ಭದ್ರಾವತಿ, ಜು. ೧: ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಕೂಡ್ಲಿಗೆರೆ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಿಳಚಿ, ತಿಮ್ಲಾಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.