ಭದ್ರಾವತಿ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಕಚೇರಿ ಉದ್ಘಾಟಿಸಿದರು.
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು.
ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೂತನ ಕಚೇರಿ ಉದ್ಘಾಟಿಸಿದರು. ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ ಅಧ್ಯಕ್ಷತೆ ವಹಿಸಿದ್ದರು.
ನಗರದ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಬಳ್ಳಾಪುರ ಮಾತನಾಡಿ, ಸಲಹಾ ಸಮಿತಿ ರಚನೆಯಿಂದ ಗ್ರಾಹಕರ ಕುಂದುಕೊರತೆಗಳನ್ನು ತಕ್ಷಣ ಬಗೆಹರಿಸಬಹುದಾಗಿದೆ. ಅಲ್ಲದೆ ಗ್ರಾಹಕರಿಗೆ ಸಮಿತಿ ಹೆಚ್ಚಿನ ಸಹಕಾರಿಯಾಗಲಿದೆ ಎಂದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಮೆಸ್ಕಾಂ ಗ್ರಾಮಾಂತರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಮ್ಮದ್ ಮುನಾಫ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಸದಸ್ಯರಾದ ಚನ್ನಪ್ಪ, ಬಿ.ಟಿ ನಾಗರಾಜ್, ಮಾವಿನಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್, ಮುಖಂಡರಾದ ಪ್ರಕಾಶ್ರಾವ್, ಸಿ. ಜಯಪ್ಪ, sಸುರೇಶ್ ವರ್ಮಾ, ವಿಜಯಲಕ್ಷ್ಮೀ, ಮಂಜುನಾಥ್ ಸೇರಿದಂತೆ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿಯಲ್ಲಿ ತಲಾ ೧೨ ಸದಸ್ಯರಂತೆ ಒಟ್ಟು ೪೬ ಸದಸ್ಯರಿದ್ದು, ಈ ಪೈಕಿ ೫ ಸದಸ್ಯರು ಮುಖ್ಯ ಸಮಿತಿಯಲ್ಲಿದ್ದಾರೆ.
ಭದ್ರಾವತಿ ಮೆಸ್ಕಾಂ ನಗರ ಉಪ ವಿಭಾಗ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ರಚಿಸಲಾದ ಗ್ರಾಹಕರ ಸಲಾಹ ಸಮಿತಿ ಸಭೆ ಹಾಗೂ ಕಚೇರಿ ಉದ್ಘಾಟನಾ ಸಮಾರಂಭ ನಗರದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿಯಲ್ಲಿ ಗುರುವಾರ ನಡೆಯಿತು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಮೆಸ್ಕಾಂ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.