ಎಸ್. ಕುಮಾರ್
ಭದ್ರಾವತಿ : ತಾಲೂಕಿನ ಬೆಳ್ಳಿಗೆರೆ, ಉದಯನಗರ ಮತ್ತು ಬದನೆಹಾಳ್ ಗ್ರಾಮಗಳ ಹೊಳೆಹೊನ್ನೂರು ಹೋಬಳಿ ರೈತರ ಹಿತ ರಕ್ಷಣಾ ಸಮಿತಿ ವತಿಯಿಂದ ಅರಣ್ಯ ಮತ್ತು ಕಂದಾಯ ಇಲಾಖೆಗಳ ರೈತ ವಿರೋಧಿ ನೀತಿಯನ್ನು ಖಂಡಿಸಿ ಫೆ. ೨೦ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರೈತರು ಕಳೆದ ಸುಮಾರು ೬೫-೭೦ ವರ್ಷಗಳಿಂದ ಸಾಗುವಳಿ ಪತ್ರ ಪಡೆದು ಪಹಣಿ ಮತ್ತು ಇತರೆ ಎಲ್ಲಾ ದಾಖಲೆಗಳನ್ನು ಹೊಂದಿದ್ದರೂ ಸಹ ರೈತರ ಜಮೀನುಗಳಿಂದ ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೂ ಮೊದಲು ಬೆಳಿಗ್ಗೆ ೧೦.೩೦ಕ್ಕೆ ರಂಗಪ್ಪ ವೃತ್ತದಿಂದ ತಾಲೂಕು ಕಛೇರಿವರೆಗೂ ಪಾದಯಾತ್ರೆ ನಡೆಯಲಿದೆ. ರೈತರ ಹೋರಾಟಕ್ಕೆ ಬ್ಲಾಕ್ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಕೋರಿದ್ದಾರೆ.