ಭದ್ರಾವತಿ : ಮೆಸ್ಕಾ ಎಂ.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ನಗರದ ೬೬/೧೧ ಕೆವಿ ಸೀಗೆಬಾಗಿ ಹಾಗೂ ಕೂಡ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳ ನಗರ ಉಪವಿಭಾಗದ ಘಟಕ-೨ ಮತ್ತು ಘಟಕ-೪ ರ ಶಾಖಾ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಮೇ.೧೫ರ ಗುರುವಾರ ಬೆಳಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಳೇನಗರ, ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟಿ ಏರಿಯಾ, ಕಂಚಿನಬಾಗಿಲು, ಹಳ್ಳದಮ್ಮನವರ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಗೌರಾಪುರ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ. ಘಟಕ, ಹೊಳೆ ಹೊನ್ನೂರು ರಸ್ತೆ, ಖಲಂದರನಗರ, ಜಟ್ಪಟ್ನಗರ, ಅನ್ವರ್ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ, ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಅತ್ತಿಗುಂದ. ಗುಡ್ಡದನೇರಲಕೆರೆ, ಕೋಮಾರನಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಹೊಸಹಳ್ಳಿ, ಸಿದ್ದರಮಟ್ಟಿ, ದೇವರಹಳ್ಳಿ, ಸಂಜೀವನಗರ, ಜಯನಗರ, ತಿಪ್ಲಾಪುರ, ಬಸಲೀಕಟ್ಟೆ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.