ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಭದ್ರಾವತಿ, ಫೆ. ೨೨: ಕುವೆಂಪು ವಿಶ್ವ ವಿದ್ಯಾನಿಲಯದ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆ ಹಾಗು ಇನ್ನಿತರ ಭ್ರಷ್ಟಾಚಾರಗಳ ಕುರಿತು ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದಲ್ಲಿ ಸಿಂಡಿಕೇಟ್ ಸದಸ್ಯರು ವಿಶ್ವ ವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ವಿಶ್ವ ವಿದ್ಯಾನಿಲಯದಲ್ಲಿ ಕಳೆದ ೨ ವರ್ಷಗಳ ಆಡಳಿತ ಮತ್ತು ಹಣಕಾಸು ಕಾರ್ಯಗಳ ನಿರ್ವಹಣೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ದೂರ ಶಿಕ್ಷಣ ಪರಿಷತ್ ಪರೀಕ್ಷೆಗಳನ್ನು ನಡೆಸದೆ ಫಲಿತಾಂಶ ಪ್ರಕಟಿಸಿರುವ ಅಕ್ರಮದ ಬಗ್ಗೆ, ಅಧ್ಯಯನ ಕೇಂದ್ರಗಳಿಂದ ಕೋಟ್ಯಾಂತರ ರು. ಬಾಕಿ ಉಳಿಸಿಕೊಂಡು ವಿಶ್ವ ವಿದ್ಯಾನಿಲಯಕ್ಕೆ ನಷ್ಟ ಉಂಟು ಮಾಡಿರುವ ಅವ್ಯವಹಾರ ಕುರಿತು ಹಾಗು ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಮೇ. ೧೫, ೨೦೧೯ರಂದು(ಜೇಷ್ಠತೆ ಮತ್ತು ಬಡ್ತಿ ಸಂಬಂಧಿತ) ಮತ್ತು ಜ. ೨೧, ೨೦೨೧ರಂದು ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ನಡಾವಳಿಗಳನ್ನು ಹಾಗು ಸಿಂಡಿಕೇಟ್ ನಿರ್ಣಯಗಳನ್ನು ಜಾರಿಯಾಗದಂತೆ ತಡೆದು ಅವುಗಳ ಉಲ್ಲಂಘನೆ ಮಾಡಿರುವ ಬಗ್ಗೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಕುಲಪತಿಗಳ ಅವಧಿಯಲ್ಲಿನ ಆಡಳಿತ ಮತ್ತು ಹಣಕಾಸಿನ ಎಲ್ಲಾ ಕಾರ್ಯ ನಿರ್ವಹಣೆಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ.
ಜಿ. ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಎಚ್.ಬಿ ರಮೇಶ್ ಬಾಬು, ಎಚ್. ರಾಮಲಿಂಗಪ್ಪ ಸೇರಿದಂತೆ ಇನ್ನಿತರ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.