ಭದ್ರಾವತಿಯಲ್ಲಿ ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ವತಿಯಿಂದ ಹೊಸ ನಂಜಾಪುರದ ನಿವೇಶನದಲ್ಲಿ ಪ್ರತಿ ತಿಂಗಳಿನಂತೆ ಈ ತಿಂಗಳು ಸಹ ಹುಣ್ಣಿಮೆ ದಿನ ಸರಳವಾಗಿ ಆಚರಿಸಲಾಯಿತು.
ಭದ್ರಾವತಿ, ಮಾ. ೧೯: ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ವತಿಯಿಂದ ಹೊಸ ನಂಜಾಪುರದ ನಿವೇಶನದಲ್ಲಿ ಪ್ರತಿ ತಿಂಗಳಿನಂತೆ ಈ ತಿಂಗಳು ಸಹ ಹುಣ್ಣಿಮೆ ದಿನ ಸರಳವಾಗಿ ಆಚರಿಸಲಾಯಿತು.
ಬೌದ್ಧ ಧರ್ಮ ಉಪಾಸಕರಾದ ಪ್ರೊ. ಎಚ್. ರಾಚಪ್ಪ ಉಪನ್ಯಾಸ ನಡೆಸಿಕೊಟ್ಟರು. ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಕಾರ್ಯಪಾಲಕ ಇಂಜಿನಿಯರ್ ರಂಗರಾಜಪುರೆ, ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಆಡಳಿತ ಮಂಡಳಿಯ ಪ್ರಮುಖರಾದ ಸುರೇಶ್, ಬದರಿನಾರಾಯಣ, ನಂಜಾಪುರ ಶ್ರೀನಿವಾಸ್, ಎ. ತಿಪ್ಪೇಸ್ವಾಮಿ, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಆರಂಭದಲ್ಲಿ ಗೌತಮ ಬುದ್ಧನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಇತ್ತೀಚೆಗೆ ಸಂಬುದ್ಧ ಧಮ್ಮಾಂಕುರ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದ್ದು, ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ. ಟ್ರಸ್ಟ್ ಹೊಸ ನಂಜಾಪುರದಲ್ಲಿ ನಿವೇಶನ ಹೊಂದುವ ಜೊತೆಗೆ ಇದರ ಅಭಿವೃದ್ಧಿಗೆ ಮುಂದಾಗಿದೆ.