Thursday, June 19, 2025

ಜಯಮ್ಮ ನಿಧನ

ಜಯಮ್ಮ 
    ಭದ್ರಾವತಿ : ತಾಲೂಕು ಜಂಗಮ ಸಮಾಜದ ಅಧ್ಯಕ್ಷ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ ಎಸ್. ಅಡವೀಶಯ್ಯನವರ ಧರ್ಮಪತ್ನಿ ಜಯಮ್ಮ(೬೮) ಗುರುವಾರ ಸಂಜೆ ನಿಧನ ಹೊಂದಿದರು. 
    ಪತಿ ಎಸ್. ಅಡವೀಶಯ್ಯ, ೪ ಜನ ಪುತ್ರಿಯರು, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ೧ ಗಂಟೆಗೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ. 
    ಇವರ ನಿಧನಕ್ಕೆ ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಜೇಡಿಕಟ್ಟೆ ಮರುಳಸಿದ್ದೇಶ್ವರ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಬಸವಂತಪ್ಪ, ಜಂಗಮ ಸಮಾಜದ ಪ್ರಮುಖರು, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರರು, ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಜೂ.೨೦ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ : ಮೆಸ್ಕಾಂ ಲಕ್ಕವಳ್ಳಿ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.೨೦ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಬಿಆರ್‌ಪಿ, ಕುವೆಂಪು ವಿಶ್ವವಿದ್ಯಾಲಯ, ಸಿಂಗನಮನೆ, ಶಾಂತಿನಗರ, ಶಂಕರಘಟ್ಟ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ತಮ್ಮಡಿಹಳ್ಳಿ, ಮಲ್ಲಿಗೇನಹಳ್ಳಿ, ಮಲ್ಲಿಗೇನಹಳ್ಳಿ ಕ್ಯಾಂಪ್, ವದಿಯೂರು, ಗ್ಯಾರೇಜ್ ಕ್ಯಾಂಪ್, ಎಚ್.ಕೆ ಜಂಕ್ಷನ್, ಹುಣಸೇಕಟ್ಟೆ, ರಂಗನಾಥಪುರ, ಗೌಳಿಗರ ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ. 

ಜೂ.೨೨ರಂದು ಹಿಂದುತ್ವ ಪುಸ್ತಕ ಕುರಿತು ಸಂವಾದ

    ಭದ್ರಾವತಿ: ಮಂಥನ ಭದ್ರಾವತಿ ವತಿಯಿಂದ ಹಿಂದುತ್ವ ಪುಸ್ತಕದ ಕುರಿತು ಸಂವಾದ ಜೂ.೨೨ರಂದು ಸಂಜೆ ೬ ಗಂಟೆಗೆ ಹಳೇನಗರದ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
    ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ, ಹವ್ಯಾಸಿ ಲೇಖಕ ಶೈಲೇಶ್ ಕುಲಕರ್ಣಿ ವಕ್ತಾರರಾಗಿ ಪಾಲ್ಗೊಳ್ಳಲಿದ್ದಾರೆ. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್ ಕುಮಾರ್ ಉಪಸ್ಥಿತರಿರುವರು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಂಥನ ಭದ್ರಾವತಿ ತಂಡದವರು ಕೋರಿದ್ದಾರೆ. 

ಶಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರ ಬಿಡುಗಡೆ

ಭದ್ರಾವತಿ ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಭದ್ರಾವತಿ : ಭಾರತೀಯ ಜನತಾ ಪಕ್ಷದ  ನಗರ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಬುಧವಾರ ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಟ್ಯಾಂತರ ಜನರಿಗೆ ಸ್ಪೂರ್ತಿದಾಯಕರಾಗಿ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಿರುವ ಶಾಮ್ ಪ್ರಸಾದ್ ಮುಖರ್ಜಿಯವರ ಭಾವಚಿತ್ರ  ಬಿಡುಗಡೆಗೊಳಿಸಲಾಯಿತು. 
    ಪಕ್ಷದ ಜಿಲ್ಲಾ ಉಪಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಜಿ. ಆನಂದಕುಮಾರ್ ಭಾವಚಿತ್ರ ಬಿಡುಗಡೆಗೊಳಿಸಿ ಮಾತನಾಡಿ, ಜೂ.೨೩ ಶಾಮ್ ಪ್ರಸಾದ್‌ರವರ ಬಲಿದಾನದ ದಿನವಾಗಿದೆ. ಅಂದು ಪ್ರತಿ ಬೂತ್‌ನಲ್ಲೂ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಮರ್ಪಿಸಬೇಕು. ಅವರ ಆದರ್ಶತನ ಯುವ ಸಮುದಾಯಕ್ಕೆ ತಿಳಿಸಿಕೊಡಬೇಕೆಂದರು.
    ಪಕ್ಷದ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಕಾರ್ಯಕ್ರಮದ ಸಂಚಾಲಕರಾದ ರಘುರಾವ್, ತೀರ್ಥಪ್ಪ, ಸುಬ್ರಮಣ್ಯ ( ಸುಬ್ಬಣ್ಣ ), ಹಿರಿಯ ಕಾರ್ಯಕರ್ತರಾದ  ನಂಜಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕಾರ್ಯಕ್ರಮದ ಅಂತಿಮ ಘಟ್ಟದ ಬೈಠಕ್‌ನಲ್ಲಿ ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಭಾವಸಾರ ಕ್ಷತ್ರಿಯ ಸಮಾಜದಿಂದ ಜೂ.೨೨ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

    ಭದ್ರಾವತಿ : ನಗರದ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಜೂ.೨೨ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಶ್ರೀ ಪಾಂಡುರಂಗ ಮಂದಿರದಲ್ಲಿ ಶಿವಮೊಗ್ಗ ನಂಜಪ್ಪ ಲೈಫ್‌ಕೇರ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. 
    ನುರಿತ ವೈದ್ಯರುಗಳಿಂದ ಉಚಿತ ಹೃದ್ರೋಗ, ಮಧುಮೇಹ ಮತ್ತು ರಕ್ತದೊತ್ತಡ ಕಾಯಿಲೆಗಳಿಗೆ ಸಂಬಂಧಿಸಿದ ತಪಾಸಣೆ ನಡೆಯಲಿದ್ದು, ಅಲ್ಲದೆ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಆರ್. ಶಾಂತಲರವರು ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಸಮಾಲೋಚನೆ ನಡೆಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

Wednesday, June 18, 2025

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಕಾಮಗಾರಿ ಅವೈಜ್ಞಾನಿಕ

ತಕ್ಷಣ ಕಾಮಗಾರಿ ಕೈಬಿಡಲು ಸರ್ಕಾರಕ್ಕೆ ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹ 

ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ರೈತ ಮುಖಂಡ ಕೆ.ಟಿ ಗಂಗಾಧರ್ ಮಾತನಾಡಿದರು. 
    ಭದ್ರಾವತಿ : ತಾಯಿಯ ಎದೆ ಹಾಲು ಕುಡಿಯಬೇಕೆ ವಿನಹಃ ಹಾಲು ಕುಡಿಯುವ ನೆಪದಲ್ಲಿ ಎದೆಯನ್ನೇ ಸೀಳಬಾರದು ಎಂಬಂತೆ ಎರಡು ಗುಡ್ಡಗಳ ನಡುವೆ ಜಲಾಶಯ ಸೀಳಿ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ಖಂಡನೀಯ. ತಕ್ಷಣ ಈ ಅವೈಜ್ಞಾನಿಕ ಕಾಮಗಾರಿ ಕೈಬಿಡಬೇಕೆಂದು ರೈತ ಮುಖಂಡ ಕೆ.ಟಿ ಗಂಗಾಧರ್ ಆಗ್ರಹಿಸಿದರು.
    ಭದ್ರಾ ಜಲಾಶಯದ ಬಲದಂಡೆನಾಲೆ ಸೀಳಿ ನೀರು ಪೂರೈಕೆ ಮಾಡುತ್ತಿರುವ ಕಾಮಗಾರಿ ವಿರುದ್ಧ ಬುಧವಾರ  ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಕಛೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ, ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗು ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಮಾತನಾಡಿದರು. ವಿದ್ಯಾವಂತ ಸಮಾಜದಲ್ಲಿ ಇಂತಹ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು. 
    ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ. ಭದ್ರಾ ಜಲಾಶಯದ ನೀರನ್ನು ನೆಚ್ಚಿಕೊಂಡು ರೈತರು ಭತ್ತ, ಕಬ್ಬು, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಬೆಳೆದು ಬದುಕು ಕಟ್ಟಿಕೊಂಡಿರುತ್ತಾರೆ. ಮಧ್ಯ ಕರ್ನಾಟಕದ ಇಂತಹ ಬೃಹತ್ ಜಲಾಶಯದ ಸುರಕ್ಷತೆಯನ್ನು ನಿರ್ಲಕ್ಷಿಸಿ ರಾಜ್ಯ ಸರ್ಕಾರ ೧೬೬೦ ಹಳ್ಳಿಗಳಿಗೆ ಕುಡಿಯಲು ನೀರನ್ನು ಒದಗಿಸುವ ಬೃಹತ್ ಕಾಮಗಾರಿಯನ್ನು ಭದ್ರಾ ಜಲಾಶಯದ ನಿರ್ಬಂಧಿತ ಪ್ರದೇಶದಲ್ಲಿ (ಬಫರ್ ಜೋನ್‌ನಲ್ಲಿ) ಕೈಗೊಂಡಿದೆ. ಈ  ಕಾಮಗಾರಿ ಕೈಗೊಂಡಿರುವ ಪ್ರದೇಶವು ಅತೀ ಸೂಕ್ಷ್ಮ ಪ್ರದೇಶವಾಗಿರುತ್ತದೆ, ಈ ಪ್ರದೇಶದಲ್ಲಿ ಯಾವುದೇ ಕಾಮಗಾರಿಯನ್ನು ಕೈಗೊಳ್ಳಬಾರದೆಂಬ ನಿಯಮಾವಳಿಗಳಿದ್ದರೂ ಬಹುಗ್ರಾಮ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಕುಡಿಯುವ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡಲು ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ  ಮಾಡುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದರು. 
    ಸರ್ಕಾರವು ಕುಡಿಯುವ ನೀರಿನ ಯೋಜನೆಯನ್ನು ಕೈಗೊಳ್ಳಲು ರೈತರು ಯಾವುದೇ ತಕರಾರು ಮಾಡುತ್ತಿಲ್ಲ. ಆದರೆ ಭದ್ರಾ ಜಲಾಶಯದ ನಿರ್ಬಂಧಿತ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿಯಿಂದ ಜಲಾಶಯ ತುಂಬಿದಾಗ ನೀರಿನ ಒತ್ತಡದಿಂದಾಗಿ ಯಾವುದೇ ರೀತಿಯ ಅಪಾಯಗಳು ಸಂಭವಿಸಬಹುದಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಮಳೆಬಿದ್ದು ಗುಡ್ಡಗಳು ಕುಸಿಯುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇವೆಲ್ಲವನ್ನೂ ಸರ್ಕಾರ ಮನಗಂಡಿದ್ದರೂ ಜಲಾಶಯದ ಸುರಕ್ಷತೆ ಮತ್ತು ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಈ ಕಾಮಗಾರಿ ಕೈಗೊಂಡಿರುವುದನ್ನು ರೈತಸಂಘ ಹಾಗೂ ಭದ್ರಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ಖಂಡಿಸುತ್ತವೆ.  ಸರ್ಕಾರ ಕೂಡಲೇ ನಿರ್ಬಂಧಿತ ಪ್ರದೇಶದಲ್ಲಿ ಜಲಾಶಯಕ್ಕೆ ಆಪತ್ತು ತಂದೊಡ್ಡುವ ಕಾಮಗಾರಿಯನ್ನು ಶಾಶ್ವತವಾಗಿ ಕೈಬಿಡಬೇಕೆಂದು ಆಗ್ರಹಿಸಿದರು. 
    ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ, ಶಿಮುಲ್ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಡಿ. ಆನಂದ್, ಮುಖಂಡರಾದ ಮಂಜಪ್ಪಗೌಡ, ಲವ, ರಾಮಚಂದ್ರರಾವ್ ಸೇರಿದಂತೆ ಇನ್ನಿತರರು  ಮಾತನಾಡಿ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿದರು. 
    ರೈತ ಮುಖಂಡರಾದ ಈರಣ್ಣ, ಹಾಲೇಶಪ್ಪಗೌಡ್ರು, ಡಿ.ವಿ ವೀರೇಶ್, ಓಟೂರುಶಿವಪ್ಪ, ಪುಟ್ಟನಗೌಡ್ರು, ಮಲ್ಲಾಪುರ ರಂಗಪ್ಪ, ಎಂ.ಚಂದ್ರಶೇಖರ್, ತಮ್ಮಯ್ಯ, ಮೋಹನ್ ಕುಮಾರ್, ಕೃಷ್ಣಪ್ಪ, ನರಸಿಂಹಣ್ಣ, ಧರ್ಮೋಜಿರಾವ್, ಮಾಲತೇಶ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು. 

ಗ್ಯಾರಂಟಿ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಹುಟ್ಟುಹಬ್ಬ ಆಚರಣೆ

ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಭದ್ರಾವತಿ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ : ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಸಮಿತಿ ಹಾಗು ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್‌ರವರ ೪೬ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಕಛೇರಿಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್, ಮುಖಂಡರಾದ ಕುಮಾರ್(ಮೇಸ್ಟ್ರು), ನಾಗೇಶ್, ರೂಪ ನಾಗರಾಜ್ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳ ಪ್ರಮುಖರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಎಸ್. ಮಣಿಶೇಖರ್‌ರವರ ಕಛೇರಿಗೆ ತೆರಳಿ ಸನ್ಮಾನಿಸಿ ಅಭಿನಂದಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮ ಹಂಚಿಕೊಂಡರು.