Thursday, April 15, 2021

ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಎಚ್. ಶ್ರೀನಿವಾಸ್


ಎಚ್. ಶ್ರೀನಿವಾಸ್
   ಭದ್ರಾವತಿ, ಏ. ೧೫: ತಾಲೂಕು ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವ ಮುಖಂಡ ಎಚ್. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
   ಉಪಾಧ್ಯಕ್ಷರಾಗಿ ಆರ್. ಮಂಜುನಾಥ್, ಕಾರ್ಯದರ್ಶಿಯಾಗಿ ಶೈಲೇಶ್‌ಕುಮಾರ್ ಮತ್ತು ಖಜಾಂಚಿಯಾಗಿ ರೇಣುಕಯ್ಯ ಆಯ್ಕೆಯಾಗಿದ್ದಾರೆ. ಈ ಹಿಂದೆ ರಾಮಕೃಷ್ಣ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಚ್. ಶ್ರೀನಿವಾಸ್ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ.

ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪುತ್ರ ಬಿ.ಎಂ ಮಂಜುನಾಥ್ ಸೇರಿದಂತೆ ಹಲವು ಮಂದಿ ನಾಮಪತ್ರ ಸಲ್ಲಿಕೆ

    ಭದ್ರಾವತಿ, ಏ. ೧೫: ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಮೋಹನ್ ಪುತ್ರ ಬಿ.ಎಂ ಮಂಜುನಾಥ್ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ೭ನೇ ವಾರ್ಡ್‌ಗೆ ಸ್ಪರ್ಧಿಸಿದ್ದು, ಗುರುವಾರ ತಮ್ಮ ಬೆಂಬಲಿಗರು, ಕುಟುಂಬ ವರ್ಗದವರೊಂದಿಗೆ ನಾಮಪತ್ರ ಸಲ್ಲಿಸಿದರು.
    ನಗರಸಭೆ ಮಾಜಿ ಅಧ್ಯಕ್ಷ  ಬಿ.ಕೆ ಮೋಹನ್ ಈ ಬಾರಿ ೨೨ನೇ ವಾರ್ಡ್ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಇವರ ಪುತ್ರ ಬಿ.ಎಂ ಮಂಜುನಾಥ್ ೭ನೇ ವಾರ್ಡ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
     ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿ.ಕೆ ಮೋಹನ್, ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್ ಹಾಗು ಕುಟುಂಬ ವರ್ಗದವರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.



     ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ನಾಮಪತ್ರ ಸಲ್ಲಿಕೆ :
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮೂಲಕ ಸಂಘ ಪರಿವಾರದಲ್ಲಿ ಗುರುತಿಸಿಕೊಂಡು ರಾಜಕೀಯ ಪ್ರವೇಶಿಸಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್ ಗುರುವಾರ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
    ಮೂಲತಃ ಲೆಕ್ಕ ಪರಿಶೋಧಕರಾಗಿರುವ ಧರ್ಮಪ್ರಸಾದ್ ಹಲವು ಹೋರಾಟಗಳ ಮೂಲಕ ಗುರುತಿಸಿಕೊಂಡಿದ್ದು, ಇದೆ ಮೊದಲ ಬಾರಿಗೆ ನಗರಸಭೆ ೧೧ನೇ ವಾರ್ಡ್ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪ್ರಸ್ತುತ ಬಿಜೆಪಿ ಮಂಡಲದ ಪ್ರಮುಖರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.



      ಹಿಂದೂ ಸಂಘಟನೆಯ ಯುವ ಮುಖಂಡ ಸುನಿಲ್‌ಕುಮಾರ್ ನಾಮಪತ್ರ ಸಲ್ಲಿಕೆ:
   ಹಲವಾರು ವರ್ಷಗಳಿಂದ ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಬಜರಂಗದಳ ಜಿಲ್ಲಾ ಪ್ರಮುಖ್ ಸುನಿಲ್‌ಕುಮಾರ್ ಈ ಬಾರಿ ನಗರಸಭೆ ಚುನಾವಣೆಗೆ  ಬಿಜೆಪಿ ಪಕ್ಷದ ೧೮ನೇ ವಾರ್ಡಿನ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
    ಹಲವಾರು ಹಿಂದೂಪರ ಹೋರಾಟಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಸುನಿಲ್‌ಕುಮಾರ್ ನಗರದಲ್ಲಿ ಯುವ ಸಮುದಾಯ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸ್ಪರ್ಧೆ ಗಮನ ಸೆಳೆಯುತ್ತಿದೆ. ೫-೬ ದಿನಗಳ ಹಿಂದೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.



      ಅಪ್ಪಾಜಿ ಅಭಿಮಾನಿ ಕೃಷ್ಣರಾಜ್ ನಾಮಪತ್ರ ಸಲ್ಲಿಕೆ :
   ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಅಭಿಮಾನಿಗಳಲ್ಲಿ ಒಬ್ಬರಾಗಿ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಯುವ ಮುಖಂಡ ಕೃಷ್ಣರಾಜ್ ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.
   ಇದೀಗ ವಾರ್ಡ್ ನಂ. ೩೩ರ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದು, ಹಲವಾರು ಸೇವಾ ಕಾರ್ಯಗಳ ಮೂಲಕ ಸ್ಥಳೀಯವಾಗಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸ್ಪರ್ಧೆ ಗಮನ ಸೆಳೆಯುತ್ತಿದೆ.
       ಸ್ನೇಹ ಜೀವಿ ಬಳಗದ ಸದಸ್ಯರ ಸ್ಪರ್ಧೆ:
    ಹಲವಾರು ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪೊಲೀಸ್ ಉಮೇಶ್ ನೇತೃತ್ವದ ಸ್ನೇಹ ಜೀವಿ ಬಳಗದ ಸದಸ್ಯರು ಮೊದಲ ಬಾರಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.
    ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಳಗದ ಸದಸ್ಯರು ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದೀಗ ವಾರ್ಡ್ ನಂ.೩ ಯೋಗೀಶ್, ವಾರ್ಡ್ ನಂ. ೪ ಸುಷ್ಮ, ವಾರ್ಡ್ ನಂ.೮ ವಿನಯ್, ವಾರ್ಡ್ ನಂ.೧೪ ಶೋಭಾ ರವಿಕುಮಾರ್, ವಾರ್ಡ್ ನಂ. ೧೫ ಕಾಂತ ದಿನೇಶ್, ವಾರ್ಡ್ ನಂ. ೧೯ ಹಾಲೇಶ್, ವಾರ್ಡ್ ನಂ. ೨೦ ವರಲಕ್ಷ್ಮೀ, ವಾರ್ಡ್ ನಂ.೨೩ ಶಾಲಿನಿ, ವಾರ್ಡ್ ನಂ. ೨೫ ಸುರೇಶ್, ವಾರ್ಡ್ ೨೬ ಜೀವ, ವಾರ್ಡ್ ನಂ.೨೭ ಮಹಾಲಕ್ಷ್ಮೀ, ವಾರ್ಡ್ ನಂ.೨೮ ಶ್ರೀಧರಮೂರ್ತಿ, ವಾರ್ಡ್ ನಂ.೨೯ ರಮಾವೆಂಕಟೇಶ್, ವಾರ್ಡ್ ನಂ.೩೧ ಜಯಮ್ಮ, ವಾರ್ಡ್ ನಂ.೩೨ ಲತಾ ಸತೀಶ್, ವಾರ್ಡ್ ನಂ.೩೩ ಶಶಿಕಲಾ, ವಾರ್ಡ್ ನಂ.೩೪ ಲತಾ ಮೋರೆ ಮತ್ತು ವಾರ್ಡ್ ನಂ.೩೫ ಸುಧಾ ಶಿವಪ್ಪ ಸೇರಿದಂತೆ ಒಟ್ಟು ೧೮ ಸದಸ್ಯರು ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದಾರೆ.

ನಗರಸಭೆ ಚುನಾವಣೆ : ನಾಮಪತ್ರ ಸಲ್ಲಿಕೆ ಭರಾಟೆ ಜೋರು

   ಭದ್ರಾವತಿ, ಏ. ೧೫: ನಗರಸಭೆ ೩೫ ವಾರ್ಡ್‌ಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿ ಕಂಡು ಬಂದಿತು.
     ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಎಪಿ, ಎಸ್‌ಡಿಪಿಐ, ಜೆಡಿಯು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೊದಲೇ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಪಕ್ಷದ 'ಬಿ' ಫಾರಂ ನೀಡಿದರು. ಉಳಿದಂತೆ ಪಕ್ಷೇತರ ಅಭ್ಯರ್ಥಿಗಳಾಗಿ ಬಹುತೇಕ ಮಂದಿ ನಾಮಪತ್ರ ಸಲ್ಲಿಸಿದರು. ಅಲ್ಲದೆ ಈ ಬಾರಿ ಸ್ನೇಹ ಜೀವಿ ಬಳಗದ ಸದಸ್ಯರು ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.  
    ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಅಧಿಕೃತ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿಕೊಂಡಿವೆ. ಆದರೆ ಜೆಡಿಎಸ್ ಸೇರಿದಂತೆ ಉಳಿದ ಪಕ್ಷಗಳು ಕೊನೆಯವರೆಗೂ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿಕೊಳ್ಳದೆ ಗೌಪ್ಯತೆ ಕಾಪಾಡಿಕೊಂಡು ಬಂದಿವೆ. ಈ ನಡುವೆ ಕೊನೆ ಘಳಿಗೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಹಿರಂಗಗೊಂಡಿದೆ. ಆದರೆ ಪಕ್ಷ ಇನ್ನೂ ಅಧಿಕೃತವಾಗಿ ಘೋಷಿಸಿಕೊಂಡಿಲ್ಲ.



        ೩೫ ವಾರ್ಡ್‌ಗಳ ಜೆಡಿಎಸ್ ಅಭ್ಯರ್ಥಿಗಳು :
    ಜೆಡಿಎಸ್ ೩೫ ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ವಾರ್ಡ್ ನಂ.೧ಕ್ಕೆ ಟಿ. ರೇಖಾ, ವಾರ್ಡ್ ನಂ.೨ಕ್ಕೆ ಶಾಂತಿ, ವಾರ್ಡ್ ನಂ.೩ಕ್ಕೆ ಬಿ.ಆರ್ ಉಮೇಶ್, ವಾರ್ಡ್ ನಂ.೪ಕ್ಕೆ ಆರ್. ಉಷಾ, ವಾರ್ಡ್ ನಂ.೫ಕ್ಕೆ ತಬಸುಮ್ ಸುಲ್ತಾನ್, ವಾರ್ಡ್ ನಂ.೬ಕ್ಕೆ ಚನ್ನಪ್ಪ, ವಾರ್ಡ್ ನಂ.೭ಕ್ಕೆ ಎಂ. ರೇಣುಕಾ, ವಾರ್ಡ್ ನಂ.೮ಕ್ಕೆ ಸೈಯದ್ ಅಜಮಲ್, ವಾರ್ಡ್  ನಂ.೯ಕ್ಕೆ ಪಿ. ಸುಂದರ್ ಮೂರ್ತಿ, ವಾರ್ಡ್ ನಂ.೧೦ಕ್ಕೆ ಆರ್. ಜಯಂತಿ, ವಾರ್ಡ್ ನಂ.೧೧ಕ್ಕೆ ಎ. ಪಚ್ಚೈಯಪ್ಪನ್, ವಾರ್ಡ್ ನಂ.೧೨ಕ್ಕೆ ಎ. ಪಶುಪತಿ, ವಾರ್ಡ್ ನಂ.೧೩ಕ್ಕೆ ಕೆ. ಸುಜಾತ, ವಾರ್ಡ್ ನಂ.೧೪ಕ್ಕೆ ಎಚ್. ಮಂಜುನಾಥ, ವಾರ್ಡ್ ನಂ.೧೫ಕ್ಕೆ ಕೆ.ಎಂ. ಮಂಜುಳಾ, ವಾರ್ಡ್ ನಂ.೧೬ಕ್ಕೆ ವಿಶಾಲಾಕ್ಷಿ, ವಾರ್ಡ್ ನಂ.೧೭ಕ್ಕೆ ಎಂ. ಯೋಗೀಶ್ ಕುಮಾರ್, ವಾರ್ಡ್ ನಂ.೧೮ಕ್ಕೆ ಆರ್. ಕರುಣಾಮೂರ್ತಿ, ವಾರ್ಡ್ ನಂ.೧೯ಕ್ಕೆ ಬಸವರಾಜ್, ವಾರ್ಡ್ ನಂ.೨೦ಕ್ಕೆ ಜಯಶೀಲ, ವಾರ್ಡ್ ನಂ.೨೧ಕ್ಕೆ ವಿಜಯ, ವಾರ್ಡ್ ನಂ.೨೨ಕ್ಕೆ ಬೋರೇಗೌಡ, ವಾರ್ಡ್ ನಂ.೨೩ಕ್ಕೆ ಕೆ.ಪಿ ಪ್ರೇಮಾ, ವಾರ್ಡ್ ನಂ.೨೪ಕ್ಕೆ ಕೋಟೇಶ್ವರರಾವ್, ವಾರ್ಡ್ ನಂ.೨೫ಕ್ಕೆ ಆರ್. ಉದಯ್ ಕುಮಾರ್, ವಾರ್ಡ್ ನಂ.೨೬ಕ್ಕೆ ಪರಮೇಶ್ವರಿ, ವಾರ್ಡ್ ನಂ.೨೭ಕ್ಕೆ ರೂಪಾವತಿ, ವಾರ್ಡ್ ನಂ.೨೮ಕ್ಕೆ ಎಚ್. ಸಂತೋಷ್, ವಾರ್ಡ್ ನಂ.೨೯ಕ್ಕೆ ಆರ್.  ನಾಗರತ್ನ, ವಾರ್ಡ್ ನಂ. ೩೦ಕ್ಕೆ ಜೆ. ಸೋಮಶೇಖರ್, ವಾರ್ಡ್ ೩೨ಕ್ಕೆ ಎಸ್. ಪಲ್ಲವಿ, ವಾರ್ಡ್ ನಂ.೩೨ಕ್ಕೆ ಕೆ.ಆರ್ ಸವಿತಾ, ವಾರ್ಡ್ ನಂ.೩೩ಕ್ಕೆ ರವಿಕುಮಾರ, ವಾರ್ಡ್ ನಂ.೩೪ಕ್ಕೆ ಎಸ್. ಭಾಗ್ಯಮ್ಮ ಮತ್ತು ವಾರ್ಡ್ ನಂ.೩೫ಕ್ಕೆ ನಿಂಗಮ್ಮ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.



      ಎಎಪಿ ೭ ಅಭ್ಯರ್ಥಿಗಳು:
   ಮೊದಲ ಬಾರಿಗೆ ನಗರಸಭೆ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ ೭ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ವಾರ್ಡ್ ನಂ.೪ರಲ್ಲಿ ಗೀತಾ ಬಸವಕುಮಾರ್, ವಾರ್ಡ್ ನಂ.೫ರಲ್ಲಿ ರೇಷ್ಮ ಬಾನು, ವಾರ್ಡ್ ನಂ.೮ರಲ್ಲಿ ಅಬ್ದುಲ್ ಖದೀರ್, ವಾರ್ಡ್ ನಂ. ೧೮ರಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ ಪುತ್ರ ಮಹಮದ್ ಪರ್ವೀಜ್, ವಾರ್ಡ್ ನಂ. ೨೦ರಲ್ಲಿ ಮೈತ್ರಿ ರಮೇಶ್, ವಾರ್ಡ್ ನಂ.೨೪ರಲ್ಲಿ ಎ. ಮಸ್ತಾನ್ ಮತ್ತು ವಾರ್ಡ್ ನಂ.೨೬ರಲ್ಲಿ ಶಿಲ್ಪ ಅಧಿಕೃತ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
    ಕಳೆದ ಸುಮಾರು ೧ ವಾರದಿಂದ ನಗರದಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಹಾಗು ಸ್ಥಳೀಯರಾದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪ್ರಮುಖರಾದ ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಇಬ್ರಾಹಿಂ ಖಾನ್, ರಮೇಶ್, ಬಸವಕುಮಾರ್, ಪರಮೇಶ್ ನಾಯ್ಕ  ಸೇರಿದಂತೆ ಇನ್ನಿತರರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.  
       
    

      ಎಸ್‌ಡಿಪಿಐ ಅಭ್ಯರ್ಥಿಗಳು:
   ಮೊದಲ ಬಾರಿಗೆ ನಗರಸಭೆ ಚುನಾವಣೆಗೆ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ೩ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ವಾರ್ಡ್ ನಂ.೫ರಲ್ಲಿ ನಸೀಮಾ ಖಾನಂ, ವಾರ್ಡ್ ನಂ. ೭ರಲ್ಲಿ ದೇವೇಂದ್ರ ಪಾಟೀಲ್ ಮತ್ತು ವಾರ್ಡ್ ನಂ.೮ರಲ್ಲಿ ಅರ್ಷದ್ ಖುರೇಶಿ ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಸಕ್ರಿಯವಾಗಿದ್ದು, ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ. ಇದೀಗ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಕೆ ನಂತರ ಕಾರ್ಯಕರ್ತರು ಹಳೇನಗರ ಭಾಗದ ವಿವಿಧೆಡೆ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.

Wednesday, April 14, 2021

ನಗರಸಭೆ ಚುನಾವಣೆ : ಏ.೧೫ ನಾಮಪತ್ರ ಸಲ್ಲಿಕೆ ಕೊನೆಯ ದಿನ

೮ ದಿನಗಳ ಅವಧಿಯಲ್ಲಿ ಕೇವಲ ೪ ದಿನ ಅವಕಾಶ, ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ
ಭದ್ರಾವತಿ, ಏ. ೧೪: ಇಲ್ಲಿನ ನಗರಸಭೆ ೩೫ ವಾರ್ಡ್‌ಗಳಿಗೆ ಸುಮಾರು ೨ ವರ್ಷಗಳ ನಂತರ ಎದುರಾಗಿರುವ ಚುನಾವಣೆ ಒಂದೆಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿರುವ ಕಾಲಾವಕಾಶಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಸಹ ವ್ಯಕ್ತವಾಗುತ್ತಿದೆ.
ಚುನಾವಣಾ ಆಯೋಗ ಏ.೮ ರಿಂದ ಏ.೧೫ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಿದೆ. ಆದರೆ ಸುಮಾರು ೮ ದಿನಗಳ ಅವಧಿಯಲ್ಲಿ ಕೇವಲ ೪ ದಿನ ಮಾತ್ರ ನಾಮಪತ್ರ ಸಲ್ಲಿಕೆಗೆ ಅವಕಾಶ ಲಭಿಸಿದೆ. ಉಳಿದ ೪ ದಿನ ಸರ್ಕಾರಿ ರಜಾದಿನಗಳಾಗಿವೆ. ಇದರಿಂದಾಗಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ಆಕಾಂಕ್ಷಿಗಳಿಗೆ ತೊಂದರೆಯಾಗಿದೆ. ಕಡಿಮೆ ಅವಧಿಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗದೆ ಚುನಾವಣಾ ಸ್ಪರ್ಧೆಯಿಂದ ವಂಚಿತರಾಗುವಂತಾಗಿದೆ. ಈ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ಅವಧಿ ವಿಸ್ತರಿಸುವಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗು ಆಕಾಂಕ್ಷಿಗಳು ಮನವಿ ಮಾಡಿದ್ದಾರೆ.

ಆರ್‌ಎಫ್‌ಓ ವಿರುದ್ಧದ ಅಕ್ರಮ ಚಟುವಟಿಕೆಗಳ ತನಿಖೆಗೆ ಸೂಚನೆ

ಭದ್ರಾವತಿ ಅರಣ್ಯ ವಿಭಾಗದ ಶಾಂತಿಸಾಗರ(ಮಾವಿನಕಟ್ಟೆ) ವಲಯದ ವಲಯ ಅರಣ್ಯಾಧಿಕಾರಿ ಮಾವಿನಹೊಳಿಯಪ್ಪನವರ ವಿರುದ್ಧದ ಅಕ್ರಮ ಚಟುವಟಿಕೆಗಳ ದೂರಿನ ತನಿಖೆ ನಡೆಸಲು ಸೂಚಿಸಿರುವುದು.
   ಭದ್ರಾವತಿ, ಏ. ೧೪: ಅರಣ್ಯ ಇಲಾಖೆಯ ತಾಲೂಕಿನ ಶಾಂತಿ ಸಾಗರ ವಲಯದ ವಲಯ ಅರಣ್ಯಾಧಿಕಾರಿ ಮಾವಿನಹೊಳಿಯಪ್ಪನವರ ವಿರುದ್ಧ ದಾಖಲಾಗಿರುವ ದೂರಿನ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
    ತಾಲೂಕಿನ ಅಂತರಗಂಗೆಯ ಸಾಮಾಜಿಕ ಹೋರಾಟಗಾರ ಶಿವಕುಮಾರ್‌ರವರು ಭದ್ರಾವತಿ ಅರಣ್ಯ ವಿಭಾಗದ ಶಾಂತಿಸಾಗರ(ಮಾವಿನಕಟ್ಟೆ) ವಲಯದ ವಲಯ ಅರಣ್ಯಾಧಿಕಾರಿ ಮಾವಿನಹೊಳಿಯಪ್ಪನವರ ವಿರುದ್ಧ ಅರಣ್ಯ ಭೂಮಿ ಒತ್ತುವರಿ, ಅಕ್ರಮವಾಗಿ ಕೆಮ್ಮಣ್ಣು ಸಾಗಾಣಿಕೆ ಸೇರಿದಂತೆ ಒಟ್ಟು ೭ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆದರೆ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಈ ದೂರಿನ ತನಿಖೆಯನ್ನು ಸರಿಯಾಗಿ ಕೈಗೊಳ್ಳದೆ ಕೇವಲ ಒಂದೆರಡು ಸಣ್ಣಪುಟ್ಟ ಪ್ರಕರಣ ದಾಖಲಿಸಿಕೊಂಡು ನಿರ್ಲಕ್ಷ್ಯತನ ವಹಿಸಿದ್ದರು.
    ಈ ಹಿನ್ನಲೆಯಲ್ಲಿ ಶಿವಕುಮಾರ್‌ರವರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ವಿರುದ್ಧ ಅಕ್ರಮ ಚಟುವಟಿಕೆಗಳಿಗೆ ಸಹಕರಿಸುತ್ತಿದ್ದಾರೆಂದು ಆರೋಪಿಸಿ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ಬೆಳವಣಿಗೆಯಿಂದಾಗಿ ಇದೀಗ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ವಿವಿಧೆಡೆ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮ ದಿನ

ಭದ್ರಾವತಿ, ಏ. ೧೪: ಕೊರೋನಾ ನಡುವೆಯೂ ನಗರದ ವಿವಿಧೆಡೆ ಬುಧವಾರ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮ ದಿನ ಅದ್ದೂರಿಯಾಗಿ ಆಚರಿಸಲಾಯಿತು.
ಮಕ್ಕಳನ್ನು ವಿದ್ಯಾವಂತರನ್ನಾಗಿಸಿ :
    ನಗರದ ರಂಗಪ್ಪವೃತ್ತ ಸಮೀಪ ಜೈಭೀಮಾ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ದಲಿತರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದಾಗ ಮಾತ್ರ ಅಂಬೇಡ್ಕರ್‌ರವರ ಆಶಯ ಈಡೇರಿದಂತಾಗುತ್ತದೆ. ಪ್ರತಿಯೊಬ್ಬರು ಅಂಬೇಡ್ಕರ್‌ರವರ  ಆಶಯದಂತೆ ನಡೆದುಕೊಳ್ಳಬೇಕೆಂದರು.


   ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ಕಂದಾಯಾಧಿಕಾರಿ ಪ್ರಶಾಂತ್, ಮಾರುತಿ ಮೆಡಿಕಲ್ ಆನಂದ್, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ತಾಲೂಕು ಸಂಚಾಲಕ ರಂಗನಾಥ್, ನೌಕರರ ಒಕ್ಕೂಟದ ಸಿ. ಜಯಪ್ಪ, ಎಸ್. ಉಮಾ, ನಗರಸಭೆ ಎನ್. ಗೋವಿಂದ, ನವೀನ್, ಹರೀಶ್, ಮಂಜು, ಶಂಕರ್, ಶಶಿ, ಕಿರಣ್, ನಾಗರಾಜ್, ಮಂಜುನಾಥ್, ಎಂ. ಕೃಷ್ಣ, ಗಂಗಾಧರ್, ಕೇಶವ, ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  
       ನಿಗರ್ತಿಕರು, ಅಂಗವಿಕಲರಿಗೆ ಉಚಿತ ಕ್ಷೌರ  :
       ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನದ ಅಂಗವಾಗಿ ತಾಲೂಕು ಸವಿತಾ ಸಮಾಜ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ನಿಗರ್ತಿಕರು, ಅಂಗವಿಕಲರಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು.
   ದಾನಿ ಮಾರುತಿ ಮೆಡಿಕಲ್ಸ್ ಆನಂದ್, ತಾಲೂಕು ಸವಿತಾ ಸಮಾಜ ಅಧ್ಯಕ್ಷ ವಿಶ್ವನಾಥ್, ಪ್ರಮುಖರಾದ ಮಹೇಶ್, ಗೋಪಿ, ಕರಾವೇ ತಾಲೂಕು ಅಧ್ಯಕ್ಷ ಎಂ. ಪರಮೇಶ್ ಹಾಗು ದಯಾಸಾಗರ್ ಟ್ರಸ್ಟ್‌ನ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


        ಅಂಬೇಡ್ಕರ್ ಭವನ ಮುಂಭಾಗ :
   ನಗರದ ಹೃದಯ ಭಾಗದಲ್ಲಿ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ಮುಕ್ತಾಯದ ಹಂತದಲ್ಲಿರುವ ಅಂಬೇಡ್ಕರ್ ಭವನದ ಮುಂಭಾಗ ಈ ಬಾರಿ ವಿಶೇಷವಾಗಿ ಅಂಬೇಡ್ಕರ್ ಭವನ ಹೋರಾಟ ಸಮಿತಿ ವತಿಯಿಂದ ಅಂಬೇಡ್ಕರ್ ಜನ್ಮ ದಿನ ಆಚರಿಸಲಾಯಿತು.
   ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸುವ ಮೂಲಕ ಸಿಹಿ ಹಂಚಲಾಯಿತು. ಹೋರಾಟ ಸಮಿತಿಯ ಪ್ರಮುಖರಾದ ವಿಜಿಯಮ್ಮ, ಬಿ.ಎನ್ ರಾಜು, ಚಂದ್ರಶೇಖರ್, ಸುಬ್ಬೇಗೌಡ, ಬ್ರಹ್ಮಲಿಂಗಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



        ಅಖಿಲ ಭಾರತ ವಿದ್ಯಾರ್ಥಿ ಪರಿಷತ್ :
    ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು. ಆಕಾಶ್, ಮನು, ಅಖಿಲೇಶ್, ಅಶ್ರಿತ, ಸ್ಪೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

        ಛಲವಾದಿ ಸಮಾಜ(ಪರಿಶಿಷ್ಟ ಜಾತಿ):
    ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ತಾಲೂಕು ಛಲವಾದಿ ಸಮಾಜದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಂ ಮಹಾದೇವಯ್ಯ, ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಲೋಕೇಶ್ ಮಾಳೇನಹಳ್ಳಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
 


         ಆಮ್ ಆದ್ಮಿ ಪಾರ್ಟಿ :
    ಆಮ್ ಆದ್ಮಿ ಪಾರ್ಟಿ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು.
     ಪಕ್ಷದ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪರಮೇಶ್ವರಚಾರ್, ಎನ್.ಪಿ ಜೋಸೆಫ್, ಇಬ್ರಾಹಿಂ ಖಾನ್, ಗೀತಾ, ಬಸವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
  

       ಛಲವಾದಿ ಮಹಾಸಭಾ:
   ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು.
   ಮಹಾಸಭಾ ತಾಲೂಕು ಅಧ್ಯಕ್ಷ ಸುರೇಶ್, ಮುಖಂಡರಾದ ಜಯರಾಜ್, ಈ.ಪಿ ಬಸವರಾಜ್, ಜಗದೀಶ್, ಆದಿತ್ಯಶಾಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
      

       ಬಂಜಾರ ಯುವಕರ ಸಂಘ :
    ತಾಲೂಕು ಬಂಜಾರ ಯುವಕರ ಸಂಘದ ವತಿಯಿಂದ ಸಿರಿಯೂರು ಗ್ರಾಮದಲ್ಲಿ  ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
  ಸಿರಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದ್, ಪ್ರಮುಖರಾದ ಶೋಭಾಬಾಯಿ, ಅರುಣ್‌ನಾಯ್ಕ, ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


       ಬಿಜೆಪಿ ನಗರಸಭೆ ೧೦ನೇ ವಾರ್ಡ್ :
  ಭಾರತೀಯ ಜನತಾ ಪಕ್ಷ ನಗರಸಭೆ ೧೦ನೇ ವಾರ್ಡ್‌ನ ಪ್ರಮುಖರು ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನದ ಅಂಗವಾಗಿ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
     ಕರ್ನಾಟಕ ರಾಜ್ಯ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಮಲ್ಲೇಶ್, ಸುನಿಲ್ ಗಾಯಕ್‌ವಾಡ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.


       ವಿಶ್ವೇಶ್ವರಾಯ ವಿದ್ಯಾಸಂಸ್ಥೆ :
   ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಆಚರಿಸಲಾಯಿತು.
    ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪದನಿಮಿತ್ತ ಅಧ್ಯಕ್ಷ ಎನ್. ಕೃಷ್ಣಪ್ಪ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    ಪ್ರಾಧ್ಯಾಪಕ ಡಾ. ಧನಂಜಯ, ಎಂ.ಎಸ್ ಬಸವರಾಜ್, ಕೆ. ನಿಂಗಪ್ಪ, ಶಿವಲಿಂಗೇಗೌಡ, ಎ.ಎಚ್ ಶಕುಂತಲಾ, ಎಂ. ಹೇಮಾವತಿ, ಜೆಸಿಂತಾ ಕೆ. ಚೈತ್ರ, ಕವಿತಾ, ಆರ್. ರವಿ, ಶಿಲ್ಪ, ಎನ್. ರೇಣುಕಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಬಾಬಾ ಸಾಹೇಬ್ ಅಂಬೇಡ್ಕರ್ ಹೋರಾಟದ ಜಾಗೃತಿ ಸಂಕೇತ : ಡಾ. ಬಿ.ಜಿ ಧನಂಜಯ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯರನ್ನು ಸನ್ಮಾನಿಸಲಾಯಿತು.
   ಭದ್ರಾವತಿ, ಏ. ೧೪: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸಾಮಾಜಿಕ ಹೋರಾಟದ ಜಾಗೃತಿ ಸಂಕೇತವಾಗಿದ್ದು, ಅವರ ಆಶಯದಂತೆ ನಾವೆಲ್ಲರೂ ಮುನ್ನಡೆಯಬೇಕಾಗಿದೆ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ತಿಳಿಸಿದರು.
   ಅವರು ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೦ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ದೇಶದಲ್ಲಿ ಚಳುವಳಿಗಳನ್ನು ಹುಟ್ಟು ಹಾಕುವ ಮೂಲಕ ಚಳುವಳಿಗಳಿಗೆ ಒಂದು ರೂಪುರೇಷೆ ಕೊಟ್ಟವರು ಅಂಬೇಡ್ಕರ್. ಅವರು ಚಳುವಳಿಗಳು ಯಾವ ದಿಕ್ಕಿನಲ್ಲಿ ಸಾಗಬೇಕೆಂಬುದನ್ನು ತೋರಿಸಿಕೊಟ್ಟಿದ್ದರು. ಆದರೆ ಇಂದು ಚಳುವಳಿಗಳು ಯಾವ ದಿಕ್ಕಿನಲ್ಲಿ ಸಾಗಬೇಕೆಂಬುದು ತಿಳಿಯದೆ ಗೊಂದಲದ ಗೂಡಾಗಿ ಪರಿಣಮಿಸುತ್ತಿವೆ. ಚಳುವಳಿಗಳು ತಮ್ಮ ಮಹತ್ವ ಕಳೆದುಕೊಳ್ಳುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
   ಅಂಬೇಡ್ಕರ್‌ರವರು ಮನುಕುಲದ ಮಹಾನ್ ನಾಯಕರಾಗಿದ್ದು, ಅವರ ವಿಚಾರಧಾರೆಗಳು ಅಪರೂಪದಲ್ಲಿ ಅಪರೂಪ. ಶೋಷಣೆ ಮುಕ್ತ, ಸರ್ವ ಸಮಾನತೆ ಸಮಾಜ ನಿರ್ಮಾಣ ಇವರ ಆಶಯವಾಗಿತ್ತು.  ದೇಶದಲ್ಲಿ ಸಾಮಾಜಿಕ ಸಮಾನತೆ ಜೊತೆಗೆ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗಗಳ ಮೂಲಕ ಉತ್ತಮ ಆಡಳಿತ ವ್ಯವಸ್ಥೆಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣ ಇವರ ಬಹುದೊಡ್ಡ ಕೊಡುಗೆಯಾಗಿದೆ ಎಂದರು.
    ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಡಿ. ಲಕ್ಷ್ಮೀದೇವಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ನಗರಸಭೆ ಪೌರಾಯುಕ್ತ ಮಹೋಹರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ತಹಸೀಲ್ದಾರ್ ಗ್ರೇಡ್-೨ ರಂಗಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.