ಭದ್ರಾವತಿ ನಗರಸಭೆ ವಾರ್ಡ್ ನಂ.೩೧, ೩೨, ೩೩ ಮತ್ತು ೩೪ರ ನಿವಾಸಿಗಳಿಗೆ ಅನುಕೂಲವಾಗುವಂತೆ ನ್ಯೂಟೌನ್ ಉಂಬ್ಳೆಬೈಲು ರಸ್ತೆಯಲ್ಲಿರುವ ಸೇಂಟ್ ಚಾರ್ಲ್ಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಕೊರೋನಾ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಭಾನುವಾರ ೪ ವಾರ್ಡ್ಗಳ ನಗರಸಭಾ ಸದಸ್ಯರು ಸೇರಿದಂತೆ ಸ್ಥಳೀಯರು ಚಾಲನೆ ನೀಡಿದರು.
ಭದ್ರಾವತಿ, ಜೂ. ೧೩: ನಗರಸಭೆ ವಾರ್ಡ್ ನಂ.೩೧, ೩೨, ೩೩ ಮತ್ತು ೩೪ರ ನಿವಾಸಿಗಳಿಗೆ ಅನುಕೂಲವಾಗುವಂತೆ ನ್ಯೂಟೌನ್ ಉಂಬ್ಳೆಬೈಲು ರಸ್ತೆಯಲ್ಲಿರುವ ಸೇಂಟ್ ಚಾರ್ಲ್ಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಕೊರೋನಾ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಭಾನುವಾರ ೪ ವಾರ್ಡ್ಗಳ ನಗರಸಭಾ ಸದಸ್ಯರು ಸೇರಿದಂತೆ ಸ್ಥಳೀಯರು ಚಾಲನೆ ನೀಡಿದರು.
ನಗರಸಭೆ ಒಟ್ಟು ೩೫ ವಾರ್ಡ್ಗಳ ವ್ಯಾಪ್ತಿಯಲ್ಲಿ ೧೨ ಲಸಿಕಾ ಕೇಂದ್ರಗಳನ್ನು ನಗರಸಭೆ ವತಿಯಿಂದ ತೆರೆಯಲಾಗಿದ್ದು, ಈ ಪೈಕಿ ಇದು ಸಹ ಒಂದಾಗಿದೆ. ನಗರಸಭಾ ಸದಸ್ಯರಾದ ಪಲ್ಲವಿ ದಿಲೀಪ್, ಸವಿತಾ ಉಮೇಶ್, ಆರ್. ಮೋಹನ್ಕುಮಾರ್, ಲತಾ ಚಂದ್ರಶೇಖರ್, ಮುಖಂಡರಾದ ಎನ್. ರಾಮಕೃಷ್ಣ ಸೇರಿದಂತೆ ಸ್ಥಳೀಯ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.
ಹೊಸೂರು ಸಿದ್ದಾಪುರ ಜಿವಿಎಚ್ಪಿಎಸ್ ಶಾಲೆಯ ಸಹ ಶಿಕ್ಷಕರಾದ ಕೆ. ನಾಗರಾಜ ಮತ್ತು ಇಮ್ರಾನ್ ಆಲಿ, ಭಂಡಾರಹಳ್ಳಿ ಜಿಎಚ್ಪಿಎಸ್ ಶಾಲೆಯ ಸಹ ಶಿಕ್ಷಕ ರವಿಕುಮಾರ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನೇಮಿಸಲಾಗಿದೆ.