Tuesday, April 29, 2025

ದೇವಸ್ಥಾನಗಳಿಗೆ ಮಹತ್ವದ ಸ್ಥಾನಮಾನಗಳಿವೆ, ಪುಣ್ಯದ ಕಾರ್ಯಗಳಲ್ಲಿ ಕೈಜೋಡಿಸಿ : ಶ್ರೀ ಸಾಯಿನಾಥ ಸ್ವಾಮೀಜಿ

ಭದ್ರಾವತಿ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು. 
ಭದ್ರಾವತಿ : ವೈದಿಕರ ನೆರವಿನೊಂದಿಗೆ ಧಾರ್ಮಿಕ ಆಚರಣೆಗಳ ಮೂಲಕ ಭಕ್ತರು ತಮ್ಮ ಇಸ್ಟಾರ್ಥಗಳನ್ನು ದೇವರ ಬಳಿ ಪ್ರಾರ್ಥಿಸಲು ದೇವಾಲಯಗಳು ಸಹಕಾರಿಯಾಗಿವೆ. ಈ ಹಿನ್ನಲೆಯಲ್ಲಿ ದೇವಸ್ಥಾನಗಳಿಗೆ ಮಹತ್ವದ ಸ್ಥಾನಮಾನಗಳಿವೆ ಎಂದು ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಹೇಳಿದರು. 
ಶ್ರೀಗಳು ಮಂಗಳವಾರ ನಗರದ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತರಿಗೆ ಆಶೀರ್ವಚನ ನೀಡಿದರು. 
ದೇವಸ್ಥಾನಗಳು ಪುಣ್ಯದ ಸ್ಥಳ, ದೇವರ ಆರಾಧನೆಯ ಸ್ಥಳ. ಇದನ್ನು ನಾವುಗಳು ಅರಿತು ಪುಣ್ಯದ ಕಾರ್ಯಗಳಲ್ಲಿ ಕೈಜೋಡಿಸಬೇಕು. ಇಂತಹ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ನಡೆಯಬೇಕು ಎಂದರು. 


ಭದ್ರಾವತಿ ನ್ಯೂ ಕಾಲೋನಿ (ಹುಡ್‌ಯಾರ್ಡ್ ಶೆಡ್) ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ನೂತನ ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. 
        ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಮುರುಗೇಶ್ ಸ್ವಾಮೀಜಿ ಉಪಸ್ಥಿತರಿದ್ದು, ಭಕ್ತರಿಗೆ ಆಶೀರ್ವದಿಸಿದರು. ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ದೇವಸ್ಥಾನ ಸೇವಾ ಸಮಿತಿ ಪದಾಧಿಕಾರಿಗಳು, ದಾನಿಗಳು, ಚುನಾಯಿತ ಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.  
    ಗೋಪುರ ಉದ್ಘಾಟನೆ ಹಾಗು ಕಲಶ ಪ್ರತಿಷ್ಠಾಪನೆ ಅಂಗವಾಗಿ ಬೆಳಿಗ್ಗೆ ದೇವರಿಗೆ ಕಲಾತತ್ವ ಹೋಮ, ಅಭಿಷೇಕ, ಮಹಾಮಂಗಳಾರತಿ, ಶಿಖರ ಪ್ರತಿಷ್ಠೆ, ಅಧಿವಾಸ ಹೋಮ, ನವಕಲಶ ಸ್ಥಾಪನೆ ಕಾರ್ಯಕ್ರಮಗಳು ಜರುಗಿದವು.  
    ಸೇವಾಕರ್ತರು, ಸುರಗೀತೋಪು, ಜೆಪಿಎಸ್ ಕಾಲೋನಿ, ನ್ಯೂ ಕಾಲೋನಿ, ನ್ಯೂಟೌನ್, ಜನ್ನಾಪುರ, ಕಾಗದನಗರ, ಬಾಲಭಾರತಿ, ಬೆಣ್ಣೆಕೃಷ್ಣ ಸರ್ಕಲ್, ಆಂಜನೇಯ ಅಗ್ರಹಾರ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಪಾಲ್ಗೊಂಡಿದ್ದರು. 

Monday, April 28, 2025

ಲಯನ್ಸ್ ಪದಾಧಿಕಾರಿಗಳಿಗೆ ಜಿಲ್ಲಾ ಗವರ್ನರ್ ಅಭಿನಂದಿಸಿ ಸನ್ಮಾನ

ಭದ್ರಾವತಿ ಲಯನ್ಸ್ ಕ್ಲಬ್ ಪ್ರಸ್ತುತ ಪದಾಧಿಕಾರಿಗಳ ಅವಧಿ ಮುಕ್ತಾಯಗೊಳ್ಳತ್ತಿದ್ದು, ಈ ಹಿನ್ನಲೆಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್(೩೧೭-ಸಿ) ಮಹಮದ್ ಹನೀಫ್ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು. 
    ಭದ್ರಾವತಿ : ನಗರದ ಲಯನ್ಸ್ ಕ್ಲಬ್ ಪ್ರಸ್ತುತ ಪದಾಧಿಕಾರಿಗಳ ಅವಧಿ ಮುಕ್ತಾಯಗೊಳ್ಳತ್ತಿದ್ದು, ಈ ಹಿನ್ನಲೆಯಲ್ಲಿ ಲಯನ್ಸ್ ಜಿಲ್ಲಾ ಗವರ್ನರ್(೩೧೭-ಸಿ) ಮಹಮದ್ ಹನೀಫ್ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಿದರು. 
    ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಮೂರ್ತಿ ನಾಯ್ಡು, ಕಾರ್ಯದರ್ಶಿ ಎನ್. ಶಿವಕುಮಾರ್ ಮತ್ತು ಖಜಾಂಚಿ ರಾಜ್‌ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ರಾಮಮೂರ್ತಿ ನಾಯ್ಡು ನೇತೃತ್ವದ ತಂಡ ಹಲವಾರು ಸೇವಾಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿದ್ದು, ಎಲ್ಲರ ಮೆಚ್ಚಿಗೆಗೆ ಪಾತ್ರವಾಗಿದೆ. ಭವಿಷ್ಯದ ಕ್ಲಬ್ ಸದಸ್ಯರಿಗೆ ಮಾದರಿಯಾಗಿದೆ. 
    ಜಿಲ್ಲಾ ಗವರ್ನರ್ ಮಹಮದ್ ಹನೀಫ್, ಪ್ರಮುಖರಾದ ಬಿ. ದಿವಾಕರ ಶೆಟ್ಟಿ, ಬಿ.ಎಸ್ ಮಹೇಶ್ ಕುಮಾರ್, ಡಾ. ರವೀಂದ್ರನಾಥ ಕೋಠಿ, ಎಚ್.ಬಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಪಹಲ್ಗಾಮ್ ಉಗ್ರರ ಕೃತ್ಯಕ್ಕೆ ಕ್ರೈಸ್ತರಿಂದ ಖಂಡನೆ : ಜಗದ್ಗುರು ಪೋಪ್ ಫ್ರಾನ್ಸಿಸ್, ಹತ್ಯೆಗೊಳಗಾದ ಪ್ರವಾಸಿಗರಿಗೆ ಸಂತಾಪ

ಭದ್ರಾವತಿಯಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾ ಹಾಗು ಸಂಯುಕ್ತ ಕ್ರೈಸ್ತ ಬಾಂಧವರಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸಲಾಯಿತು. 
    ಭದ್ರಾವತಿ: ಅಖಿಲ ಭಾರತ ಕ್ರೈಸ್ತ ಮಹಾಸಭಾ ಹಾಗು ಸಂಯುಕ್ತ ಕ್ರೈಸ್ತ ಬಾಂಧವರಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸಲಾಯಿತು. 
    ನಗರದ ಅಂಡರ್ ಬ್ರಿಡ್ಜ್, ಬಿ.ಎಚ್ ರಸ್ತೆ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಕ್ರೈಸ್ತ ಬಾಂಧವರು ಮೇಣದ ಬತ್ತಿ ಹಚ್ಚಿ ಉಗ್ರರ ಕೃತ್ಯ ಖಂಡಿಸಿ ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಹಾಗೂ ನಿಧನ ಹೊಂದಿದ ಕ್ರೈಸ್ತ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರಿಗೆ ಸಂತಾಪ ಸೂಚಿಸುವ ಮೂಲಕ ತಕ್ಷಣ ಸರ್ಕಾರ ಉಗ್ರರರನ್ನು ಪತ್ತೆ ಮಾಡಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಸಿದರು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ಎಚ್ಚರವಹಿಸುವ ನಿಟ್ಟಿನಲ್ಲಿ ಗಡಿಯಲ್ಲಿ ಹೆಚ್ಚಿನ ಭದ್ರತೆ ಅಳವಡಿಸುಂತೆ ಆಗ್ರಹಿಸಿದರು. 
    ಸಂಯುಕ್ತ ಕ್ರೈಸ್ತ ಸಂಘದ ಅಧ್ಯಕ್ಷ ಸೆಲ್ವರಾಜ್, ಅಖಿಲ ಭಾರತ ಕ್ರೈಸ್ತ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ನಾಯ್ಕ, ರೈಮಂಡ್, ಜೋಸೆಫ್, ಸ್ಟೀಫನ್ ಕ್ರಿಸ್ಪೋಫರ್ ಸೇರಿದಂತೆ ಇನ್ನಿತರರು ಪಾಲ್ಗೊಂಡು ಮಾತನಾಡಿದರು. 

ಪಹಲ್ಗಾಮ್ ಕೃತ್ಯ ಖಂಡಿಸಿ ಭಾವಸಾರ ಕ್ಷತ್ರಿಯ ಸಮಾಜದಿಂದ ಪಂಜಿನ ಮೆರವಣಿಗೆ

ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹಾಗು ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಸಂತಾಪ ಸೂಚಿಸಿ ಭದ್ರಾವತಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.  
    ಭದ್ರಾವತಿ; ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಖಂಡಿಸಿ ಹಾಗು ಹತ್ಯೆಗೊಳಗಾದ ಅಮಾಯಕ ಪ್ರವಾಸಿಗರಿಗೆ ಸಂತಾಪ ಸೂಚಿಸಿ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.  
    ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಬಳಿ ಆರಂಭಗೊಂಡ ಮೆರವಣಿಗೆ ಹಾಲಪ್ಪ ವೃತ್ತ, ಮಾಧವಚಾರ್ ವೃತ್ತದ ಮೂಲಕ ರಂಗಪ್ಪ ವೃತ್ತ ತಲುಪಿತು. ಮೆರವಣಿಗೆಯಲ್ಲಿ ಉಗ್ರರ ಕೃತ್ಯವನ್ನು ಖಂಡಿಸಲಾಯಿತು.  
    ಸಮಾಜದ ಹಿರಿಯ ಮುಖಂಡ ಡಿ.ಟಿ ಶ್ರೀಧರ್, ಸಮಾಜದ ಅಧ್ಯಕ್ಷ ರಾಘವೇಂದ್ರರಾವ್,  ಎಚ್.ಎನ್ ಯೋಗೇಶ್ ಕುಮಾರ್,  ಡಿ.ಆರ್ ಕಿರಣ್, ಜಿ.ಎಸ್ ಯೋಗೇಶ್, ವಿಠಲನಾಥ್, ವಿಶ್ವನಾಥ್ ಮಾಸ್ಟರ್, ಭಾವಸಾರ ಯುವಕ ಸಂಘದ ಸದಸ್ಯರು, ಮಹಿಳಾ ಮಂಡಳಿ ಪ್ರಮುಖರಾದ ಕಲ್ಪನಾ, ಭಾವಸಾರ ವಿಜನ್ ಅಧ್ಯಕ್ಷೆ ಶಿಲ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

ಅನಿರೀಕ್ಷಿತ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ

ಭದ್ರಾವತಿ ಹಳೇನಗರದ ಭೂತನಗುಡಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಮನೆಯೊಂದರ ಗೊಡೆ ಕುಸಿದು ಬಿದ್ದಿರುವುದು.
    ಭದ್ರಾವತಿ : ಕೆಲವು ದಿನಗಳಿಂದ ಅನಿರೀಕ್ಷಿತ ಗಾಳಿ ಮಳೆಗೆ ಒಂದೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿರುವ ಘಟನೆಗಳು ನಡೆದಿವೆ. ಮತ್ತೊಂದೆಡೆ ಮನೆಯ ಗೋಡೆಗಳು ಕುಸಿದು ಬಿದ್ದಿದ್ದು, ಭಾನುವಾರ ರಾತ್ರಿ ಸುರಿದ ಮಳೆಗೆ ನಗರಸಭೆ ವ್ಯಾಪ್ತಿಯ ಭೂತನಗುಡಿಯಲ್ಲಿ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ.  
    ನಗರಸಭೆ ಕಛೇರಿ ಹಿಂಭಾಗದ ವಾರ್ಡ್.೧೩ರ ಭೂತನಗುಡಿ ಶ್ರೀ ಶನೇಶ್ಷರ ಸ್ವಾಮಿ ದೇವಸ್ಥಾನದ ಪಕ್ಕದ ರಸ್ತೆಯಲ್ಲಿರುವ ಪ್ರಶಾಂತ್ ಎಂಬುವವರ ಮನೆ ಗೋಡೆ ಕುಸಿದು ಬಿದ್ದದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ರಾತ್ರಿ ಸುಮಾರು ೧ ತಾಸು ಸುರಿದ ಮಳೆಯಿಂದಾಗಿ ಮನೆಯ ಗೋಡೆ ಶಿಥಿಲಗೊಂಡು ಬಿದ್ದಿದೆ. 
    ಘಟನೆ ಸಂಬಂಧ ಮಾಹಿತಿ ನೀಡಿದರೂ ಸಹ ನಗರಸಭೆ ಅಧಿಕಾರಿಗಳಾಗಲಿ, ತಾಲೂಕು ಆಡಳಿತದ ಅಧಿಕಾರಿಗಳಾಗಲಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ. 
    ವಾರ್ಡ್ ಸದಸ್ಯೆ ಅನುಸುಧಾಮೋಹನ್ ಈ ವಿಚಾರ ಶಾಸಕರ ಗಮನಕ್ಕೂ ತಂದಿದ್ದಾರೆ. ಪ್ರಶಾಂತ್ ಟೈಲರ್ ವೃತ್ತಿ ನಡೆಸುತ್ತಿದ್ದು, ಈ ಮನೆಯಲ್ಲಿ ೩-೪ ಮಂದಿ ವಾಸವಿದ್ದಾರೆ. ಮನೆ ಗೋಡೆಯನ್ನು ತಕ್ಷಣ ದುರಸ್ತಿಗೊಳಿಸುವ ಕಾರ್ಯ ಕೈಗೊಳ್ಳಬೇಕಾಗಿದೆ.   

ಪಹಲ್ಗಾಮ್ ಘಟನೆಯಲ್ಲಿ ಹತ್ಯೆಯಾದವರಿಗೆ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ

ಉಗ್ರರಿಗೆ ನೆರವಾಗುವವರನ್ನು ಹುಡುಕಿ ಕಠಿಣ ಶಿಕ್ಷೆ ವಿಧಿಸಿ, ಗಡಿ ಭದ್ರತೆ ಹೆಚ್ಚಿಸಿ 

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ಭದ್ರಾವತಿ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ ಸೂಚಿಸುವ ಮೂಲಕ ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಉಗ್ರರರಿಗೆ ನೆರವಾಗುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು. 
    ಭದ್ರಾವತಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಸಾವನ್ನಪ್ಪಿದ ಪ್ರವಾಸಿಗರಿಗೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ ಸೂಚಿಸುವ ಮೂಲಕ ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಉಗ್ರರರಿಗೆ ನೆರವಾಗುವವರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು. 
    ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿಯವರ ನೇತೃತ್ವದಲ್ಲಿ ವೇದಿಕೆ ಪದಾಧಿಕಾರಿಗಳು ಹಾಗು ಸದಸ್ಯರು ಪ್ರತಿಭಟಿಸಿ ಉಗ್ರರ ಕೃತ್ಯವನ್ನು ಖಂಡಿಸಿದರು. ಇದೊಂದು ಹೇಯ ಕೃತ್ಯವಾಗಿದ್ದು, ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಈ ಕೃತ್ಯದಲ್ಲಿ ಹತ್ಯೆಯಾದ ಒಟ್ಟು ೨೬ ಮಂದಿಗೂ ವೇದಿಕೆ ಸಂತಾಪ ಸೂಚಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸುತ್ತದೆ ಎಂದರು. 
    ದೇಶದ ಒಳಗೆ ಇದ್ದು ದೇಶದ ಹೊರಗಿನಿಂದ ಬರುವ ಉಗ್ರರಿಗೆ ನೆರವಾಗುವವರನ್ನು ಹುಡುಕಿ ಅವರಿಗೆ ಕಠಿಣವಾದ ಶಿಕ್ಷೆ ವಿಧಿಸಬೇಕು. ಇದರಿಂದ ಭವಿಷ್ಯದಲ್ಲಿ ಯಾರು ಸಹ ಈ ರೀತಿಯ ಕೃತ್ಯಗಳನ್ನು ನಡೆಸುವವರಿಗೆ ನೆರವಾಗುದಿಲ್ಲ. ದೇಶದ ಗಡಿ ಭದ್ರತೆ ಮತ್ತಷ್ಟು ಹೆಚ್ಚಿಸಬೇಕಾಗಿದೆ. ಉಗ್ರಹ ಒಳನುಸುಳುವುದನ್ನು ನಿಗ್ರಹಿಸಬೇಕೆಂದು ಆಗ್ರಹಿಸಿದರು. 
    ವೇದಿಕೆ ಪ್ರಮುಖರಾದ ಉಪಾಧ್ಯಕ್ಷೆ ಸುಮಾ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಪ್ರತಿಭಾ .ಆರ್, ಸಹ ಕಾರ್ಯದರ್ಶಿ ಶೀಲಾ ರವಿ, ಖಜಾಂಚಿ ಭಾರತಿ ಕುಮಾರ್, ಕುಸುಮಾ, ಕೋಕಿಲಾ, ಮಲ್ಲಿಕಾಂಬ, ಪ್ರಕಾಶ್ ರಾವ್, ಮುರುಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

Sunday, April 27, 2025

ಏ.೩೦ರಂದು ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ



    ಭದ್ರಾವತಿ : ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏ.೩೦ರಂದು ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಹಳೇನಗರದ ಕನಕಮಂಟಪದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ. 
    ಬೆಳಿಗ್ಗೆ ೯ ಗಂಟೆಗೆ ನಗರದ ಅಂಡರ್‌ಬ್ರಿಡ್ಜ್ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ಶ್ರೀ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹಾಗು ಕಲಾ ತಂಡಗಳೊಂದಿ ಮೆರವಣಿಗೆ ನಡೆಯಲಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಿ.ಎಸ್ ಅರುಣ್, ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ವೀರಶೈವ ಸಮಾಜ(ನಗರ) ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ(ಗ್ರಾಮಾಂತರ) ಅಧ್ಯಕ್ಷೆ ಸಾಕಮ್ಮ ಮಹೇಶ್, ತಹಸೀಲ್ದಾರ್ ಪರುಸಪ್ಪ ಕುರುಬರ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಮತ್ತು ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
    ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಲಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.