ಶನಿವಾರ, ಅಕ್ಟೋಬರ್ 11, 2025

ಗಾಯನ ಸ್ಪರ್ಧೆಯಲ್ಲಿ ಜಂಬೂಸ್ವಾಮಿಗೆ ಪ್ರಥಮ ಬಹುಮಾನ

ಜಂಬೂಸ್ವಾಮಿ 
    ಭದ್ರಾವತಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗು ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಹಿರಿಯ ನಾಗರಿಕ ಜಂಬೂಸ್ವಾಮಿ ಸಾಂಸ್ಕೃತಿಕ ಸ್ಪರ್ಧೆಯ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. 
    ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಜಂಜೂಸ್ವಾಮಿಯವರು ದೇಶಭಕ್ತಿ ಗೀತೆ, ಭಾವಗೀತೆ ಮತ್ತು ಜಾನಪದ ಗೀತೆ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಗಾಯಕರಾಗಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಕೀರ್ತಿ ತಂದಿದ್ದಾರೆ. ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿನೀಡಿ ಗೌರವಿಸಲಾಗಿದೆ. 

ಶುಕ್ರವಾರ, ಅಕ್ಟೋಬರ್ 10, 2025

ಅ.೧೨ರಂದು ವಿದ್ಯುತ್ ವ್ಯತ್ಯಯ

 

  
ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗದ ಬಿ.ಎಚ್ ರಸ್ತೆಯಲ್ಲಿ ಹೊಸದಾಗಿ ೧೧ ಕೆ.ವಿ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ಘಟಕ-೫ರ ಶಾಖಾ ವ್ಯಾಪ್ತಿಯಲ್ಲಿ ಅ.೧೨ರ ಭಾನುವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 
    ಶಿವರಾಮನಗರ, ವಿಶ್ವೇಶ್ವರಾಯ ನಗರ, ಜೇಡಿಕಟ್ಟೆ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲೀಪುರ, ಹಾಗಲಮನೆ, ಹುಲಿರಾಮನಕೊಪ್ಪ, ಸಿರಿಯೂರು ಕ್ಯಾಂಪ್ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾ. 

ಅ.೧೧, ೧೨ರಂದು ಎನ್‌ಎಸಿ ಕರೆ ನೀಡಿರುವ ಹೋರಾಟದಲ್ಲಿ ಪಾಲ್ಗೊಳ್ಳಿ


    ಭದ್ರಾವತಿ:  ನ್ಯಾಷನಲ್ ಅಜಿಟೇಷನ್ ಕಮಿಟಿ(ಎನ್‌ಎಸಿ) ವತಿಯಿಂದ ಅ. ೧೧ ಮತ್ತು ೧೨ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ(ಫ್ರೀಡಂ ಪಾರ್ಕ್)ದಲ್ಲಿ ಇಪಿಎಸ್-೯೫ ಪಿಂಚಣಿಗೆ ಸಂಬಂಧಿಸಿದಂತೆ, ಹೆಚ್ಚುವರಿ ಪಿಂಚಣಿ/ಕನಿಷ್ಠ ಪಿಂಚಣಿ ೭,೫೦೦ ರು.ಗಳಿಗೂ ಅಧಿಕ ಹಾಗು ಡಿಎ ಜಾರಿ ಬಗ್ಗೆ ಹಾಗು ದಕ್ಷಿಣ ಭಾರತದ ರಾಜ್ಯಗಳ ಪಿಂಚಣಿದಾರರ ಸಮಾವೇಶ ಮತ್ತು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಂಪಿಎಂ ರಿಟೈರ್ಡ್ ಎಂಪ್ಲಾಯಿಸ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷರು ಕೋರಿದ್ದಾರೆ. 
    ಎಂಪಿಎಂ ರಿಟೈರ್ಡ್ ಎಂಪ್ಲಾಯಿಸ್ ವೆಲ್‌ಫೇರ್ ಅಸೋಸಿಯೇಷನ್ ನ್ಯಾಷನಲ್ ಕಾನ್ಫಿಡ್ರೇಶನ್ ರಿಟೈರೀಸ್ ಸದಸ್ಯರಾಗಿರುವುದರಿಂದ ಭಾಗವಹಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಸಂಬಂಧ ಈಗಾಗಲೇ ಸರ್ವಸದಸ್ಯರ ಸಭೆಯಲ್ಲಿ ಚರ್ಚಿಲಾಗಿದ್ದು, ಅದರಂತೆ ಎನ್‌ಎಸಿ ಕರೆ ನೀಡಿರುವ ಹೋರಾಟದಲ್ಲಿ ಭಾಗವಹಿಸುವುದು. ರಾಜ್ಯದ ಇತರೆಡೆ ಹಾಗು ಬೆಂಗಳೂರಿನ ಸುತ್ತಮುತ್ತ ವಾಸಿಸುತ್ತಿರುವ ಸಂಘದ ಸದಸ್ಯರು ಸಹ ಭಾಗವಹಿಸುವುದು. 
    ನ್ಯಾಷನಲ್ ಅಜಿಟೇಷನ್ ಕಮಿಟಿ(ಎನ್‌ಎಸಿ) ವತಿಯಿಂದ ಹಮ್ಮಿಕೊಳ್ಳಲಾಗಿರುವ ಹೋರಾಟದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಬಿ.ಕೆ ಸಂಗಮೇಶ್ವರ್ ಸಹ ಭಾಗವಹಿಸಿ ಬೆಂಬಲ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಸದಸ್ಯರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಎಂಪಿಎಂ ರಿಟೈರ್ಡ್ ಎಂಪ್ಲಾಯಿಸ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಆರ್ ಸೋಮಶೇಖರ್ ಮತ್ತು ಕಾರ್ಯದರ್ಶಿ ಕೆ.ಸಿ ಪ್ರೇಮದಾಸ್ ಕೋರಿದ್ದಾರೆ. 

ಅ.೧೧ರಂದು ಭೂಮಿಕಾದಿಂದ ವಿಶೇಷ ಕಾರ್ಯಕ್ರಮ

    ಭದ್ರಾವತಿ: ಕನ್ನಡ ನಾಡು ನಡೆ-ನುಡಿ ಬಿಂಬಿಸುವ ವೇದಿಕೆ ನಗರದ ಭೂಮಿಕಾ ವತಿಯಿಂದ ಅ.೧೧ರ ಶನಿವಾರ ಸಂಜೆ ೬ ಗಂಟೆಗೆ ಹಳೇನಗರದ ಶ್ರೀ ರಾಮೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಶ್ರೀ ಗಾಯಿತ್ರಿ ಧರ್ಮ ಶಾಲಾ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದಿವಂಗತ `ಶ್ರೀ ಮಾಸ್ತಿ ವೆಂಕಟೇಶ ಐಯ್ಯಂಗಾರ್‌ರವರ ಕಥಾಲೋಕ' ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಶಿವಮೊಗ್ಗ ನಿವೃತ್ತ ಪ್ರಾಂಶಪಾಲ ಡಾ.ಎಚ್.ಎಸ್ ನಾಗಭೂಷಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ವೇದಿಕೆ ಅಧ್ಯಕ್ಷ, ವೈದ್ಯ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಾಸ್ತಿ ವೆಂಕಟೇಶ ಐಯ್ಯಂಗಾರ್‌ರವರ ಬದುಕು, ಬರಹ ಹಾಗು ಅವರ ಕಥೆಗಳಲ್ಲಿನ ಮೌಲ್ಯಗಳ ಕುರಿತು ಉಪನ್ಯಾಸ ನಡೆಯಲಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಅಯ್ಯಂಗಾರ್ ಕೇಕ್ ಮನೆ ಮಳಿಗೆಗೆ ಬೆಂಕಿ ಲಕ್ಷಾಂತರ ರು. ನಷ್ಟ

    ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯ ಸಮೀಪ ಶಂಕರಘಟ್ಟ ಮುಖ್ಯ ರಸ್ತೆಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಅಯ್ಯಂಗಾರ್ ಕೇಕ್ ಮನೆ ಮಳಿಗೆಯಲ್ಲಿ ಶುಕ್ರವಾರ ಬೆಳಗಿನಜಾವ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ನಡೆದಿದೆ. 
    ಬೇಕರಿ ಮಳಿಗೆಯಲ್ಲಿ ಬೆಳಗಿನ ಜಾವ ೩ ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಎಚ್ಚರಗೊಂಡು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮಳಿಗೆಯಲ್ಲಿದ್ದ ಬಹುಬೇಕ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ. ಮಳಿಗೆ ಅರಸಿಕೆರೆ ಶ್ರೀಧರ್ ಎಂಬುವರಿಗೆ ಸೇರಿದ್ದಾಗಿದ್ದು,  ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಎನ್ನಲಾಗಿದೆ.


ಭದ್ರಾವತಿ ಕುವೆಂಪು ವಿಶ್ವವಿದ್ಯಾಲಯ ಸಮೀಪ ಶಂಕರಘಟ್ಟ ಮುಖ್ಯ ರಸ್ತೆಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಅಯ್ಯಂಗಾರ್ ಕೇಕ್ ಮನೆ ಮಳಿಗೆಯಲ್ಲಿ ಶುಕ್ರವಾರ ಬೆಳಗಿನಜಾವ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ನಡೆದಿದೆ. 

ಗುರುವಾರ, ಅಕ್ಟೋಬರ್ 9, 2025

ಶಾಲಾ ವಿದ್ಯಾರ್ಥಿಗಳಿಗೆ ಜಾಗೃತಾ ತಿಳುವಳಿಕೆ ಸಪ್ತಾಹ ಅಂಗವಾಗಿ ವಿವಿಧ ಸ್ಪರ್ಧೆಗಳು

 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಅ.೨೭ ರಿಂದ ನ.೨ರವರೆಗೆ ಜಾಗೃತಾ ತಿಳುವಳಿಕೆ ಸಪ್ತಾಹ-೨೦೨೫ರ ಅಂಗವಾಗಿ "ಜಾಗರೂಕತೆ-ನಮ್ಮೆಲ್ಲರ ಜವಾಬ್ದಾರಿಯಾಗಿದೆ" ಎಂಬ ವಿಷಯದೊಂದಿಗೆ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
      ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ : 
  ಅ.೨೫ರಂದು ಬೆಳಿಗ್ಗೆ ೯.೩೦ ರಿಂದ ೧೧.೩೦ರವರೆಗೆ ಸ್ಪರ್ಧೆ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ೨ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಮೊದಲನೇ ವಿಭಾಗದಲ್ಲಿ ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ `ದೈನಂದಿನ ಜೀವನದಲ್ಲಿ ನೈತಿಕ ಮೌಲ್ಯಗಳು ಮತ್ತು ತತ್ವಗಳನ್ನು ಅಭ್ಯಾಸ ಮಾಡುವುದು' ವಿಷಯ ಕುರಿತು ಹಾಗು ಎರಡನೇ ವಿಭಾಗದಲ್ಲಿ ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ `ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಪಾತ್ರಗಳು ಮತ್ತು ಜವಾಬ್ದಾರಿಗಳು' ವಿಷಯ ಕುರಿತು ಸ್ಪರ್ಧೆ ನಡೆಯಲಿದೆ. 
    ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯುವ ಸ್ಪರ್ಧೆ; 
      ಬೆಳಿಗ್ಗೆ ೧೧.೩೦ ರಿಂದ ಮಧ್ಯಾಹ್ನ ೧ ಗಂಟೆವರೆಗೆ ೮ ರಿಂದ ೧೦ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ 'ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಪಾತ್ರಗಳು ಮತ್ತು ಜವಾಬ್ದಾರಿಗಳು' ವಿಷಯ ಕುರಿತು ಸ್ಪರ್ಧೆ ನಡೆಯಲಿದೆ. ಪ್ರಬಂಧ ಪದಮಿತಿ ೧೦೦೦ ಪದಗಳು ಮೀರಬಾರದು.
      ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಭಾಷಣ ಸ್ಪರ್ಧೆ; 
      ಅ.೨೬ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೧೨.೩೦ರವರೆಗೆ ವಿಐಎಸ್‌ಎಲ್ ಭದ್ರಾ ಅತಿಥಿಗೃಹದಲ್ಲಿ ೮ ರಿಂದ ೧೦ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ. 'ಜಾಗೃತಾ ತಿಳುವಳಿಕೆ ಮತ್ತು ಭ್ರಷ್ಟಾಚಾರ ತಡೆಗಟ್ಟುವಿಕೆ: ವಿದ್ಯಾರ್ಥಿಯಾಗಿ ನನ್ನ ಜವಾಬ್ದಾರಿಗಳು' ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಭಾಷಣ ಸ್ಪರ್ಧೆ ನಡೆಯಲಿದೆ. ಭಾಷಣಮಾಡಲು ೩ ನಿಮಿಷಗಳ ಸಮಯವನ್ನು ನಿಗದಿಪಡಿಸಲಾಗಿದೆ.
      ರಸಪ್ರಶ್ನೆ ಸ್ಪರ್ಧೆ
   ಅ.೨೭ರಂದು ಬೆಳಿಗ್ಗೆ ೯.೩೦ಕ್ಕೆ ವಿಐಎಸ್‌ಎಲ್ ಭದ್ರಾ ಅತಿಥಿಗೃಹದಲ್ಲಿ ೮ ರಿಂದ ೧೦ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಲಿದ್ದು, ಪ್ರತಿ ಶಾಲೆಯಿಂದ ಒಂದು ತಂಡದಲ್ಲಿ ಇಬ್ಬರಿರುವ ಮೂರು ತಂಡಗಳು ಭಾಗವಹಿಸಬಹುದು. ಪ್ರಾಥಮಿಕ ಹಂತದಲ್ಲಿ ಲಿಖಿತ ರಸಪ್ರಶ್ನೆ, ತದನಂತರ ಅಂತಿಮ ಹಂತಕ್ಕೆ ೪ ಅಥವಾ ೬ ತಂಡಗಳ ಆಯ್ಕೆ ನಡೆಯಲಿದೆ. 
      ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಷ್ಟಾಚಾರ ವಿರೋಧಿ ಚಳುವಳಿಗಳು, ಭಷ್ಟಾಚಾರ ವಿರೋಧಿ ಹೋರಾಟದ ಏಜೆನ್ಸಿಗಳು, ಕಾನೂನುಗಳು ಮತ್ತು ನಿಯಮಗಳು, ಭಾರತದ ಇತಿಹಾಸ, ಸಂವಿಧಾನ ಮತ್ತು ಸಾಧನೆಗಳು, ಭಷ್ಟಾಚಾರ ವಿರೋಧಿ ಹೋರಾಟದ ತಂತ್ರಜ್ಞಾನಗಳು, ನೈತಿಕ ಮೌಲ್ಯಗಳು, ಸಾಮಾನ್ಯ ಜಾಗೃತಿಗಳು, ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಾಮಾನ ಮತ್ತು ಇತ್ಯಾದಿಗಳು ವಿಷಯ ಕುರಿತು ಸ್ಪರ್ಧೆ ನಡೆಯಲಿದೆ. 
     ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿ ಬರತಕ್ಕದ್ದು, ಜೊತೆಗೆ ಶಾಲಾ ಗುರುತಿನ ಪತ್ರ ತರತಕ್ಕದ್ದು. ಚಿತ್ರಬರೆಯುವ ಮತ್ತು ಪ್ರಬಂಧ ಸ್ಪರ್ಧೆಗಳಿಗೆ ಪ್ರತೀ ಶಾಲೆಯಿಂದ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ ಇರುವುದಿಲ್ಲ. ಕನ್ನಡ, ಆಂಗ್ಲ ಮತ್ತು ಹಿಂದಿ ಭಾಷಣ ಸ್ಪರ್ಧೆಗೆ ಪ್ರತಿ ಶಾಲೆಯಿಂದ ಪ್ರತಿ ಭಾಷೆಯಲ್ಲಿ ಭಾಗವಹಿಸಲು ಗರಿಷ್ಠ ೩ ಸ್ಪರ್ಧಿಗಳನ್ನು ಕಳುಹಿಸತಕ್ಕದ್ದು. ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತೀ ಶಾಲೆಯಿಂದ ಗರಿಷ್ಠ ಒಂದು ತಂಡದಲ್ಲಿ ೨ ಸ್ಪರ್ಧಿಗಳಿರುವ ೩ ತಂಡಗಳಳನ್ನು ಕಳುಹಿಸತಕ್ಕದ್ದು. ಮೊಬೈಲ್ ೯೪೮೦೮೨೯೦೧೮ / ೯೪೮೦೮೨೯೨೧೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಪ್ರತಿ ಸ್ಪರ್ಧೆಯಲ್ಲಿ ೩ ಬಹುಮಾನಗಳಿದ್ದು, ಬಹುಮಾನ ವಿತರಣಾ ಸಮಾರಂಭ ನ.೩, ಮಧ್ಯಾಹ್ನ ೨.೩೦ ಭದ್ರಾ ಅತಿಥಿಗೃಹ ನಡೆಯಲಿದೆ.



ಬುಧವಾರ, ಅಕ್ಟೋಬರ್ 8, 2025

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ನೂತನ ತಾಲೂಕು ಘಟಕ ಅಸ್ತಿತ್ವಕ್ಕೆ

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ರಾಜ್ಯಾಧ್ಯಕ್ಷ ಓಂಕಾರಪ್ಪ ಎಂ. ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ನೂತನವಾಗಿ ಭದ್ರಾವತಿ ತಾಲೂಕು ಘಟಕ ರಚಿಸಲಾಯಿತು. 
    ಭದ್ರಾವತಿ : ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ರಾಜ್ಯಾಧ್ಯಕ್ಷ ಓಂಕಾರಪ್ಪ ಎಂ. ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ನೂತನ ತಾಲೂಕು ಘಟಕ ರಚಿಸಲಾಯಿತು. 
    ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷರಾದ ನಾಗರಾಜ್ ಕುಮಾರ್, ಉಪಾಧ್ಯಕ್ಷೆ ಲಕ್ಷ್ಮೀ ಕಳಸಣ್ಣ, ಕಾರ್ಯದರ್ಶಿ ಭಾಗ್ಯ ಪಿ.ಗೌಡ, ಸಂಘಟನಾ ಕಾರ್ಯದರ್ಶಿ ಸಿ. ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ನೂತನ ತಾಲೂಕು ಘಟಕ : 
    ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಈ.ಪಿ ಬಸವರಾಜು, ಅಧ್ಯಕ್ಷರಾಗಿ ಪ್ರೇಮಾಕುಮಾರಿ, ಉಪಾಧ್ಯಕ್ಷರಾಗಿ ಟಿ.ವಿ ಜೋಸೆಫ್, ಎನ್.ಪಿ ಡೇವಿಡ್, ಶೃತಿ ನವೀನ್, ನೂರುಲ್ಲಾ, ಕಾರ್ಯದರ್ಶಿಯಾಗಿ ಆಶಾರಾಣಿ ಕೆ.ಬಾಬು, ಸಂಘಟನಾ ಕಾರ್ಯದರ್ಶಿಯಾಗಿ ಆರೀಫ್ ಹುಸೇನ್, ಪವನ್ ಬಾಬು, ಕಾನೂನು ಸಲಹೆಗಾರರಾಗಿ ಸೈಯದ್ ಜಮೀರ್ ಮತ್ತು ಜಿ. ವಿಜಯಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.