Sunday, November 29, 2020

ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ಉಚಿತ ರಕ್ತದಾನ ಶಿಬಿರ

ಭದ್ರಾವತಿ ನಗರಸಭೆ ವಾರ್ಡ್ ನಂ.೨೨ರ ಉಜ್ಜನೀಪುರದಲ್ಲಿ ಭಾನುವಾರ ಮಾಜಿ ಶಾಸಕ ಎಂ ಜೆ ಅಪ್ಪಾಜಿ ಹಾಗೂ ಮುಖಂಡ ಪೆರುಮಾಳ್ ಸ್ಮರಣಾರ್ಥ ಉಚಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ನ. ೨೯ : ನಗರಸಭೆ ವಾರ್ಡ್ ನಂ.೨೨ರ ಉಜ್ಜನೀಪುರದಲ್ಲಿ ಭಾನುವಾರ ಮಾಜಿ ಶಾಸಕ ಎಂ ಜೆ ಅಪ್ಪಾಜಿ ಹಾಗೂ ಮುಖಂಡ ಪೆರುಮಾಳ್ ಸ್ಮರಣಾರ್ಥ ಉಚಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶಿಬಿರದ ನೇತೃತ್ವ ನಗರಸಭಾ ಸದಸ್ಯ ಬದರಿನಾರಾಯಣ ವಹಿಸಿದ್ದರು. ಮುಖಂಡರಾದ ಆರ್ ಕರುಣಾಮೂರ್ತಿ, ಎಂ ಎ ಅಜಿತ್, ಬಸವರಾಜ ಆನೆಕೊಪ್ಪ, ಗುಣಶೇಖರ,  ಜೆಡಿಎಸ್ ಕಾರ್ಯಕರ್ತರು, ಎಂ ಜೆ ಅಪ್ಪಾಜಿ ಅಭಿಮಾನಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Saturday, November 28, 2020

ನ.೨೯ರಂದು ರಾಷ್ಟ್ರೀಯ ಬಜರಂಗದಳ ಹೊಸಮನೆ ಘಟಕ ಉದ್ಘಾಟನೆ


ಭದ್ರಾವತಿ, ನ. ೨೮: ಹಲವಾರು ವರ್ಷಗಳಿಂದ ಹಿಂದೂ ಧರ್ಮ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ಬಜರಂಗದಳ ಹೊಸಮನೆ ಘಟಕದ ಉದ್ಘಾಟನೆ ನ.೨೯ರಂದು ಸಂಜೆ ೫.೩೦ಕ್ಕೆ ನಡೆಯಲಿದೆ.
     ಶಿವಾಜಿ ವೃತ್ತದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಧರ್ಮ ಮತ್ತು ರಾಷ್ಟ್ರೀಯತೆ ಕುರಿತು ಬಾಲ ವಾಗ್ಮಿ ಹಾರಿಕ ಮಂಜುನಾಥ್ ಭಾಷಣ ಮಾಡಲಿದ್ದು, ರಾಷ್ಟ್ರೀಯ ಬಜರಂಗದಳದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿ.ವಿ ಚಂದನ್‌ರಾವ್ ಕೋರಿದ್ದಾರೆ.

ಎರಡು ದಿನಗಳ ಅಭ್ಯಾಸ ವರ್ಗಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಚಾಲನೆ

ಭಾರತೀಯ ಜನತಾ ಪಕ್ಷದ ವತಿಯಿಂದ ಭದ್ರಾವತಿ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಅಭ್ಯಾಸ ವರ್ಗ ಶನಿವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಉದ್ಘಾಟಿಸಿದರು.
ಭದ್ರಾವತಿ, ನ. ೨೮: ಭಾರತೀಯ ಜನತಾ ಪಕ್ಷದ ವತಿಯಿಂದ ನಗರದ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಅಭ್ಯಾಸ ವರ್ಗ ಶನಿವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ಉದ್ಘಾಟಿಸಿದರು.
    ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಜಿ. ಧರ್ಮಪ್ರಸಾದ್, ಬಿ.ಕೆ ಶ್ರೀನಾಥ್, ಶಿವರಾಜ್, ವೆಂಕ್ಯಾನಾಯ್ಕ್, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ್, ಮಂಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಪಕ್ಷದ ವಿವಿಧ ಮೋರ್ಚಾಗಳ, ಶಕ್ತಿ ಕೇಂದ್ರಗಳ, ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಅಭ್ಯಾಸ ವರ್ಗದಲ್ಲಿ ಪಾಲ್ಗೊಂಡಿದ್ದರು.  

ಎಸ್‌ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿ ಛಲವಾದಿ ಕೃಷ್ಣ ನೇಮಕ

ಛಲವಾದಿ ಕೃಷ್ಣ
ಭದ್ರಾವತಿ, ನ. ೨೮: ಭಾರತೀಯ ಜನತಾ ಪಕ್ಷದ ಎಸ್‌ಸಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಹೊಸಮನೆ ನಿವಾಸಿ ಛಲವಾದಿ ಕೃಷ್ಣ ನೇಮಕಗೊಂಡಿದ್ದಾರೆ.
ಕೃಷ್ಣರವರು ಸುಮಾರು ೨೫ ವರ್ಷಗಳಿಂದ ಪಕ್ಷದಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಹಿಂದೆ ಎಸ್‌ಸಿ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಇವರಿಗೆ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು, ಎಸ್‌ಸಿ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಒಕ್ಕಲಿಗರು ಸೇರಿದಂತೆ ಎಲ್ಲಾ ಸಮಾಜದವರ ನಿಗಮ ಮಂಡಳಿ ರಚನೆ ಮಾಡಿ

ಜನತಾದಳ(ಸಂಯುಕ್ತ) ವತಿಯಿಂದ ನ.೩೦ರಂದು ಸರ್ಕಾರಕ್ಕೆ ಮನವಿ

ಶಶಿಕುಮಾರ್ ಎಸ್. ಗೌಡ   ಬಾಬುದೀಪಕ್ ಕುಮಾರ್
ಭದ್ರಾವತಿ, ನ. ೨೮: ರಾಜ್ಯದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗು ಸುಮಾರು ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿದ್ದು, ಇವುಗಳಿಗೂ ನಿಗಮ ಮಂಡಳಿ ರಚನೆ ಮಾಡಬೇಕೆಂದು ಆಗ್ರಹಿಸಿ ನ.೩೦ರಂದು ಬೆಳಿಗ್ಗೆ ೧೧ ಗಂಟೆಗೆ ಜನತಾದಳ(ಸಂಯುಕ್ತ) ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಹಾಗು ಸಂಘಟನಾ ಕಾರ್ಯದರ್ಶಿ ಬಾಬು ದೀಪಕ್‌ಕುಮಾರ್ ತಿಳಿಸಿದ್ದಾರೆ.
      ಬೆಂಗಳೂರು ಮಹಾನಗರ ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ, ಪಿಟೀಲು ವಿದ್ವಾಂಸರಾದ ಚೌಡಯ್ಯ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳು ರಾಜಕೀಯ, ಸಾಹಿತ್ಯ, ಕಲೆ, ಶೈಕ್ಷಣಿಕ, ರಂಗಭೂಮಿ, ಚಲನಚಿತ್ರ, ಕೃಷಿ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರೂ ಸಹ ಶೇ.೭೫ರಷ್ಟು ಒಕ್ಕಲಿಗರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಈ ಹಿನ್ನಲೆಯಲ್ಲಿ ನಿಗಮ ರಚನೆ ಮಾಡುವುದು ಸೂಕ್ತವಾಗಿದೆ. ಇದೆ ರೀತಿ ರಾಜ್ಯದಲ್ಲಿ ೧೫೦ಕ್ಕೂ ಹೆಚ್ಚು ಸಣ್ಣಪುಟ್ಟ ಸಮುದಾಯಗಳಿದ್ದು, ಈ ಸಮುದಾಯಗಳಿಗೂ ನಿಗಮ ಮಂಡಳಿ ರಚನೆ ಮಾಡಬೇಕಾಗಿದೆ. ಎಲ್ಲಾ ಸಮಾಜದವರು ಹಂತ ಹಂತವಾಗಿ ಅಭಿವೃದ್ಧಿ ಹೊಂದಬೇಕೆಂಬುದು ಪಕ್ಷದ ಆಶಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದು, ಎಲ್ಲಾ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಕ್ಷಾತೀತವಾಗಿ ಪಾಲ್ಗೊಳ್ಳುವ ಮೂಲಕ ಸಹಕರಿಸುವಂತೆ ಕೋರಿದ್ದಾರೆ.

ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಎಸ್. ರಾಜಶೇಖರ ಉಪ್ಪಾರ ನೇಮಕ

ಎಸ್. ರಾಜಶೇಖರ ಉಪ್ಪಾರ
ಭದ್ರಾವತಿ, ನ. ೨೮: ಭಾರತೀಯ ಜನತಾ ಪಕ್ಷದ ಓಬಿಸಿ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಎಸ್ ರಾಜಶೇಖರ ಉಪ್ಪಾರ ನೇಮಕಗೊಂಡಿದ್ದಾರೆ.
     ಕಳೆದ ೧೫ ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಈ ಹಿಂದೆ ಹೊಸಮನೆ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪಕ್ಷ ಸೇರ್ಪಡೆಗೂ ಮೊದಲು ವಿದ್ಯಾರ್ಥಿ ಪರಿಷತ್‌ನಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ತಾಲೂಕು ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇವರನ್ನು ಓಬಿಸಿ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.




Friday, November 27, 2020

ನ.೨೯ರಂದು ವಿದ್ಯುತ್ ಇಲ್ಲ

ಭದ್ರಾವತಿ, ನ.೨೮: ಮೆಸ್ಕಾಂ ನಗರ ಉಪವಿಭಾಗದ ಘಟಕ-೫ರ ವ್ಯಾಪ್ತಿಯ ಮಾಚೇನಹಳ್ಳಿ ೧೧೦/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.೨೯ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
      ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಡೈರಿ ವೃತ್ತ, ಜೇಡಿಕಟ್ಟೆ, ವಿಶ್ವೇಶ್ವರಯ್ಯನಗರ, ಶಿವರಾಮನಗರ, ಬಿ.ಎಚ್ ರಸ್ತೆ, ರಾ.ಮೀ.ಪೋ.ಪ ವಸತಿ ಗೃಹಗಳು, ಜಯಂತಿ ಗ್ರಾಮ, ರಾಮಮೂರ್ತಿ ಮಿನರಲ್ಸ್, ಬಾಳೇನಹಳ್ಳಿ, ಗೌಡ್ರಕೊಪ್ಪ, ವೀರಭದ್ರ ಕಾಲೋನಿ, ಹೊನ್ನವಿಲೆ, ಶೆಟ್ಟಿಹಳ್ಳಿ, ಮಾಚೇನಹಳ್ಳಿ, ಮಲ್ನಾಡ್ ಆಸ್ಪತ್ರೆ, ಅರೇಕೊಪ್ಪ, ಬಿದರೆ, ನಿದಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಆಚಾರಿ ಕ್ಯಾಂಪ್, ರೆಡ್ಡಿ ಕ್ಯಾಂಪ್ ಹಾಗು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.