ಭದ್ರಾವತಿಯಲ್ಲಿ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಆರ್ಯ ವೈಶ್ಯ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜೂ. ೧೬: ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರು ಆರ್ಯವೈಶ್ಯ ಸಮಾಜದ ಮೇಲೆ ಹೊಂದಿರುವ ವಿಶ್ವಾಸಕ್ಕೆ ನಗರದ ಆರ್ಯ ವೈಶ್ಯ ಸಮಾಜ ಬಂಧುಗಳು ಕೃತಜ್ಞತೆ ಸಲ್ಲಿಸುವ ಜೊತೆಗೆ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಆರ್ಯ ವೈಶ್ಯ ಸಮಾಜ ಅಧ್ಯಕ್ಷ ಬಿ.ಆರ್ ಬದರಿನಾರಾಯಣ, ಕಾರ್ಯದರ್ಶಿ ಸತೀಶ್, ಖಜಾಂಚಿ ರಾಘವೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಸತ್ಯಲಕ್ಷ್ಮಿ, ವನಿತಾ, ಸ್ವರೂಪ ರಾಣಿ, ಸಮಾಜದ ಮಾಜಿ ಅಧ್ಯಕ್ಷ ಕಾ.ರಾ ನಾಗರಾಜ್, ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಕೆ.ಬಿ ಅಶೋಕನಾಯ್ಕ ಅವರನ್ನು ಕೇಸರಿ ಪೇಟದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕೇಸರಿ ಪೇಟದೊಂದಿಗೆ ಸನ್ಮಾನ:
ತಾಲೂಕು ಪಂಚಾಯಿತಿಗೆ ಮಂಗಳವಾರ ಆಗಮಿಸಿದ್ದ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಕೇಸರಿ ಪೇಟದೊಂದಿಗೆ ಸದಸ್ಯ ತಿಪ್ಪೇಶ್ರಾವ್ ಸನ್ಮಾನಿಸಿ ಗೌರವಿಸಿದರು.
ಅಲ್ಲದೆ ಶಾಸಕರಾದ ಬಿ.ಕೆ ಸಂಗಮೇಶ್ವರ್ ಮತ್ತು ಕೆ.ಬಿ ಅಶೋಕನಾಯ್ಕ ಅವರನ್ನು ಸಹ ಸನ್ಮಾನಸಿ ಗೌರವಿಸಿದ್ದು, ಎಲ್ಲರ ಗಮನ ಸೆಳೆಯಿತು.
ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.