ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಅವರನ್ನು ಶುಕ್ರವಾರ ವಿಐಎಸ್ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಗುತ್ತಿಗೆ ಕಾರ್ಮಿಕರ ಸಂಘಟನೆಯಿಂದ ಭೇಟಿ ಮಾಡಿ ಚರ್ಚಿಸಲಾಯಿತು.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಅವರನ್ನು ಶುಕ್ರವಾರ ವಿಐಎಸ್ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಗುತ್ತಿಗೆ ಕಾರ್ಮಿಕರ ಸಂಘಟನೆಯಿಂದ ಭೇಟಿ ಮಾಡಿ ಚರ್ಚಿಸಲಾಯಿತು.
ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡ ತಂಡ ಹೂಗುಚ್ಛ ನೀಡಿ ಸ್ವಾಗತಿಸುವ ಮೂಲಕ ಗುತ್ತಿಗೆ ಕಾರ್ಮಿಕರು ತಿಂಗಳ ಪೂರ್ತಿ ಕೆಲಸವಿಲ್ಲದೆ ಅಲ್ಪ ದಿನಗಳ ಕೆಲಸದಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಲಾಯಿತು. ಅಲ್ಲದೆ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಹ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳು ಬಗೆಹರಿಯುವ ವಿಶ್ವಾಸ ಅನೂಪ್ ಕುಮಾರ್ ಕಾರ್ಮಿಕರಿಗೆ ವ್ಯಕ್ತಪಡಿಸಿದರು.
ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷ ದೇವೇಂದ್ರ, ಪ್ರಧಾನ ಕಾರ್ಯದರ್ಶಿ ಸತೀಶ ಅರುಣಾಚಲ, ಕಾರ್ಯದರ್ಶಿ ಐಸಾಕ್ ಲಿಂಕನ್, ಖಜಾಂಚಿ ಶಿವನಾಗು ಮತ್ತು
ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಲ್.ಆರ್ ನವೀನ, ಎಚ್. ಹರೀಶ್, ಮಂಜುನಾಥ್, ವೆಂಕಟೇಶ್ ಮತ್ತು ಬಿ.ಎಸ್ ಅರುಣ ತಂಡದಲ್ಲಿ ಉಪಸ್ಥಿತರಿದ್ದರು.
