ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ೮೨ನೇ ಜನ್ಮದಿನಾಚರಣೆ ಅಂಗವಾಗಿ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
ಭದ್ರಾವತಿ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ೮೨ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಬಿಜೆಪಿ ತಾಲೂಕು ಮಂಡಲ ವತಿಯಿಂದ ದಣಿವರಿಯದ ಜನ ನಾಯಕ, ರೈತ ಬಂದು ಬಿ.ಎಸ್ ಯಡಿಯೂರಪ್ಪನವರ ಜನ್ಮದಿನಾಚರಣೆ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮೂಲಕ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರು ಮಾತನಾಡಿ, ಯಡಿಯೂರಪ್ಪನವರು ತಮ್ಮ ಅಧಿಕಾರದ ಅವಧಿಯಲ್ಲಿ ಮಕ್ಕಳು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು, ದೀನದಲಿತರು ಹಾಗು ರೈತರಿಗಾಗಿ ಜಾರಿಗೆ ತಂದಿರುವ ಜಾರಿಗೆ ತಂದಿರುವ ಹಲವಾರು ಯೋಜನೆಗಳು ಇಂದಿಗೂ ಮಾದರಿಯಾಗಿವೆ. ಅವರು ನಡೆದು ಬಂದ ದಾರಿ, ಸರ್ವಜನಾಂಗದವರ ಏಳಿಗಾಗಿ ನಡೆಸಿರುವ ಹೋರಾಟಗಳು ಎಲ್ಲರಿಗೂ ಮಾರ್ಗದರ್ಶಕವಾಗಿವೆ ಎಂದು ಬಣ್ಣಿಸಿದರು.
ಭದ್ರಾವತಿ ಹೊಸಮನೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ವತಿಯಿಂದ ಬಿ.ಎಸ್ ಯಡಿಯೂರಪ್ಪನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.
ಇದಕ್ಕೂ ಹೊಸಮನೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ಜಿ. ಆನಂದಕುಮಾರ್, ಎಚ್. ತೀರ್ಥಯ್ಯ, ಜೆ. ಮೂರ್ತಿ, ಕಾ.ರಾ ನಾಗರಾಜ್, ರಾಜಶೇಖರ್ ಉಪ್ಪಾರ, ಸತೀಶ್ ಕುಮಾರ್, ಹನುಮಂತನಾಯ್ಕ, ಅಣ್ಣಪ್ಪ, ಬಿ.ಎಸ್ ಶ್ರೀನಾಥ್, ರಾಜು, ಸುಬ್ರಮಣಿ, ರಘುರಾವ್, ಹರೀಶ್, ನರೇಂದ್ರ, ಧನುಷ್ ಬೋಸ್ಲೆ, ನಂದೀಶ್, ಶರವಣ, ಮಂಜುಳಾ, ಅನುಷಾ, ಶಕುಂತಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.