ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ
ಭದ್ರಾವತಿ ಸಿಂಗನಮನೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಹಲವು ಅಕ್ರಮಗಳನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ವತಿಯಿಂದ ಕಳೆದ ೧೦ ದಿನಗಳಿಂದ ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಸೋಮವಾರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಈ ಹಿನ್ನಲೆಯಲ್ಲಿ ಹೋರಾಟ ಅಂತ್ಯಗೊಂಡಿದೆ.
ಭದ್ರಾವತಿ : ಸಿಂಗನಮನೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಹಲವು ಅಕ್ರಮಗಳನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ವತಿಯಿಂದ ಕಳೆದ ೧೦ ದಿನಗಳಿಂದ ನಡೆಸುತ್ತಿರುವ ಹೋರಾಟ ಸೋಮವಾರ ಅಂತ್ಯಗೊಂಡಿದೆ.
ಸಿಂಗನಮನೆ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಹಾಗೂ ಶೇಖರ್ನಾಯ್ಕ್ರವರ ಅವಧಿಯಲ್ಲಿ ಹೆಚ್ಚುವರಿ ಸಿಬ್ಬಂದಿಗಳು ಹಾಗು ಅಧಿಕಾರಿಗಳು ಮಾಸಿಕ ಸಾಮಾನ್ಯ ಸಭಾ ನಡವಳಿಕೆಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿರುವುದು ಸೇರಿದಂತೆ ಹಲವು ಅಕ್ರಮಗಳನ್ನು ನಡೆಸಿದ್ದು, ಇದನ್ನು ವಿರೋಧಿಸಿ ತಕ್ಷಣ ತಪ್ಪಿತಸ್ಥ ಹೆಚ್ಚುವರಿ ಸಿಬ್ಬಂದಿಗಳು ಹಾಗು ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಪಂಚಾಯಿತಿ ಮುಂಭಾಗ ಮೇ.೨೦ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು.
ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಂ. ಗಂಗಣ್ಣರವರು ಹೋರಾಟಗಾರರ ಮನವೊಲಿಸಿ ಅವರಿಂದ ಮನವಿ ಸ್ವೀಕರಿಸಿ, ಈಗಾಗಲೇ ಬೇಡಿಕೆಯಂತೆ ಹೆಚ್ಚುವರಿ ಸಿಬಂದಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇನ್ನುಳಿದ ಸರ್ಕಾರಿ ನಿವೇಶನ ಮಾರಾಟದ ಬಗ್ಗೆ ತನಿಖೆ ನಡೆಸುವುದಾಗಿ ಹಾಗೂ ಖಾಸಗಿ ಬಡಾವಣೆಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಪಂಚಾಯಿತಿ ಕಛೇರಿಗೆ ಬಿಡಬೇಕಾದ ಖಾಲಿ ನಿವೇಶನವನ್ನು ಬಿಡದೆ ಇರುವ ಬಗ್ಗೆ ಹಾಗೂ ಸರ್ಕಾರಿ ಗ್ರಾಮಠಾಣ ಒತ್ತುವರಿಮಾಡಿ ಬಡಾವಣೆ ನಿರ್ಮಿಸಿರುವ ಸಂಬಂಧ ತಹಸೀಲ್ದಾರ್ ಹಾಗೂ ಎಡಿಎಲ್ಆರ್ ಅವರಿಂದ ಅಳತೆ ನಡೆಸಿ ಜಾಗವನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ತಿಳಿಸಿದ್ದಾರೆ.
ಒಂದು ವೇಳೆ ಹೋರಾಟಕ್ಕೆ ನ್ಯಾಯ ಸಿಗದಿದ್ದರೆ ಜು.೧೦ರಂದು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ, ಪಿಡಿಒ ಹಾಗೂ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಿರುದ್ದ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.