ಬುಧವಾರ, ಮೇ 18, 2022

ಸುಗ್ರಾಮ ಒಕ್ಕೂಟದ ಮಾಸಿಕ ಸಭೆ

ಭದ್ರಾವತಿ ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಮಾಸಿಕ ಸಭೆ ಬುಧವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
    ಭದ್ರಾವತಿ, ಮೇ. ೧೮: ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಮಾಸಿಕ ಸಭೆ ಬುಧವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
    ದಿ ಹಂಗರ್ ಪ್ರಾಜೆಕ್ಟ್ ಕರ್ನಾಟಕ ಮತ್ತು ತರೀಕೆರೆ ವಿಕಸನ ಸಂಸ್ಥೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪಾಲ್ಗೊಂಡು ಒಕ್ಕೂಟದ ಸದಸ್ಯರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಒಕ್ಕೂಟದ ಅಧ್ಯಕ್ಷೆ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯೆ ಗೌರಮ್ಮ ಎಸ್. ಮಹಾದೇವ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಒಕ್ಕೂಟದ ಕಾರ್ಯ ಚಟುವಟಿಕೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.
    ಒಕ್ಕೂಟದ ಉಪಾಧ್ಯಕ್ಷೆ ಪಲ್ಲವಿ, ಗೀತಾ, ಕವಿತ, ಮಾಲತಿ, ಶಾಂತಬಾಯಿ ಸೇರಿದಂತೆ ಸುಮಾರು ೬೦ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

ಪಿಡಿಓಗಳಿಗೆ ಡೇಂಗಿ ಕುರಿತು ಕಾರ್ಯಾಗಾರ

ಭದ್ರಾವತಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೧೮: ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಕಾರ್ಯಾಗಾರಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚಾಲನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಜನಗರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನ ನೀಡುವ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಹಿತಿ ನೀಡಲಾಯಿತು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಆರೋಗ್ಯ ಸಹಾಯಕರಾದ ರೇವತಿ, ಆನಂದಮೂರ್ತಿ, ಶಿವಮೊಗ್ಗ ಎನ್‌ವಿಬಿಡಿಸಿಪಿ ಮೇಲ್ವಿಚಾರಕರು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಿಬ್ಬಂದಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಅಧಿಕಾರ ಸ್ವೀಕಾರ

ಭದ್ರಾವತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
    ಭದ್ರಾವತಿ, ಮೇ. ೧೮: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
    ಸುಮಾರು ೨ ವರ್ಷಗಳಿಂದ ತೆರವಾಗಿದ್ದ ಹುದ್ದೆಯಲ್ಲಿ ಮುಖ್ಯ ಶಿಕ್ಷಕ ಗಣೇಶ್‌ರವರು ಪ್ರಭಾರ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಸೊರಬ ತಾಲೂಕಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವಿ.ಎಚ್ ಪಂಚಾಕ್ಷರಿ ಅವರನ್ನು  ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಭಾರ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ವಿ.ಎಚ್ ಪಂಚಾಕ್ಷರಿ ಅವರನ್ನು ಅಭಿನಂದಿಸಿದರು.

ನೂತನ ಪೌರಾಯುಕ್ತ ಎಚ್.ಎಂ ಮನುಕುಮಾರ್

ಎಚ್.ಎಂ ಮನುಕುಮಾರ್
    ಭದ್ರಾವತಿ, ಮೇ. ೧೮ : ಇಲ್ಲಿನ ನಗರಸಭೆ ನೂತನ ಪೌರಾಯುಕ್ತರಾಗಿ ಎಚ್.ಎಂ ಮನುಕುಮಾರ್ ಮಂಗಳವಾರ ಅಧಿಕಾರ ವಹಿಸಿಕೊಂಡರು.
    ಮನುಕುಮಾರ್ ೨೦೧೧ನೇ ಸಾಲಿನ ಕರ್ನಾಟಕ ಪೌರಾಡಳಿತ ಸೇವೆಯ ಮುಖ್ಯಾಧಿಕಾರಿ ಶ್ರೇಣಿ-೧ರ ಗ್ರೂಪ್-ಬಿ ಅಧಿಕಾರಿಯಾಗಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಮೊದಲ ಬಾರಿಗೆ ಪೌರಾಯುಕ್ತರ ಹುದ್ದೆಗೆ ನಿಯೋಜನೆಗೊಳಿಸಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ.
    ಸುಮಾರು ೧ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಪರಮೇಶ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಮಂಗಳವಾರ, ಮೇ 17, 2022

ಭಗವಾನ್ ಬುದ್ಧರ ೨೫೬೬ನೇ ಜನ್ಮದಿನ

ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಭಗವಾನ್ ಬುದ್ಧರ ೨೫೬೬ನೇ ಜನ್ಮದಿನ ವಿಜೃಂಭಣೆಯಿಂದ ಆಚರಿಸಲಾಯಿತು.
    ಭದ್ರಾವತಿ, ಮೇ. ೧೭: ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ವತಿಯಿಂದ ಭಗವಾನ್ ಬುದ್ಧರ ೨೫೬೬ನೇ ಜನ್ಮದಿನ ವಿಜೃಂಭಣೆಯಿಂದ ಆಚರಿಸಲಾಯಿತು.
    ನಗರದ ವೀರಶೈವ ಕಲ್ಯಾಣ ಮಂಟದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಕುವೆಂಪು ವಿಶ್ವ ವಿದ್ಯಾನಿಲಯದ ಕುಲಪತಿ ಬಿ.ಪಿ ವೀರಭದ್ರಪ್ಪ ಉದ್ಘಾಟಿಸಿದರು.
    ಸಮಿತಿ ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಚಾಲಕ ಚಿನ್ನಯ್ಯ, ನಿವೃತ್ತ ಪ್ರಾಂಶುಪಾಲ ಪ್ರೊ. ಎಚ್.ಎಂ. ಚಂದ್ರಶೇಖರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಹಸೀಲ್ದಾರ್ ಆರ್. ಪ್ರದೀಪ್, ಉದ್ಯಮಿಗಳಾದ ಬಿ.ಕೆ ಜಗನ್ನಾಥ, ಲಕ್ಷ್ಮಿ ನಾರಾಯಣ, ವೈದ್ಯ ನರೇಂದ್ರ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಪತ್ರಕರ್ತ ಸುರೇಶ್, ದಲಿತ ನೌಕರರ ಒಕ್ಕೂಟದ ಸಿ. ಜಯಪ್ಪ ಸೇರಿದಂತೆ ಜಿಲ್ಲಾ ಹಾಗು ತಾಲೂಕು ಸಮಿತಿ ಪದಾಧಿಕಾರಿಗಳು, ಉಪಾಸಕ ಮತ್ತು ಉಪಾಸಕಿಯರು ಇನ್ನಿತರರು ಉಪಸ್ಥಿತರಿದ್ದರು.
    ಇದಕ್ಕೂ ಮೊದಲು ಭಗವಾನ್ ಬುದ್ಧರ ಪ್ರತಿಮೆಯೊಂದಿಗೆ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಉತ್ಸವ ಮೆರವಣಿಗೆ ನಡೆಸಲಾಯಿತು.

ತಾಯಿಯ ನೆನಪಿನಲ್ಲಿ ಟ್ರಸ್ಟ್ ರಚನೆ ಇತರರಿಗೆ ಪ್ರೇರಣೆ : ಸತ್ಯ ಭದ್ರಾವತಿ

ಭದ್ರಾವತಿ ಪೀಪಲ್ ಲಿಬರೇಷನ್ ಸಂಘ ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ದಿವಂಗತ ಲಕ್ಷ್ಮಮ್ಮನವರ ೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮಂಗಳವಾರ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ಹಾಗು ಪ್ರತಿಕ್ಷಣ.ಇನ್ ಅಂತರ್ಜಾಲ ಸುದ್ದಿ ತಾಣ ಹಾಗು ಸನ್ಮಾನ ಸಮಾರಂಭ ಹಾಗು ಬುದ್ಧ ಪೂರ್ಣಿಮಾ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೧೭: ತಾಯಿಯ ನೆನಪಿನಲ್ಲಿ ಟ್ರಸ್ಟ್ ರಚಿಸಿರುವುದು ಇತರರಿಗೆ ಪ್ರೇರಣೆಯಾಗಿದ್ದು, ಇಂತಹ ಕಾರ್ಯಗಳು ಸಮಾಜದಲ್ಲಿ ನಿರಂತರವಾಗಿ ನಡೆಯುತ್ತಿರಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹೇಳಿದರು.
    ಅವರು ಮಂಗಳವಾರ ನ್ಯೂಟೌನ್ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ವತಿಯಿಂದ ದಿವಂಗತ ಲಕ್ಷ್ಮಮ್ಮನವರ ೨ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ಹಾಗು ಪ್ರತಿಕ್ಷಣ.ಇನ್ ಅಂತರ್ಜಾಲ ಸುದ್ದಿ ತಾಣ ಹಾಗು ಸನ್ಮಾನ ಸಮಾರಂಭ ಹಾಗು ಬುದ್ಧ ಪೂರ್ಣಿಮಾ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ಕೈಗಾರಿಕಾ ನಗರದಲ್ಲಿ ಈ ರೀತಿಯ ಟ್ರಸ್ಟ್‌ಗಳ ಅವಶ್ಯಕತೆ ಹೆಚ್ಚಿನದ್ದಾಗಿದ್ದು, ಎರಡು ಕೈಗಾರಿಕೆಗಳು ಸ್ಥಗಿತಗೊಂಡು ಉದ್ಯೋಗವಿಲ್ಲದೆ ಸಾಕಷ್ಟು ಜನರು ಹಲವಾರು ತೊಂದರೆಗಳಿಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಟ್ರಸ್ಟ್ ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸಮಾಜಮುಖಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವಂತಹ ಈ ರೀತಿಯ ಕಾರ್ಯಗಳು ನಿರಂತವಾಗಿ ನಡೆಯಲು ಇತರರು ಸಹ ಸಹಕಾರ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಭದ್ರಾವತಿ ಪೀಪಲ್ ಲಿಬರೇಷನ್ ಸಂಘ ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ಟ್ ಮಾದರಿಯಾಗಿವೆ ಎಂದರು.
    ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಪ್ರಮುಖರಾದ ರಮೇಶ್ ಸೇರಿದಂತೆ ಇನ್ನಿತರರು ಮಾತನಾಡಿ, ಪತ್ರಿಕಾ ವೃತ್ತಿಯೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಚಾರಿಟಬಲ್ ಟ್ರಸ್ಟ್ ಆರಂಭಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಟ್ರಸ್ಟ್ ಕಾರ್ಯ ಚಟುವಟಿಕೆಗಳು ನಿರಂತರವಾಗಿ ಮುನ್ನಡೆಯುವಂತಾಗಲಿ ಎಂದರು.
    ಪ್ರಾಸ್ತಾವಿಕವಾಗಿ ಮಾತನಾಡಿದ ಪತ್ರಕರ್ತ ಸುಭಾಷ್‌ರಾವ್ ಸಿಂಧ್ಯಾರವರು, ಪತ್ರಕರ್ತ ಅನಂತಕುಮಾರ್ ಕುಟುಂಬದವರೊಂದಿಗೆ ತಾಲೂಕಿನ ಪತ್ರಕರ್ತರೆಲ್ಲರೂ ಉತ್ತಮ ಬಾಂಧವ್ಯವನ್ನು ಹೊಂದಿದ್ದೇವೆ. ಅವರ ತಂದೆ-ತಾಯಿ ಜೊತೆ ಕೆಲವು ದಿನಗಳನ್ನು ಸಂತೋಷದಿಂದ ಕಳೆದಿದ್ದೇವೆ. ಇದೀಗ ತಾಯಿಯವರ ಹೆಸರಿನಲ್ಲಿ ಟ್ರಸ್ಟ್ ರಚಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ನಮ್ಮೆಲ್ಲರಿಗೂ ಸಂತೋಷವನ್ನುಂಟು ಮಾಡಿದೆ ಎಂದರು.
    ಕಾರ್ಯಕ್ರಮದಲ್ಲಿ ಭದ್ರಾವತಿ ಪೀಪಲ್ ಲಿಬರೇಷನ್ ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಿದ್ದಾರ್ಥ ಅಂಧರ ಕೇಂದ್ರದ ಆಡಳಿತಾಧಿಕಾರಿ ಶಾರದ ಶಿವಬಸಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮರಿಯಪ್ಪ, ಪತ್ರಕರ್ತ ಅನಂತಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಭದ್ರಾವತಿ ಪೀಪಲ್ ಲಿಬರೇಷನ್ ಸಂಘದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಖಜಾಂಚಿ ಮುರುಳಿ ಕೃಷ್ಣ, ಕಾರ್ಯಾಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷರಾದ ಸಂಪತ್, ಜಿ. ಗೋವಿಂದ, ಕಾರ್ಯದರ್ಶಿಗಳಾದ ಸುನಿಲ್‌ಕುಮಾರ್, ಎನ್. ಲೋಕೇಶ್, ಡಿಎಸ್‌ಎಸ್ ಮುಖಂಡ ದಾಸ್, ಸಹ ಕಾರ್ಯದರ್ಶಿಗಳಾದ ರಾಜು, ಅಜಂತ್‌ಕುಮಾರ್, ರವೀಂದ್ರಪ್ಪ, ಶ್ರೀನಿವಾಸ್, ವೆಂಕಟೇಶ್, ಶ್ರೀಕಾಂತ್, ಸಂತೋಷ್, ಸಂಜೀವರೆಡ್ಡಿ, ಚಂದ್ರಶೇಖರ್, ಹರ್ಷಿತಾ, ರೇಖಾ ಕೆಂಪರಾಜ್, ಮೈತ್ರಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  


ಭಾನುವಾರ, ಮೇ 15, 2022

೩ನೇ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿ :

ಯೋಗಪಟು ಡಾ. ನಿಂಗೇಶ್‌ಗೆ ಪ್ರಥಮ ಬಹುಮಾನ

ವರ್ಷಿಣಿ ಯೋಗ ಎಜ್ಯುಕೇಷನ್ ಮತ್ತು ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ೩ನೇ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಮೇ. ೧೫: ವರ್ಷಿಣಿ ಯೋಗ ಎಜ್ಯುಕೇಷನ್ ಮತ್ತು ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ೩ನೇ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರು ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
    ೫೧ ರಿಂದ ೬೦ ವರ್ಷದೊಳಗಿನ ವಯೋಮಾನ ವಿಭಾಗದಲ್ಲಿ ಉತ್ತಮ ಸಾಧನೆ ತೋರಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಬಹುಮಾನ ವಿತರಣೆ ಸಂದರ್ಭದಲ್ಲಿ ವರ್ಷಿಣಿ ಯೋಗ ಎಜ್ಯುಕೇಷನ್ ಮತ್ತು ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಅಧ್ಯಕ್ಷ ಪಿ. ಪೆಂಚಾಲಯ್ಯ, ಕಾರ್ಯದರ್ಶಿ ಎನ್.ಪಿ ವೆಂಕಟೇಶ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ ಮಂಜುನಾಥ ಸ್ವಾಮಿ, ದೀಪಿಕಾ ವೆಂಕಟೇಶ್, ದೊಡ್ಡಮನಿ, ಬಾಲಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಡಾ. ನಿಂಗೇಶ್‌ರವರು ಹಲವಾರು ರಾಷ್ಟ್ರೀಯ, ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಸಾಧನೆಯನ್ನು ನಗರದ ಗಣ್ಯರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.