ಜಿಲ್ಲೆಯಾದ್ಯಂತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋ ರಕ್ಷಣೆಯಲ್ಲಿ ತೊಡಗಿದ್ದು, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೪ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ: ಜಿಲ್ಲೆಯಾದ್ಯಂತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಗೋ ರಕ್ಷಣೆಯಲ್ಲಿ ತೊಡಗಿದ್ದು, ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೪ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ೪ ಮಲ್ನಾಡ್ ಗಿಡ್ಡ ತಳಿಯ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಗೋವುಗಳನ್ನು ರಕ್ಷಿಸಿ ಗೋ ಶಾಲೆಗೆ ಬಿಡಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆಂದು ವೇದಿಕೆ ಮುಖಂಡರು ಮಾಹಿತಿ ನೀಡಿದ್ದಾರೆ.
ಕ್ಷೇತ್ರದಲ್ಲಿ ಇತ್ತೀಚೆಗೆ ಅಪಾರ ಪ್ರಮಾಣದಲ್ಲಿ ಗೋವುಗಳ ಮೂಳೆ ಪತ್ತೆ ಪತ್ತೆಯಾಗಿದ್ದು, ಸರ್ಕಾರ ಗೋ ನಿಷೇಧ ಕಾಯ್ಕೆ ಜಾರಿಗೆ ತಂದಿದ್ದರೂ ಸಹ ನಿರಂತರವಾಗಿ ಗೋವು ಹತ್ಯೆ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದವು.