Sunday, August 29, 2021

ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಭಾನುವಾರ ರಾತ್ರಿ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.
    ಹಿರೇಮಠದಲ್ಲಿ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ರಾತ್ರಿ ಆಗಮಿಸಿ ಶ್ರೀಗಳಿಗೆ ಹುಟ್ಟುಹಬ್ಬದ ಶುಭಕೋರಿದರು. ಈ ಸಂದರ್ಭದಲ್ಲಿ ಹಿರೇಮಠದ ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಯುವ ಘಟಕದಿಂದ ಬಿಳಿಕಿ ಶ್ರೀಗಳಿಗೆ ಗುರು ನಮನ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಭದ್ರಾವತಿ, ಆ. ೨೯: ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಭಾನುವಾರ ಶ್ರೀ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಶ್ರೀಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಗುರು ನಮನ ಸಲ್ಲಿಸಲಾಯಿತು.
    ಯುವ ಘಟಕದ ರಾಜ್ಯಾಧ್ಯಕ್ಷ ಮನೋಹರ್ ಅಬ್ಲಿಗೆರೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ತಾಲೂಕು ಅಧ್ಯಕ್ಷ ಎಚ್. ಮಂಜುನಾಥ್, ಉಪಾಧ್ಯಕ್ಷರಾದ ಆರ್.ಎನ್ ರುದ್ರೇಶ್, ಬಿ.ಎಸ್ ಶ್ರೀಕಾಂತ್, ಮಹಾದೇವ, ಪ್ರಧಾನ ಕಾರ್ಯದರ್ಶಿ ಕೆ.ಆರ್ ಆನಂದ್, ಖಜಾಂಚಿ ಬಿ.ಎಂ ರಮೇಶ್, ಸಹ ಕಾರ್ಯದರ್ಶಿ ಬಸವರಾಜ, ತಿಪ್ಪೇಸ್ವಾಮಿ, ಆನಂದಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಧರ್ಮಮಾರ್ಗದಿಂದ ಮಾತ್ರ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ : ಕೆ.ಎಸ್ ಈಶ್ವರಪ್ಪ

ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ನೆರವೇರಿಸಿದರು.
    ಭದ್ರಾವತಿ, ಆ. ೨೯: ಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬೇಕಾದರೆ ಎಲ್ಲರೂ ಧರ್ಮ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ ಎಂದು ಪಂಚಾಯತ್ ರಾಜ್ ಹಾಗು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
    ಅವರು ಭಾನುವಾರ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.
ಸಮಾಜದಲ್ಲಿ ನೂರಾರು ಸಮಸ್ಯೆಗಳಿದ್ದು, ಈ ನಡುವೆಯೂ ಮಠಮಂದಿರಗಳು ಸಮಾಜದ ಏಳಿಗೆಗಾಗಿ ಶ್ರಮಿಸುವ ಜೊತೆಗೆ ಉತ್ತಮ ಧರ್ಮ ಸಂಸ್ಕಾರ ನೀಡುತ್ತಿವೆ. ಧರ್ಮ ಮಾರ್ಗದಲ್ಲಿ ಸಾಗಿದರೆ ಮಾತ್ರ ಎಲ್ಲದಕ್ಕೂ ಪರಿಹಾರ ಕೊಂಡುಕೊಳ್ಳಬಹುದಾಗಿದೆ ಎಂದರು.
    ಗುರುಗಳು ತ್ಯಾಗಿಗಳಾಗಿದ್ದು, ಯಾವುದೇ ಸ್ವಾರ್ಥ ಬಯಸದೆ ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿರುತ್ತಾರೆ. ಇಂತಹ ಗುರುಗಳಿಗೆ ಬೆಲೆಕಟ್ಟಲು ಸಾಧ್ಯವಿಲ್ಲ. ಸಮಾಜದ ಏಳಿಗೆಗಾಗಿ ಗುರುಗಳು ಹೇಳಿದಂತೆ ನಡೆದುಕೊಳ್ಳಲು ಸಿದ್ದ. ಬಿಳಿಕಿ ಶ್ರೀ ಮತ್ತು ಬೆಕ್ಕಿನ ಕಲ್ಮಠ ಶ್ರೀಗಳಿಗೆ ದೇವರು ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
    ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೀಠಾಧಿಪತಿಯಾಗಿ ೩೧ ವರ್ಷಗಳು ಕಳೆದಿವೆ. ಯಾವುದೇ ಆದಾಯವಿಲ್ಲದಿದ್ದರೂ ಸಹ ಕೇವಲ ಅಂಚಿನ ಮನೆಯಲ್ಲಿದ್ದ ಮಠ ಇಂದು ಬೃಹದಾಗಿ ಬೆಳೆದಿದೆ. ಸಮಾಜದ ಪ್ರತಿಯೊಬ್ಬರು ಮಠದ ಬೆಳವಣಿಗೆಗೆ ಕಾರಣಕರ್ತರಾಗಿದ್ದಾರೆ. ಮಠವಿದ್ದರೆ ಸಮಾಜ, ಸಮಾಜವಿದ್ದರೆ ಮಠ ಎಂಬುದು ಈ ಮೂಲಕ ಸಾಬೀತು ಮಾಡಿ ತೋರಿಸಲಾಗಿದೆ ಎಂದರು.
    ದಿವ್ಯ ಸಾನಿಧ್ಯವಹಿಸಿದ್ದ ಶಿವಮೊಗ್ಗ ಆನಂದಪುರ ಶ್ರೀ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಮನೆಗೂ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಮಠಗಳು ಸಮಾಜ ಮುಖಿಯಾಗಿರಬೇಕು. ಸರ್ಕಾರ ಮಾಡುವ ಕೆಲಸಗಳನ್ನು ಮಠಮಂದಿರಗಳು ಮಾಡುತ್ತಿವೆ. ಈ ಹಿನ್ನಲೆಯಲ್ಲಿ ಮಠಮಂದಿರಗಳು ಸಹ ಬೆಳವಣಿಗೆ ಹೊಂದಬೇಕು. ಇವುಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರದ್ದಾಗಿದೆ ಎಂದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಅವಶ್ಯಕವಾಗಿದೆ. ಮಠ ಮಂದಿರಗಳು ಪ್ರತಿಯೊಬ್ಬರಿಗೂ ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ. ಮಾನವ ಕುಲದ ಕಲ್ಯಾಣಕ್ಕಾಗಿ ಶ್ರಮಿಸುತ್ತಿವೆ. ಆದರೆ ಸಮಾಜದಲ್ಲಿ ಕೆಲವರು ಧರ್ಮದ ಹೆಸರಿನಲ್ಲಿ ಅಪಪ್ರಚಾರ ನಡೆಸುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
    ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜ್ಞಾನಪ್ರಭು ಸಿದ್ದರಾಮ ರಾಜದೇಶೀಕೇಂದ್ರ ಸ್ವಾಮೀಜಿ, ಶ್ರೀ ವಿರೂಪಾಕ್ಷ ಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಹಾಂತ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುದ್ದಲೀಶ್ವರ ಸ್ವಾಮೀಜಿ, ಡಾ. ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಶ್ರೀ ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ,  ಶ್ರೀ ಚನ್ನವೀರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಾ. ಶ್ರೀ ಬಸವಜಯಚಂದ್ರ ಸ್ವಾಮೀಜಿ, ಶ್ರೀ ಶಶಿಶೇಖರ ಸಿದ್ದಬಸವ ಸ್ವಾಮೀಜಿ ಮತ್ತು ಶ್ರೀ ಮರುಳಸಿದ್ದ ಪಂಡಿತಾರಾಧ್ಯ ಸ್ವಾಮೀಜಿ ಉಪಸ್ಥಿತರಿರುವರು.
    ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ ಕಾಂತೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ, ಹಿರೇಮಠದ ಗೌರವಾಧ್ಯಕ್ಷ ಟಿ.ವಿ ಈಶ್ವರಯ್ಯ, ಮನೋಹರ್ ಅಬ್ಲಿಗೆರೆ, ಸಿದ್ದಲಿಂಗಯ್ಯ, ಪಾಪಿಬಾಯಿ, ಬಿ.ಎಂ. ಸಂತೋಷ್, ಯಶವಂತರಾವ್ ಘೋರ್ಪಡೆ, ಎ. ಮಾಧು, ಬಿ.ಟಿ ನಾಗರಾಜ್, ಎಂ.ಎಸ್ ಜನಾರ್ಧನ ಅಯ್ಯಂಗಾರ್, ಎ.ಟಿ ರವಿ, ನಂದಿ ಮಲ್ಲಿಕಾರ್ಜುನ, ಡಾ.ಜಿ.ಎಂ ನಟರಾಜ್, ಪ್ರಶಾಂತ್, ಸಿದ್ದಬಸಪ್ಪ, ಎಂ.ಎಸ್ ಬಸವರಾಜ್, ವಸಂತ್, ಮಂಜುನಾಥ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  



ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಜನ್ಮ ಸುವರ್ಣ ಮಹೋತ್ಸವ ಹಾಗು ಸುವರ್ಣ ಭವನ ಉದ್ಘಾಟನಾ ಸಮಾರಂಭದಲ್ಲಿ ೫೦ ವರ್ಷ ಪೂರೈಸಿದ ಬಿಳಿಕಿ ಶ್ರೀ ಹಾಗೂ ೭೦ ವರ್ಷ ಪೂರೈಸಿದ ಬೆಕ್ಕಿನಕಲ್ಮಠ ಶ್ರೀಗಳಿಗೆ ಭಕ್ತ ವೃಂದದಿಂದ ಗುರು ನಮನ ಸಲ್ಲಿಸಲಾಯಿತು.  

Saturday, August 28, 2021

ಆ.೩೦ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಭದ್ರಾವತಿ, ಆ. ೨೮: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಆ.೩೦ರಂದು ಪ್ರಾಣಿವಧೆ, ಮಾಂಸ ಮಾರಾಟ ಹಾಗು ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕುರಿ, ಕೋಳಿ ಮತ್ತು ಇತರೆ ಮಾಂಸ ಮಾರಾಟಗಾರರು ಮಾಂಸ ಮಾರಾಟ ಮಾಡುವುದನ್ನು ಹಾಗು ಬಾರ್ & ರೆಸ್ಟೋರೆಂಟ್ ಮತ್ತು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಹ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರಸಭೆ ಪೌರಾಯುಕ್ತರು ಎಚ್ಚರಿಸಿದ್ದಾರೆ.

Friday, August 27, 2021

ಅಂತರ್ಜಾತಿ ವಿವಾಹ : 30ಕ್ಕೂ ಹೆಚ್ಚು ದಂಪತಿಗಳಿಗೆ ರಾಷ್ಟ್ರೀಯ ಉಳಿತಾಯ ಪತ್ರ ವಿತರಣೆ

ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ 3 ವರ್ಷ ಅವಧಿಯ ನಿಶ್ಚಿತ ಠೇವಣಿಯ ರಾಷ್ಟ್ರೀಯ ಉಳಿತಾಯ ಪತ್ರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ವಿತರಿಸಿದರು.
    ಭದ್ರಾವತಿ, ಆ. 27: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ 3 ವರ್ಷ ಅವಧಿಯ ನಿಶ್ಚಿತ ಠೇವಣಿಯ ರಾಷ್ಟ್ರೀಯ ಉಳಿತಾಯ ಪತ್ರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ವಿತರಿಸಿದರು.
    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸುಮಾರು 30ಕ್ಕೂ ಹೆಚ್ಚು ದಂಪತಿಗಳಿಗೆ ಉಳಿತಾಯ ಪತ್ರಗಳನ್ನು ವಿತರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಸಿದ್ದಬಸಪ್ಪ, ಸಹಾಯಕ ನಿರ್ದೇಶಕ ಗ್ರೇಡ್-1 ಎಸ್. ಗೋಪಿನಾಥ್, ವಾರ್ಡ್‌ನ್ ಎಸ್.ವಿ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಛೇರಿಗಾಗಿ ಕಟ್ಟಡ ದಾನ

ಭದ್ರಾವತಿ ನಗರದ ಬಿ.ಎಚ್ ರಸ್ತೆಯಲ್ಲಿರುವ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಛೇರಿಗಾಗಿ ಜನ್ನಾಪುರ ನಿವಾಸಿ ಟಿ.ಆರ್ ಶ್ರೀಧರ್ ಎಂಬುವರು ಜಯಶ್ರೀ ಕಲ್ಯಾಣ ಮಂಟಪದ ಮುಂಭಾಗ ನೂತನವಾಗಿ ಕಟ್ಟಿಸಿರುವ ನಿವಾಸದ ಮೇಲ್ಭಾಗದ ಕಟ್ಟಡದಲ್ಲಿ ಶಾಶ್ವತವಾಗಿ ನೆಲೆಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದು, ಈ ಸಂಬಂಧ ದಾನ ಪತ್ರ ಹಸ್ತಾಂತರಿಸಿದರು.
    ಭದ್ರಾವತಿ, ಆ. ೨೭: ನಗರದ ಬಿ.ಎಚ್ ರಸ್ತೆಯಲ್ಲಿರುವ ಗಾಯತ್ರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಛೇರಿಗಾಗಿ ಜನ್ನಾಪುರ ನಿವಾಸಿ ಟಿ.ಆರ್ ಶ್ರೀಧರ್ ಎಂಬುವರು ಜಯಶ್ರೀ ಕಲ್ಯಾಣ ಮಂಟಪದ ಮುಂಭಾಗ ನೂತನವಾಗಿ ಕಟ್ಟಿಸಿರುವ ನಿವಾಸದ ಮೇಲ್ಭಾಗದ ಕಟ್ಟಡದಲ್ಲಿ ಶಾಶ್ವತವಾಗಿ ನೆಲೆಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
    ಈ ಸಂಬಂಧ ಸೊಸೈಟಿ ಆಡಳಿತ ಮಂಡಳಿಗೆ ದಾನಪತ್ರ ಸಹ ಬರೆದುಕೊಟ್ಟಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ದಾನ ಪತ್ರವನ್ನು ಸೊಸೈಟಿ ಅಧ್ಯಕ್ಷ ಜೆ.ಎನ್ ಆನಂದರಾವ್ ಸ್ವೀಕರಿಸಿದರು. ಸೆ.೧ರಿಂದ ನೂತನ ಕಟ್ಟಡದಲ್ಲಿ ಕಛೇರಿಯ ಕಾರ್ಯ ಚಟುವಟಿಕೆಗಳು ಆರಂಭಗೊಳ್ಳಲಿವೆ.
    ಉಪಾಧ್ಯಕ್ಷ ಕೇಶವಮೂರ್ತಿ, ನಿರ್ದೇಶಕರಾದ ಜಿ. ರಮಾಕಾಂತ, ಸಿ.ಕೆ ರಾಮರಾವ್, ತಾರಾಮಣಿ, ಶ್ವೇತ, ಕೆ. ಮಂಜುನಾಥ್, ಕೆ.ಎಸ್ ಸುಬ್ರಮಣ್ಯ, ಎಸ್.ಸಿ ನೀಲಕಂಠ ಜೋಯ್ಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆ.೨೮ರಂದು ವಿದ್ಯುತ್ ಸ್ಥಗಿತ


ಭದ್ರಾವತಿ, ಆ. ೨೭: ಮೆಸ್ಕಾಂ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.೨೮ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಹೊಸಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರ ಮಠದ ರಸ್ತೆ, ಕನಕನಗರ, ಹಳೇನಗರ, ಕೋಟೆ ಏರಿಯಾ, ಖಾಜಿ ಮೊಹಲ್ಲಾ, ಕಂಚಿನಬಾಗಿಲು, ಕೆಎಸ್‌ಆರ್‌ಟಿಸಿ ಘಟಕದ ಸುತ್ತಮುತ್ತ, ಅಂಬೇಡ್ಕರ್ ನಗರ, ಹನುಮಂತ ನಗರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.