Thursday, August 20, 2020

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಅರಸು ಜನ್ಮದಿನಾಚರಣೆ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನಾಚರಣೆ ಸರಳವಾಗಿ ನಡೆಯಿತು.
ಭದ್ರಾವತಿ, ಆ. ೨೦: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೦೫ನೇ ಜನ್ಮ ದಿನಚರಣೆ ಗುರುವಾರ ಸರಳವಾಗಿ ನಡೆಯಿತು.
      ವಿದ್ಯಾಸಂಸ್ಥೆಯಲ್ಲಿ ಪ್ರತಿವರ್ಷ ಅರಸುರವರ ಜನ್ಮದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಸಹ ಕೊರೋನಾ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ವಿದ್ಯಾಸಂಸ್ಥೆ ಶಿಕ್ಷಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಬಿಜೆಪಿ ರಾಜ್ಯ ಸರ್ಕಾರದ ಜನವಿರೋಧಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ

ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ

ಭದ್ರಾವತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗು ಜನವಿರೋಧಿ ಕಾಯ್ದೆಗಳ ವಿರುದ್ಧ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೨೦: ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ ಹಾಗು ಜನವಿರೋಧಿ ಕಾಯ್ದೆಗಳ ವಿರುದ್ಧ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
      ರೈತ ವಿರೋಧಿ ಭೂಸುಧಾರಣಾ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಹಾಗು ಕೊರೋನಾ ನಿಯಂತ್ರಣದಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ವಿಷಯದಲ್ಲಿ ಉಚ್ಛನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಆಗ್ರಹಿಸಿದರು.
     ಪ್ರತಿಭಟನೆಯಲ್ಲಿ ಮುಖಂಡರಾದ ಸಿ.ಎಂ ಖಾದರ್, ಬಿ.ಟಿ ನಾಗರಾಜ್, ಬಿ.ಪಿ ರಾಘವೇಂದ್ರ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಮಾತನಾಡಿದರು. ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ನೇತೃತ್ವ ವಹಿಸಿದ್ದರು.
     ಮುಖಂಡರಾದ ಅಣ್ಣೋಜಿರಾವ್, ಪ್ರಕಾಶ್‌ರಾವ್ ದುರೆ, ದಶರಥ ಗಿರಿ, ಬಿ. ಗಂಗಾಧರ್, ಇಸ್ಮಾಯಿಲ್ ಖಾನ್, ಅತ್ತಿಗುಂದ ಗೋಪಾಲಪ್ಪ, ಎಂ. ಶಿವಕುಮಾರ್, ಯುವ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳರಾಮಚಂದ್ರ, ರೂಪಾನಾರಾಯಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಡಿ. ದೇವರಾಜ ಅರಸು ೧೦೫ನೇ ಜನ್ಮದಿನಾಚರಣೆ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನಾಚರಣೆ ಗುರುವಾರ ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ಸರಳವಾಗಿ ನಡೆಯಿತು.
ಭದ್ರಾವತಿ, ಆ. ೨೦: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ೧೦೫ನೇ ಜನ್ಮ ದಿನಚರಣೆ ಗುರುವಾರ ಸರಳವಾಗಿ ನಡೆಯಿತು.
    ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಅರಸುರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಕಾರ್ಯನಿರ್ವಹಣಾಧಿಕಾರಿ ಡಾ. ಜಿ. ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾಧಿಕಾರಿ ಚಿದಾನಂದ, ಅಲ್ಪ ಸಂಖ್ಯಾತ ಮುಖಂಡ ಸಿ.ಎಂ. ಖಾದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಹಿಂದು ವರ್ಗಗಳ ಮುಖಂಡ ಟಿ. ವೆಂಕಟೇಶ್, ಹಿಂದುಳಿದ ವರ್ಗಗಳ ಇಲಾಖೆ ಹಾಗು ತಾಲೂಕು ಕಛೇರಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಇಲಾಖೆಯ ರಮೇಶ್ ಸ್ವಾಗತಿಸಿದರು.

Wednesday, August 19, 2020

ಮನೆ ಕಳ್ಳತನ ಪ್ರಕರಣ : ಇಬ್ಬರ ಸೆರೆ

ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ  ಭದ್ರಾವತಿ ಗ್ರಾಮಾಂತರ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್ ನೇತೃತ್ವದ ತಂಡ ಯಶಸ್ವಿಯಾಗಿದೆ.
ಭದ್ರಾವತಿ, ಆ. ೧೯: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ  ಗ್ರಾಮಾಂತರ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್ ನೇತೃತ್ವದ ತಂಡ ಯಶಸ್ವಿಯಾಗಿದೆ.
     ತಾಲೂಕಿನ ತಡಸ ಗ್ರಾಮದ ನಿವಾಸಿಗಳಾದ ಸೈಯದ್ ವಾರೀಸ್ ಮತ್ತು ಆಸೀಫ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ೪೯ ಸಾವಿರ ರು. ನಗದು ಹಣ, ೧೫ ಸಾವಿರ ರು. ಬೆಲೆ ಬಾಳುವ ೬ ಗ್ರಾಂ. ತೂಕದ ಬಂಗಾರದ ಕಿವಿವಾಲೆ ಹಾಗು ೪ ಸಾವಿರ ರು. ಮೌಲ್ಯದ ಮೊಬೈಲ್ ಸೇರಿದಂತೆ ಒಟ್ಟು ೬೮ ಸಾವಿರ ರು. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.
    ಬಂಧಿತರಿಬ್ಬರು ಆ.೨ರಂದು ಗ್ರಾಮದ ಸಮೀವುಲ್ಲಾ ಎಂಬುವರ ಮನೆಯ ಕಿಟಕಿ ಗಾಜು ಒಡೆದು ನಗದು ಹಣ, ಬಂಗಾರದ ವಾಲೆ ಮತ್ತು ಮೊಬೈಲ್  ಕಳ್ಳತನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
     ಜಿಲ್ಲಾ ರಕ್ಷಣಾಧಿಕಾರಿಗಳು, ಹೆಚ್ಚುವರಿ ರಕ್ಷಣಾಧಿಕಾರಿಗಳು, ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್ ನಾಯಕರವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
   ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ್, ಸಿಬ್ಬಂದಿಗಳಾದ ನಾಗರಾಜ, ಆದರ್ಶಶೆಟ್ಟಿ, ಉದಯಕುಮಾರ್, ಚಂದ್ರಶೇಖರ್ ಪಾಲ್ಗೊಂಡಿದ್ದರು.

ಸರ್ಕಾರದ ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಣೆ ಆಚರಿಸಿ

ಭದ್ರಾವತಿಯಲ್ಲಿ ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಪೊಲೀಸ್ ನಗರ ವೃತ್ತ ನಿರೀಕ್ಷಕ ನಂಜಪ್ಪ ನೇತೃತ್ವದಲ್ಲಿ ಶಾಂತಿ ಸಭೆ ಜರುಗಿತು.
ಭದ್ರಾವತಿ, ಆ. ೧೯: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಗಣೇಶೋತ್ಸವ ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಶಾಂತಿಯುತವಾಗಿ ಆಚರಿಸುವಂತೆ ಕೋರಲಾಯಿತು.
        ಪೊಲೀಸ್ ನಗರವೃತ್ತ ನಿರೀಕ್ಷಕ ನಂಜಪ್ಪ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಸರ್ಕಾರ ಈ ಬಾರಿ ಗಣೇಶೋತ್ಸವ ಆಚರಿಸಲು ಹಲವು ಷರತ್ತುಗಳೊಂದಿಗೆ ಮಾರ್ಗಸೂಚಿ ಪ್ರಕಟಿಸಿದ್ದು, ಅದರಂತೆ ಯಾವುದೇ ರೀತಿಯಲ್ಲೂ ಮಾರ್ಗಸೂಚಿ ಉಲ್ಲಂಘನೆಯಾಗದಂತೆ   ಸಂಘಟನೆಗಳ ಆಯೋಜಕರು ಎಚ್ಚರವಹಿಸಬೇಕೆಂದು ಸೂಚಿಸಲಾಯಿತು.
     ಜಿಲ್ಲೆಯಲ್ಲಿ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಎಲ್ಲರೂ ಮಾರ್ಗಸೂಚಿಗಳನ್ನು ತಿಳಿದುಕೊಳ್ಳುವ ಜೊತೆಗೆ ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಕೋರಲಾಯಿತು.
      ಸಭೆಯಲ್ಲಿ ಪಾಲ್ಗೊಂಡಿದ್ದ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾತನಾಡಿ, ಈ ಬಾರಿ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಯಾವ ರೀತಿ ಆಚರಿಸುತ್ತಾರೋ ಅದೇ ರೀತಿ ನಗರದಲ್ಲೂ ಅಚರಿಸುವುದಾಗಿ ತಿಳಿಸಿದರು.
      ಮುಖಂಡರಾದ ವಿ. ಕದಿರೇಶ್, ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಗಿರೀಶ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಿಹಿ ಹಂಚಿಕೆಯೊಂದಿಗೆ ವಿಶ್ವ ಛಾಯಾಗ್ರಹಣ ದಿನ ಆಚರಣೆ

ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಬುಧವಾರ ೧೮೧ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಸರಳವಾಗಿ ನಡೆಯಿತು.
ಭದ್ರಾವತಿ, ಆ. ೧೯: ತಾಲೂಕು ಛಾಯಾಗ್ರಾಹಕರ ಸಂಘದ ವತಿಯಿಂದ ಬುಧವಾರ ೧೮೧ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಸರಳವಾಗಿ ನಡೆಯಿತು.
       ಕೊರೋನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಛಾಯಾಗ್ರಾಹಕರು ಉದ್ಯೋಗವಿಲ್ಲದೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಈ ನಡುವೆ ಸಂಘಟನೆ ಸದಸ್ಯರ ಹಿತಕಾಪಾಡುವಲ್ಲಿ  ಸಾಕಷ್ಟು ಶ್ರಮಿಸುತ್ತಿದೆ. ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸ್ಥಳೀಯ ಆಡಳಿತಗಳಿಗೆ, ಜಿಲ್ಲಾದಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿ ಕೊನೆಯಾಗುವವರೆಗೂ ಜೀವನ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.
     ಈ ನಡುವೆಯೂ ಸದಸ್ಯರೆಲ್ಲರೂ ಒಂದೆಡೆ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಸೇರಿ ಸಿಹಿ ಹಂಚುವ ಮೂಲಕ ಸರಳವಾಗಿ ವಿಶ್ವ ಛಾಯಾಗ್ರಹಣ ದಿನ ಆಚರಿಸಿದರು. ಸಂಘದ ಅಧ್ಯಕ್ಷ ರಾಮಕೃಷ್ಣ ನೇತೃತ್ವ ವಹಿಸಿದ್ದರು.

ಕೋಟ್ಪಾ ಕಾಯ್ದೆಯಡಿ ವಿವಿಧೆಡೆ ದಾಳಿ : ೩೦ ಪ್ರಕರಣ ದಾಖಲು

ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಬುಧವಾರ ತಾಲೂಕಿನ ವಿವಿಧೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ನಡೆಸಿತು.  
ಭದ್ರಾವತಿ, ಆ. ೧೯:  ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ ನೇತೃತ್ವದ ತಂಡ ಬುಧವಾರ ತಾಲೂಕಿನ ವಿವಿಧೆಡೆ ಕೋಟ್ಪಾ ಕಾಯ್ದೆಯಡಿ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು ೩೦ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
    ನಗರದ ಸಿ.ಎನ್ ರಸ್ತೆ, ತರೀಕೆರೆ ರಸ್ತೆ ಸೇರಿದಂತೆ ವಿವಿಧೆಡೆ ಅಂಗಡಿ, ಮುಂಗಟ್ಟುಗಳು ಹಾಗೂ ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಲಾಗಿದ್ದು,  ಒಟ್ಟು ೫,೪೦೦ ರು. ದಂಡ ವಸೂಲಾತಿ ಮಾಡಲಾಗಿದೆ. ಜೊತೆಗೆ ತಂಬಾಕು ಉತ್ಪನ್ನಗಳ ದುಷ್ಟರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
     ತಂಡದ ಕಾರ್ಯಾಚರಣೆಯಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಇ. ಕವಿತ.ಇ, ಬಿ.ಹೆಚ್.ಇ.ಓ ಮಧುಮತಿ,  ಹಿರಿಯ ಆರೋಗ್ಯ ಸಹಾಯಕನೀಲೇಶ್ ರಾಜ್, ಕಿರಿಯ ಆರೋಗ್ಯ ಸಹಾಯಕ ಶಶಿಕುಮಾರ್, ಡಿ. ದರ್ಜೆ ನೌಕರ ಕೃಷ್ಣ, ತಂಬಾಕು ನಿಯಂತ್ರಣ ವಿಭಾಗದ ರವಿರಾಜ್,  ಪೋಲಿಸ್ ಸಿಬ್ಬಂದಿಗಳಾದ ಚಿಕ್ಕಪ್ಪ, ಅಂತೋಣಿ ಮೋಹನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.