ಭದ್ರಾವತಿ ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ ಸುಮಾರು ೧೩ ಜನರನ್ನು ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ಪತ್ತೆ ಮಾಡಿ ಆರೋಗ್ಯ ತಪಾಸಣೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುವ
ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಭದ್ರಾವತಿ : ನಗರಕ್ಕೆ ವಿವಿಧೆಡೆಗಳಿಂದ ಆಗಮಿಸಿದ ಸುಮಾರು ೧೩ ಜನರನ್ನು ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ಪತ್ತೆ ಮಾಡಿ ಆರೋಗ್ಯ ತಪಾಸಣೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಇಬ್ಬರು ಮುಂಬಯಿ ನಗರದಿಂದ ಬೆಂಗಳೂರಿಗೆ ಬಂದು ನಂತರ ಲಾರಿ ಮೂಲಕ ನಗರಕ್ಕೆ ಆಗಮಿಸಿದ್ದಾರೆ. ಪಕ್ಕದ ಜಿಲ್ಲೆ ದಾವಣಗೆರೆಯಿಂದ ೬ ಜನರು ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಗ್ಯಾಸ್ ಹಾಗೂ ಗೂಡ್ಸ್ ಗಾಡಿಗಳ ಮೂಲಕ ೫ ಜನ ಬೆಂಗಳೂರಿನಿಂದ ಬಂದಿದ್ದಾರೆ. ಇವರೆಲ್ಲರನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಕಾರ್ಯಾಚರಣೆ ತಂಡದಲ್ಲಿ ಹಿರಿಯ ಆರೋಗ್ಯ ಸಹಾಯಕ ನಿೀಲೇಶ್ ರಾಜ್, ಡಿ ದರ್ಜೆ ನೌಕರ ಮಂಜುನಾಥ್, ಚಾಲಕರಾದ ರಫೀಕ್ ಮತ್ತು ಕಾಂತರಾಜ್ ಪಾಲ್ಗೊಂಡಿದ್ದರು ಎಂದು ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ತಿಳಿಸಿದೆ.