ಸರ್ಕಾರಕ್ಕೆ ಜಂಗಮ ಸಮಾಜದಿಂದ ಮನವಿ
ಪ್ರತಿ ಮನೆ ಮನೆಗೆ ತೆರಳಿ ಜಾತಿಗಣತಿ ಸಮೀಕ್ಷೆ ನಡೆಸುವಂತೆ ಸಮೀಕ್ಷೆ ನಡೆಸುವವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜ ಭದ್ರಾವತಿ ತಾಲೂಕು ನಗರ ಘಟಕ ಸೋಮವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಭದ್ರಾವತಿ : ಪ್ರತಿ ಮನೆ ಮನೆಗೆ ತೆರಳಿ ಜಾತಿಗಣತಿ ಸಮೀಕ್ಷೆ ನಡೆಸುವಂತೆ ಸಮೀಕ್ಷೆ ನಡೆಸುವವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜ ತಾಲೂಕು ನಗರ ಘಟಕ ಸೋಮವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ನಗರ ಘಟಕದ ಜಂಗಮ ಸಮಾಜದ ಅಧ್ಯಕ್ಷ ಎಸ್. ಅಡವೀಶಯ್ಯ ನೇತೃತ್ವದಲ್ಲಿ ಉಪತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಮನವಿ ಸಲ್ಲಿಸಲಾಗಿದ್ದು, ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ದಾಸ್ರವರ ಸದಸ್ಯ ಆಯೋಗದಿಂದ ನ್ಯಾಯಯುತವಾಗಿ ರಾಜ್ಯದ ೧೦೧ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಿ ಆ ಜಾತಿಗಳಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಮುಂದಾಗಿರುವುದು ಸಂತಸದ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಮೇ.೫ರಿಂದ ಜಾತಿಗಣತಿ ಸಮೀಕ್ಷೆ ನಡೆಸುವರೆಂದು ತಿಳಿದು ಬಂದಿದೆ.
ಜಂಗಮ ಸಮಾಜ ಪರಿಶಿಷ್ಟ ಜಾತಿಗೆ ಸಂಬಂಧಿಸಿದ್ದು, ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿ ಆ.ನಂ.೧೯(೧)ರಲ್ಲಿ ಬೇಡ ಜಂಗಮ ಎಂದು ನಮೂದಿಸಲಾಗಿದೆ. ಬೇಡ ಜಂಗಮರ ಕುಲಕಸುಬು ಧಾರ್ಮಿಕ ಭಿಕ್ಷಾಟನೆಯಾಗಿದ್ದು, ತಲತಲಾಂತರದಿಂದ ಈ ವೃತ್ತಿಯನ್ನು ಮಾಡುತ್ತಾ ಬಂದಿದ್ದಾರೆ. ಸಮೀಕ್ಷೆ ಸಮಯದಲ್ಲಿ ವೃತ್ತಿ ಧರ್ಮವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿದ್ದು, ಸಮೀಕ್ಷೆ ನಡೆಸುವವರಿಗೆ ಮನೆ, ಮನೆಗೆ ಭೇಟಿ ನೀಡಲು ಸೂಕ್ತ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.
ಜಂಗಮ ಸಮಾಜದ ನಗರ ಘಟಕದ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.