ಶನಿವಾರ, ನವೆಂಬರ್ 8, 2025

ಎನ್.ವಿಜಯ್-ಡಿ. ದೀಕ್ಷಾ ವಿವಾಹ ಮಹೋತ್ಸವ

ಭದ್ರಾವತಿ ಹೊಸಮನೆ ನಿವಾಸಿ ಎನ್. ವಿಜಯ್-ಮಂಡ್ಯ ನಿವಾಸಿ ಡಿ.ದೀಕ್ಷಾ ಶುಭಾ ವಿವಾಹ ನೆರವೇರಿತು. 
    ಭದ್ರಾವತಿ : ನಗರದ ಹೊಸಮನೆ ನಿವಾಸಿ, ಮೆಸ್ಕಾಂ ಉದ್ಯೋಗಿ ಕೀರ್ತಿಲಕ್ಷ್ಮೀಯವರ ಸಹೋದರ, ದಿವಂಗತ ನೀಲಾಮಣಿ-ದಿವಂಗತ ಎಸ್. ನಾಗರಾಜ್‌ರವರ ಪುತ್ರ ಎನ್. ವಿಜಯ್‌ರವರ ವಿವಾಹ ಮಂಡ್ಯ ನಿವಾಸಿ ಅನಸೂಯ-ದಿವಂಗತ ದಾಸಯ್ಯರವರ ಪುತ್ರಿ ಡಿ. ದೀಕ್ಷಾರವರ ಜೊತೆ ಮಂಡ್ಯ ಕ್ಯಾತಂಗೆರೆ ಬನ್ನೂರು ಮುಖ್ಯರಸ್ತೆ ಶ್ರೀ ಗೌರಿಶಂಕರ ಕಲ್ಯಾಣ ಮಂಟದಲ್ಲಿ ನೆರವೇರಿತು. 
    ಕೀರ್ತಿಲಕ್ಷ್ಮೀ ಬಿಜೆಪಿ ಮುಖಂಡ ಛಲವಾದಿ ಕೃಷ್ಣರವರ ಪತ್ನಿಯಾಗಿದ್ದಾರೆ. ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್, ಧರ್ಮರಾಜ್, ಮಹೇಶ್(ಜೆಪಿಎಸ್) ಹಾಗು ಸ್ಥಳೀಯ ಬಿಜೆಪಿ ಮುಖಂಡರು, ಮೆಸ್ಕಾಂ ನೌಕರರು, ಸಿಬ್ಬಂದಿಗಳು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾರೈಸಿದ್ದಾರೆ. 

ಕನಕದಾಸರ ಆದರ್ಶಗಳಿಂದ ಸಾರ್ಥಕ ಜೀವನ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ  ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ : ಕನಕದಾಸರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ಶನಿವಾರ  ತಾಲೂಕು ಆಡಳಿತ ಹಾಗು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ  ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
    ಕನಕದಾಸರ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕು. ಅವರ ಆದರ್ಶನಗಳು ನಮ್ಮ ಜೀವನಕ್ಕೆ ದಾರಿದೀಪವಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಮುನ್ನಡೆಯಬೇಕೆಂದರು. 
    ಕುರುಬ ಸಮುದಾಯದವರ ಬೇಡಿಕೆಯಂತೆ ನಗರಸಭೆ ವ್ಯಾಪ್ತಿಯಲ್ಲಿ ಕನಕದಾಸರು ಅಥವಾ ಸಂಗೊಳ್ಳಿ ರಾಯಣ್ಣರವರ ಪ್ರತಿಮೆ ನಿರ್ಮಿಸಿಕೊಡಲು ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು. 
    ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಿ, ಕನಕದಾಸರ ಕುರಿತು ನಾವೆಲ್ಲರು ಅವರ ಬದುಕಿನಲ್ಲಿ ತಿಮ್ಮಪ್ಪ ತಿಮ್ಮಪ್ಪನಾಯಕನಾದ ಬಗೆ, ಕನಕನಾಯಕ ಕನಕದಾಸನಾದ ಬಗೆ ಅರ್ಥಮಾಡಿಕೊಂಡರೆ ಸಾಕು. ಕನಕದಾಸರು ಯಾರು, ಸಮಾಜಕ್ಕೆ ಅವರ ಕೊಡುಗೆಗಳು ಏನು ಎಂಬುದು ನಮಗೆ ಅರ್ಥವಾಗುತ್ತದೆ ಎಂದರು. 
    ಡಾ. ಬಿ.ಆರ್ ಅಂಬೇಡ್ಕರ್‌ರವರು, ಕನಕದಾಸರು ಮತ್ತು ಮಹರ್ಷಿ ವಾಲ್ಮೀಕಿಯವರು,  ಸಮಾಜಕ್ಕೆ ನೀಡಿರುವ ಕೊಡುಗೆಗಳು ಅನನ್ಯವಾಗಿವೆ. ಆದರೆ ಹಿಂದುಳಿದ ಹಾಗು ತಳಸಮುದಾಯದವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಸಮಾಜದ ಮುಖ್ಯ ವಾಹಿನಿಗೆ ಬರುವುದೇ ಇಲ್ಲ. ಮೇಲ್ವರ್ಗದವರ ಕೊಡುಗೆಗಳು ಮಾತ್ರ ಪ್ರಜ್ವಲಿಸುತ್ತವೆ. ಇದು ವಿಷಾದನೀಯ ಸಂಗತಿಯಾಗಿದೆ. ಕನಕದಾಸರು ಕೇವಲ ನಮ್ಮ ಕನಕದಾಸರು ಮಾತ್ರವಲ್ಲ. ನಮ್ಮೆಲ್ಲರ ಕನಕದಾಸರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.   
    ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಪರುಸಪ್ಪ ಕುರುಬರ,  ನಗರಸಭೆ ಸದಸ್ಯರಾದ ಮಂಜುಳಾ ಸುಬ್ಬಣ್ಣ, ಅನಿತಾ ಮಲ್ಲೇಶ್, ಕಾಂತರಾಜ್, ಕೆ. ಸುದೀಪ್ ಕುಮಾರ್, ಹನುಮಂತಪ್ಪ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಹಿರಿಯ ಪತ್ರಕರ್ತ ಕಣ್ಣಪ್ಪ, ಸಮಾಜದ ಪ್ರಮುಖರಾದ ಹಾ. ರಾಮಪ್ಪ, ಕರಿಯಪ್ಪ, ಗ್ಯಾಮಣ್ಣ, ಹೇಮಾವತಿ ಶಿವಾನಂದ್, ಉಮೇಶ್, ಕೇಸರಿಪಡೆ ಗಿರೀಶ್, ಮಹಾದೇವಣ್ಣ, ಎಸ್. ಮಂಜುನಾಥ್, ಮಾಲಾ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ನಿರೂಪಿಸಿ, ಅಭಿಲಾಷ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. 
    ಸಮಾಜದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ನಗರದ ಲೋಯರ್ ಹುತ್ತಾದಿಂದ ಶ್ರೀ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. 

ಶುಕ್ರವಾರ, ನವೆಂಬರ್ 7, 2025

ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಪ್ರಕರಣ : ಅಮಾಯಕ ಯುವಕ ಬಂಧನ

ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ 


ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಪ್ರಕರಣ ದಾಖಲಿಸಿ ಅಮಾಯಕ ಯುವಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಪೇಪರ್‌ಟೌನ್ ಠಾಣೆ ಮುಂಭಾಗ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ನಗರಸಭೆ ಮಾಜಿ ಸದಸ್ಯ ಎಂ.ಎ ಅಜಿತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪಿನ ೪ನೇ ತಿರುವಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಸಹಾಯಕ ಉಪ ಠಾಣಾಧಿಕಾರಿ ಮೇಲೆ ಹಲ್ಲೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ವಿನಾಃ ಕಾರಣ ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿ ಶುಕ್ರವಾರ ರಾತ್ರಿ ಪೇಪರ್‌ಟೌನ್ ಠಾಣೆ ಮುಂಭಾಗ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಪುತ್ರ ನಗರಸಭೆ ಮಾಜಿ ಸದಸ್ಯ ಎಂ.ಎ ಅಜಿತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. 
    ಎಂ.ಎ ಅಜಿತ್ ಮಾತನಾಡಿ, ಗುಂಪಿನ ಮಧ್ಯದಲ್ಲಿ ಏಕಾಏಕಿ ಸಹಾಯಕ ಉಪ ಠಾಣಾಧಿಕಾರಿ ಬಂದಿದ್ದಾರೆ. ಇದು ಗುಂಪಿನಲ್ಲಿದ್ದವರ ಅರಿವಿಗೆ ಬಂದಿಲ್ಲ. ತಳ್ಳಾಟ ನಡೆಸಲಾಗಿದ್ದು, ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ ವಿನಾಃಕಾರಣ ಯಾರನ್ನೋ ಕರೆತಂದು ಅವರಿಂದ ೩ ಜನ ಅಮಾಯಕ ಯುವಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿ,  ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. 
    ಪ್ರತಿಭಟನೆಯಲ್ಲಿ ಸ್ಥಳೀಯರು ಪಾಲ್ಗೊಂಡು ಪೊಲೀಸರ ಕ್ರಮದ ವಿರುದ್ಧ ಧಿಕ್ಕಾರ ಹಾಕಿದರು. 

ಶ್ರೀಉತ್ತರಾದಿಮಠದಿಂದ ಉಕ್ಕಿನ ನಗರದಲ್ಲಿ ಶ್ರೀಮನ್ನ್ಯಾಯಸುಧಾಮಂಗಳ ಮಹೋತ್ಸವ

ಜಗದ್ಗುರು ಶ್ರೀಮನ್ಮದ್ವಾಚಾರ್ಯಮೂಲಮಹಾಸಂಸ್ಥಾನ ಶ್ರೀಉತ್ತರಾದಿಮಠದಿಂದ ನ.೯ರವರೆಗೆ ಒಟ್ಟು ೭ ದಿನಗಳ ಕಾಲ ಅನೇಕ ಮಾಧ್ವಪೀಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ ಭದ್ರಾವತಿ ನಗರದಲ್ಲಿ ಆಯೋಜಿಸಲಾಗಿರುವ ಶ್ರೀ ೧೦೦೮ ಶ್ರೀ ಸತ್ಯಾತ್ಮತೀರ್ಥಶ್ರೀಪಾದಂಗಳವರಿಂದ ೧೩ನೇ ಶ್ರೀಮನ್ನ್ಯಾಯಸುಧಾಮಂಗಳಮಹೋತ್ಸವ ಹಾಗೂ ಸುಧಾಮಂಡನಾಚಾರ್ಯರಾದ ಶ್ರೀ ೧೦೦೮ ಶ್ರೀ ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರ ೨೮ನೇ ಪಾದುಕಾಮಹಾಸಮಾರಾಧನಾ ಮಹೋತ್ಸವ ಅಂಗವಾಗಿ ಶುಕ್ರವಾರ ಸುಧಾ-ಸರ್ವಮೂಲಗ್ರಂಥಗಳ ಭವ್ಯ ಶೋಭಾಯಾತ್ರೆ ನಡೆಯಿತು. 
    ಭದ್ರಾವತಿ:  ಜಗದ್ಗುರು ಶ್ರೀಮನ್ಮದ್ವಾಚಾರ್ಯಮೂಲಮಹಾಸಂಸ್ಥಾನ ಶ್ರೀಉತ್ತರಾದಿಮಠದಿಂದ ನ.೯ರವರೆಗೆ ಒಟ್ಟು ೭ ದಿನಗಳ ಕಾಲ ಅನೇಕ ಮಾಧ್ವಪೀಠಾಧಿಪತಿಗಳ ದಿವ್ಯ ಸಾನಿಧ್ಯದಲ್ಲಿ ನಗರದಲ್ಲಿ ಆಯೋಜಿಸಲಾಗಿರುವ ಶ್ರೀ ೧೦೦೮ ಶ್ರೀ ಸತ್ಯಾತ್ಮತೀರ್ಥಶ್ರೀಪಾದಂಗಳವರಿಂದ ೧೩ನೇ ಶ್ರೀಮನ್ನ್ಯಾಯಸುಧಾಮಂಗಳಮಹೋತ್ಸವ ಹಾಗೂ ಸುಧಾಮಂಡನಾಚಾರ್ಯರಾದ ಶ್ರೀ ೧೦೦೮ ಶ್ರೀ ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರ ೨೮ನೇ ಪಾದುಕಾಮಹಾಸಮಾರಾಧನಾ ಮಹೋತ್ಸವ ಅಂಗವಾಗಿ ಶುಕ್ರವಾರ ಸುಧಾ-ಸರ್ವಮೂಲಗ್ರಂಥಗಳ ಭವ್ಯ ಶೋಭಾಯಾತ್ರೆ ನಡೆಯಿತು. 
    ಜನ್ನಾಪುರ ಶ್ರೀಮಜ್ಜಯತೀರ್ಥ ಗುರುಸಾರ್ವಭೌಮರ ಹಾಗು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ ಮತ್ತು ಜಯಶ್ರೀ ವೃತ್ತದ ಮಹಿಳಾ ಸಮಾಜದ ಆವರಣದಲ್ಲಿ ಕಾರ್ಯಕ್ರಮಗಳು ಜರುಗುತ್ತಿದ್ದು, ಶ್ರೀ ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರಿಂದ ಪಾದುಕಾ ಮಹಾಸಮರಾಧನೆ ನೆರವೇರಿತು. 
    ಬೆಳಿಗ್ಗೆ ಶ್ರೀ ಮೂಲರಾಮದೇವರ ಸಂಸ್ಥಾನ ಪೂಜೆ ಹಾಗು ಉಪಸ್ಥಿತ ಪೀಠಾಧಿಪತಿಗಳಿಂದ ಸಂಸ್ಥಾನ ಪೂಜೆ, ಪರೀಕ್ಷಾ ಹಾಗು ಅನುವಾದ ಮತ್ತು ಮಧ್ಯಾಹ್ನ ತೀರ್ಥಪ್ರಸಾದ ವಿನಿಯೋಗ ನಡೆಯಿತು. 
    ಶ್ರೀಸತ್ಯಪ್ರಮೋದತೀರ್ಥರು-ಜೀವನ ಮತ್ತು ಸಾಧನೆ, ಶ್ರೀಸತ್ಯಪ್ರಮೋದತೀರ್ಥರ ಶಿಷ್ಯವಾತ್ಸಲ್ಯ ವಿಶೇಷ ಉಪನ್ಯಾಸಗಳು ಜರುಗಿದವು.  ಶಿರೂರು ಮಠದ ಶ್ರೀ ವೇದವರ್ಧನತೀರ್ಥರು ಮತ್ತು ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥರು ಹಾಗು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರು ದಿವ್ಯ ಸಾನಿಧ್ಯವಹಿಸಿ ಅನುಗ್ರಹಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. 

ಗಂಗಣ್ಣ ನಿಧನ

 ಗಂಗಣ್ಣ   
    ಭದ್ರಾವತಿ :ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ಕಾರ್ಮಿಕ ಗಂಗಣ್ಣ(೭೮) ದಾವಣಗೆರೆ ಕೆಟಿಜೆ ನಗರದಲ್ಲಿ ಮಂಗಳವಾರ ನಿಧನ ಹೊಂದಿದರು. 
    ಪತ್ನಿ ಜಯಮ್ಮ, ಪತ್ರಕರ್ತ ಹಿರಿಯ ಪುತ್ರ ಜಿ. ಮಹಂತೇಶ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಬುಧವಾರ ಇವರ ಅಂತ್ಯ ಸಂಸ್ಕಾರ ನೆರವೇರಿತು. ಗಂಗಣ್ಣ ತಾಲೂಕು ಕುರುಬರ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ನೌಕರರ ಕಲ್ಯಾಣ ಕೇಂದ್ರ ಹಾಗು ತಾಲೂಕು ಕುರುಬರ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

ದೇವಸಗಾಯಂ ನಿಧನ

    ದೇವಸಗಾಯಂ 
    ಭದ್ರಾವತಿ : ನಗರದ ಹುತ್ತಾ ಕಾಲೋನಿ ನಿವಾಸಿ ದೇವಸಗಾಯಂ(೬೧) ಶುಕ್ರವಾರ ಮುಂಜಾನೆ ನಿಧನ ಹೊಂದಿದರು. 
    ಇವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ೯ ಗಂಟೆಗೆ ನ್ಯೂಟೌನ್ ಬೈಪಾಸ್ ರಸ್ತೆ ಸಮೀಪದ ಕ್ರೈಸ್ತ ಸಮಾಧಿಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 
 

ಗುತ್ತಿಗೆ ಕಾರ್ಮಿಕರ ಸಂಘಟನೆಯಿಂದ ನೂತನ ಕಾರ್ಯಪಾಲಕ ನಿರ್ದೇಶಕರ ಭೇಟಿ : ಚರ್ಚೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಅವರನ್ನು ಶುಕ್ರವಾರ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಗುತ್ತಿಗೆ ಕಾರ್ಮಿಕರ ಸಂಘಟನೆಯಿಂದ ಭೇಟಿ ಮಾಡಿ ಚರ್ಚಿಸಲಾಯಿತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕ ಅನೂಪ್ ಕುಮಾರ್ ಅವರನ್ನು ಶುಕ್ರವಾರ ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ) ಗುತ್ತಿಗೆ ಕಾರ್ಮಿಕರ ಸಂಘಟನೆಯಿಂದ ಭೇಟಿ ಮಾಡಿ ಚರ್ಚಿಸಲಾಯಿತು. 
    ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಕಾರ್ಯಕಾರಿ ಸಮಿತಿ ಸದಸ್ಯರನ್ನೊಳಗೊಂಡ ತಂಡ ಹೂಗುಚ್ಛ ನೀಡಿ ಸ್ವಾಗತಿಸುವ ಮೂಲಕ ಗುತ್ತಿಗೆ ಕಾರ್ಮಿಕರು ತಿಂಗಳ ಪೂರ್ತಿ ಕೆಲಸವಿಲ್ಲದೆ ಅಲ್ಪ ದಿನಗಳ ಕೆಲಸದಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಲಾಯಿತು. ಅಲ್ಲದೆ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಹ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಗುತ್ತಿಗೆ ಕಾರ್ಮಿಕರ ಸಮಸ್ಯೆಗಳು ಬಗೆಹರಿಯುವ ವಿಶ್ವಾಸ ಅನೂಪ್ ಕುಮಾರ್ ಕಾರ್ಮಿಕರಿಗೆ ವ್ಯಕ್ತಪಡಿಸಿದರು. 
    ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷ ದೇವೇಂದ್ರ, ಪ್ರಧಾನ ಕಾರ್ಯದರ್ಶಿ ಸತೀಶ ಅರುಣಾಚಲ, ಕಾರ್ಯದರ್ಶಿ ಐಸಾಕ್ ಲಿಂಕನ್, ಖಜಾಂಚಿ ಶಿವನಾಗು ಮತ್ತು
    ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಲ್.ಆರ್ ನವೀನ, ಎಚ್. ಹರೀಶ್, ಮಂಜುನಾಥ್, ವೆಂಕಟೇಶ್ ಮತ್ತು ಬಿ.ಎಸ್ ಅರುಣ ತಂಡದಲ್ಲಿ ಉಪಸ್ಥಿತರಿದ್ದರು.