Friday, June 19, 2020

ಹಕ್ಕುಪತ್ರ ವಿತರಣೆ, ಖಾತೆ ಮಾಡುವಲ್ಲಿ ಅವ್ಯವಹಾರ

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕರಾವೇ ಆಗ್ರಹ

ವಸತಿ ಯೋಜನೆ ಹಾಗೂ ೯೪ಸಿ ಯೋಜನೆಯಡಿ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  ಹಕ್ಕುಪತ್ರ  ವಿತರಣೆ ಹಾಗೂ ಖಾತೆ ಮಾಡುವಲ್ಲಿ ಅವ್ಯವಹಾರ ನಡೆದಿದ್ದು,  ಈ ಹಿನ್ನಲೆಯಲ್ಲಿ ತಕ್ಷಣ ಸಂಪೂರ್ಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ) ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ವ್ಯವಸ್ಥಾಪಕ ಶಿವಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೧೯: ವಸತಿ ಯೋಜನೆ ಹಾಗೂ ೯೪ಸಿ ಯೋಜನೆಯಡಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  ಹಕ್ಕುಪತ್ರ  ವಿತರಣೆ ಹಾಗೂ ಖಾತೆ ಮಾಡುವಲ್ಲಿ ಅವ್ಯವಹಾರ ನಡೆದಿದ್ದು,  ಈ ಹಿನ್ನಲೆಯಲ್ಲಿ ತಕ್ಷಣ ಸಂಪೂರ್ಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ) ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ವ್ಯವಸ್ಥಾಪಕ ಶಿವಕುಮಾರ್ ಮೂಲಕ ಮನವಿ ಸಲ್ಲಿಸಲಾಯಿತು. 
ಕೂಡ್ಲಿಗೆರೆ ಹೋಬಳಿ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೦೧೫-೧೬ನೇ ಸಾಲಿನಿಂದ ೨೦೧೯-೨೦ರ ವರೆಗೆ ೯೪ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರ ಸ್ಥಳ, ಜಾಗದ ಭಾವಚಿತ್ರ ಹಾಗೂ ಹಳೇಯ ಮನೆಗಳನ್ನು ಪರಿಶೀಲಿಸದೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗಿದೆ. ಅಲ್ಲದೆ ಈ ಹಕ್ಕುಪತ್ರಗಳಿಗೆ ಪಂಚಾಯಿತಿಯಲ್ಲಿ ಬೇಕಾಬಿಟ್ಟಿಯಾಗಿ ಖಾತೆ ಮಾಡಿ ಕೊಡಲಾಗಿದೆ. ಮನೆಗಳನ್ನು ಮಂಜೂರು ಮಾಡಿಕೊಡುವ ಮೊದಲು ಅಡಮಾನ ಪತ್ರ  ನೋಂದಾಣಿ ಮಾಡಿಸಿರುವುದಿಲ್ಲ. ಅನುಭವದ ಆಧಾರದಲ್ಲಿ ನಿರ್ಗತಿಕರಿಗೆ ಜಾಗ ನೀಡುವ ಬದಲು ಉಳ್ಳವರಿಗೆ ನೀಡಲಾಗಿದೆ. ಬೇರೆಡೆ ಮನೆ ಮತ್ತು ಜಮೀನು ಇದ್ದರೂ ಸಹ ಹಕ್ಕುಪತ್ರ ನೀಡಿ, ಖಾತೆ ಮಾಡಿಕೊಡಲಾಗಿದೆ ಎಂದು ಆರೋಪಿಸಿದರು. 
ವಿವಿಧ ವಸತಿ ಯೋಜನೆಯಡಿ ಮನೆ ನಿರ್ಮಾಣದ ಮಂಜೂರಾತಿ ಪಡೆದಿರುವ ಫಲಾನುಭವಿಗಳು ಸುಮಾರು ೨೦ ರಿಂದ ೩೦ ಲಕ್ಷ ರು. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಅಲ್ಲದೆ ಈ ಮನೆಗಳ ಮುಂದೆ ಸರ್ಕಾರದ ಯೋಜನೆಯ ನಾಮಫಲಕ ಅಳವಡಿಸದೆ ಹಾಗೂ ಸರ್ಕಾರ ನಿಗದಿಪಡಿಸಿರುವ ೫ ಲಕ್ಷ ರು. ಒಳಗಿನ ನಿಬಂಧನೆಯನ್ನು ಉಲ್ಲಂಘಿಸಲಾಗಿದೆ. ಆರ್ಥಿಕವಾಗಿ ಸದೃಢರಾಗಿರುವವರು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಇವರಿಗೆ ಸರ್ಕಾರದ ೧.೫ ಲಕ್ಷ ರು. ಆರ್ಥಿಕ ನೆರವಿನ ಅವಶ್ಯಕತೆ ಇರುವುದಿಲ್ಲ. ಈ ಎಲ್ಲಾ ವಿಚಾರಗಳನ್ನು ಪರಿಶೀಲಿಸಿದಾಗ ಅವ್ಯವಹಾರ ನಡೆದಿರುವುದು ಕಂಡು ಬರುತ್ತದೆ. ಈ ಹಿನ್ನಲೆಯಲ್ಲಿ ತಕ್ಷಣ ಸಂಪೂರ್ಣ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 
ಕರಾವೇ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ನೇತೃತ್ವ ವಹಿಸಿದ್ದರು. ಕಾರ್ಯದರ್ಶಿ ಸಂದೇಶ್‌ಕುಮಾರ್, ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಶಿವು, ಟೋನಿ, ರಮೇಶ್, ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಯುವ ನಾಯಕ ರಾಹುಲ್ ಗಾಂಧಿ ಜನ್ಮ ದಿನ : ಹಣ್ಣು, ದಿನಸಿ ಸಾಮಗ್ರಿ ವಿತರಣೆ

ಕಾಂಗ್ರೆಸ್ ಪಕ್ಷದ ಯುವ ನಾಯಕ, ಸಂಸದ ರಾಹುಲ್‌ಗಾಂಧಿ ಜನ್ಮ ದಿನವನ್ನು ಶುಕ್ರವಾರ ಕಾಗದನಗರದ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. 
ಭದ್ರಾವತಿ, ಜೂ. ೧೯: ಕಾಂಗ್ರೆಸ್ ಪಕ್ಷದ ಯುವ ನಾಯಕ, ಸಂಸದ ರಾಹುಲ್‌ಗಾಂಧಿ ಜನ್ಮ ದಿನವನ್ನು ಶುಕ್ರವಾರ ಕಾಗದನಗರದ ಎಂಪಿಎಂ ಬಡಾವಣೆಯಲ್ಲಿರುವ ಸಂಜೀವಿನ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. 
ಕೊರೋನಾ ಮಹಾಮಾರಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಬರುವ ಮೂಲಕ ರಾಹುಲ್‌ಗಾಂಧಿ ಜನ್ಮ ದಿನವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ವಿಶೇಷವಾಗಿ ಆಚರಿಸಿ ಹಿರಿಯ ನಾಗರಿಕರ ಆರೈಕೆ ಕೇಂದ್ರಕ್ಕೆ ಹಣ್ಣು ಹಾಗೂ ಅಗತ್ಯವಿರುವ ದಿನಸಿ ಸಾಮಗ್ರಿ ವಿತರಿಸಲಾಯಿತು. 
ಶಾಸಕ ಬಿ.ಕೆ ಸಂಗಮೇಶ್ವರ್ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಉಪಾಧ್ಯಕ್ಷೆ ಮಂಜುಳ ರಾಮಚಂದ್ರ, ಎಸ್‌ಸಿ ವಿಭಾಗದ ರಾಜ್ಯ ಸಂಚಾಲಕ ಬಿ.ಪಿ ರಾಘವೇಂದ್ರ, ತಾಲೂಕು ಅಧ್ಯಕ್ಷ ಅಧ್ಯಕ್ಷ ಅರುಣ್, ಉಪಾಧ್ಯಕ್ಷ ಮಹೇಶ್, ಯುವ ಘಟಕದ ಅಧ್ಯಕ್ಷ ವಿನೋದ್‌ಕುಮಾರ್, ಮುಖಂಡರಾದ ಜಯರಾಜ್, ಬಿ.ಟಿ ನಾಗರಾಜ್, ಪ್ರಾನ್ಸಿಸ್, ಮುಕುಂದಪ್ಪ, ಪ್ರಕಾಶ್‌ರಾವ್, ವಿಲ್ಸನ್, ಅಣ್ಣೋಜಿರಾವ್, ರಘು, ರೂಪನಾರಾಯಣ್ ಹಾಗೂ ಆರೈಕೆ ಕೇಂದ್ರದ ಮೇಲ್ವಿಚಾರಕಿ ಸವಿತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೫೦ ಲಕ್ಷ ರು. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ

ಭದ್ರಾವತಿಯಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರರವರ ಸಂಸದರ ನಿಧಿಯಿಂದ ಮಂಜೂರಾದ ೫೦ ಲಕ್ಷ ರು. ವೆಚ್ಚದ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ಹಳೇನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶಾಸಕ ಬಿ.ಕೆ.ಸಂಗಮೇಶ್ವರ ನೆರವೇರಿಸಿದರು.
ಭದ್ರಾವತಿ, ಜೂ. ೧೯:   ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರರವರ ಸಂಸದರ ನಿಧಿಯಿಂದ ಮಂಜೂರಾದ ೫೦ ಲಕ್ಷ ರು. ವೆಚ್ಚದ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ಹಳೇನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶಾಸಕ ಬಿ.ಕೆ.ಸಂಗಮೇಶ್ವರ ನೆರವೇರಿಸಿದರು.
ವೀರಶೈವ ಸಮಾಜದ ಅಧ್ಯಕ್ಷ ಆರ್. ಮಹೇಶ್ ಕುಮಾರ್, ಕಾರ್ಯದರ್ಶಿ ಶಿವಕುಮಾರ್, ಬಿ.ಕೆ. ಜಗನ್ನಾಥ್, ಸುರೇಶ್, ರುದ್ರಪ್ಪ, ಷಣ್ಮುಖಪ್ಪ, ಎಂ.ವಾಗೀಶ್ ಕೋಠಿ, ಚನ್ನೇಶ್ ಕುಮಾರ್, ಚನ್ನೇಶ್, ಸಿದ್ದಲಿಂಗಯ್ಯ, ಶಿವಯೋಗಿ ಮಠದ್, ಆಡವೀಶಯ್ಯ, ಡಾ.ಎಸ್.ಎಸ್ ವಿಜಯಾದೇವಿ, ನಾಗರತ್ನ, ಕಲ್ಪನ, ಸುಜಾತ, ನಾಗರತ್ನ, ಯಶೋಧ, ಪ್ರಭಾಕರ್, ಮಂಗೋಟೆ ರುದ್ರೇಶ್, ಮಂಜುನಾಥ್, ರಾಮನಾಥ್ ಬರ್ಗೆ, ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.  ಮಹೇಶ್ವರಯ್ಯ, ವೇ.ಚಿನ್ನಯ್ಯ ಹಿರೇಮಠ್ ಮತ್ತು ಶಂಕರಯ್ಯ ಹಿರೇಮಠ್ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 

Thursday, June 18, 2020

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ಸರ್ಕಾರಿ ಶಾಲೆಗಳ ಆರಂಭಕ್ಕೂ ಮೊದಲು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘದ ವತಿಯಿಂದ ಗುರುವಾರ ಭದ್ರಾವತಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯರಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೧೮: ಸರ್ಕಾರಿ ಶಾಲೆಗಳ ಆರಂಭಕ್ಕೂ ಮೊದಲು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘದ ವತಿಯಿಂದ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯರಿಗೆ ಮನವಿ ಸಲ್ಲಿಸಲಾಯಿತು. 
ಶಾಲಾ ಪ್ರಾರಂಭದ ಮುಂಚಿತವಾಗಿ ಎಲ್ಲಾ ಶಾಲೆಗಳಿಗೆ ಸ್ಯಾನಿಟೈಸರ್, ಮಾಸ್ಕ್‌ಗಳು, ಗ್ಲೌಸ್‌ಗಳು, ಥರ್ಮಾ ಟೆಸ್ಟರ್‌ಗಳನ್ನು ವಿತರಿಸುವುದು. ೨೦೨೦-೨೧ನೇ ಸಾಲಿನ ಪಠ್ಯ ಪುಸ್ತಕ, ಸಮವಸ್ತ್ರ, ಶುಚಿ ಪ್ಯಾಡ್‌ಗಳನ್ನು ಆಯಾ ಶಾಲೆಗಳಿಗೆ ಸರಬರಾಜು ಮಾಡುವುದು. ಸಿ.ಆರ್.ಪಿಗಳು ಮಾಹಿತಿಗಳನ್ನು ಶಾಲೆಗಳಿಗೆ ಭೇಟಿ ಮಾಡಿ ಸಂಗ್ರಹಿಸುವುದು ಮತ್ತು ಸ್ಯಾಟ್ಸ್ ಮಾಹಿತಿಗಳನ್ನು ನಿರ್ವಹಿಸುವುದು. ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರುಗಳಿಗೆ ಆಯಾ ಕ್ಲಸ್ಟರ್‌ಗಳ ಸಿ.ಆರ್.ಪಿಗಳು ಶೈಕ್ಷಣಿಕ ವರ್ಷದ ಮಂಜೂರಾದ ವಿವಿಧ ಅನುದಾನಗಳ ಮಾಹಿತಿಯನ್ನು ತಿಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. 
ಸಂಘದ ಅಧ್ಯಕ್ಷ ಕೆ.ಬಿ ಜುಂಜಾನಾಯ್ಕ್, ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಎಸ್. ಉಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜೂ.೧೯ರಂದು ಸಮುದಾಯ ಭವನದ ಗುದ್ದಲಿ ಪೂಜೆ

ಭದ್ರಾವತಿ, ಜೂ. ೧೮: ನಗರದ ವೀರಶೈವ ಸೇವಾ ಸಮಿತಿ ವತಿಯಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದ ಗುದ್ದಲಿ ಪೂಜೆ ಜೂ.೧೯ರ ಬೆಳಿಗ್ಗೆ ೯ ಗಂಟೆಗೆ ನಡೆಯಲಿದೆ. 
ಸುಮಾರು ೫೦ ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿದ್ದು, ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿರುವರು. 

ವೀರಯೋಧರಿಗೆ ಕೆಜಿಎನ್ ನೌಜವಾನ್ ಕಮಿಟಿ ವತಿಯಿಂದ ಶ್ರದ್ದಾಂಜಲಿ

ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಭದ್ರಾವತಿ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ಯುವಪಡೆ ವತಿಯಿಂದ ಗುರುವಾರ ಕೆಜಿಎನ್ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೧೮:  ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನಗರದ ಅನ್ವರ್ ಕಾಲೋನಿ ಕೆಜಿಎನ್ ನೌಜವಾನ್ ಕಮಿಟಿ ಯುವಪಡೆ ವತಿಯಿಂದ ಗುರುವಾರ ಕೆಜಿಎನ್ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು. 
ಕಮಿಟಿ ಯುವಪಡೆ ಮುಖಂಡರು ಮಾತನಾಡಿ, ಚೀನಾ ದೇಶದ ನಡೆಯನ್ನು ತೀವ್ರವಾಗಿ ಖಂಡಿಸಿದರು. ವೀರಯೋಧರ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಸಂತಾಪ ಸೂಚಿಸಿ ಮೌನಾಚರಣೆ ನಡೆಸಿದರು. 
ನಗರಸಭೆ ಪೌರಾಯುಕ್ತ ಮನೋಹರ್, ಪ್ರಗತಿಪರ ಸಂಘಟನೆಗಳ ಮುಖಂಡ ಮುನಿರ್ ಅಹಮದ್,  ಕಮಿಟಿ ಯುವಪಡೆ ಅಧ್ಯಕ್ಷ ಅಸಾದುಲ್ಲಾ ಖಾನ್, ಉಪಾಧ್ಯಕ್ಷ ಮಹಮದ್ ಶಾಹಿದ್, ಕಾರ್ಯದರ್ಶಿ ಮಹಮ್ಮದ್ ಇಮ್ರಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನದೀಮ್ ಸ್ವಾಗತಿಸಿದರು. ಅಬ್ದುಲ್ ಖದೀರ್ ನಿರೂಪಿಸಿದರು. 

ಬೆಲೆ ಏರಿಕೆಯಿಂದ ನೆಮ್ಮದಿ ಕಳೆದುಕೊಂಡ ಜನಸಾಮಾನ್ಯರು

ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ. ಚಂದ್ರೇಗೌಡ ಆರೋಪ

ಭದ್ರಾವತಿಯಲ್ಲಿ ಗುರುವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ತಹಸೀಲ್ದಾಡ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೧೮: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕುವ ವಾತಾವರಣ ರೂಪಿಸಿಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ನೆಮ್ಮದಿ ಕಳೆದುಕೊಳ್ಳುವಂತಾಗಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಆರೋಪಿಸಿದರು. 
ಅವರು ಗುರುವಾರ ಯುವ ಕಾಂಗ್ರೆಸ್ ಘಟಕದ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. 
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಜೊತೆಗೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರಸ್ತುತ ದೇಶದಲ್ಲಿ ಜನಸಾಮಾನ್ಯರಿಗೆ ಮಾರಕವಾಗಿರುವ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಬಂಡವಾಳಶಾಹಿಗಳು, ಶ್ರೀಮಂತರ ಪರವಾದ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದು, ಶ್ರೀಸಾಮಾನ್ಯರು ಬದುಕುವುದೇ ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
ತಕ್ಷಣ ಪ್ರಧಾನಮಂತ್ರಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 
ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್ ನೇತೃತ್ವ ವಹಿಸಿದ್ದರು. ಮುಖಂಡರಾದ ಪ್ರಾನ್ಸಿಸ್, ರಾಘವೇಂದ್ರ ಸರಾಟೆ, ಯುವ ಘಟಕದ ನಗರ ಅಧ್ಯಕ್ಷ ಕೇಶವ್, ಜಿಲ್ಲಾ ಕಾರ್ಯದರ್ಶಿಗಳಾದ ಸಚಿನ್ ಸಿಂಧ್ಯಾ, ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕಲ್ಪನಾಹಳ್ಳಿ, ಗಂಗಾಧರ್, ವಿನ್‌ಸ್ಟನ್,ನಾಗೇಶ್, ಕಿರಣ್, ಪ್ರವೀಣ್, ಭರತ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇನ್ನಿತರರು ಭಾಗವಹಿಸಿದ್ದರು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.