Monday, August 23, 2021

ಯುವ ಸಂಕಲ್ಪ ಯಾತ್ರೆ : ಸೈಕಲ್ ಜಾಥಾ

೭೫ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಯುವ ಸಂಕಲ್ಪ ಯಾತ್ರೆಯನ್ನು ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೈಕಲ್ ಜಾಥಾ ಮೂಲಕ ನಡೆಸಲಾಯತು.
    ಭದ್ರಾವತಿ, ಆ. ೨೩:  ೭೫ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಯುವ ಸಂಕಲ್ಪ ಯಾತ್ರೆಯನ್ನು ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೈಕಲ್ ಜಾಥಾ ಮೂಲಕ ನಡೆಸಲಾಯತು
    ಜಾಥಾದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್,  ರಾಜ್ಯ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಜಿ. ಆನಂದಕುಮಾರ್, ಯುವ ಮೋರ್ಚಾ ತಾಲೂಕು ಅಧ್ಯಕ್ಷ ವಿಜಯ್‌ರಾಜ್, ಪ್ರಧಾನ ಕಾರ್ಯದರ್ಶಿಗಳಾದ ಯೋಗೇಶ್, ನಕುಲ್, ಜಿಲ್ಲಾ ಕಾರ್ಯದರ್ಶಿ ಧನುಷ್ ಭೋಸ್ಲೆ, ಉಪಾಧ್ಯಕ್ಷ ಕಿರಣ್, ಕೃಷ್ಣ, ಧನ್ಯ, ಜಾನು ಹಾಗೂ ಖಜಾಂಚಿ ವಿಜಯ್, ಪ್ರದೀಪ್, ವಿಜ್ಞೇಶ್, ಮದನ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಆ.೨೪ರಂದು ದಲಿತ ಮುಖಂಡ ಎಂ. ಶ್ರೀನಿವಾಸನ್ ಪುಣ್ಯ ಸ್ಮರಣೆ

ಎಂ. ಶ್ರೀನಿವಾಸನ್
    ಭದ್ರಾವತಿ, ಆ. ೨೩: ದಲಿತ ಮುಖಂಡ, ಪ್ರಗತಿಪರ ಹೋರಾಟಗಾರ ಎಂ. ಶ್ರೀನಿವಾಸನ್ ಅವರ ಮೊದಲ ಪುಣ್ಯ ಸ್ಮರಣೆ ಕಾರ್ಯಕ್ರಮ ಆ.೨೪ರಂದು ಬೆಳಿಗ್ಗೆ ನ್ಯೂಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ನಡೆಯಲಿದೆ.
    ಎಂ. ಶ್ರೀನಿವಾಸನ್ ಜಿಲ್ಲಾ ಆದಿದ್ರಾವಿಡ ತಮಿಳು ಹಿತ ರಕ್ಷಣಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಜೊತೆಗೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಾರ್ಮಿಕ, ರೈತ ಹಾಗು ಪ್ರಗತಿಪರ ಹೋರಾಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಚಿರಪರಿಚಿತರಾಗಿದ್ದರು.
    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾ ಆದಿದ್ರಾವಿಡ ತಮಿಳು ಹಿತ ರಕ್ಷಣಾ ಸಮಿತಿ ಅಧ್ಯಕ್ಷ, ಎಂ. ಶ್ರೀನಿವಾಸನ್ ಪುತ್ರ ಎಸ್. ನಿತ್ಯಾನಂದನ್ ಕೋರಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮಾವೆಂಕಟೇಶ್ ನಾಮಪತ್ರ ಸಲ್ಲಿಕೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿ ರಮಾವೆಂಕಟೇಶ್ ನಾಮಪತ್ರ ಸಲ್ಲಿಸಿದರು.
    ಭದ್ರಾವತಿ, ಆ. ೨೩: ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಬಿಜೆಪಿ ಅಭ್ಯರ್ಥಿ ರಮಾವೆಂಕಟೇಶ್ ನಾಮಪತ್ರ ಸಲ್ಲಿಸಿದರು.
    ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ನೇತೃತ್ವದಲ್ಲಿ ತರೀಕೆರೆ ರಸ್ತೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ತೆರೆಯಲಾಗಿರುವ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
    ಜನ್ನಾಪುರ ಶಕ್ತಿಕೇಂದ್ರದ ಅಧ್ಯಕ್ಷ ನವೀನ್‌ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚನ್ನೇಶ್, ಹನುಮಂತನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್, ಯುವ ಘಟಕದ ಅಧ್ಯಕ್ಷ ವಿಜಯ್ ರಾಜ್, ರೂಪನಾಗರಾಜ್, ಚಂದ್ರಪ್ಪ, ಧನುಷ್ ಬೋಸ್ಲೆ, ನಕುಲ್ ರೇವಣ್‌ಕರ್, ಗೋಕುಲ್ ಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆರಾಧನಾ ಮಹೋತ್ಸವ

ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಸೋಮವಾರ ೩೫೦ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಆ. ೨೩: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಸೋಮವಾರ ೩೫೦ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
    ಬೆಳಿಗ್ಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ, ನಂತರ ಹಲವು ಭಕ್ತರ ಮನೆಗಳಲ್ಲಿ ಪಾದಪೂಜೆ ನಡೆಯಿತು. ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಸಂಜೆ ಹರಿದಾಸ ಮಹಿಳಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಜರುಗಿತು.
    ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ನಿರಂಜನ್ ಆಚಾರ್, ಪವನ್‌ಕುಮಾರ್ ಉಡುಪ, ಪ್ರಮೋದ್, ಪ್ರಧಾನ ಅರ್ಚಕ ಸತ್ಯನಾರಾಯಣಚಾರ್, ಗೋಪಾಲ್‌ಆಚಾರ್, ಶ್ರೀನಿವಾಸಚಾರ್, ಮಾಧುರಾವ್, ಜಯತೀರ್ಥ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ನಗರಸಭೆ ವಾರ್ಡ್ ನಂ.೨೯ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ನಾಮಪತ್ರ ಸಲ್ಲಿಕೆ

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಿದರು.
    ಭದ್ರಾವತಿ, ಆ. ೨೩: ನಗರಸಭೆ ವಾರ್ಡ್ ನಂ.೨೯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ನಾಮಪತ್ರ ಸಲ್ಲಿಸಿದರು.
    ಸಾಮಾನ್ಯ ಮಹಿಳೆಗೆ ಮೀಸಲಾಗಿರುವ ಕ್ಷೇತ್ರಕ್ಕೆ ಹಾಲಿ ನಗರಸಭಾ ಸದಸ್ಯ ಅನಿಲ್‌ಕುಮಾರ್ ತಮ್ಮ ಪತ್ನಿ ಆರ್. ನಾಗರತ್ನ ಅವರನ್ನು ಕಣಕ್ಕಿಳಿಸಿದ್ದು, ಬೆಳಿಗ್ಗೆ ಜನ್ನಾಪುರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆರ್. ನಾಗರತ್ನ ವಿಶೇಷ ಪೂಜೆ ಸಲ್ಲಿಸಿದ ನಂತರ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ  ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿರವರ ನಿವಾಸದವರೆಗೂ ಸಾಗಿ ಅಪ್ಪಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ತರೀಕೆರೆ ರಸ್ತೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ತೆರೆಯಲಾಗಿರುವ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
      ಜೆಡಿಎಸ್ ವರಿಷ್ಠರಾದ ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಜೆ.ಪಿ ಯೋಗೇಶ್, ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ಅನಿಲ್‌ಕುಮಾರ್, ಎಂ.ಎ ಅಜಿತ್, ಡಿ.ಟಿ ಶ್ರೀಧರ್, ಕರಿಯಪ್ಪ, ಲೋಕೇಶ್ವರ್ ರಾವ್, ಎಂ. ರಾಜು, ಬದರಿನಾರಾಯಣ, ನಂಜುಂಡೇಗೌಡ, ಮೈಲಾರಪ್ಪ, ಉಮೇಶ್, ದಿಲೀಪ್, ಕೇಬಲ್ ಸುರೇಶ್, ಪ್ರಕಾಶ್,  ಮಹಾದೇವಯ್ಯ, ನಗರಸಭಾ ಸದಸ್ಯರಾದ ಉದಯ್‌ಕುಮಾರ್, ಕೋಟೇಶ್ವರ್‌ರಾವ್, ರೇಖಾ, ಎಸ್. ಜಯಶೀಲ, ಆರ್. ಮೋಹನ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



Sunday, August 22, 2021

ಚಿನ್ನ ಬೆಳ್ಳಿ ವರ್ತಕ ಬದರಿನಾರಾಯಣ ಶರ್ಮ ನಿಧನ

ಬದ್ರಿನಾರಾಯಣ ಶರ್ಮಾ
    ಭದ್ರಾವತಿ, ಆ. ೨೨:  ಹಳೇನಗರದ ಎನ್‌ಎಸ್‌ಟಿ ರಸ್ತೆ ನಿವಾಸಿ ಚಿನ್ನ ಬೆಳ್ಳಿ ವರ್ತಕ ಬದ್ರಿನಾರಾಯಣ ಶi(೮೮) ಭಾನುವಾರ ಬೆಳಗ್ಗೆ ನಿಧನ ಹೊಂದಿದರು.
     ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು.  ಇವರ ಅಂತ್ಯಕ್ರಿಯೆ ಸಂಜೆ ಜೈನ್ ರುದ್ರಭೂಮಿಯಲ್ಲಿ ನೆರವೇರಿತು. ಎನ್‌ಎಸ್‌ಟಿ ರಸ್ತೆಯ ಚಿನ್ನ ಬೆಳ್ಳಿ ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಮೃತರಿಗೆ ಗೌರವ ಸೂಚಿಸಿದರು.    

ವಾರ್ಡ್ ನಂ.೨೯ರ ಚುನಾವಣೆ : ಆ.೨೩ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

೩ ಪಕ್ಷಗಳಿಂದ ಅಭ್ಯರ್ಥಿಗಳು ಘೋಷಣೆ, ಬಿಜೆಪಿ ಅಭ್ಯರ್ಥಿಯಾಗಿ ರಮಾ ವೆಂಕಟೇಶ್

ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮಾ ವೆಂಕಟೇಶ್ ಆಯ್ಕೆಯಾಗಿದ್ದು, ಬಿಜೆಪಿ ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸೋಮವಾರ ಅಭ್ಯರ್ಥಿಯನ್ನು ಅಭಿನಂದಿಸುವ ಮೂಲಕ ಅಧಿಕೃತವಾಗಿ ಘೋಷಿಸಿದರು.
    ಭದ್ರಾವತಿ, ಆ. ೨೨: ನಗರಸಭೆ ವಾರ್ಡ್ ನಂ.೨೯ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆ.೨೩ರ ಸೋಮವಾರ ಕೊನೆಯ ದಿನವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ೩ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.
    ಕಾಂಗ್ರೆಸ್ ಪಕ್ಷದಿಂದ ನ್ಯಾಯವಾದಿ ಲೋಯಿತಾ ನಂಜಪ್ಪ, ಜೆಡಿಎಸ್ ಪಕ್ಷದಿಂದ ಹಾಲಿ ನಗರಸಭಾ ಸದಸ್ಯ ಅನಿಲ್‌ಕುಮಾರ್ ಅವರ ಪತ್ನಿ ಅರ್. ನಾಗರತ್ನ ಹಾಗು ಬಿಜೆಪಿ ಪಕ್ಷದಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ರಮಾ ವೆಂಕಟೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿವೆ. ೩ ಪಕ್ಷಗಳು ಸಹ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿರುವುದು ವಿಶೇಷವಾಗಿದೆ.
    ಭಾನುವಾರ ಸಂಜೆ ಜನ್ನಾಪುರ ಬಬ್ಬೂರು ಕಮ್ಮೆ ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸಮ್ಮುಖದಲ್ಲಿ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಂ. ಪ್ರಭಾಕರ್, ಪ್ರಮುಖರಾದ ಆರ್.ಎಸ್. ಶೋಭಾ, ಎಂ. ಮಂಜುನಾಥ್, ಚಂದ್ರಪ್ಪ ಸೇರಿದಂತೆ ಇನ್ನಿತರರು ವಾರ್ಡ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ. ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶಕ್ತಿಮೀರಿ ಶ್ರಮಿಸಬೇಕೆಂದು ಕರೆ ನೀಡಿದರು.
    ಅಭ್ಯರ್ಥಿ ರಮಾ ವೆಂಕಟೇಶ್ ಮಾತನಾಡಿ, ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಆತ್ಮ ವಿಶ್ವಾಸ ಹೊಂದಿದ್ದೇನೆ. ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
    ಶಕ್ತಿ ಕೇಂದ್ರದ ಅಧ್ಯಕ್ಷ ನವೀನ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಹನುಮಂತನಾಯ್ಕ, ರೂಪನಾಗರಾಜ್, ಶೈಲಜಾ ರಾಮಕೃಷ್ಣ, ಗಾಯತ್ರಿ ಹಾಗು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
    ಜೆಡಿಎಸ್ ಅಭ್ಯರ್ಥಿಯಿಂದ ಆರ್. ನಾಗರತ್ನ ಈಗಾಗಲೇ ವಾರ್ಡ್ ವ್ಯಾಪ್ತಿಯಲ್ಲಿ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.