ಭದ್ರಾವತಿ ಪದ್ಮನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ನಗರಸಭಾ ಮಾಜಿ ಸದಸ್ಯ ಹಾಗು ಜನಪರ ವೇದಿಕೆ ಅಧ್ಯಕ್ಷ ದಿವಂಗತ ರಾಮಕೃಷ್ಣೇಗೌಡರು(ಕ್ಯಾಂಟೀನ್ ಗೌಡರು) ಸವಿ ನೆನಪು ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಸೆ. ೨೯: ಸಾಮಾಜಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯವಾದಿ ಟಿ. ಚಂದ್ರೇಗೌಡ ಹೇಳಿದರು.
ಅವರು ಭಾನುವಾರ ನಗರದ ಪದ್ಮನಿಲಯ ಹೋಟೆಲ್ ಸುನಂದ ಸಭಾಂಗಣದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನಗರಸಭಾ ಮಾಜಿ ಸದಸ್ಯ ಹಾಗು ಜನಪರ ವೇದಿಕೆ ಅಧ್ಯಕ್ಷ ದಿವಂಗತ ರಾಮಕೃಷ್ಣೇಗೌಡರು(ಕ್ಯಾಂಟೀನ್ ಗೌಡರು) ಸವಿ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಾಮಾಜಿಕ ಹೋರಾಟದ ಗುಣಗಳನ್ನು ರೂಢಿಸಿಕೊಂಡವರು ಯಾವುದೇ ಪಕ್ಷದಲ್ಲಿರಲಿ ಅವರನ್ನು ಗೌರವಿಸಬೇಕು. ರಾಮಕೃಷ್ಣೇಗೌಡರು ಒಬ್ಬ ಧೀಮಂತ ಹೋರಾಟಗಾರರಾಗಿದ್ದರು. ಜೊತೆಗೆ ಅವರಲ್ಲಿನ ಸಾಮಾಜಿಕ ಕಾಳಜಿ, ಬದ್ದತೆ ಅಪರೂಪವಾಗಿದೆ. ಅಸಹಾಯಕರು, ದೀನದಲಿತರು, ಶೋಷಿತರು, ಬಡವರ್ಗದವರಿಗಾಗಿ ಅವರು ಸಲ್ಲಿಸುತ್ತಿದ್ದ ಸೇವೆ ಶ್ಲಾಘನೀಯವಾಗಿದೆ. ಇಂತಹ ಅಪರೂಪದ ವ್ಯಕ್ತಿಯ ನೆನಪು ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಪ್ರಮುಖರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಮಾಜಿ ಅಧ್ಯಕ್ಷ ಅಧ್ಯಕ್ಷ ಆರ್. ಕರುಣಾಮೂರ್ತಿ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಬಿಸಿಯೂಟ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಹನುಮಮ್ಮ, ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್, ನಗರಸಭೆ ಮಾಜಿ ಸದಸ್ಯ ಗೋವಿಂದಸ್ವಾಮಿ ಸೇರಿದಂತೆ ಇನ್ನಿತರರು ಮಾತನಾಡಿ, ರಾಮಕೃಷ್ಣೇಗೌಡರ ಹೋರಾಟಗಳು ಹಾಗು ಸಾಮಾಜಿಕ ಬದ್ದತೆಗಳನ್ನು ಪ್ರಶಂಸಿಸುವ ಜೊತೆಗೆ ಅವರ ಅವರ ದಾರಿಯಲ್ಲಿ ನಾವೆಲ್ಲರೂ ಸಾಗಬೇಕೆಂದರು.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ, ನ್ಯಾಯವಾದಿ ಎಂ. ಶಿವಕುಮಾರ್, ಬಿ. ಗಂಗಾಧರ್, ಪ್ರಕಾಶ್ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ) ಅಧ್ಯಕ್ಷತೆ ವಹಿಸಿದ್ದರು. ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಮಕೃಷ್ಣೇಗೌಡರ ಪತ್ನಿ ಜಯಮ್ಮ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಮಿತಿಯ ಪ್ರಮುಖರಾದ ಎಂ.ವಿ ಚಂದ್ರಶೇಖರ್, ಬ್ರಹ್ಮಲಿಂಗಯ್ಯ, ಮುಳ್ಕೆರೆ ಲೋಕೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.