ಅಕ್ರಮವಾಗಿ ನಿರ್ಮಿಸಿಕೊಂಡಿರುವ ಕಟ್ಟಡ ಸ್ಥಳೀಯರ ಅನುಕೂಲಕ್ಕೆ ಬಿಟ್ಟು ಕೊಡಿ
ಭದ್ರಾವತಿ ನಗರದ ಜನ್ನಾಪುರ ಫಿಲ್ಟರ್ ಶೆಡ್ ನಾಗರಿಕರು ಮತ್ತು ಭಕ್ತರಿಂದ ಶ್ರೀ ಅಂತರಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವ ಏ.೧೫ ರಂದು ಆಚರಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭದ್ರಾವತಿ: ನಗರದ ಜನ್ನಾಪುರ ಫಿಲ್ಟರ್ ಶೆಡ್ ನಾಗರಿಕರು ಮತ್ತು ಭಕ್ತರಿಂದ ಶ್ರೀ ಅಂತರಘಟ್ಟಮ್ಮ ದೇವಿಯ ಜಾತ್ರಾ ಮಹೋತ್ಸವ ಏ.೧೫ ರಂದು ಆಚರಿಸಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಿಳಿಸಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷ ಸಹ ಜಾತ್ರಾ ಮಹೋತ್ಸವ ಆಚರಿಸಲಾಗುತ್ತಿದ್ದು ಬೆಳಗ್ಗೆ ೧೧ ಗಂಟೆಗೆ ಆರಂಭಗೊಳ್ಳುವ ಜಾತ್ರೆ ಸಂಜೆ ೫ ಗಂಟೆಗೆ ದೇವಿಯ ಮಹಾಮಂಗಳಾರತಿ ನಡೆಸುವ ಮೂಲಕ ಸಂಪನ್ನಗೊಳ್ಳಲಿದೆ ಎಂದರು.
ಇಲ್ಲಿನ ನಿವಾಸಿಗಳು ಬಹಳ ವರ್ಷಗಳಿಂದ ಜಾತ್ರಾ ಮಹೋತ್ಸವ ಆಚರಿಸಿಕೊಂಡು ಬರುತ್ತಿದ್ದು, ಆದರೆ ಕೆಲವರು ದೇವಸ್ಥಾನದ ಅಭಿವೃದ್ಧಿ ವಿಚಾರ ಹಾಗೂ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕುತಂತ್ರ ನಡೆಸುತ್ತಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ದೇವಸ್ಥಾನ ಸಮೀಪದಲ್ಲಿರುವ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಇದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಸರ್ಕಾರಿ ಜಾಗದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದ ಅನುದಾನ ಪಡೆದು ಆಕ್ರಮವಾಗಿ ಕಟ್ಟಡ ನಿರ್ಮಿಸಿಕೊಂಡು ಕೆಲವೇ ಕೆಲವು ಜನರು ಸೀಮಿತಗೊಂಡಂತೆ ಟ್ರಸ್ಟ್ ರಚಿಸಿಕೊಂಡು ಅಕ್ರಮ ವೆಸಗುತ್ತಿದ್ದಾರೆ ಎಂದು ಆರೋಪಿಸಿದರು.
ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತಾಲೂಕು ಆಡಳಿತ ಅಥವಾ ನಗರಸಭೆ ಅಥವಾ ವಿಐಎಸ್ಎಲ್ ಆಡಳಿತ ವಶಕ್ಕೆ ಪಡೆದುಕೊಂಡು ಸ್ಥಳೀಯ ನಿವಾಸಿಗಳ ಉಪಯೋಗಕ್ಕೆ ಅನುಕೂಲ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದರು.
ಫಿಲ್ಟರ್ಶೆಡ್ನಲ್ಲಿ ವಾಸಿಸುತ್ತಿರುವವರು ಕಡುಬಡವರಾಗಿದ್ದು, ಹೆಚ್ಚಿನ ಹಣ ವ್ಯಯಮಾಡಿ ಸಭೆ, ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲು ಅಶಕ್ತರಾಗಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಯಾವುದೇ ಕಟ್ಟಡಗಳು ಇರುವುದಿಲ್ಲ. ಈ ಹಿನ್ನಲೆಯಲ್ಲಿ ಈ ಕಟ್ಟಡವನ್ನು ಬಿಡುಕೊಡುವ ಮೂಲಕ ಸ್ಥಳೀಯರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು. ಪತ್ರಿಕಾಘೋಷ್ಠಿಯಲ್ಲಿ ದಿವ್ಯಶ್ರೀ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.