ಮೊದಲ ಬಾರಿಗೆ ಉಪಾಧ್ಯಕ್ಷರಾಗಿ ಮುಸ್ಲಿಂ ಸಮುದಾಯದ ನೂರು ಬೇಗ್
ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ(ರ್ಯಾಮ್ಕೋಸ್)ದ ಅಧ್ಯಕ್ಷರಾಗಿ ೨ನೇ ಬಾರಿಗೆ ಎಚ್.ಎಲ್ ಷಡಾಕ್ಷರಿ ಹಾಗು ರ್ಯಾಮ್ಕೋಸ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ ನೂರ್ ಬೇಗ್ ಉಪಾಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿ : ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘ(ರ್ಯಾಮ್ಕೋಸ್)ದ ಅಧ್ಯಕ್ಷರಾಗಿ ೨ನೇ ಬಾರಿಗೆ ಎಚ್.ಎಲ್ ಷಡಾಕ್ಷರಿ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
೧೫ ನಿರ್ದೇಶಕರ ಸ್ಥಾನ ಹೊಂದಿರುವ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಲ್ ಷಡಾಕ್ಷರಿ ಮತ್ತು ಮಂಜುನಾಥೇಶ್ವರ ನಾಮಪತ್ರ ಸಲ್ಲಿಸಿದ್ದರು. ಅಂತಿಮ ಕ್ಷಣದಲ್ಲಿ ಮಂಜುನಾಥೇಶ್ವರ ಅವರು ನಾಮಪತ್ರ ಹಿಂಪಡೆದ ಹಿನ್ನಲೆಯಲ್ಲಿ ಷಡಾಕ್ಷರಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ರ್ಯಾಮ್ ಕೋಸ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಮುಸ್ಲಿಂ ಸಮುದಾಯದ(ಬಿಸಿಎಂ-ಎ) ನೂರ್ ಬೇಗ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಮಾಜಿ ಉಪಾಧ್ಯಕ್ಷರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿರುವ ಷಡಾಕ್ಷರಿಯವರು ಈ ಹಿಂದೆ ೨೦೧೫-೧೬ರ ಸಾಲಿನಲ್ಲಿ ೧ ವರ್ಷದ ಅವಧಿಗೆ ರ್ಯಾಮ್ಕೋಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಚುನಾವಣಾ ಅಧಿಕಾರಿಯಾಗಿ ಸಿಡಿಓ ಶಾಂತರಾಜ್ ಕಾರ್ಯನಿರ್ವಹಿಸಿದರು. ಮುಖ್ಯ ವ್ಯವಸ್ಥಾಪಕ ಎಂ. ವಿರುಪಾಕ್ಷಪ್ಪ ಉಪಸ್ಥಿತರಿದ್ದರು. ನಿರ್ದೇಶಕರಾದ ಬಿ.ಜಿ ಜಗದೀಶ್ಗೌಡ, ಟಿ. ಅಣ್ಣಪ್ಪ, ಆರ್. ಶ್ರೀನಿವಾಸ್, ಎಂ.ಎಸ್ ಬಸವರಾಜಪ್ಪ, ಎ.ಜಿ ವಿಜಯಕುಮಾರ್, ಲಲಿತಮ್ಮ, ಎನ್.ಪಿ ಅನುಸೂಯಮ್ಮ, ಕೆ.ವಿ ರುದ್ರಪ್ಪ, ಸಿ.ಹನುಮಂತಪ್ಪ, ಎ.ಎಂ ಹರ್ಷ, ಎಚ್.ಎಸ್ ಸಂಜೀವಕುಮಾರ್ ಮತ್ತು ಎಸ್.ಎಂ ಹಾಲೇಶಪ್ಪ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ವಿದ್ಯುತ್ ಇಲಾಖೆ ನಿರ್ವಹಣಾ ಸಮಿತಿ ಸದಸ್ಯ ಬಸವಂತಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ದಶರಥ ಗಿರಿ, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಮುಸ್ವೀರ್ ಬಾಷಾ, ಪಂಚ ಗ್ಯಾರೆಂಟಿಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಟಿಎಪಿಸಿಎಂಎಸ್ ಸದಸ್ಯ ಲೋಕೇಶ್, ಮುಖಂಡರಾದ ಜೆಬಿಟಿ ಬಾಬು, ಗೌಡರಹಳ್ಳಿ ಶೌಕತ್ ಆಲಿ ಸೇರಿದಂತೆ ಇನ್ನಿತರರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದ್ದಾರೆ.