Friday, May 9, 2025

ವಿಜೃಂಭಣೆಯಿಂದ ಜರುಗಿದ ಶ್ರೀ ಚೌಡೇಶ್ವರಿ ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 
    ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೪.೩೦ ರಿಂದ ೬.೩೦ರ ವರೆಗೆ ಗಂಗಾಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಮೂರ್ತಿ ಕ್ಷೇಮ ಮಹಾಪ್ರತಿಷ್ಠೆ ಹಾಗು ಮಹಾಪೂರ್ಣಾಹುತಿ ಹಾಗು ಅಭಿಜಿತ್ ಲಗ್ನದ ಶುಭ ಮುಹೂರ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ ಕಳಸಾರೋಹಣ ಮತ್ತು ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಮುರಳಿಧರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 


ಭದ್ರಾವತಿ ಕಾಗದನಗರ ೭ನೇ ವಾರ್ಡ್ ಶ್ರೀ ನಾಗರಕಟ್ಟೆ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ತರಳಿಮಠ ಅವರ ನೇತೃತ್ವದಲ್ಲಿ ಅಮ್ಮನವರ ಮೂಲ ವಿಗ್ರಹ ಹಾಗು ಹೊರಭಾಗದಲ್ಲಿ ಉತ್ಸವ ಮೂರ್ತಿ ಮತ್ತು ಇನ್ನಿತರ ದೇವಾನುದೇವತೆಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 
    ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸುರಗಿತೋಪು, ಕಾಗದನಗರ, ನ್ಯೂಟೌನ್, ಜೆಪಿಎಸ್ ಕಾಲೋನಿ, ಬಾಲಭಾರತಿ, ಆಂಜನೇಯ ಅಗ್ರಹಾರ, ಜನ್ನಾಪುರ, ಉಜ್ಜನಿಪುರ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು. 
    ದೇವಸ್ಥಾನ ಟ್ರಸ್ಟ್ ಗೌರವಾಧ್ಯಕ್ಷ ಎಂ. ರಾಮಕೃಷ್ಣಪ್ಪ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಎನ್. ಉಮೇಶ್, ಪ್ರಧಾನ ಕಾರ್ಯದರ್ಶಿ ಕೆ. ಪರಮೇಶ್, ಸಹ ಕಾರ್ಯದರ್ಶಿ ತಿಮ್ಮಪ್ಪ ಬಾನು ತೇಜ, ಖಜಾಂಚಿ ಶ್ಯಾಮ್ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಜಿ.ಆರ್ ಸಾಗರ್, ವೈ. ಗೌತಮ್, ಟ್ರಸ್ಟಿಗಳಾದ ಅವಿನಾಶ್, ವಿ. ಯತಿರಾಜ್, ಚೇತನ್‌ಕುಮಾರ್, ಚಂದ್ರಶೇಖರ್, ಕರಿಯಪ್ಪ, ಯಲ್ಲಪ್ಪ ಮತ್ತು ಸಿ. ಕಾಶಿ ಹಾಗು ಸೇವಾಕರ್ತರು, ಊರಿನ ಪ್ರಮುಖರು ಉಪಸ್ಥಿತರಿದ್ದರು. 
 

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Thursday, May 8, 2025

ಯಶಸ್ವಿಯಾಗಿ ಜರುಗಿದ ಸರ್.ಎಂ.ವಿ ಸರ್ಕಾರಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

ಭದ್ರಾವತಿ ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಎಸ್‌ಎಸ್ ಘಟಕ-೧ ಮತ್ತು ಘಟಕ-೨ರ ಸಹಯೋಗದೊಂದಿಗೆ ಶಿವಮೊಗ್ಗ ತಾಲೂಕಿನ ಕಾಟಿಕೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದವರೆಗೆ ವಾರ್ಷಿಕ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ : ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್‌ಎಸ್‌ಎಸ್ ಘಟಕ-೧ ಮತ್ತು ಘಟಕ-೨ರ ಸಹಯೋಗದೊಂದಿಗೆ ಶಿವಮೊಗ್ಗ ತಾಲೂಕಿನ ಕಾಟಿಕೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದವರೆಗೆ ವಾರ್ಷಿಕ ಶಿಬಿರ ಆಯೋಜಿಸಲಾಗಿತ್ತು.
ಮೇ.೨ರಿಂದ ಜರುಗಿದ ವಾರ್ಷಿಕ ಶಿಬಿರದಲ್ಲಿ ಶ್ರಮದಾನ, ವ್ಯಕ್ತಿತ್ವ ವಿಕಸನ, ಉಚಿತ ಕಾನೂನು ಅರಿವು-ನೆರವು, ಕೃಷಿ ಸಮಸ್ಯೆ ಸವಾಲುಗಳು, ಶಾಲಾ ಆಟದ ಮೈದಾನ ಸ್ವಚ್ಛತೆ, ರಸ್ತೆ ನಿರ್ಮಾಣ ಮತ್ತು ರಸ್ತೆ ಸುರಕ್ಷತಾ ಕ್ರಮಗಳು, ಯೋಗ ಮತ್ತು ಧ್ಯಾನ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆ, ಸಂಸ್ಕೃತಿ, ಸಮುದಾಯ ಜೀವನ ಮೌಲ್ಯಗಳ ಅರಿವು, ಅಗ್ನಿ ದುರಂತಗಳ ಬಗ್ಗೆ ಅರಿವು ಮತ್ತು ಜಾಗೃತಿ, ದೇವಸ್ಥಾನ ಆವರಣದ ಸ್ವಚ್ಛತೆ, ರಸ್ತೆ ಮತ್ತು ಚರಂಡಿ ಸ್ವಚ್ಛತೆ, ನಿರ್ಮಾಣ, ಉಚಿತ ಜಾನುವಾರುಗಳ ಲಸಿಕೆ/ತಪಾಸಣೆ, ಆರೋಗ್ಯ ಮಾಹಿತಿ ಮತ್ತು ಗ್ರಾಮ ಸಮೀಕ್ಷೆ ಕಾರ್ಯಕ್ರಮಗಳು ಜರುಗಿದವು. 
`ಸಂವಿಧಾನ ಮತ್ತು ಮಹಿಳಾ ಸಂರಕ್ಷಣೆ ಹಕ್ಕುಗಳು' ಎಂಬ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ನಗರದ ನ್ಯಾಯವಾದಿ ಎಂ. ಶಿವಕುಮಾರ್ ಮಾತನಾಡಿದರು. ಪ್ರತಿಯೊಬ್ಬರು ಸಂವಿಧಾನದ ಮಹತ್ವ ಅರಿತು ಅದನ್ನು ಗೌರವಿಸಬೇಕು. ವಿಶೇಷವಾಗಿ ಮಹಿಳಾ ಸಂರಕ್ಷಣೆ ಹಕ್ಕುಗಳನ್ನು ತಿಳಿದುಕೊಳ್ಳಬೇಕೆಂದರು. 
ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳೇರ, ಶಿಬಿರಾಧಿಕಾರಿಗಳಾದ ಕೆ.ಎಂ ಮಹೇಶ್ ಕುಮಾರ್, ಎಂ. ಸತೀಶ್, ಸಹ ಶಿಬಿರಾಧಿಕಾರಿ ಎಸ್.ಕೆ ಶಂಕರಯಾದವ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಬೋಧಕ/ಬೋಧಕೇತರ ವರ್ಗ, ಅತಿಥಿ ಉಪನ್ಯಾಸಕರ ವರ್ಗ, ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಹಿರಿಯ ವಿದ್ಯಾರ್ಥಿಗಳು ಮತ್ತು ಕಾಟಿಕೆರೆ ಗ್ರಾಮಸ್ಥರು. ಶಿಬಿರದಲ್ಲಿ ಪಾಲ್ಗೊಂಡಿದ್ದರು. 

ಮಧು ಲ್ಯಾಬ್‌ನಿಂದ ಪೌರ ಕಾರ್ಮಿಕರಿಗೆ ಗೌರವಾರ್ಪಣೆ

ಭದ್ರಾವತಿ ನಗರದ ರಂಗಪ್ಪ ವೃತ್ತದ ಮಧು ಲ್ಯಾಬೋರೇಟರಿ ವತಿಯಿಂದ ಪೌರ ಕಾರ್ಮಿಕರನ್ನು ಗೌರವಿಸುವ ಮೂಲಕ ವಿಶ್ವ ಕಾರ್ಮಿಕರ ದಿನಾಚರಣೆ ವಿನೂತನವಾಗಿ ಆಚರಿಸಲಾಯಿತು. 
    ಭದ್ರಾವತಿ : ನಗರದ ರಂಗಪ್ಪ ವೃತ್ತದಲ್ಲಿರುವ ಮಧು ಲ್ಯಾಬೋರೇಟರಿ ವತಿಯಿಂದ ಪೌರ ಕಾರ್ಮಿಕರನ್ನು ಗೌರವಿಸುವ ಮೂಲಕ ವಿಶ್ವ ಕಾರ್ಮಿಕರ ದಿನಾಚರಣೆ ವಿನೂತನವಾಗಿ ಆಚರಿಸಲಾಯಿತು. 
    ರಂಗಪ್ಪ ವೃತ್ತ ಮತ್ತು ಕೇಶವಪುರ ಬಡಾವಣೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಗರಸಭೆ ಪೌರ ಕಾರ್ಮಿಕರಾದ ಎಸ್. ಶರವಣ, ಲಕ್ಷ್ಮಮ್ಮ ಮತ್ತು ತಿರುಮಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲ್ಯಾಬ್ ಮಾಲೀಕ ಎಸ್.ಆರ್ ಜಗದೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ಸಮಾಜದ ಸ್ವಾಸ್ಥ್ಯ, ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡುವ, ಜನರ ಆರೋಗ್ಯ ರಕ್ಷಿಸುವ ನಿಜವಾದ ವೈದ್ಯರು. ಜಗತ್ತು ಸುಖ ನಿದ್ರೆಯಲ್ಲಿದ್ದಾಗ ಎದ್ದು ತಮ್ಮ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರ ಕಾರ್ಯ ಅಭಿನಂದನೀಯ ಎಂದರು. 
    ಪೌರ ಕಾಮಿಕರ ಕುಟುಂಬ ವರ್ಗ ಉತ್ತಮ ಗುಣಮಟ್ಟದ ಜೀವನ ನಡೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ಸಮಾಜದ ಪ್ರತಿಯೊಬ್ಬ ನಾಗರಿಕ ಪೌರ ಕಾರ್ಮಿಕರನ್ನು ಗೌರವದಿಂದ ಕಾಣುವಂತಾಗಬೇಕೆಂದರು.
    ಕಾರ್ಯಕ್ರಮದಲ್ಲಿ ಮಧು ಸಾರಥಿ, ಎಚ್. ಲೀಲಾವತಿ, ಎಂ. ದೀಪಿಕಾ, ಚಿರಾಗ್ ಸಾರಥಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಾರ್ವಜನಿಕರಿಗೆ ಸಿಹಿ ಹಂಚಿಕೆ ಮಾಡಲಾಯಿತು.

ತಾಯ್ತನಕ್ಕಿಂತ ತಾಯಿ ಹೃದಯ ಅತ್ಯಂತ ಮುಖ್ಯ : ಬಿ.ಕೆ ಮಾಲಕ್ಕ

ಭದ್ರಾವತಿ ನ್ಯೂಟೌನ್ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ತಾಯಂದಿರ ದಿನ ಕಾರ್ಯಕ್ರಮದಲ್ಲಿ ಪತ್ರಕರ್ತ ಸುಭಾಷ್ ರಾವ್ ಸಿಂಧ್ಯಾ ಹಾಗು ಸವಿತಾ ದಂಪತಿ ಪುತ್ರಿ ಎಸ್. ಹರ್ಷಿತಾ ಅವರ ಭರತನಾಟ್ಯ ಮನಸೂರೆಗೊಳಿಸಿತು. ವಿಶ್ವವಿದ್ಯಾಲಯದ ವತಿಯಿಂದ ಹರ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ : ತಾಯ್ತನಕ್ಕಿಂತ ತಾಯಿ ಹೃದಯ ಅತ್ಯಂತ ಮುಖ್ಯವಾಗಿದ್ದು, ಜಗತ್ತಿಗೆ ತಾಯಿ ಪ್ರೀತಿ ಹಂಚಿದ ಮದರ್ ತೆರೇಸಾ ಹಾಗೂ ಮರಗಳನ್ನೇ ಮಕ್ಕಳಂತೆ ಪ್ರೀತಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇಂತಹ ಸಾಲಿನಲ್ಲಿ ನಿಲ್ಲುತ್ತಾರೆ ಎಂದು ನಗರದ ನ್ಯೂಟೌನ್ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಮುಖ್ಯಸ್ಥೆ ಬಿ.ಕೆ ಮಾಲಕ್ಕ ಹೇಳಿದರು. 
    ಅವರು ಗುರುವಾರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ತಾಯಂದಿರ ದಿನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಭಗವಂತನನ್ನು ಬರಿಗಣ್ಣಿನಿಂದ ನೋಡಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ತಾಯಿಯನ್ನು ಪ್ರತ್ಯಕ್ಷ ದೈವ ಎಂದು ಪೂಜಿಸಲಾಗುತ್ತದೆ. ಸಹಿಷ್ಣುತ ಗುಣವುಳ್ಳ ತಾಯಿಯನ್ನು ಪ್ರಕೃತಿಯಲ್ಲಿ ಭೂಮಿ ಸೇರಿದಂತೆ ವಿವಿಧ ರೀತಿಯಲ್ಲಿ ಪೂಜಿಸಿ ಆರಾಧಿಸಲಾಗುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು.
    ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ಮಾತನಾಡಿ, ತಾಯಿಯನ್ನು ಮೊದಲ ಗುರು ಎಂದು ಪೂಜಿಸಲ್ಪಡುವ ವಿಶಿಷ್ಟ ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶದಲ್ಲಿ ತಾಯಿಗೆ ಮಹತ್ವದ ಸ್ಥಾನ ನೀಡಲಾಗಿದೆ. ತಾಯಿಯ ಋಣ ತೀರಿಸಲು ಅಸಾಧ್ಯವಾಗಿದ್ದು, ಮಕ್ಕಳು ಹೆತ್ತವರನ್ನು ಕೊನೆಯ ಕಾಲದಲ್ಲಿ ನೋಡಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದರು.
    ಹೇಮಶ್ರೀ ಪ್ರಾರ್ಥಿಸಿ, ಪುಷ್ಪಲತಾ, ದೇವರಾಜ್ ಕವನ ವಾಚಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಸುಭಾಷ್ ರಾವ್ ಸಿಂಧ್ಯಾ ಹಾಗು ಸವಿತಾ ದಂಪತಿ ಪುತ್ರಿ ಎಸ್. ಹರ್ಷಿತಾ ಅವರ ಭರತನಾಟ್ಯ ಮನಸೂರೆಗೊಳಿಸಿತು. ವಿಶ್ವವಿದ್ಯಾಲಯದ ವತಿಯಿಂದ ಹರ್ಷಿತಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 

Wednesday, May 7, 2025

ಮನೆಗಳ್ಳತನ ಪ್ರಕರಣ : ಓರ್ವನ ಸೆರೆ

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ನ್ಯೂಟೌನ್ ಠಾಣೆಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿ ಮನೆಯೊಂದರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ನ್ಯೂಟೌನ್ ಠಾಣೆಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಮೇ.೨ ರಂದು ರಾತ್ರಿ ಮನೆಯ ಸಿಮೆಂಟ್ ಮೇಲ್ಛಾವಣಿಯನ್ನು ಒಡೆದು ಹಾಕಿ ಒಳಗೆ ಪ್ರವೇಶಿಸಿ ಸುಮಾರು ೧.೧೨ ಲಕ್ಷ ರು. ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣ ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು. 
    ಪ್ರಕರಣ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ. ಜಿ. ಕಾರಿಯಪ್ಪ ರವರ ಮಾರ್ಗದರ್ಶನದಲ್ಲಿ ಉಪ ವಿಭಾಗದ ಉಪ ಅಧೀಕ್ಷಕ ಕೆ ಆರ್. ನಾಗರಾಜುರವರ ಮಾಗದರ್ಶನದಲ್ಲಿ  ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ರವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಟಿ ರಮೇಶ್‌ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಟಿ.ಪಿ ಮಂಜಪ್ಪ, ನವೀನ್ ಮತ್ತು ನಾಗರಾಜ್ ರವರನ್ನು ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು. 
    ತನಿಖಾ ತಂಡ ಆರೋಪಿ, ಮೀನುಗಾರರ ಬೀದಿಯ ನಿವಾಸಿ ಪಿ. ಜೈಕಾಂತ್(೨೧) ಈತನನ್ನು ಬಂಧಿಸಿ ಅಂದಾಜು ೧.೧೨ ಲಕ್ಷ ರು. ಮೌಲ್ಯದ ೧೧ ಗ್ರಾಂ ೩೦೦ ಮಿಲಿ ತೂಕದ ಬಂಗಾರದ ಅಭರಣ, ಒಂದು ವಾಚ್, ೨ ಸಾವಿರ ರು. ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಒಪ್ಪೋ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. 

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಸಿ.ಎಂ ರಮೇಶ್ರಿಗೆ ಸನ್ಮಾನ

ಭದ್ರಾವತಿ ತಾಲೂಕಿನ ಹುಣಸೇಕಟ್ಟೆ (ಜಂಕ್ಷನ್) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಚಾರಕ ಸಿ.ಎಂ ರಮೇಶ್ ಅವರ ಅತ್ಯುತ್ತಮ ಸೇವೆ ಸ್ಮರಿಸಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ತಾಲೂಕಿನ ಹುಣಸೇಕಟ್ಟೆ (ಜಂಕ್ಷನ್) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಚಾರಕ ಸಿ.ಎಂ ರಮೇಶ್ ಅವರ ಅತ್ಯುತ್ತಮ ಸೇವೆ ಸ್ಮರಿಸಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ವಿದ್ಯಾರ್ಥಿ ನಿಲಯದ ಎಲ್ಲಾ ೮ ಮಂದಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಲು ರಮೇಶ್‌ರವರು ಸಕಾಲದಲ್ಲಿ ಕೈಗೊಂಡ ಕ್ರಮ ಮತ್ತು ಶ್ರಮ ಹೆಚ್ಚಿನದ್ದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರ ಮತ್ತು ಅಡುಗೆ ಸಿಬ್ಬಂದಿಗಳ ಎರಡು ದಿನಗಳ ವಿಶೇಷ ಪುನಶ್ಚೇತನ ಕಾರ್ಯಾಗಾರದಲ್ಲಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರಿನ ಉಪ ನಿರ್ದೇಶಕಿ ಭವ್ಯ, ಜಿಲ್ಲಾ ಅಧಿಕಾರಿ ಶೋಭಾ, ಆಹಾರ ಇಲಾಖೆಯ ಉಪ ನಿರ್ದೇಶಕ ಹವೀನ್, ತಾಲೂಕು ಕಲ್ಯಾಣಾಧಿಕಾರಿ ಕೆ.ಎಸ್ ಶೈಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
 

ವಿಜೃಂಭಣೆಯಿಂದ ಜರುಗಿದ ಶ್ರೀ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಶ್ರೀ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಶ್ರೀ ಶ್ರೀನಿವಾಸ ಸ್ವಾಮಿಯ ಕಲ್ಯಾಣೋತ್ಸವ ವಿಜೃಂಭಣೆಯಿಂದ ಜರುಗಿತು. 
    ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್‌ಕುಮಾರ್ ಅವರ ನೇತೃತ್ವದಲ್ಲಿ ಸ್ವಸ್ತೀಶ್ರೀ ವಿಜಯಾಭ್ಯುದಯ ಶ್ರೀ ವಿಶ್ವಾವಸುನಾಮ ಸಂವತ್ಸರ ಉತ್ತರಾಯಣ ವಸಂತಋತು ವೈಶಾಖ ಶುದ್ಧ ದಶಮಿಯಂದು ಬೆಳಿಗ್ಗೆ ೯ ಗಂಟೆಯಿಂದ ಕಲ್ಯಾಣೋತ್ಸವ ಆರಂಭಗೊಂಡಿತು. ಮಧ್ಯಾಹ್ನ ೧.೩೦ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. 
    ಕಲ್ಯಾಣೋತ್ಸವದ ಅಂಗವಾಗಿ ದೇವಸ್ಥಾನದ ಮೂಲ ವಿಗ್ರಹಗಳಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮಧ್ಯಾಹ್ನ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಮಿಲ್ಟ್ರಿಕ್ಯಾಂಪ್, ಹುಡ್ಕೋಕಾಲೋನಿ, ಬುಳ್ಳಾಪುರ, ಸಿದ್ದಾಪುರ, ನ್ಯೂಟೌನ್, ವಿದ್ಯಾಮಂದಿರ, ಜನ್ನಾಪುರ, ಆಂಜನೇಯ ಅಗ್ರಹಾರ, ಜೆಪಿಎಸ್ ಕಾಲೋನಿ, ಸುರಗಿತೋಪು, ಕಾಗದನಗರ, ಉಜ್ಜನಿಪುರ, ಆನೇಕೊಪ್ಪ, ಬೊಮ್ಮನಕಟ್ಟೆ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.