನಾನ ಮಾಡಿದರು.
    ಬೆಳಿಗ್ಗೆ ಹಳೇನಗರದ ಶ್ರೀವಾದಿರಾಜಸ್ವಾಮಿಗಳ, ಶ್ರೀರಾಘವೇಂದ್ರಸ್ವಾಮಿಗಳ ಶ್ರೀ ಮಠದಿಂದ ರಾಯರ ರಜತ ಪಾದುಕೆ ಹಿಡಿದು ಭದ್ರಾನದಿಯಲ್ಲಿರುವ ಶ್ರೀ ಸಂಗಮೇಶ್ವರ ಸ್ವಾಮಿ ಮಂಟಪದ ಸಮೀಪಕ್ಕೆ ತೆರಳಿದರು. ನಂತರ ನದಿಯಲ್ಲಿ ಪಂಡಿತ ಗೋಪಾಲಾಚಾರ್‌ರವರ ನೇತೃತ್ವದಲ್ಲಿ ಸಮೂಹಿಕ ಸಂಕಲ್ಪದೊಂದಿಗೆ ಗಂಗೆ, ಯಮುನೆ, ಸರಸ್ವತಿ, ಭದ್ರಾ, ತುಂಗಾ ಸೇರಿದಂತೆ ಸಮಸ್ತ ಪುಣ್ಯ ನದಿಗಳ ಸ್ಮರಣೆಮಾಡಿ ಸ್ನಾನ ಮಾಡಿದರು. 
    ಪಂಡಿತ ಗೋಪಾಲಚಾರ್ ಅವರ ಪೌರೋಹಿತ್ಯಾ ಹಾಗೂ ನೇತೃತ್ವದಲ್ಲಿ ಪುರುಷರು ದೇವತಾರ್ಘ್ಯ, ಸೂರ್ಯಾರ್ಘ್ಯ, ದೇವತರ್ಪಣ, ಋಷಿತರ್ಪಣ ಮತ್ತು ಪಿತೃತರ್ಪಣಗಳನ್ನು ಅರ್ಪಿಸಿದರು. ಮಹಿಳೆಯರು ಆರತಿ ಬೆಳಗಿ ಗಂಗಾಪೂಜೆ ನೆರವೇರಿಸಿದರು. ಉಳಿದಂತೆ ಅನೇಕರು  ಶ್ರೀ ಸಂಗಮೇಶ್ವರ ಮಂಟಪದಲ್ಲಿರುವ ಗಣಪತಿ, ಶಿವಲಿಂಗ, ನಾಗದೇವತೆ, ನಂದಿಗೆ ಅಭಿಷೇಕ, ಪೂಜೆ ಸಲ್ಲಿಸಿದರು.
    ಪಂಡಿತ ಶ್ರೀನಿವಾಸಾಚಾರ್, ಸತ್ಯನಾರಾಯಣಚಾರ್, ನಿರಂಜನಾಚಾರ್, ಜಿ. ರಮಾಕಾಂತ, ಜಯತೀರ್ಥ, ರಾಘವೇಂದ್ರಚಾರ್, ವೆಂಕಟೇಶ್, ಶೇಷಗಿರಿ, ಅನಿಲ, ಶ್ರೀಕರ, ಪ್ರಮೋದ, ರಾಘವೇಂದ್ರ ತಂತ್ರಿ, ಉಪಾಧ್ಯಾಯ, ಸುಮಾರಾಘವೇಂದ್ರ, ಶುಭಾಗುರುರಾಜ್, ಸುಜಾತ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು. 

ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ವ ನವಮಿ

ಭದ್ರಾವತಿ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಮಧ್ವ ನವಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರಗಿದವು. ರಾಜಬೀದಿಯಲ್ಲಿ ಮಧ್ವಾಚಾರ್ಯರ ಕೃತಿಯೊಂದಿಗೆ ರಥದಲ್ಲಿ ಮೆರವಣಿಗೆ ನಡೆಸಲಾಯಿತು. 
    ಭದ್ರಾವತಿ : ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಮಧ್ವ ನವಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರಗಿದವು.
    ಬೆಳಗ್ಗೆ ೬ ಗಂಟೆಗೆ ನಿರ್ಮಾಲ್ಯ, ೭ ಗಂಟೆಗೆ ಅಭಿಷೇಕ, ನಂತರ ೧೦ ಗಂಟೆಗೆ ರಾಜಬೀದಿಯಲ್ಲಿ ಮಧ್ವಾಚಾರ್ಯರ ಕೃತಿಯೊಂದಿಗೆ ರಥದಲ್ಲಿ ಮೆರವಣಿಗೆ ನಡೆಸಲಾಯಿತು. 
    ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದವರೆಗೆ ರಥೋತ್ಸವ ಜರಗಿತು. ನಂತರ ಮಧ್ವಾಚಾರ್ಯರ ಕುರಿತು ವಿವಿಧ ಭಜನಾಮಂಡಳಿಗಳಿಂದ ಭಜನೆ ನಡೆಯಿತು.  ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ನೆರವೇರಿತು. 
    ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರುಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ಖಜಾಂಚಿ ನಿರಂಜನಾಚಾರ್ಯ ಹಾಗೂ ಶುಭ ಗುರುರಾಜ್, ವಿದ್ಯಾನಂದ ನಾಯಕ್ ಹಾಗೂ ಸತ್ಯನಾರಾಯಣಚಾರ್, ಪ್ರಧಾನ ಅರ್ಚಕ ಮಾಧುರಾವ್, ಜಯತೀರ್ಥ, ಸುಧೀಂದ್ರ, ವೇದಬ್ರಹ್ಮ ಶ್ರೀ ಗೋಪಾಲಕೃಷ್ಣ ಆಚಾರ್ ಹಾಗೂ ಶ್ರೀನಿವಾಸಚಾರ್ ಮತ್ತು ವಿವಿಧ ಭಜನಾ ಮಂಡಳಿಗಳ ಸದಸ್ಯರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.  

ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಮೆಚ್ಚುಗೆಗೆ ಪಾತ್ರವಾದ ಡೊಳ್ಳು ಕುಣಿತ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭದ್ರಾವತಿ ಸುಲ್ತಾನ್ ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ನೇತೃತ್ವದ ಅಂತರಾಷ್ಟ್ರೀಯ ಜಾನಪದ ಕಲಾವಿದ ಗಿರೀಶ್ ಕುಮಾರ್ ಮತ್ತು ಸಂಗಡಿಗರ ಡೊಳ್ಳು ಕುಣಿತ ತಂಡ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.
    ಭದ್ರಾವತಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಅಂತರಾಷ್ಟ್ರೀಯ ಜಾನಪದ ಕಲಾವಿದ ಗಿರೀಶ್ ಕುಮಾರ್ ಮತ್ತು ಸಂಗಡಿಗರ ಡೊಳ್ಳು ಕುಣಿತ ತಂಡ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.
    ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ನೇತೃತ್ವದಲ್ಲಿ ಹೊಸನಗರ ಮಾದಾಪುರ ಗ್ರಾಮದ ಶ್ರೀ ಶನಿಪರಮೇಶ್ವರ ಯುವಕ ಸಂಘದ ಜಾನಪದ ಕಲಾವಿದರಾದ ಗಿರೀಶ್ ಕುಮಾರ್, ಎಂ.ಎಸ್ ಸೋಮಶೇಖರ್, ಎಂ.ಎಸ್ ಮಂಜುನಾಥ್, ಎಂ.ಎಸ್ ದೇವರಾಜ್, ಎಂ.ಎಂ ಹುಚ್ಚರಾಯಪ್ಪ, ಎ.ವಿ ಚಂದ್ರಪ್ಪ, ಎಂ.ಡಿ ಲಕ್ಷ್ಮಣಪ್ಪ, ಎಂ.ಎಲ್ ಸುಧೀರ್ ಕುಮಾರ್, ಹರೀಶ್ ಕುಮಾರ್, ಎಂ.ಪಿ ತ್ಯಾಗರಾಜ್, ಎಂ.ಎಸ್ ಮಂಜುನಾಥ್, ಎಂ.ಬಿ ವಿನಯ್, ಎಂ.ಬಿ ಪ್ರಶಾಂತ್, ಎಂ.ಬಿ ದೇವರಾಜ್, ನಿಸ್ಸಾರ್ ಖಾನ್ ಕೆಂಚಾಯಿಕೊಪ್ಪ ಮತ್ತು ಎಂ.ಆರ್ ರೇವಣಪ್ಪ ಸೇರಿದಂತೆ ಒಟ್ಟು ೧೬ ಜನರ ತಂಡ ರಾಜ್ಯವನ್ನು ಪ್ರತಿನಿಧಿಸಿತ್ತು. ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾಗಿದೆ. 
    ಈ ತಂಡ ಡೊಳ್ಳು ಕುಣಿತ ಮಾತ್ರವಲ್ಲದೆ ಜಾನಪದ ಕಲಾ ಪ್ರಕಾರಗಳಾದ ಸುಗ್ಗಿ ಕುಣಿತ, ಕೋಲಾಟ, ಗೀಗಿ ಪದ, ಲಾವಣಿ, ಭಜನೆ ಮತ್ತು ಸಣ್ಣಾಟ ನಿರಂತರವಾಗಿ ಮಾಡಿಕೊಂಡು ಬಂದಿದ್ದು, ರಾಜ್ಯದ ಪ್ರಮುಖ ಜಾನಪದ ಕಲಾತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.