ಭದ್ರಾವತಿ, ಜ. ೬: ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಮ್ಮನವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.
ಜಾತ್ರಾ ಮಹೋತ್ಸವದ ಅಂಗವಾಗಿ ಒಂದು ವಾರದವರೆಗೆ ಪ್ರತಿ ದಿನ ಅಮ್ಮನವರಿಗೆ ವಿಶೇಷ ಆಲಂಕಾರ, ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಕೊನೆಯ ದಿನ ಕೆಂಡದ ಆರತಿ ಸೇವೆ, ಉತ್ಸವ ಮೆರವಣಿಗೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುದವು.
ಬುಧವಾರ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಕೋವಿಡ್-೧೯ರ ನಡುವೆಯೂ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಬಿ.ಎಚ್ ರಸ್ತೆ ಹಾಗು ಉಂಬ್ಳೆಬೈಲು ರಸ್ತೆಗಳಲ್ಲಿ ವಿದ್ಯುತ್ ದೀಪಗಳಿಂದ ನಿರ್ಮಾಣಗೊಂಡ ಆಕರ್ಷಕವಾದ ದೇವಾನುದೇವತೆಗಳ ಪ್ರದರ್ಶಕಗಳು(ಡಿಸ್ ಪ್ಲೇ) ನೋಡುಗರ ಮನಸೂರೆಗೊಂಡವು. ನೂರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.
ಚಿತ್ರ: ಡಿ೬-ಬಿಡಿವಿಟಿ೪
ಭದ್ರಾವತಿ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಮ್ಮನವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.